Subscribe to Updates
Get the latest creative news from FooBar about art, design and business.
Author: kannadanewsnow05
ಗದಗ : SCP-TSP ಹಣವನ್ನು ಗ್ಯಾರೆಂಟಿ ಯೋಜನೆಗೆ ಡೈವರ್ಟ್ ಮಾಡಿದ್ದಾರೆ.ಕಳೆದ ವರ್ಷ 11,000 ಕೋಟಿ, ಈ ವರ್ಷ 13000 ಕೋಟಿ ಡೈವರ್ಟ್ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ನೀಡಿದ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಗದಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗಂಭೀರವಾಗಿ ಆರೋಪಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವಿದೆ ಗದಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಹೇಳಿಕೆ ನೀಡಿದ್ದು ಇಡೀ ಸಚಿವ ಸಂಪುಟವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಿಎಂ ಸಚಿವರ ರಾಜೀನಾಮೆ ಕೇಳುವ ನೈತಿಕತೆಯನ್ನೇ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ನವರು ಎಸ್ಸಿ ಎಸ್ಟಿ ಉದ್ದಾರ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಾರೆ. ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರದಲ್ಲೂ ಕಾಂಗ್ರೆಸ್ ಕ್ರಮ ಕೈಗೊಂಡಿಲ್ಲ.ನಾನು ಮುಖ್ಯಮಂತ್ರಿ ಆಗಿದ್ದಾಗ ಎಸ್ಸಿ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದೆ. ಆದರೆ ಈಗ ಸಿಎಂ ಸಿದ್ದರಾಮಯ್ಯ SCP-TSP ಹಣವನ್ನು ಗ್ಯಾರೆಂಟಿ ಯೋಜನೆಗೆ ಡೈವರ್ಟ್ ಮಾಡಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 1 ರಿಂದ 6ರ ವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 3 ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಇನ್ನು ಜೂನ್ 6 ರಂದು ವಿಧಾನ ಪರಿಷತ್ ಚುನಾವಣೆ ಮತ ಏಣಿಕೆ ನಡೆಯಲಿದೆ. ಹೀಗಾಗಿ ಜೂನ್ 1 ರಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೂನ್ 1 ರಿಂದ ಜೂನ್ 6ರ ವರೆಗೆ ಬಾರ್, ವೈನ್ ಶಾಪ್, ರೆಸ್ಟೋರೆಂಟ್,ಕ್ಲಬ್, ಹೊಟೆಲ್, ಅಂಗಡಿಗಳಲ್ಲಿ ಮದ್ಯ ಮಾರಾಟ, ಶೇಖರಣೆ ನಿಷೇಧಿಸಲಾಗಿದೆ.ಜೂನ್ 3ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಚುನಾವಣೆಗೂ 48 ಗಂಟೆ ಮನ್ನ ಅಂದರೆ ಜೂನ್ 1ರಿಂದಲೇ ಮದ್ಯ ಮಾರಾಟ ನಿಷೇಧಗೊಳ್ಳಲಿದೆ. ಇನ್ನು ಜೂನ್ 4 ರಂದು…
