Author: kannadanewsnow05

ಮಂಡ್ಯ : ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ, ದಸರಾ ಆನೆಗಳು ಆಗಮಿಸಿವೆ. ಮಹೇಂದ್ರ ದಸರಾ ಅಂಬಾರಿಯನ್ನು ಹೊರಲಿದ್ದಾನೆ. ಈ ವೇಳೆ ಲಕ್ಷ್ಮಿ ಆನೆಯು ಕುದುರೆ ನೋಡಿ ಬೆಚ್ಚಿ ಬಿದ್ದಿದೆ. ಕೂಡಲೇ ಜನರು ದಿಕ್ಕಾಪಾಲಾಗಿ ಓಡಿದ್ದು ಭಾರಿ ಅನಾಹುತ ಒಂದು ತಪ್ಪಿದೆ. ಹೌದು ಇಂದು ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಪ್ರಮುಖ ಆಕರ್ಷಣೆ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ಇರಲಿದ್ದು, ಕಳೆದ ವರ್ಷದಂತೆ ಈ ವರ್ಷವೂ ಮಹೇಂದ್ರ 400 ಕೆಜಿ ತೂಕದ ಮರದ ಅಂಬಾರಿ ಸೇರಿ ಒಟ್ಟು 650 ಕೆಜಿ ತೂಕದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯನ್ನು ಸಾಗಲಿದೆ. ಈ ಒಂದು ಜಂಬೂಸವಾರಿಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿದ್ದು, ಮಹೇಂದ್ರ ಹಿರಣ್ಯ ಮತ್ತು ಲಕ್ಷ್ಮಿ ಹೆಸರಿನ ಆನೆಗಳು, ನಿನ್ನೆ ಸಂಜೆನೆ ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿವೆ.ಇಂದು ಲಕ್ಷ್ಮಿ ಆಣೆಯು, ಶ್ರೀರಂಗಪಟ್ಟಣ ರಂಗನಾಥ ಮೈದಾನದ ಬಳಿ ಬನ್ನಿಮಂಟಪದ ಬಳಿ ನಿಂತಿರುವ ಕುದುರೆಯನ್ನು ನೋಡಿ ಲಕ್ಷ್ಮಿ ಆನೆ ಕೆಲ ಕಾಲ ರಂಪಾಟ ನಡೆಸಿತ್ತು. ಅದರಿಂದ…

