Author: kannadanewsnow05

ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಮರಾಜನಗರದಲ್ಲಿ ವೇಗವಾಗಿ ಬಂದಂತಹ ಕಾರು ಒಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿದ್ದರೆ, ಉಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಮೃತರನ್ನು ನಂದನ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಸುನೀಲ್, ಧನುಷ್ ಮತ್ತು ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ.ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದಾಗ ಚೆಕ್‌ಪೋಸ್ಟ್ ಸಮೀಪ ಮರಕ್ಕೆ ಡಿಕ್ಕಿಯಾಗಿ ಅವಘಡ ಉಂಟಾಗಿದೆ. ಎಲ್ಲರೂ ವಿದ್ಯಾರ್ಥಿಗಳಾಗಿದ್ದು, ಮದುವೆಗೆ ಬಂದಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ಸುನೀಲ್, ಧನುಷ್ ಮತ್ತು ಶಶಾಂಕ್ ನನ್ನು ತಕ್ಷ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಚಾಮರಾಜನಗರ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದಂತಹ ಕೊಲೆಯಾಗಿದ್ದು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಡು ರಸ್ತೆಯಲ್ಲೇ ಇಬ್ಬರನ್ನು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸದ್ಯಾಪುರ ಎಂಬ ಗ್ರಾಮದ ಬಳಿ ನಡೆದಿದೆ. ಇಂದು ಸಾದ್ಯಾಪುರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸಾದ್ಯಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮದ್ದರಿಕಿ ಗ್ರಾಮದ ಮಾಪಣ್ಣ ಹಾಗೂ ಅಲಿಸಾಬ್ ಎನ್ನುವವರ ಕೊಲೆ ಆಗಿದೆ ಎಂದು ತಿಳಿದುಬಂದಿದೆ. ಬೈಕ್ನಲ್ಲಿ ತೆರಳುವಾಗ ದುಷ್ಕರ್ಮಿಗಳು ಮಾರಕಾಸ್ತ್ರರಗಳಿಂದ ದಾಳಿ ಮಾಡಿದ್ದಾರೆ. ಓರ್ವ ವ್ಯಕ್ತಿ ರಸ್ತೆಯಲ್ಲಿ ನರಳಾಡಿ ಸಾವನಪ್ಪಿದ್ದರೆ, ಮತ್ತೊರ್ವ ವ್ಯಕ್ತಿ ಆಸ್ಪತ್ರೆ ದಾಖಲಿಸಿದಾಗ ಚಿಕಿತ್ಸೆ ಫಲೀಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಆಗಾಗ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಶನೇಶ್ವರ ನಗರದಲ್ಲಿ ಹಳೆ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾವಿನಲ್ಲಿ ಆಕಸ್ಮಿಕ ಅಗ್ನಿ ಸಂಭವಿಸಿದೆ. ಬೆಂಗಳೂರಿನ ತಿಗಳರಪಾಳ್ಯ ಮುಖ್ಯ ರಸ್ತೆಯ ಶನೇಶ್ವರ ನಗರದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆ ಕುರಿತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಹಿಂದುತ್ವದಿಂದ ದೂರ ಸರಿದ ಪಕ್ಷವನ್ನು ಹಿಂದುತ್ವದತ್ತ ತರುತ್ತೇವೆ. ನಮಗೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಮತ್ತು ಬಿಜೆಪಿ ಮೇಲೆ ವಿಶ್ವಾಸವಿದೆ. ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಮೇಲೆ ನಮಗೆ ಯಾವುದೇ ವಿಶ್ವಾಸವಿಲ್ಲ. ಮಹಾರಾಷ್ಟ್ರ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ ಹಾಗೂ ರಾಜಸ್ಥಾನ, ದೆಹಲಿಯಲ್ಲಿ ಹಿಂದುತ್ವದ ಮೂಲಕ ಪಕ್ಷ ಗೆದ್ದಿದೆ. ಕರ್ನಾಟಕದಲ್ಲೂ ಹಿಂದುತ್ವದ ಆಧಾರದ ಮೇಲೆ ಪಕ್ಷ ಗೆಲ್ಲುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಹೊಸ ಪಕ್ಷ ಕಟ್ಟಲ್ಲ. ಈಗಿರುವ ಪಕ್ಷದಲ್ಲೇ ರಿಪೇರಿ ಮಾಡಬೇಕಾಗಿದೆ. ಯಾವ ಕಾಲಕ್ಕೂ ಬಿಜೆಪಿ ಬಿಡಲ್ಲ. ಹಿಂದುತ್ವದ ನಾಯಕರನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಅಸ್ಸಾಂ,ಮಧ್ಯಪ್ರದೇಶ ಹಾಗೂ ರಾಜಸ್ಥಾನ, ದೆಹಲಿಯಲ್ಲಿ ಹಿಂದುತ್ವದ ಮೂಲಕ ಪಕ್ಷ ಗೆದ್ದಿದೆ. ಕರ್ನಾಟಕದಲ್ಲೂ ಹಿಂದುತ್ವದ ಆಧಾರದ ಮೇಲೆ ಪಕ್ಷ ಗೆಲ್ಲುತ್ತದೆ ಎಂದು ತಿಳಿಸಿದರು. ಹೈಕಮಾಂಡ್ ಖಡಕ್ ಸೂಚನೆ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೈಲೆಂಟಾಗಿದ್ದ ವಿಜಯಪುರ ನಗರ…