ಬೆಂಗಳೂರು : ಮನೆ ಮುಂದೆ ಸ್ವಚ್ಛತೆಯ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೌದು ಮನೆಯ ಮುಂದೆ ಸ್ವಚ್ಛತೆಯ ವಿಚಾರವಾಗಿ ಗಲಾಟೆ ಶುರುವಾಗಿದೆ. ಈ ವೇಳೆ ಪೌರಕಾರ್ಮಿಕರಾದ ಸಿ. ಮಂಜುನಾಥ ಹಾಗೂ ಕೆ ಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಪೌರಕಾರ್ಮಿಕರ ಮೇಲೆ ಹಿತೇಶ್ ಹಾಗೂ ಜಯಂತ್ ಎನ್ನುವವರು ಹಲ್ಲೆ ನಡೆಸಿದ್ದಾರೆ.ಸ್ವಚ್ಛತೆಗೆ ದಿನನಿತ್ಯ ಬರುವುದಿಲ್ಲವೆಂದು ವಾಗ್ವಾದ ನಡೆಸಿ ಬಳಿಕ ಹಲ್ಲೆ ಮಾಡಿದ್ದಾರೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ದಾವಣಗೆರೆ : ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಹಾಗೂ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಂದು ಚನ್ನಗಿರಿ ಪೊಲೀಸ್ ಠಾಣೆಗೆ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ಭೇಟಿ ನೀಡಿ, ಠಾಣೆಯ ಮೇಲೆ ಕಲ್ಲು ತೂರಾಟದ ವೇಳೆ ಯಾರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ಸ್ಪಷ್ಟನೆ ನೀಡಿದರು. ಇಂದು ಚನ್ನಗಿರಿ ಪೊಲೀಸ್ ಠಾಣೆಗೆ ಸಚಿವ ಜಿ ಪರಮೇಶ್ವರ್ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಲಾಕಪ್ ಡೆತ್ ಆರೋಪ ಮಾಡಿ ದುಷ್ಕರ್ಮಿಗಳು ಕಲ್ಲು ತೂರಿ ದಾಂಧಲೆ ನಡೆಸಿದ್ದರು. ನಂತರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಗೆ ಹಸ್ತಾಂತರಿಸಿತ್ತು ಎಂದು ತಿಳಿಸಿದರು. ಪ್ರಕರಣದಲ್ಲಿ ಇದುವರೆಗೆ 30 ಆರೋಪಿಗಳನ್ನು ಬಂಧಿಸಲಾಗಿದೆ. ಒಂದು ಕಡೆ ಠಾಣೆಗೆ ಶವ ತಂದಿಟ್ಟು ಪ್ರತಿಭಟನೆ ಮಾಡಿ ಕಲ್ಲು ತೂರಿದರೆ ಠಾಣೆ ಮುಂದಿದ್ದ…
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ಜೈಲಲ್ಲಿ ವಾಸವಿದ್ದ ಪ್ರೀತಂಗೌಡ ಆಪ್ತರಾಗಿರುವ ಆರೋಪಿಗಳಾದ ಲಿಖಿತ್ಗೌಡ ಹಾಗೂ ಚೇತನ್ ಇದೀಗ ಜೈಲಿಂದ ಬಿಡುಗಡೆಯಾಗಿದ್ದಾರೆ. ಹೌದು ಹಾಸನ ಜೈಲಿನಿಂದ ಲಿಖಿತ್ ಗೌಡ, ಯಲಗೊಂದ ಚೇತನ್ ಬಿಡುಗಡೆಯಾಗಿದ್ದಾರೆ. ಹಾಸನದ ಮೂರನೇ ಹೆಚ್ಚುವರಿ ಸೇಷನ್ಸ್ ಕೋರ್ಟ್ ಪ್ರಕರಣದ ವಿಚಾರಣೆ ನಡೆಸಿ, ದೇಶ ಬಿಟ್ಟು ಹೋಗಬಾರದು ತನಿಖಾಧಿಕಾರಿ ಎದುರು ಹಾಜರಾಗಬೇಕು. ವಾರಕ್ಕೊಮ್ಮೆ ಹಾಜರಾಗಬೇಕೆಂದು ಶರತ್ತು ವಿಧಿಸಿ ಕೋರ್ಟ್ ಜಾಮೀನು ನೀಡಿದೆ. ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತ ಲಿಖಿತ್ ಗೌಡ ಹಾಗೂ ಕಚೇರಿ ಸಹಾಯಕ ಯಲಗುಂದ ಚೇತನ್ ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮೇ 12ರಂದು ಎಸ್ಐಟಿ ಪೊಲೀಸರು ಲಿಖಿತ್ ಗೌಡ ಹಾಗೂ ಚೇತನ್ ನನ್ನು ಬಂಧಿಸಿದ್ದರು. 18 ದಿನಗಳ ನಂತರ ಲಿಖಿತ್ ಗೌಡ ಚೇತನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮೇ 12 ರಂದು ಎಸ್ ಐ ಟಿ ಅಧಿಕಾರಿಗಳು ಈ ಇಬ್ಬರು…