Read More

ಮುಂಬೈ : ತಮ್ಮದೇ ಪಿಸ್ತೂಲ್​​ನಿಂದ ಬಾಲಿವುಡ್ ನಟ ಗೋವಿಂದ್ ಗುಂಡು ಹಾರಿಸಿಕೊಂಡಿದ್ದರಿಂದ, ಆಕಸ್ಮಿಕವಾಗಿ ಫೈರ್​ ಆಗಿದ್ದರಿಂದ ಅವರ ಕಾಲಿಗೆ ತೀವ್ರ ಗಾಯ ಆಗಿತ್ತು. ನಂತರ ಅವರನ್ನು ಮುಂಬೈನ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೌದು ಕಳೆದ ಅಕ್ಟೊಬರ್ 1 ರಂದು ನಸುಕಿನ ಜಾವ ತಮ್ಮದೇ ಪಿಸ್ತುಲ್ ನಿಂದ ಗುಂಡು ಹಾರಿಸಿಕೊಂಡಿದ್ದರು. ಘಟನೆ ನಡೆದ ಬಳಿಕ ತಕ್ಷಣ ಅವರನ್ನು ಮುಂಬೈನ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಂಡ ನಂತರ ಗುಣಮುಖರಾಗಿ ನಟಗೋವಿಂದ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಡಿಎನ್ ಎ ಪರೀಕ್ಷೆ ಮಾಡಿಸಲು ನ್ಯಾಯಾಧೀಶರ ಅನುಮತಿ ಕೇಳಲು ಎಸ್‌ಐಟಿ ಅಧಿಕಾರಿಗಳು ಬಂದಿದ್ದರು. ಈ ವೇಳೆ ನ್ಯಾಯಲಯ ಡಿಎನ್ ಎ ಪರೀಕ್ಷೆ ನಡೆಸಲು ಅನುಮತಿ ನೀಡಿತು. ನ್ಯಾಯಾಧೀಶರ ಸಮ್ಮುಖದಲ್ಲಿಯೇ ಮುನಿರತ್ನ ರಕ್ತದ ಮಾದರಿ ಸಂಗ್ರಹ ಮಾಡಲು ಮುಂದಾದರು. ಹೌದು ಎಸ್‌ ಐಟಿ ಅಧಿಕಾರಿಗಳು ವೈದ್ಯರೊಂದಿಗೆ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಮುನಿರತ್ನವ ಅವರು, ತಮ್ಮ ವಕೀಲರು ಬರಬೇಕು, ಅವರ ಮುಂದೆಯೇ ಸ್ಯಾಂಪಲ್ಸ್ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮನವಿಯನ್ನ ಪುರಸ್ಕರಿಸಿ, ವಕೀಲರು ಬಂದ ಮೇಲೆ ಸ್ಯಾಂಪಲ್ಸ್ ತೆಗೆದುಕೊಳ್ಳಲು ಎಸ್‌ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಳಿಕ ಶಾಸಕ ಮುನಿರತ್ನ ಅವರ ವಕೀಲರು ಕೋರ್ಟಿಗೆ ಆಗಮಿಸಿದ್ದಾರೆ.ಈ ವೇಳೆ ನ್ಯಾಯಾಧೀಶರು ಮುನಿರತ್ನ ಅವರ ರಕ್ತದ ಮಾದರಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಹಾಗಾಗಿ ನ್ಯಾಯಾಧೀಶರ ಮುಂದೆ ಶಾಸಕ ಮುನಿರತ್ನ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ…

Read More

ಚಿತ್ರದುರ್ಗ : ಮುಡಾ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ 14 ಸೈಟ್ ಗಳ ಬೆಲೆ ರೂ.62 ಕೋಟಿ ರೂಪಾಯಿ ಕೊಡಿ ಎಂದು ಹೇಳಿಕೆ ನೀಡಿದ್ದರು.ಈ ಹೇಳಿಕೆಯನ್ನು ಅವರ ಹಿಂಬಾಲಕರಿಂದ ಕೇಳಿ ಹೇಳಿದ್ದರಿಂದ ಹಾಗಾಗಿ ಅವರ ಹಿಂಬಾಲಕರೇ ಅವರಿಗೆ ಖೆಡ್ಡಾ ತೋಡಿದ್ದಾರೆ.ಎಂದು ಚಿತ್ರದುರ್ಗದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಸೈಟ್ ಬೆಲೆ 80 ರಿಂದ 90 ಲಕ್ಷ ಎಂದೇ ಭಾವಿಸಿದ್ದೆವು. ಸಿಎಂ ಹಿಂದೆ ಇದ್ದ ವ್ಯಕ್ತಿ ಹೇಳಿದ್ದು ಕೇಳಿ 62 ಕೋಟಿ ಎಂದಿದ್ದರು ಸಿಎಂ ಸಿದ್ದರಾಮಯ್ಯ ಹಿಂಬಾಲಕರೇ ಅವರಿಗೆ ಖೆಡ್ಡಾ ತೋಡಿದ್ದಾರೆ ಎಂದು ಚಿತ್ರದುರ್ಗದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ದಸರಾ ಆಚರಣೆಯಲ್ಲಿ ಚಾಮುಂಡೇಶ್ವರಿಗೆ ಅಪಮಾನ ಮಾಡಿದ್ದಾರೆ.ಸರ್ಕಾರ ಪತನ ರಾಜೀನಾಮೆ ಬಗ್ಗೆ ಭಾಷಣ ಮಾಡಿದ್ದಾರೆ. ದಸರಾ ಉದ್ಘಾಟಿಸಿದ್ದು ಸಾಹಿತಿಯೋ ಯಾರೋ ನನಗೆ ಗೊತ್ತಿಲ್ಲ. ದಸರಾ ಉದ್ಘಾಟಕರು ಕೇಂದ್ರವನ್ನು ಟೀಕಿಸಿ ಭಾಷಣ ಮಾಡಿದ್ದಾರೆ. ಚಾಮುಂಡಿ…

