Subscribe to Updates
Get the latest creative news from FooBar about art, design and business.
Author: kannadanewsnow05
ಧಾರವಾಡ : ಸಿದ್ದರಾಮಯ್ಯ ಜೀವನಪೂರ್ತಿ ರಾಜಕೀಯದಲ್ಲಿರಬೇಕು ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಆಗಬಾರದು. ಸಿದ್ದರಾಮಯ್ಯ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬೇಕು ಸಿಎಂ ಸಿದ್ದರಾಮಯ್ಯ ಅವರ ಅವಶ್ಯಕತೆ ರಾಜ್ಯಕ್ಕೆ ಬಹಳವಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು. ಕಲಘಟಗಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಸಹಜ ಪ್ರಕ್ರಿಯೆ ಅದರಲ್ಲಿ ಯಾವುದೇ ಕ್ರಾಂತಿ ಇಲ್ಲ. ಪುನಾರಚನೆ ಅಂದರೆ ಕೆಲವರನ್ನು ತೆಗೆಯಬೇಕು ಮತ್ತೆ ಕೆಲವರನ್ನು ಸೇರಿಸಿಕೊಳ್ಳಬೇಕು. ಎಲ್ಲರೂ ಎಲ್ಲಾ ತ್ಯಾಗಕ್ಕೂ ಸಿದ್ಧರಿರಬೇಕು ಸಿಎಂ ಹೈಕಮಾಂಡ್ ನಿರ್ಧಾರ ಅಂದಮೇಲೆ ಅದರಲ್ಲಿ ಗೊಂದಲ ಎಲ್ಲಿದೆ? ಕೇಂದ್ರ ಸರ್ಕಾರದಲ್ಲಿ ಯಾಕೆ ಬದಲಾವಣೆ ಆಗಬಾರದು? ನಿತಿನ್ ಗಡ್ಕರಿ ಯಾಕೆ ಪ್ರಧಾನಿ ಆಗಬಾರದು?ಎಂದು ಧಾರವಾಡ ಜಿಲ್ಲೆಯ ಕಲಘಟಕಿಯಲ್ಲಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು.
ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಕಳೆದ ತಿಂಗಳು ಜೀವಾವಧಿ ಶಿಕ್ಷೆ ಪ್ರಕಟಿಸಿ ಐತಿಹಾಸಿಕ ತೀರ್ಪು ನೀಡಿತ್ತು. ಇದೀಗ ಜೀವಿತಾವಧಿ ಸೆರೆವಾಸ ಶಿಕ್ಷೆ ಪ್ರಶ್ನಿಸಿ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಭಾಗೀಯದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂತ್ರ ವಾದ ಮಂಡಿಸಿದರು. ಈ ವೇಳೆ ಎಸ್ಐಟಿಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ನೀಡಿತು. ಬಳಿಕ ವಿಚಾರಣೆಯನ್ನು ನವೆಂಬರ್ 13ರ ಮಧ್ಯಾಹ್ನ 2:30ಕ್ಕೆ ನಿಗದಿಪಡಿಸಿತು.