Read More

ಬೆಂಗಳೂರು : ಹೋಳಿ ಹಬ್ಬದ ಅಂಗವಾಗಿ ಎಲ್ಲೆಡೆ ರಂಗುರಂಗಿನ ಹೋಳಿ ಹಬ್ಬ ಆಚರಿಸಲಾಗುತ್ತಿದ್ದು, ಬೆಂಗಳೂರಿನ ಸರ್ಜಾಪುರದಲ್ಲಿ ಹೋಳಿ ಹಬ್ಬದ ದಿನದಂದೆ ಘೋರವಾದ ದುರಂತ ಸಂಭವಿಸಿದೆ. ಹೋಳಿ ಹಬ್ಬ ದಿನದಂದೇ ಮಾರಾಮಾರಿ ನಡೆದು ಗಲಾಟೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಹೌದು ಹೋಳಿ ಹಬ್ಬದ ವೇಳೆ ಮಾರಾಮಾರಿ ನಡೆದು ಈ ಒಂದು ಗಲಾಟೆಯಲ್ಲಿ ಮೂವರು ಸಾವನ್ನಾಪ್ಪಿದ್ದರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮೃತ ಮೂವರನ್ನು ಬಿಹಾರ್ ಮೂಲದವರು ಎಂದು ತಿಳಿದುಬಂದಿದೆ.ಕುಡಿದ ನಶೆಯಲ್ಲಿ ಕಾರ್ಮಿಕರ ನಡುವೆ ಮಾರಮಾರಿ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ, ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಗದಗ : ಹೊಳಿ ಹಬ್ಬದಂದೆ ಗದಗದಲ್ಲಿ ಘೋರವಾದ ಘಟನೆ ಸಂಭವಿಸಿದ್ದು, ಊರಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಗ್ರಾಮದ ತುಂಬೆಲ್ಲಾ ಹೋಳಿ ಆಟವಾಡಿ ಕೆರೆಯಲ್ಲಿ ಸ್ನಾನಕ್ಕೆ ಹೋದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಚನಗೌಡ (16) ಎಂದು ತಿಳಿದುಬಂದಿದೆ. ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ದೇವೇಂದ್ರ ರಾಚನಗೌಡ ಹೊಳಿ ಹಬ್ಬ ಆಚರಣೆ ಬಳಿಕ ಕೆರೆಯಲ್ಲಿ ಈಜಲು ಮೂವರು ಸ್ನೇಹಿತರೊಂದಿಗೆ ತೆರಳಿದ್ದ. ಬೆಳಗ್ಗೆಯಿಂದ ಸ್ನೇಹಿತರೊಂದಿಗೆ ಊರಲ್ಲಿ ಬಣ್ಣದ ಹೋಳಿ ಆಟವಾಡಿದ್ದಾನೆ. ನಂತರ ನಾಲ್ಕು ಜನ ಸ್ನೇಹಿತರು ಒಟ್ಟಾಗಿ ಕೆರೆಗೆ ಈಜಲು ಹೋಗಿದ್ದರು. ಮೂವರು ಕೆರೆಯಲ್ಲಿ ಈಜಬೇಕಾದರೆ ದೇವೇಂದ್ರ ಒಂದು ದಡದಿಂದ ಮತ್ತೊಂದು ದಡ ತಲುಪುವ ದುಸ್ಸಾಹಸಕ್ಕೆ ಮುಂದಾಗಿದ್ದಾನೆ. ಕೆರೆಯ ಮಧ್ಯಭಾಗದ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾನೆ. ಜೊತೆಗೆ ಹೋಗಿದ್ದ ಸ್ನೇಹಿತರ ಮಾಹಿತಿಯ ಆಧಾರದ ಮೇರೆಗೆ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಯಿಂದ ಬಾಲಕನಿಗಾಗಿ ಶೋಧ ಕಾರ್ಯನಡೆಸಿದರು. ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕನ ಮೃತ ದೇಹ…

Read More

ಮೈಸೂರು : ಮೈಸೂರಲ್ಲಿ ಇಂದು ಘೋರವಾದ ದುರಂತ ಸಂಭವಿಸಿದೆ. ಇಬ್ಬರು ಬಾಲಕರು ಕಾವೇರಿ ನದಿಗೆ ಇಳಿದಿದ್ದಾರೆ. ಈ ವೇಳೆ ಬಾಲಕರು ನದಿಯಲ್ಲಿ ಮುಳುಗುತ್ತಿರುವುದನ್ನು ನೋಡಿ ಅವರ ತಾತ ಅವರನ್ನು ರಕ್ಷಣೆ ಮಾಡಲು ನದಿಗೆ ಇಳಿದಿದ್ದಾರೆ. ಈ ವೇಳೆ ಮೂವರು ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ನಡೆದಿದೆ. ಹೌದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಚೌಡಯ್ಯ (70) ಭರತ್ (13) ಧನುಷ್ (10) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತಪಟ್ಟವರು ಟಿ ನರಸೀಪುರದ ತಿರುಮಕೂಡಲಿನ ನಿವಾಸಿಗಳು ಎನ್ನಲಾಗಿದೆ. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ತಾತ ಇಳಿದಿದ್ದಾರೆ. ಇಬ್ಬರು ಮಕ್ಕಳನ್ನು ರಕ್ಷಿಸಲಾಗದೆ ತಾತ ಕೂಡ ನದಿಯಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದರೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು ಆಗಮಿಸಿ ತಾತ ಮತ್ತು ಮೊಮ್ಮಕ್ಕಳ ಶವವನ್ನು ಮೇಲೆ ತಕ್ಷಣ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಟಿ ನರಸೀಪುರ ಪೊಲೀಸ್…

Read More

ದಾವಣಗೆರೆ : ದಾವಣಗೆರೆ: ನಿವೇಶನ ಖಾತೆ ವರ್ಗಾವಣೆಗೆ ಲಂಚ ಪಡೆಯುತ್ತಿದ್ದ ದಾವಣಗೆರೆ ಮಹಾನಗರ ಪಾಲಿಕೆ ವಲಯ ಕಚೇರಿ-2ರ ಪ್ರಥಮ ದರ್ಜೆ ಸಹಾಯಕ ಪಾಲನಾಯಕನನ್ನು ಶುಕ್ರವಾರ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆಯ ಅವರಗೆರೆ ಬಳಿ ಇರುವ ವಾರ್ಡ್ ನಂ.30ರಲ್ಲಿರುವ ಬಾಡಾ ಕ್ರಾಸ್(ಮೋತಿ ನಗರ)ನ ಖಾಲಿ ನಿವೇಶನ ಡೋರ್ ನಂಬರ್ 358/21ರ 30×40 ಅಳತೆಯ ಸೈಟ್ ಅನ್ನು ಜಿ.ಯು ಬಸವರಾಜ್ ಎನ್ನುವವರು ತಮ್ಮ ತಂಗಿಯ ಹೆಸರಲ್ಲಿ ಖಾತೆ ವರ್ಗಾವಣೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಆದರೆ FDA ಖಾತೆ ವರ್ಗಾವಣೆಗೆ ಬಸವರಾಜ್ ಬಳಿ 2,500 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ.ಈ ಕುರಿತು ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಬಳಿಕ ಬಸವರಾಜು ಬಳಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಗಿಬಿದ್ದಿದಾನೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚೆನ್ನಾಗಾಟ ಪ್ರಕರಣದಲ್ಲಿ ನಟಿ ರನ್ಯರಾವ್ ಅವರ ಬಂಧನವಾಗಿದ್ದು ಈಗಾಗಲೇ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಗಿದೆ. ಆದರೆ ಈ ಪ್ರಕರಣದಲ್ಲಿ ಅವರ ಸ್ನೇಹಿತನಾದ ಉದ್ಯಮಿಯ ಪುತ್ರ A2 ಆರೋಪಿ ತರುಣ್ ರಾಜು ಅವರು ಸಹ ಅರೆಸ್ಟ್ ಆಗಿದ್ದು, ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನಿನ್ನೆ ಆದೇಶ ನೀಡಿತ್ತು. ಬಳಿಕ ತರುಣ್ ರಾಜು ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ತರುಣ್ ರಾಜು ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ತರುಣ್ ರಾಜು ಜಾಮೀನು ಅರ್ಜಿ ವಿಚಾರಣೆ ಇದೀಗ ಸೋಮವಾರಕ್ಕೆ ಮುಂದೂಡಿಕೆ ಆಗಿದೆ.ಈ ಕುರಿತು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

Read More

ರಾಯಚೂರು : ರಾಯಚೂರಿನಲ್ಲಿ ಭೀಕರ ಹತ್ಯೆ ನಡೆದಿದ್ದು, ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆಮಾಡಿರುವ ಘಟನೆ ರಾಯಚೂರು ನಗರದ ಬಂಗಿಕುಂಟದಲ್ಲಿ ನಡೆದಿದೆ. ರಾಯಚೂರು ನಗರದ ಬಂಗಿಕುಂಟದಲ್ಲಿ ಚಾಕುವಿನಿಂದ ಇರಿದು ಸಯ್ಯದ್ ಖದಿರ್ (40) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸತ್ಯನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತು ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More