Read More

ಬೆಂಗಳೂರು : ಉದ್ಯಮಿ ವಿಜಯ್ ತಾತ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಿನ್ನೆ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ HDK ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ರೋಲ್ಕಾಲ್ ಸ್ವಾಮಿಯವರ ವಿರುದ್ಧ FIR ದಾಖಲಾಗಿದೆ ಎಂದು ತಿರುಗೇಟು ನೀಡಿದೆ. ಸಾಮಾಜಿಕ ಜಾಲತಾಣ X ನಲ್ಲಿ ಮಾನ್ಯ ರೋಲ್ಕಾಲ್ ಸ್ವಾಮಿಯವರ ವಿರುದ್ಧ ₹ 50 ಕೋಟಿ ರೂಪಾಯಿ ವಸೂಲಿಗಾಗಿ ಜೀವ ಬೆದರಿಕೆ ಹಾಕಿದ್ದಕ್ಕೆ FIR ದಾಖಲಾಗಿದೆ. ದೂರು ನೀಡಿದ್ದು ಸ್ವತಃ ಜೆಡಿಎಸ್ ಪಕ್ಷದ ಪದಾಧಿಕಾರಿ. ಹಿಂದೆ ಕುಮಾರಸ್ವಾಮಿಯವರ ಮಾನಸಪುತ್ರ ಪ್ರಜ್ವಲ್ ರೇವಣ್ಣನೇ ಜೆಡಿಎಸ್ ನಲ್ಲಿನ ಸೂಟ್ಕೇಸ್ ಸಂಸ್ಕೃತಿಯನ್ನು ತೆರೆದಿಟ್ಟಿದ್ದರು, @hd_kumaraswamy ಅವರೇ, ನಿಮ್ಮನ್ನು ರೋಲ್ಕಾಲ್ ಸ್ವಾಮಿ ಎನ್ನೋಣವೇ, ಸೂಟ್ಕೇಸ್ ಸ್ವಾಮಿ ಎನ್ನೋಣವೇ? ರಾಜಕಾರಣವನ್ನು ಮಾಫಿಯಾಕರಣ ಮಾಡಿದ ರೋಲ್ಕಲ್ ಸ್ವಾಮಿಯವರು ರಾಜ್ಯವನ್ನು ಲೂಟಿ ಹೊಡೆದಿದ್ದಷ್ಟೇ ಅಲ್ಲ, ರಾಜ್ಯದ ಭೂಮಿ ಕಬಳಿಸಿದ್ದಷ್ಟೇ ಅಲ್ಲ, ಸ್ವಪಕ್ಷದ ಕಾರ್ಯಕರ್ತರ ಲೂಟಿಗೂ ಇಳಿದಿರುವುದು ಶೋಚನೀಯ…