ಧಾರವಾಡ: ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಹೌದು ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದೇಶ ಹೊರಡಿಸಿತ್ತು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ. ಧಾರವಾಡದ ಹೈಕೋರ್ಟ್ ಪೀಠದಲ್ಲಿ ಪುನಃಶ್ಚೇತನ ಸೇವಾ ಸಂಸ್ಥೆ ಹುಬ್ಬಳ್ಳಿಯ ಎನ್ಜಿಓ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯಲ್ಲಿ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ. ಆದೇಶದಲ್ಲಿ 10 ಜನಕ್ಕಿಂತ ಹೆಚ್ಚು…
ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಐದು ವರ್ಷಗಳ ಕಾಲ ಸಿಎಂ ಎಂದು ಹೇಳಿಕೆ ನೀಡಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಸಿದ್ದರಾಮಯ್ಯ ಸಿಎಂ ಆಗಿ ಆರಿಸಿದ್ದು ಎರಡುವರೆ ವರ್ಷಕ್ಕೆ ಅಲ್ಲ. ಅಧಿಕಾರ ಹಂಚಿಕೆ ಇದೆ ಎಂದು ನಮಗೆ ಯಾರು ಹೇಳಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಆರಿಸಿದ್ದು ಎರಡೂವರೆ ವರ್ಷಕ್ಕೆ ಅಲ್ಲ. ಅಧಿಕಾರ ಹಂಚಿಕೆ ಇದೆ ಎಂದು ನಮಗೆ ಯಾರು ಹೇಳಿಲ್ಲ. ಅಧಿಕಾರ ಹಂಚಿಕೆ ಇದ್ದರೆ ಹೈಕಮಾಂಡ್ ನಮಗೆ ಹೇಳಲಿ. ನಾವು ಸಿಎಲ್ಪಿ ನಾಯಕರನ್ನು ಆಯ್ಕೆ ಮಾಡಿದಾಗ, ನಮ್ಮ ಪಕ್ಷ ಮೆಜಾರಿಟಿ ಬಂದಾಗ ಎಲ್ಲಾ ಶಾಸಕರನ್ನು ಕರೆದು ಸಿಎಲ್ಪಿ ನಾಯಕರನ್ನು ಆಯ್ಕೆ ಮಾಡಿದೆವು. ಅವತ್ತು ನಮಗೆ ಯಾವುದೇ ದೃಷ್ಟಿಯಿಂದ ಸಿದ್ದರಾಮಯ್ಯ ಬರಿ ಎರಡುವರೆ ವರ್ಷ ಮುಖ್ಯಮಂತ್ರಿ ಅಂತ ಹೇಳಿಲ್ಲ. ಹೈಕಮಾಂಡ್ ಅವರು ಸಹ ಸಿದ್ದರಾಮಯ್ಯ ಅವರು ಸಿಎಲ್ ಪಿ ನಾಯಕ…
ಕೋಲಾರ : ನೀನೆ ತಾನೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದರು ಇದೀಗ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸಹ ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೆ ಮುಂದುವರೆಯುತ್ತಾರೆ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವಲ್ಲಿ ಅವರ ಶ್ರಮ ಸಾಕಷ್ಟಿದೆ. ಅಧ್ಯಕ್ಷರ ಆದಿಯಾಗಿ ಸಾಕಷ್ಟು ಜನರು ಸಿಎಂ ಆಗಲು ಅರ್ಹರಿದ್ದಾರೆ. ಆದರೆ ಬೆಳಗಾದರೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಸಿಎಂ ಬದಲಾವಣೆಯ ಬಗ್ಗೆ ನಾವು ತೀರ್ಮಾನ ಮಾಡುವುದಿಲ್ಲ ಸಿಎಂ ಬದಲಾವಣೆ ವಿಚಾರ ಮಾತನಾಡುವುದು ಪ್ರಸ್ತುತ ಸಿಎಂ ಆಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ. 136 ಜನ ಶಾಸಕರಾಗಿ ಗೆದ್ದಿದ್ದೇವೆ ಅದಕ್ಕೆ ನಾಯಕತ್ವ ಬೇಕು ಎಂದು ತಿಳಿಸಿದರು. ಮುನಿಯಪ್ಪ ಸಿಎಂ ಆದರೆ ಸಂತೋಷ ಎಂದು ನಿನ್ನೆ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದು ಅದಕ್ಕೆ ಪ್ರತಿಕ್ರಿಯಿಸಿದ ಅವರು…
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿದೆ. ಅಲ್ಲದೆ ಸಚಿವ ಸಂಪುಟ ಬದಲಾವಣೆ ಸಹ ಆಗಲಿದೆ ಎಂದು ಹೇಳಲಗುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಚಿವ ಸಂಪುಟಕ್ಕೆ ಸೇರಿತ್ತೀರಾ ಎಂಬ ಪ್ರಶ್ನೆಗೆ ಮಂತ್ರಿ ಆಸೆ ಯಾರಿಗಿರಲ್ಲ ಹೇಳಿ ಅವಕಾಶ ಕೊಟ್ಟರು ಕೊಡಬಹುದು ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಆದರೆ ಅದು ಬಿಜೆಪಿಯಲ್ಲೇ ಆಗಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕಣ್ಣನ ಚೇರ್ ಗೆ ಸುನೀಲ ಅಣ್ಣ ಬರುತ್ತಾರೆ. ಅಶೋಕ್ ಅವರ ಕುರ್ಚಿ ಹೋಗುತ್ತೆ, ಇದೆ ಕ್ರಾಂತಿ ಅನ್ನಿಸುತ್ತೆ. ಪ್ರಯಶಹ ಬದಲಾವಣೆ ಇರಬಹುದೇನೋ? ಎಂದು ತಿಳಿಸಿದರು.
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ನವೆಂಬರ್ ಕ್ರಾಂತಿ ಆದರೆ ಅದು ಬಿಜೆಪಿಯಲ್ಲೇ ಆಗಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್.ಅಶೋಕಣ್ಣನ ಚೇರ್ ಗೆ ಸುನೀಲ ಅಣ್ಣ ಬರುತ್ತಾರೆ. ಅಶೋಕ್ ಅವರ ಕುರ್ಚಿ ಹೋಗುತ್ತೆ, ಇದೆ ಕ್ರಾಂತಿ ಅನ್ನಿಸುತ್ತೆ. ಪ್ರಯಶಹ ಬದಲಾವಣೆ ಇರಬಹುದೇನೋ? ಎಂದು ತಿಳಿಸಿದರು. ಸಚಿವ ಸಂಪುಟಕ್ಕೆ ಸೇರಿತ್ತೀರಾ ಎಂಬ ಪ್ರಶ್ನೆಗೆ ಮಂತ್ರಿ ಆಸೆ ಯಾರಿಗಿರಲ್ಲ ಹೇಳಿ ಅವಕಾಶ ಕೊಟ್ಟರು ಕೊಡಬಹುದು ಎಂದು ತಿಳಿಸಿದರು.
ಬೆಂಗಳೂರು : ಸಿಎಂ ಸ್ಥಾನದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯಲ್ಲಿ ವ್ಯತ್ಯಾಸ ವಿಚಾರಕ್ಕೆ ಸಂಬಂಧಪಟ್ಟಂತೆ ಅದು ನಿಮಗೆ ವ್ಯತ್ಯಾಸ ಕಾಣಬಹುದು ಆದರೆ ನಮಗಲ್ಲ ಸಿಎಂ ಸಾಫ್ಟ್ ಆಗಿದ್ದಾರೆ ಅಂತ ಯಾರು ರೇಟಿಂಗ್ ಮಾಡಿದ್ದು? ಸಾಫ್ಟ್ ಆಗಿದ್ದಾರೊ ಅಥವಾ ಹಾರ್ಡ್ ಆಗಿದ್ದಾರೊ ಅಂತ ಹೇಗೆ ಗೊತ್ತಾಗುತ್ತದೆ? ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, 2028 ರಲ್ಲೂ ಸ್ಪರ್ಧಿಸುವಂತೆ ಒತ್ತಾಯ ಇದೆ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಮುಂದೆಯೂ ಸ್ಪರ್ಧೆ ಮಾಡೋದು ಅವರ ವೈಯಕ್ತಿಕ ತೀರ್ಮಾನ 2028ರಲ್ಲೂ ನೀವು ಸ್ಪರ್ಧಿಸಿ ಸ್ಪರ್ಧಿಸಬೇಡಿ ಅಂತ ಹೇಳೋಕಾಗಲ್ಲ ಅದು ಸಿಎಂ ಸಿದ್ದರಾಮಯ್ಯ ಅವರ ವೈಯಕ್ತಿಕ ವಿಚಾರ ಎಂದು ತಿಳಿಸಿದರು. ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರಕ್ಕೆ ಸಂಬಂಧಪಟ್ಟಂತೆ ದಲಿತ ಸಿಎಂ ಬಗ್ಗೆ ಅವರವರ ಅಭಿಪ್ರಾಯ ಹೇಳುತ್ತಾರೆ. ಹೈಕಮಾಂಡ್ ತೀರ್ಮಾನ ಮಾಡಲಿದೆ ಈ ಬಗ್ಗೆ ಪದೇಪದೇ ಹೇಳಿಕೆ ಕೊಡುವುದು ಸರಿಯಲ್ಲ. ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಗೊತ್ತಿಲ್ಲ.…