ವಿಜಯಪುರ : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಬಿಐ ವಹಿಸಿ ಎಂದು ಪತ್ರ ಬರೆದಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಎನ್ನುವವರು ಇತ್ತೀಚಿಗೆ ನಿಗಮದಿಂದ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಕರಣವನ್ನು ಸಿಬಿಐ ವಹಿಸಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಜೊತೆಗೆ 187.3 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ವಹಿವಾಟು ನಡೆಸುವ ಮುನ್ನ ಪಾಲಿಕೆ ಅಧಿಕಾರಿಗಳ ಸಹಿ ನಕಲಿಯಾಗಿದೆ. ಈ ಪ್ರಕರಣದ ಪ್ರಸ್ತುತ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಸರಕಾರಕ್ಕೆ ವರದಿ ನೀಡಿರುವುದರಿಂದ ಆರೋಪಿಗಳ ರಕ್ಷಣೆಗೆ ಅನಗತ್ಯ ಪ್ರಭಾವ ಬೀರುವ ಆತಂಕ…
ದಾವಣಗೆರೆ : ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಹಾಗೂ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಂದು ಚನ್ನಗಿರಿ ಪೊಲೀಸ್ ಠಾಣೆಗೆ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ಭೇಟಿ ನೀಡಿದರು. ಇಂದು ಚನ್ನಗಿರಿ ಪೊಲೀಸ್ ಠಾಣೆಗೆ ಸಚಿವ ಜಿ ಪರಮೇಶ್ವರ್ ಭೇಟಿ ನೀಡಿದ್ದು, ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಲಾಕಪ್ ಡೆತ್ ಆರೋಪ ಮಾಡಿ ದುಷ್ಕರ್ಮಿಗಳು ಕಲ್ಲು ತೂರಿ ದಾಂಧಲೆ ನಡೆಸಿದ್ದರು. ನಂತರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಗೆ ಹಸ್ತಾಂತರಿಸಿತ್ತು. ಈ ವೇಳೆ ಪೂರ್ವ ವಲಯ ಐಜಿಪಿ, ಹಾಗೂ ಎಸ್ಪಿ ಉಮಾ ಪ್ರಶಾಂತ್ ಅವರಿಂದ ಗೃಹ ಸಚಿವ ಜಿ. ಪರಮೇಶ್ವರ್ ಘಟನೆಯ ಕುರಿತು ಮಾಹಿತಿ ಪಡೆದಿದ್ದಾರೆ.ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್, ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ ಮತಿತರರು ಗೃಹ ಸಚಿವರಿಗೆ ಸಾಥ್ ನೀಡಿದರು.
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಯಾಂಡಲ್ ವುಡ್ ನಟ ಕಿಶೋರ್ ಅವರು ಆಗಾಗ ಗುಡುಗುತ್ತಲೆ ಇರುತ್ತಾರೆ. ಇದೀಗ ಸಂದರ್ಶನ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗಾಂಧೀಜಿ ಅವರ ಕುರಿತು ಮಾತನಾಡಿದ್ದು 1982ರಲ್ಲಿ ಸಿನಿಮಾ ಬಂದ ನಂತರವೇ ಅವರ ಬಗ್ಗೆ ವಿಶ್ವದ ಇಂಚಿಂಚಿಗೂ ತಿಳಿಯಿತು ಎಂದು ಹೇಳಿದ್ದರು. ಇವರ ಈ ಒಂದು ಹೇಳಿಕೆಗೆ ನಟ ಕಿಶೋರ್ ಕಿಡಿ ಕಾರಿದ್ದು, ಕೆಲಸ ಮಾಡಲಾಗದ ಅಯೋಗ್ಯ ಮೋದಿಗೇನು ಹುಚ್ಚೇ ಎಂದು ಪ್ರಶ್ನೆ ಮಾಡಿದ್ದಾರೆ. ಇದೇನು ಹುಚ್ಚೋ … ಹೊಲಸು ಕುತಂತ್ರವೋ? ..