Read More

ಉಡುಪಿ : ರಾಜ್ಯದಲ್ಲಿ ಘನ ಘೋರವಾದಂತಹ ಘಟನೆ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ವಾಂತಿ ಭೇಧಿಯಿಂದ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಹೌದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತದಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡ್ನಲ್ಲಿ ಕುಡಿಯುವ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದೆ. ಕಲುಷಿತ ನೀರು ಸೇವಿಸಿ ಕರ್ಕಿಹಳ್ಳಿ ಹಾಗೂ ಮೆಡಿಕಲ್ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಕಾಫಿನಾಡಿಯಲ್ಲಿರುವ ಟ್ಯಾಂಕಿನಿಂದ ಈ ಒಂದು ಕಲುಷಿತ ನೀರು ಪೂರೈಕೆ ಆಗಿದೆ ಎಂದು ಹೇಳಲಾಗುತ್ತಿದ್ದು, ಕರ್ಕಿಕಳ್ಳಿಯಲ್ಲಿ ಸುಮಾರು 500 ಜನ ಮೆಡಿಕಲ್ ನಲ್ಲಿ 600 ಜನ ಅಸ್ವಸ್ಥರಾಗಿದ್ದಾರೆ. ವಾರ್ಡ್ನ ಪ್ರತಿ ಮನೆಯಲ್ಲಿ ಮೂರಕ್ಕೂ ಅಧಿಕ ಜನರಿಗೆ ವಾಂತಿ ಭೇದಿ ಆಗಿದ್ದು, 80 ವರ್ಷದ ವೃದ್ಧನ ಸ್ಥಿತಿ ಗಂಭೀರವಾಗಿದೆ. ತಕ್ಷಣ ವೃದ್ಧನನ್ನು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳು ಸ್ಥಳೀಯರು ಆಗ್ರಹಿಸಿದ್ದಾರೆ.

Read More

ಬೆಂಗಳೂರು : ಮಾರ್ಟೀನ್ ಸಿನೆಮಾ ಚಿತ್ರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸಿನಿಮಾ ನಿರ್ಮಾಪಕರ ವಿರುದ್ಧ ನಿರ್ದೇಶಕರಾದಂತಹ ಎಪಿ ಅರ್ಜುನ್ ಚಿತ್ರ ಬಿಡುಗಡೆ ಮಾಡದಂತೆ ನಿರ್ಬಂಧ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಹೌದು ಹೈಕೋರ್ಟ್ ಮೆಟ್ಟಿಲೇರಿದ ಮಾರ್ಟಿನ್ ಸಿನಿಮಾ ನಿರ್ಮಾಪಕರ ವಿರುದ್ಧ ನಿರ್ದೇಶಕ ಎಪಿ ಅರ್ಜುನ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ನಿರ್ದೇಶಕನಾದರೂ ನನ್ನ ಹೆಸರು ಕೈಬಿಟ್ಟು ಚಿತ್ರದ ಪ್ರಚಾರ ಮಾಡಿದ್ದಾರೆ. ಸಿನಿಮಾ ಸಂಬಂಧಿಸಿದ ಒಪ್ಪಂದ ನಿರ್ಮಾಪಕರು ಪಾಲಿಸಿಲ್ಲವೆಂದು ನಿರ್ದೇಶಕರ ವಾದವಾಗಿದೆ. ತಮ್ಮ ಹೆಸರು ಕೈಬಿಟ್ಟು ಚಿತ್ರ ಬಿಡುಗಡೆ ಮಾಡದಂತೆ ನಿರ್ಬಂಧ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಕೊಪ್ಪಳ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಹೆದರಿಕೆ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕಕ್ಕೆ 30, 35 ಬಾರಿ ಭೇಟಿ ನೀಡಿದ್ದರು ಸಹ ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗಾಗಿ ಅವರಿಗೆ ಸಿದ್ದರಾಮಯ್ಯ ಅವರನ್ನು ಕಂಡರೆ ಭಯವಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಯಾವ ಸರ್ಕಾರದಲ್ಲಿ ಆಗಿದೆ? ಸಿಎಂ ಸಿದ್ದರಾಮಯ್ಯ ಕಡತಕ್ಕೆ ಏನಾದರೂ ಸಹಿ ಹಾಕಿದ್ದಾರಾ? ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಏನು ಪಾತ್ರವಿಲ್ಲ. ಸಿದ್ದರಾಮಯ್ಯ ಅವರನ್ನು ಕಂಡರೆ ಮೋದಿ ಅಮಿತ್ ಶಾ ಗೆ ಭಯ ಎಂದು ಅವರು ತಿಳಿಸಿದರು. ಮುಡಾ ಬೆಳವಣಿಗೆ ನೋಡಿದರೆ ರಾಜಕೀಯ ಷಡ್ಯಂತ್ರ ಎಂದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಮುಡಾ ಅನ್ನೋ ವಿಚಾರ ಪ್ರಸ್ತಾಪ ಮಾಡುತ್ತಿದ್ದೀರಲ್ಲ ಆಗ ಯಾವ ಸರ್ಕಾರ ಇತ್ತು? ಪ್ರಧಾನಿ ಮೋದಿ ಅವರಿಗೆ ಮತ್ತು ಅಮಿತ್ ಶಾ ಅವರಿಗೆ…

