Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಮನೆಯ ಮಾಲೀಕ ಮಕ್ಕಳನ್ನು ಶಾಲೆಗೆ ಸೇರಿಸಲೆಂದು ಕಲಬುರ್ಗಿಗೆ ತೆರಳಿದ್ದಾಗ, ಕಳ್ಳರು ಕೈಚಳಕ ತೋರಿಸಿದ್ದು ಮನೆಯ ಬೀಗ ಒಡೆದು ಮನೆಯಲ್ಲಿದ್ದ ಸುಮಾರು 500 ಗ್ರಾಂ ಚಿನ್ನ 5 ಲಕ್ಷ ರೂಪಾಯಿ ನಗರದನ್ನು ಕಳ್ಳತನ ಮಾಡಿರುವ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ಘಟನೆ ನಡೆದಿದೆ. ಹೌದು ಹಾಡು ಹಗಲೇ ಮನೆಯಲ್ಲಿದ್ದ 500 ಗ್ರಾಂ ಚಿನ್ನ 5 ಲಕ್ಷ ನಗದು ಕಳವು ಮಾಡಿರುವ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ನಡೆದಿದೆ. ರಾಘವೇಂದ್ರ ಕಟ್ಟಿಮನಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆಮಕ್ಕಳನ್ನು ಶಾಲೆಗೆ ಸೇರಿಸಲು ಕಲಬುರ್ಗಿಗೆ ತೆರಳಿದ್ದಾಗ ಕಳ್ಳರಿಂದ ಈ ಕೃತ್ಯ ನಡೆದಿದೆ. ಮನೆ ವೇಗ ಒಡೆದು ಎರಡು ಬೆಡ್ ರೂಮ್ನಲ್ಲಿದ್ದ ಚಿನ್ನ ಹಾಗೂ 5 ಲಕ್ಷ ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ಲಾಕರ್ ಸಮೇತ ಚಿನ್ನಾಭರಣ ನಗದನ್ನು ಕದ್ದುಯ್ದಿದ್ದಾರೆ. ಇಬ್ಬರು ಕಳ್ಳರು ಮನೆಯಲ್ಲಿ ಓಡಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ…
ಚಿಕ್ಕಮಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗಾಗಿ ಎಸ್ಐಟಿ ಅಧಿಕಾರಿಗಳು ಶೋಧ ಕಾರ್ಯವನ್ನು ಚುರುಕುಗೋಳಿಸಿದ್ದಾರೆ. ಹೌದು ಸಂತ್ರಸ್ತೆ ವಿಡಿಯೋ ಚಿತ್ರಿಕರಿಸಿದ ಚಾಲಕ ಅಜಿತ್ ಗಾಗಿ ಎಸ್ಐಟಿ ಹುಡುಕಾಟ ನಡೆಸಿದ್ದಾರೆ. ಚಿಕ್ಕಮಗಳೂರಿನ ಕಲ್ಯಾಣ ನಗರದ ಮಾವನ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.ಆರು ದಿನದ ಹಿಂದೆ ಅಜಿತ್ ಮಾವ ಅವರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನೆಡೆಸಿದ್ದರು.ರಾತ್ರಿಯ ವೇಳೆ ದಿನೇಶ್ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನಡೆಸಿದರು. ಶೋಧ ನಡೆಸಿದ ನಂತರ ದಿನೇಶ್ ಮನೆಗೆ ಬೀಗ ಹಾಕಿ ಇದೀಗ ತೆರಳಿದ್ದಾರೆ.ಸಂತ್ರಸ್ತೆ ಹೇಳಿಕೆಯನ್ನು ರೆಕಾರ್ಡ್ ಮಾಡಿ ಅಜಿತ್ ವೈರಲ್ ಮಾಡಿದ್ದ ಎನ್ನಲಾಗುತ್ತಿದೆ. ಸಂತ್ರಸ್ತೆ ಹೇಳಿಕೆ ವೈರಲ್ ಬೆನ್ನಲ್ಲೇ ಅಜಿತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ ಕೇಳಿಬಂದಿತ್ತು. ಅಜಿತ್ ವಿರುದ್ಧ ಎಫ್ಐಆರ್ ದಾಖಲಿಸಿ ಎಸ್ಐಟಿ ಹುಡುಕಾಟ ನಡೆಸುತ್ತಿದ್ದು ಇವರಿಗೆ ಅಜಿತ್ ಬಂದನವಾಗಿಲ್ಲವೆಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಎಸ…
ಬೆಂಗಳೂರು : ಇತ್ತೀಚಿಗೆ ಸಣ್ಣಪುಟ್ಟ ವಿಷಯಗಳಿಗೆ ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಂತಹದ್ದೇ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದ್ದು, ಮೊಟ್ಟೆ ತಿನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಪತ್ನಿ ಮನನೊಂದು ಮನೆಯ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ ಹೌದು ಉತ್ತರ ಪ್ರದೇಶದ ಮೂಲದ ಪೂಜಾ (31) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತಿ ಅನಿಲ್ ಕುಮಾರ್ (35) ನನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ. ಎರಡು ವರ್ಷಗಳ ಹಿಂದೆ ದಂಪತಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು ಎನ್ನಲಾಗುತ್ತಿದೆ. ಊಟದ ವೇಳೆ ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ ಶುರುವಾಗಿದೆ. ನಾನು ಮನೆ ಯಜಮಾನ ನನಗೆ ಒಂದು ಮೊಟ್ಟೆ ಹೆಚ್ಚು ಬೇಕೆಂದು ಪತಿ-ಪತ್ನಿಯ ಜೊತೆ ಜಗಳವಾಡಿದ್ದಾನೆ.ಊಟಕ್ಕೆ ಕುಳಿತಿದ್ದಾಗ ಪತ್ನಿ ಪೂಜಾ ಮೇಲೆ ಅನಿಲ್ ಹಲ್ಲೆ ಮಾಡಿದ್ದಾನೆ. ಪತಿಯ ತಾರತಮ್ಯ ಭಾವನೆಗೆ ಬೇಸತ್ತು ಪೂಜಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತ…
