Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮದಿಂದ ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ ಸಮಸ್ಯೆಯಿಂದಾಗಿ ಹಲವು ಕಡೆಗಳಲ್ಲಿ ಹಲವು ರೀತಿಯಲ್ಲಿ ಜನ ನಿಜಕ್ಕೂ ಬಾಧನೆಗೆ ಒಳಗಾಗಿದ್ದಾರೆ ಹೌದು, ಇದೀಗ ಈ ಒಂದು ಪರಿಣಾಮ ಇಂದಿರಾ ಕ್ಯಾಂಟೀನ್ ಮೇಲೂ ಬೀರಿದೆ. ಕಲಬುರ್ಗಿಯಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಇದೀಗ ಕೆಲಸ ಕಳೆದುಕೊಂಡಿದ್ದಾರೆ. ರಾಜ್ಯಾದ್ಯಂತ ಸಿಲಿಂಡರ್ ಅಭಾವದಿಂದ ಈ ಒಂದು ಸಮಸ್ಯೆ ಆಗಿದ್ದು ಇಂದಿರಾ ಕ್ಯಾಂಟೀನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಕೆಲಸ ಕಳೆದುಕೊಂಡಿದ್ದಾರೆ ಗುತ್ತಿಗೆದಾರರು ಇಂದಿನಿಂದ ಕೆಲಸಕ್ಕೆ ಬರಬೇಡಿ ಅಂತ ಮಹಿಳೆಯರಿಗೆ ಹೇಳಿರುವ ಹಿನ್ನೆಲೆಯಲ್ಲಿ ಮಹಿಳೆಯರು ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ 10 ಮಹಿಳೆಯರನ್ನು ಗುತ್ತಿಗೆದಾರರು ಕೈಬಿಟ್ಟಿದ್ದಾರೆ. ಇದೀಗ ಕೆಲಸ ಕಳೆದುಕೊಂಡು ಮಹಿಳೆಯರ ಜೀವನ ದುಸ್ತರವಾಗಿದೆ.
ವಿಜಯಪುರ: ಪಂಚ ರಾಜ್ಯಗಳ ಚುನಾವಣೆ ನಂತರ ನಮ್ಮbರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ತಿಂಗಳಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಬಳಿಕ ಸಂಪುಟ ವಿಸ್ತರಣೆಯ ವಿಶ್ವಾಸ ಇದೆ. ಈ ವೇಳೆ ಶೇ.50ರಷ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಬೇಕು ಎಂಬ ಬೇಡಿಕೆ ಇದೆ ಎಂದು ಹೇಳಿದರು. ಇದೇ ವೇಳೆ, ಅಧಿಕಾರ ಹಂಚಿಕೆ ಹಾಗೂ ಸಿಎಂ ವಿಚಾರದಲ್ಲಿ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಮಾಡಲಿದ್ದಾರೆ. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2.9 ವರ್ಷವಾಗಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಐದು ಗ್ಯಾರಂಟಿಗಳ ಅನುಷ್ಠಾನದೊಂದಿಗೆ ಆರನೇ ಗ್ಯಾರಂಟಿಯಾಗಿ 2.20 ಲಕ್ಷ ಜನರಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಾಗಿದೆ ಎಂದರು. ಸಚಿವ ಸಂಪುಟ ವಿಸ್ತರಣೆಯ ಮುನ್ಸೂಚನೆ ಸಮಯ: ಐದು ರಾಜ್ಯಗಳ ಚುನಾವಣೆ (ಮತ್ತು ಪ್ರಸ್ತುತ…
ಬೆಂಗಳೂರು : ಅಪರಿಚಿತ ವ್ಯಕ್ತಿಗಳು ಒಡಿಶಾ ಶಾಸಕರನ್ನು ಭೇಟಿಯಾಗಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಅಪರಿಚಿತ ನಾಲ್ವರು ವ್ಯಕ್ತಿಗಳು ಒಡಿಶಾ ಶಾಸಕರನ್ನು ಭೇಟಿಯಾಗಿ 5 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದು ತಿಳಿಸಿದರು. ಈ ವಿಚಾರವಾಗಿ ಬೆಂಗಳೂರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಡಿಶಾ ಕಾಂಗ್ರೆಸ್ ಶಾಸಕರು ರೆಸಾರ್ಟ್ ನಲ್ಲಿ ಇದ್ದರು ಬಿಜೆಪಿಯವರು ಕೂಡ ಮಾಡಿಕೊಂಡು ಉಳಿದುಕೊಂಡಿದ್ದಾರೆ. ಬ್ಯಾಟರಾಯನಪುರ ಸುರೇಶ್ ಎಂಬುವನ ಮೂಲಕ ಮಾಡಿದ್ದಾರೆ. ಐದು ಕೋಟಿ ಆಫರ್ ಕೊಟ್ಟು ನಮ್ಮ ಶಾಸಕರನ್ನು ಭೇಟಿಯಾಗಿದ್ದಾರೆ. ಆದರೆ ಅವರ ಕುದುರೆ ವ್ಯಾಪಾರಕ್ಕೆ ನಮ್ಮ ಶಾಸಕರು ಒಪ್ಪಿಲ್ಲ ಒಟ್ಟು ನಾಲ್ವರು ಇದ್ದರು. ಇಬ್ಬರನ್ನು ನಮ್ಮವರು ಹಿಡಿದಿದ್ದಾರೆ.ಖಾಲಿ ಚೆಕ್ ಸಮೇತ ಹಿಡಿದಿದ್ದಾರೆ ಪೊಲೀಸರು ಕೂಡ ದೂರು ಕೊಟ್ಟಿದ್ದಾರೆ. ಅವರ ವಿರುದ್ಧ ಕಾನೂನಿನ ಅಡಿ ಕ್ರಮ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಬೆಂಗಳೂರು : ಒಡಿಶಾದಲ್ಲಿ ನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಓಡಿಶಾ ಶಾಸಕರ ಖರೀದಿಗೆ ಅಪರಿಚಿತ ವ್ಯಕ್ತಿಗಳು ಇದೀಗ ಮುಂದಾಗಿದ್ದಾರೆ ಎನ್ನುವ ವಿಚಾರ ಬಹಿರಂಗವಾಗಿದೆ. ರೆಸಾರ್ಟ್ ನಲ್ಲಿ ಬೆಳಿಗ್ಗೆ ನಾಲ್ವರು ಓರ್ವ ಶಾಸಕನನ್ನು ಭೇಟಿಯಾಗಿದ್ದಾರೆ. ನಾಲ್ವರ ಪೈಕಿ ಇಬ್ಬರನ್ನು ಕಾಂಗ್ರೆಸ್ ಮುಖಂಡರು ಹಿಡಿದಿಟ್ಟಿದ್ದಾರೆ. ಕರ್ನಾಟಕ ಮೂಲದ ವ್ಯಕ್ತಿಯ ಜೊತೆಗೆ ನಾಲ್ವರು ರೆಸಾರ್ಟಿಗೆ ಬಂದಿದ್ದರು.ಶಾಸಕರ ಖರೀದಿಗೆ ಅಪರಿಚಿತ ವ್ಯಕ್ತಿಗಳು ಬಂದಿರುವ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಮುಖಂಡರಿಗೆ ಸಿಕ್ಕಿರುವ ವ್ಯಕ್ತಿಗಳ ಬಳಿ ಚೆಕ್ ಗಳು ಕೂಡ ಪತ್ತೆಯಾಗಿವೆ. ಬಿರೇಂದ್ರ ಪ್ರಸಾದ ಎಂಬ ಅವರ ಹೆಸರಿನಲ್ಲಿ ಬ್ಲಾಂಕ್ ಚೆಕ್ ಪತ್ತೆಯಾಗಿದೆ ವಂಡರ್ ಅಲ್ಲ ರಿಸಲ್ಟ್ ನಲ್ಲಿರುವ ಓಡಿಸ್ಸಾ ಕಾಂಗ್ರೆಸ್ ಶಾಸಕರು ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿ ಇರುವ ವಂಡರ್ ಲಾ ರೆಸಾರ್ಟ್ ನಲ್ಲಿ ಒಡಿಶಾ ಶಾಸಕರು ಇದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ ಎಂದು ತಿಳಿದುಬಂದಿದೆ. ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಪವನ್ ಕಲ್ಯಾಣ್ ಕುಟುಂಬದವರಿಂದ ನಿರಂತರ ವರದಕ್ಷಿಣೆ ಕಿರುಕುಳ ಆರೋಪವನ್ನು ಶೃತಿ ಕುಟುಂಬಸ್ಥರು ಹೊರಿಸಿದ್ದಾರೆ. ವರದಕ್ಷಿಣೆ ಕಿರುಕುಳ ಹಿನ್ನೆಲೆ ಶೃತಿ ಹಾಗೂ ಪತಿ ಕುಟುಂಬಸ್ಥರ ನಡುವೆ ಕಲಹ ಉಂಟಾಗುತ್ತಿತ್ತು. ಈ ಹಿಂದೆ ರಾಜಿ ಪಂಚಾಯ್ತಿ ಮಾಡಲಾಗಿತ್ತು. ಆದರೆ ಮತ್ತೆ ಕಿರುಕುಳ ನೀಡಿ ಹಿಂಸೆ ನೀಡುತ್ತಿದ್ದರು. ಈ ಹಿನ್ನೆಲೆ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ ಮಾಡಿದ್ದಾರೆ. ನಂತರ ನೇಣು ಹಾಕಿ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಜಯನಗರ : ವಿಜಯನಗರದ ಕೊಟ್ಟೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಲ್ಕು ಮಂದಿಗೆ ಕಚ್ಚಿ ಬೀದಿ ನಾಯಿ ಗಂಭೀರವಾಗಿ ಗಾಯಗೊಳಿಸಿದೆ. ಮೂವರು ಮಕ್ಕಳ ಸೇರಿದಂತೆ ಓರ್ವ ವ್ಯಕ್ತಿಗೆ ಬಿರಿ ನಾಯಿ ಕಚ್ಚಿ ಗಾಯಗೊಳಿಸಿದೆ. ಬೀದಿ ನಾಯಿಗಳ ದಾಳಿಗೆ ಇದೀಗ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಈ ಒಂದು ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮನೆಯ ಎದುರುಗಡೆ ಕುಳಿತಿದ್ದ ಮಗುವಿನ ಮೇಲೆ ಆ ಕಡೆಯಿಂದ ಬಂದಂತಹ ನಾಯಿ ಏಕಾಏಕಿ ದಾಳಿ ಮಾಡಿ ಕೈ ಮತ್ತು ಕಾಲಿಗೆ ಕಚ್ಚಿ ಗಾಯಗೊಳಿಸಿದೆ. ಅಲ್ಲದೆ ಕುತ್ತಿಗೆ ಭಾಗಕ್ಕೂ ಕಚ್ಚಿ ಗಾಯಗೊಳಿಸಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ.
ಬಾಗಲಕೋಟೆ / ದಾವಣಗೆರೆ : ಕೇಂದ್ರ ಚುನಾವಣೆ ಆಯೋಗವು ಇಂದು ಪಂಚ ರಾಜ್ಯ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದ್ದು, ಇದೀಗ ರಾಜ್ಯದ ಬಾಗಲಕೋಟೆ, ದಾವಣಗೆರೆಯ ಉಪಚುನಾವಣೆಗು ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೇ ಎಂದು ತಿಳಿದುಬಂದಿದೆ. ಕೇಂದ್ರ ಚುನಾವಣೆ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಒಂದು ವಾರದೊಳಗಾಗಿ ಉಪ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಎಚ್ ವೈ ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳು ತೆರವಾಗಿವೆ. ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬಿರುಸಿದ ಸಿದ್ದತೆ ನಡೆಯುತ್ತಿದೆ. ಬಾಲಕೋಟೆ ಮತ್ತು ದಾವಣಗೆರೆ ದಕ್ಷಿಣಕ್ಕೆ ಟಿಕೆಟ್ ಫೈಟ್ ಜೋರಾಗಿದೆ. ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿದೆ. ದಾವಣಗೆರೆ ದಕ್ಷಿಣಕ್ಕೆ ಮುಸ್ಲಿಂ…
ದೆಹಲಿ : ರಾಜಧಾನಿಯಲ್ಲಿ ‘ವೃಕ್ಷಿತ್ ಫೌಂಡೇಶನ್’ ನಡೆಸಿದ ಸ್ವಚ್ಛತಾ ಅಭಿಯಾನದ ವೇಳೆ ಸ್ವಯಂಸೇವಕರಿಗೆ ಕಸದ ರಾಶಿಯಡಿ ಮಾನವ ಅಸ್ಥಿಪಂಜರ ಪತ್ತೆಯಾಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಇದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೌದು ಸ್ವಚ್ಛತಾ ಕಾರ್ಯದ ವೇಳೆ ಕಸದ ರಾಶಿಯಡಿ ಅಸ್ಥಿಪಂಜರ ಸಿಕ್ಕಿರುವ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ‘ವೃಕ್ಷಿತ್ ಫೌಂಡೇಶನ್’ ನೇತೃತ್ವದಲ್ಲಿ ಈ ಕ್ಲೀನಿಂಗ್ ಡ್ರೈವ್ ನಡೆಯುತ್ತಿತ್ತು. ಕೈಗೆ ಗ್ಲೌಸ್, ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ಸ್ವಯಂಸೇವಕರು ದೊಡ್ಡ ಕಸದ ರಾಶಿಯನ್ನು ತೆರವುಗೊಳಿಸುತ್ತಿದ್ದರು. ಆಗ, ಅದರ ಕೆಳಗೆ ಮನುಷ್ಯನ ಮೂಳೆಗಳಂತೆ ಕಾಣುವ ವಸ್ತುಗಳು ಪತ್ತೆಯಾಗಿವೆ. ದೆಹಲಿಯಲ್ಲಿ ‘ವೃಕ್ಷಿತ್ ಫೌಂಡೇಶನ್’ ಸ್ವಯಂಸೇವಕರು ಸ್ವಚ್ಛತಾ ಕಾರ್ಯಕ್ರಮವೊಂದನ್ನು ನಡೆಸುತ್ತಿದ್ದರು. ಈ ವೇಳೆ, ಕಸದ ರಾಶಿಯ ಕೆಳಗೆ ಅವರಿಗೆ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಇದನ್ನು ನೋಡಿದ ತಕ್ಷಣ ಅವರು ಕ್ಲೀನಿಂಗ್ ಕೆಲಸ ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಫೋರೆನ್ಸಿಕ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.…
ಮಂಡ್ಯ : ವಿಶ್ವೇಶ್ವರಯ್ಯ ನಾಲಾ ಸೇರಿದಂತೆ ಎಲ್ಲಾ ಶಾಖಾ ನಾಲೆಗಳ ಅಭಿವೃದ್ಧಿಗೆ 100 ಕೋಟಿ ಅನುದಾನ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಿಂದ ಕ್ಯಾಬಿನೆಟ್ ಅಪ್ರೂವಲ್ ಪಡೆಯಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವ್ರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಮಂಡ್ಯ ಕ್ಷೇತ್ರದಲ್ಲಿ ಈಗಾಗಲೇ 200 ಕೋಟಿ ಕಾಮಗಾರಿ ಮುಗಿದಿದೆ. ಬಸರಾಳು ವ್ಯಾಪ್ತಿಯ ಹೇಮಾವತಿ ನಾಲಾ ಅಭಿವೃದ್ಧಿಗೆ 350ಕೋಟಿ ಕಾಮಗಾರಿಗೆ ತಾಂತ್ರಿಕ ಅನುಮೋದನೆ ಸಿಕ್ಕಿದೆ. ಮಂಡ್ಯ ನಗರದ ಪ್ರಮುಖ ವೃತ್ತಗಳನ್ನ ವಿದೇಶಿ ಮಾದರಿ ಅಭಿವೃದ್ಧಿ ಮಾಡುವ ಗುರಿ ಇದೇ. ಹೊಸ ಕಾರ್ಖಾನೆ ಬದಲು ಮೈಶುಗರ್ ಕಾರ್ಖಾನೆಯಲ್ಲಿ 60ಕೋಟಿ ವೆಚ್ಚದಲ್ಲಿ ಹೊಸ ಬಾಯ್ಲರ್ ಹೌಸ್ ನಿರ್ಮಾಣ ಮಾಡಲಾಗುತ್ತದೆ. 33ಕೋಟಿ ವೆಚ್ಚದಲ್ಲಿ ಕಾರ್ಮಿಕರ ವಸತಿ ಶಾಲೆ ಬಜೆಟ್ನಲ್ಲಿ ಘೋಷಣೆಯಾಗಿದೆ. ಮೈಶುಗರ್ ಭ್ರಷ್ಟಾಚಾರ ತನಿಖೆ ಚಾಲ್ತಿಯಲ್ಲಿದೆ. ತನಿಖಾ ತಂಡ ಸರ್ಕಾರಕ್ಕೆ ವರದಿ ನೀಡಿದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ ಎಂದರು. ಜಿಲ್ಲೆಯಲ್ಲಿ 4ಕಡೆಗಳಲ್ಲಿ…
ನವದೆಹಲಿ : ಕರೂರು ಕಾಲ್ತುಳಿತದಲ್ಲಿ 41 ಮಂದಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಟಿ ವಿ ಕೆ ನಾಯಕ ಹಾಗೂ ನಟ ವಿಜಯ್ ಮೂರನೇ ಬಾರಿಗೆ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯಲ್ಲಿರುವ ಸಿಬಿಐ ಕಚರಿಗೆ ನಟ ವಿಜಯ್ ಹಾಜರು ಆಗಿದ್ದಾರೆ ತಮಿಳುನಾಡು ಚುನಾವಣೆ ಘೋಷಣೆ ಹೊತ್ತಲ್ಲೇ ವಿಜಯ್ ವಿಚಾರಣೆಗೆ ಹಾಜರಾಗಿದ್ದಾರೆ. ಟಿ ವಿ ಕೆ ಸಮಾರಂಭದಲ್ಲಿ ಕಲ್ತುಲಿತ ಸಮಾವೇಶ 41 ಜನರು ಸಾವನ್ನಪ್ಪಿದ್ದರು.ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಬಾರಿಗೆ ಸಿಬಿಐ ವಿಚಾರಣೆಗೆ ನಟ ವಿಜಯ್ ಹಾಜರಾಗಿದ್ದಾರೆ.