Read More

ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಪಿಡಬ್ಲ್ಯೂಡಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿ ಮಾಡಿದ್ದಾರೆ. ಹೌದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಜಾರಕಿಹೊಳಿ ದೆಹಲಿಯಲ್ಲಿ ನಿನ್ನೆ ಭೇಟಿಯಾಗಿ ಚರ್ಚಿಸಿದ್ದಾರೆ. ಭೇಟಿಯ ವೇಳೆ ಹಲವು ವಿಚಾರಗಳ ಕುರಿತಂತೆ ಖರ್ಗೆ ಜೊತೆ ಜಾರಕಿಹೊಳಿ ಚರ್ಚಿಸಿದ್ದಾರೆ. ಹಾಗಾಗಿ ರಾಜ್ಯ ರಾಜಕೀಯದಲ್ಲಿ ಈ ಒಂದು ಭೇಟಿ ತೀವ್ರ ಕುತೂಹಲ ಮೂಡಿಸಿದೆ.ಅಲ್ಲದೆ ಮೊನ್ನೆಯಷ್ಟೇ ದಲಿತ ನಾಯಕರ ಜೊತೆ ಸತೀಶ್ ಜಾರಕಿಹೊಳಿ ಸಭೆ ಸೇರಿದ್ದರು. ಬೆಂಗಳೂರಿನಲ್ಲಿ ರಹಸ್ಯ ಸಭೆ ಮಾಡಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಸತೀಶ್ ಜಾರಕಿಹೊಳಿ ಅವರ ಈ ಒಂದು ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Read More

ಮಹಾರಾಷ್ಟ್ರ : ಮಹಾರಾಷ್ಟ್ರ ಸರ್ಕಾರದ ಜಲಸಂರಕ್ಷಣಾ ಸಚಿವ ಸಚಿವ ಸಂಜಯ್ ರಾಥೋಡ್ ಅವರ ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ಈ ಅಪಘಾತದಿಂದ ಸಂಜಯ್ ರಾಥೋಡ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಅಪಘಾತದ ವೇಳೆ ಕಾರಿನಲ್ಲಿದ್ದ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಸಂಜಯ್ ರಾಥೋಡ್ ಅವರ ಪ್ರಾಣ ಉಳಿಸಲಾಗಿದೆ. ರಾಥೋಡ್ ಅವರ ಕಾರು ಮುಂಭಾಗದ ಪಿಕ್ ಅಪ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಆದರೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಯವಾಲ್‌ನ ದಿಗ್ರಾಸ್‌ ಬಳಿಯ ಕೊಪ್ರಾದಲ್ಲಿ ಈ ಅಪಘಾತ ಸಂಭವಿಸಿದೆ. ರಾಥೋಡ್ ಅವರ ಕಾರು ಹಿಂದಿನಿಂದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಾಥೋಡ್ ಅವರ ಕಾರು ವೇಗವಾಗಿ ಚಲಿಸುತ್ತಿತ್ತು. ಇದರಿಂದ ಅವರ ಕಾರಿನ ಮುಂಭಾಗ ಜಖಂಗೊಂಡಿದೆ. ರಾಥೋಡ್ ಅವರ ಕಾರು ಅತಿವೇಗದಲ್ಲಿ ಪಿಕಪ್‌ಗೆ ಡಿಕ್ಕಿ ಹೊಡೆದು ಪಿಕಪ್ ಪಲ್ಟಿಯಾಗಿ ಚಾಲಕ ಗಾಯಗೊಂಡಿದ್ದಾನೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ಮೋದಿ ಭೇಟಿ…

Read More