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನದ ಕುರಿತಂತೆ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಆರ್ ವಿ ದೇಶಪಾಂಡೆ ಪ್ರತಿಕ್ರಿಯ ನೀಡಿದ್ದು ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಮುಂದುವರೆಯಲಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಚರ್ಚೆಯಾಗಿಲ್ಲ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿದರು.ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರಿದೆ ಅನ್ನೋದು ಗಾಳಿ ಸುದ್ದಿ. ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದರು. ಹೌದು ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಲವು ಹಿರಿಯ ನಾಯಕರ ಹೆಸರು ಕೇಳಿ ಬರುತ್ತಿದೆ.ಅಧ್ಯಕ್ಷ ಸ್ಥಾನ ಬದಲಾಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.ಆದರೆ ಇದೀಗ ಆರ್ ವಿ ದೇಶಪಾಂಡೆ ಅವರು ಇದೆಲ್ಲ ಗಾಳಿ ಸುದ್ದಿ, ಕೆಪಿಸಿಸಿ…
ದಾವಣಗೆರೆ : ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಕ್ಷಣ ಅವರನ್ನು ದಾವಣಗೆರೆಯ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಅವರಿಗೆ ಇದೀಗ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಹಿಂದುರಿಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಶೇಷ ತನಿಕಾ ತಂಡ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಐವರು ಹಿರಿಯ ಪೊಲೀಸ್ ಅಧಿಕಾರಿಗಳ ಎಸ್ಐಟಿ ತಂಡ ರಚನೆ ಮಾಡಲಾಗಿದ್ದು, ಎಸ್ಐಟಿ ಮೂಲಕ ತನಿಖೆ ಮಾಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. SIT ವರದಿಯನ್ನು ಆಧರಿಸಿ ಸಚಿವ ಬಿ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಎಸ್ ಐ ಟಿ ವರದಿ ಬರುವವರೆಗೆ ಕಾದು ನೋಡಲು ಸರ್ಕಾರ ತೀರ್ಮಾನ ಮಾಡಿದೆ. ಅಂತರಾಜ್ಯಕ್ಕೆ ಹಣ ವರ್ಗಾವಣೆ ಆಗಿದ್ದರೆ ಸಿಬಿಐ ತನಿಖೆ ಅನಿವಾರ್ಯ ಅಂತಹ ಪ್ರಕರಣಗಳಲ್ಲಿ ಎಸ್ಐಟಿ ತನಿಖೆ ಮಾಡಲು ಆಗುವುದಿಲ್ಲ. ಆಗ ಅನಿವಾರ್ಯವಾಗಿ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡಬೇಕಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ಪ್ರಕರಣವನ್ನು…
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ 3 ಪ್ರಕರಣಗಳು ಕುರಿತಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ಅದರಲ್ಲಿ ಎರಡು ಪ್ರಕರಣಗಳ ವಿಚಾರಣೆಯನ್ನು ಜೂನ್ 7 ಕ್ಕೆ ಮುಂದೂಡಿದೆ. ಹೌದು ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಅವರು ಅತ್ಯಾಚಾರ ಪ್ರಕರಣಗಳಲ್ಲಿ ನಿರೀಕ್ಷಿಣಾ ಜಾಮೀನು ಕೋರಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಇದೀಗ ಎರಡು ಪ್ರಕರಣಗಳ ವಿಚಾರಣೆಯನ್ನು ಇದೀಗ ಕೋರ್ಟ್ ಜೂನ್ 7ಕ್ಕೆ ಮುಂದೂಡಿದೆ ಎಂದು ಹೇಳಲಾಗುತ್ತಿದೆ. ಹೊಳೆನರಸೀಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಕೇಸ್ನಲ್ಲಿ ಮಾತ್ರ ಎಸ್ಐಟಿ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದೆರಡು ಪ್ರಕರಣಗಳಲ್ಲಿ ಈವರೆಗೂ ಪ್ರಜ್ವಲ್ ಬಂಧಿಸದ ಹಿನ್ನೆಲೆಯಲ್ಲಿ ಈ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದೆ ಹೀಗಾಗಿ ನ್ಯಾಯಾಲಯ ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದೆ. ಹೌದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ…
ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಮನೆಗೆ ನುಗ್ಗಿ ಯುವತಿ ಅಂಜಲಿ ಅಂಬಿಗೇರಳನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹುಬ್ಬಳ್ಳಿಯ 3ನೇ ಹೆಚ್ಚುವರಿ ದಿವಾಣಿ ಮತ್ತು JMFC ಕೋರ್ಟ್ ಆರೋಪಿ ವಿಶ್ವಗೆ ಜೂನ್ 16 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದು, ಜೂನ್ 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. ಆರೋಪಿ ವಿಶ್ವನ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದರು.ವಿಚಾರಣೆ ಬಳಿಕ ಜೂ.16 ರವರೆಗೆ ನ್ಯಾಯಂಗ ಬಂಧನಕ್ಕೆ ನೀಡಿ ಎಂದು ಇದೀಗ ಕೋರ್ಟ್ ಆದೇಶ ಹೊರಡಿಸಿದೆ. ಹುಬ್ಬಳ್ಳಿಯ 3ನೇ ಹೆಚ್ಚುವರಿ ದಿವಾಣಿ ಹಾಗೂ JMFC ಕೋರ್ಟ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆರೋಪಿ ವಿಶ್ವ ಅಂಜಲಿ ಮನೆಗೆ ನುಗ್ಗಿ ನಸುಕಿನ ಜಾವಾದಲ್ಲಿ ಭೀಕರವಾಗಿ ಕೊಲೆ ಮಾಡಿದ್ದ ಅದಾದ ಬಳಿಕ ಅಲ್ಲಿಂದ…
ಹಾಸನ : ಇತ್ತೀಚಿಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದ ಕೆರೆಯಲ್ಲಿ ನಾಲ್ಕು ಜನ ಮಕ್ಕಳು ಮುಳುಗಿ ಸಾವನ್ನಪ್ಪಿದ್ದರು ಇದೀಗ, ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೌದು ಹಾಸನ ಜಿಲ್ಲೆಯೇ ಬೇಲೂರು ತಾಲೂಕಿನ ನರಸೀಪುರದ ಕೆರೆಯಲ್ಲಿ ಮುಳುಗಿ ಮೂರು ಮಕ್ಕಳು ಸಾವನ್ನಪ್ಪಿದ್ದರೆ. ದೀಕ್ಷಿತ್ (10) ನಿತ್ಯಶ್ರೀ (12) ಕುಸುಮ (6) ಮೃತ ಪಟ್ಟ ಮಕ್ಕಳು ಎಂದು ಹೇಳಲಾಗುತ್ತಿದೆ. ಹಸುಗಳನ್ನು ಕೆರೆ ಬಳಿ ಕಟ್ಟಿ ಆಟ ಆಡುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಹಳೇಬೀಡು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪ ಮುತ್ತಿಗೆ ಗ್ರಾಮದಲ್ಲಿ ಮೇ.16 ರಂದು ಈಜಲು ತೆರಳಿದ್ದ ನಾಲ್ವರು ಮಕ್ಕಳಾದ ವಿಶ್ಚಾಸ್, ಪೃಥ್ಚಿ, ಜೀವನ್ ಹಾಗೂ ಬೇಲೂರು ತಾಲ್ಲೂಕು…
ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಅವರನ್ನು ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟಿಗೆ ಹಾಜರುಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ಕಾರ್ಯಗ್ರಹದಿಂದ ಎ 1 ಆರೋಪಿಯಾಗಿರುವ ಮುರುಘಾ ಶ್ರೀಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ. 2022ರ ಅಕ್ಟೋಬರ್ 13ರಂದು ಮುರುಘಾ ಸ್ವಾಮೀಜಿ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿತ್ತು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆ ಎರಡನೇ ಪೋಕ್ಸೋ ಕೇಸ್ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. ಎರಡೂ ಕೇಸ್ನಲ್ಲಿ ಸ್ವಾಮೀಜಿಗೆ ಜಾಮೀನು ಚಿತ್ರದುರ್ಗ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಜಾಮೀನಿಗಾಗಿ ಮುರುಘಾ ಸ್ವಾಮೀಜಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ನಿಂದ 1ನೇ ಪೋಕ್ಸೋ ಕೇಸ್ನಲ್ಲಿ ಮುರುಘಾಶ್ರೀಗೆ ಬೇಲ್ ಸಿಕ್ಕಿತ್ತು. ನವೆಂಬರ್ 16 ರಂದು ಹೈಕೋರ್ಟ್ ಮುರುಘಾಶ್ರೀಗೆ 7 ಷರತ್ತುಗಳು ಹಾಕಿ ಜಾಮೀನು ನೀಡಿತ್ತು. ಬಂಧನವಾಗಿ ಬರೋಬ್ಬರಿ 441 ದಿನಗಳ…