ತನ್ನ ಬೌದ್ಧಿಕ ದಿವಾಳಿತನ ಮತ್ತು ಕೆಲಸ ಮಾಡಲಾಗದ ಅಯೋಗ್ಯತೆಯನ್ನು, ನಿರುದ್ಯೋಗ,ಬೆಲೆಯೇರಿಕೆ, ಬಡತನ, ಮಣಿಪುರ, ಚೀನಾ, ಅಗ್ನಿವೀರ್, ರೈತ ಹೋರಾಟ, ನಗದು ಅಮಾನ್ಯೀಕರಣ, ಕೊರೋನ, ಅದಾನಿ, ಪಿಎಮ್ ಕೇರ್ಸ್, ಚುನಾವಣಾ ಬಾಂಡ್ ಹೀಗೆ ಹಲವು ನೈಜ ಸಮಸ್ಯೆ ಸೋಲುಗಳನ್ನೂ ಮುಚ್ಚಿಹಾಕಲು ಬಾಯಿಗೆ ಬಂದದ್ದು ಬೊಗಳುತ್ತಾ ಪ್ರತಿದಿನವೂ ಕಾನೂನು ಬಾಹಿರ ಪ್ರಚಾರವನ್ನೂ ಗಮನ ಬೇರೆಡೆ ತಿರುಗಿಸುವ ಈ ಕಳ್ಳ ಕೆಲಸವನ್ನೂ ಮಾಡುತ್ತಾ ಈ ವಿಕಸಿತ…
ಬೆಂಗಳೂರು : ಸಿಬಿಐ ಅಧಿಕಾರಿಗಳು ಎಂದು ಅವರ ಸೋಗಿನಲ್ಲಿ ಬೆಂಗಳೂರು ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ಗೆ ನುಗ್ಗಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಹನ್ನೆರಡು ಗಂಟೆ ಒಳಗಡೆ ಪೊಲೀಸರು, ಆರೋಪಿಗಳನ್ನ ಚೇಸ್ ಮಾಡಿ ತಮಿಳುನಾಡಿನ ಧರ್ಮಪುರಿಯಲ್ಲಿ ಹಿಡಿದಿದ್ದಾರೆ. ಹೌದು ರಾತ್ರಿ ಸೆಕ್ಯೂರಿಟಿಗೆ ಸಿಬಿಐ ಪೊಲೀಸರು ಎಂದು ಹೇಳಿ ಅಪಾರ್ಟ್ಮೆಂಟ್ಗೆ ನಾಲ್ವರು ನುಗ್ಗಿದ್ದಾರೆ. ನಂತರ ಆಚಾರ್ಯ ಕಾಲೇಜು ವಿದ್ಯಾರ್ಥಿಗಳು ವಾಸ ಮಾಡುವ ಫ್ಲಾಟ್ಗೆ ಹೋಗಿ, ಫ್ಲಾಟ್ನಲ್ಲಿದ್ದವರಿಗೆ ಲಾಠಿಯಿಂದ ಹಲ್ಲೆ ನಡೆಸಿ, ಲಾಕಪ್ ಮತ್ತು ಗನ್ ತೋರಿಸಿ ಗಾಂಜಾ ಮಾರಾಟ ಮಾಡ್ತಿದ್ದಿರಾ ಎಂದು ಹೇಳಿ ಬೆದರಿಸಿದ್ದಾರೆ. ಒಂದು ಐ 20 ಮತ್ತು ಮಹೇಂದ್ರ XUV 300 ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದ ಟೀಮ್, ಬಂಧಿತ ಆರೋಪಿಗಳಿಂದ CBIT ಹೆಸರಿನ ನಾಲ್ಕು ಐಡಿ ಕಾರ್ಡ್, ಒಂದು ಏರ್ ಗನ್ , ಏರ್ ಗನ್ ಗೆ ಬಳಸುವ ನೂರಕ್ಕು ಹೆಚ್ಚು ಬುಲೆಟ್ಸ್, ಪೊಲೀಸರು ಬಳಸುವ ಹ್ಯಾಂಡ್ ಕಾಫ್, ಲಾಠಿ, ಹಿರಿಯ ಪೊಲೀಸ್…
ಶಿವಮೊಗ್ಗ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಮೂಲಕ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬಂಧನಕ್ಕೆ ವಾರಂಟ್ ಸಿದ್ಧಪಡಿಸಲಾಗಿದೆ. ವಿಶೇಷ ತನಿಕಾ ತಂಡದ ಅಧಿಕಾರಿಗಳು ಮುಂದಿನ ಕರ್ಮ ಕೈಗೊಳ್ಳಲಿದ್ದಾರೆ.ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದರು. ಆದರೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಮೇಲೆ ಖಚಿತವಾಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಜ್ವಲ್ ಆಗಮಿಸುತ್ತಿರುವ ವಿಮಾನ ಜರ್ಮನಿಯ ಯೂನಿಕ್ ಏರ್ಪೋರ್ಟ್ ಇಂದ ಟೆಕ್ ಆಫ್ ಆಗಿದೆ ಇಂದು ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಬಂದ…