ಬೆಂಗಳೂರು : ಸಿಎಂ ಸ್ಥಾನದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯಲ್ಲಿ ವ್ಯತ್ಯಾಸ ವಿಚಾರಕ್ಕೆ ಸಂಬಂಧಪಟ್ಟಂತೆ ಅದು ನಿಮಗೆ ವ್ಯತ್ಯಾಸ ಕಾಣಬಹುದು ಆದರೆ ನಮಗಲ್ಲ ಸಿಎಂ ಸಾಫ್ಟ್ ಆಗಿದ್ದಾರೆ ಅಂತ ಯಾರು ರೇಟಿಂಗ್ ಮಾಡಿದ್ದು? ಸಾಫ್ಟ್ ಆಗಿದ್ದಾರೊ ಅಥವಾ ಹಾರ್ಡ್ ಆಗಿದ್ದಾರೊ ಅಂತ ಹೇಗೆ ಗೊತ್ತಾಗುತ್ತದೆ? ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, 2028 ರಲ್ಲೂ ಸ್ಪರ್ಧಿಸುವಂತೆ ಒತ್ತಾಯ ಇದೆ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಮುಂದೆಯೂ ಸ್ಪರ್ಧೆ ಮಾಡೋದು ಅವರ ವೈಯಕ್ತಿಕ ತೀರ್ಮಾನ 2028ರಲ್ಲೂ ನೀವು ಸ್ಪರ್ಧಿಸಿ ಸ್ಪರ್ಧಿಸಬೇಡಿ ಅಂತ ಹೇಳೋಕಾಗಲ್ಲ ಅದು ಸಿಎಂ ಸಿದ್ದರಾಮಯ್ಯ ಅವರ ವೈಯಕ್ತಿಕ ವಿಚಾರ ಎಂದು ತಿಳಿಸಿದರು. ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರಕ್ಕೆ ಸಂಬಂಧಪಟ್ಟಂತೆ ದಲಿತ ಸಿಎಂ ಬಗ್ಗೆ ಅವರವರ ಅಭಿಪ್ರಾಯ ಹೇಳುತ್ತಾರೆ. ಹೈಕಮಾಂಡ್ ತೀರ್ಮಾನ ಮಾಡಲಿದೆ ಈ ಬಗ್ಗೆ ಪದೇಪದೇ ಹೇಳಿಕೆ ಕೊಡುವುದು ಸರಿಯಲ್ಲ. ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಗೊತ್ತಿಲ್ಲ.…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಡೆಲಿವರಿ ಬಾಯ್ ನಿಂದ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಬ್ರೆಜಿಲ್ ಮೂಲದ ಮಾಡೆಲ್ ಗೆ ಡೆಲಿವರಿ ಬಾಯ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬ್ಲಿಂಕಿಂಟ್ ಡೆಲಿವರಿ ಬಾಯ್ ಕುಮಾರರಾವ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದು, ಫುಡ್ ಡೆಲಿವರಿ ಕೊಡಲು ಬಂದಿದ್ದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಆರ್ ಟಿ ನಗರದಲ್ಲಿರುವ ಮಾಡೆಲ್ ಮನೆಯಲ್ಲಿಯೇ ಲೈಂಗಿಕ ಕಿರುಕುಳ ನೀಡಿದ್ದು, ಸೆಪ್ಟೆಂಬರ್ 17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.. ಕುಮಾರ್ ರಾವ್ ಕಾಲೇಜು ವಿದ್ಯಾರ್ಥಿಯಾಗಿದ್ದು ಪಾರ್ಟ್ ಟೈಮ್ ಆಗಿ ಬ್ಲಿಂಕ್ ಇಟ್ ಡೆಲಿವರಿ ಮಾಡುತ್ತಿದ್ದ. ಸಂತ್ರಸ್ತೇ ಕೆಲಸ ಮಾಡುತ್ತಿದ್ದ ಕಂಪನಿ ಮ್ಯಾನೇಜರ್ ಕಾರ್ತಿಕ್ ದೂರು ನೀಡಿದ್ದಾರೆ. ಕುಮಾರ್ ರಾವ್ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು…













