Author: kannadanewsnow05

ಬೆಳಗಾವಿ : ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿರುವಂತಹ ಉದ್ಯಮಿಯೊಬ್ಬರ ಶವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಶವ ಪತ್ತೆಯಾಗಿರುವ ಈ ಘಟನೆ ನಡೆದಿದೆ.ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಹಾಗೂ ಹೆಚ್ಚುವರಿ ಎಸ್ ಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯನ್ನು ಗ್ರಾನೈಟ್‌ ಉದ್ಯಮಿ ಫೈರೋಜ್ ಬಡಗಾಂವಿ (40) ಎಂದು ಗುರುತಿಸಲಾಗಿದೆ. ಫೈರೋಜ್ ಅವರು ಚಿಕ್ಕೋಡಿಯ ಮುಲ್ಲಾ ಪ್ಲಾಟ್‌ ನಿವಾಸಿ ಎಂದು ತಿಳಿದುಬಂದಿದೆ. ಇಂದು ಅವರ ಶವ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಪಕ್ಕ ಅವರ ಕಾರು ಬೆಂಕಿಗೆ ಆಹುತಿಯಾಗಿದೆ. ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಚಾಲಕನ ಸೀಟಿನಲ್ಲಿ ಕುಳಿತಿದ್ದ ಫೈರೋಜ್‌ ಕೂಡ ಬೆಂದುಹೋಗಿದ್ದಾರೆ. ಮೇಲ್ನೋಟಕ್ಕೆ ಅಪಘಾತವಾಗಿ ಬೆಂಕಿ ಹೊತ್ತಿಕೊಂಡಂತೆ ಕಾಣುತ್ತಿದೆ. ಆದರೂ ಸಾವು ಅನುಮಾನಾಸ್ಪದವಾಗಿದೆ. ಮೃತನ ಕುಟುಂಬದವರ ದೂರು ಆಧರಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ…

Read More

ತುಮಕೂರು : ಕೈಗಾರಿಕಾ ಪ್ರದೇಶಕ್ಕೆ ಸೇರ್ಪಡೆಗೊಂಡಂತಹ ಜಮೀನೀನ ಕೆಐಎಡಿಬಿಯ ಪರಿಹಾರದ ಹಣ ಹೊಡೆಯಲು ಬದುಕಿರುವವರನ್ನು ಸತ್ತಿದ್ದಾನೆ ಎಂದು ತಿಥಿ ಕಾರ್ಡ್ ತಯಾರಿಸಿ ಕೋಟ್ಯಂತರ ಹಣ ಲಪಟಾಯಿಸಲು ಕುಟುಂಬವೊಂದು ಬಿಗ್ ಪ್ಲಾನ್ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹೌದು ಬದುಕಿದ್ದ ವ್ಯಕ್ತಿಯು ಸತ್ತಿದ್ದಾನೆ ಎಂದು ತಿಥಿ ಕಾರ್ಡ್ ಹೊಡೆಸಿ ಜಮೀನನ್ನು ಸಂಬಂಧಿಕರೇ ಗೋಲ್ಮಾಲ್ ಮಾಡಿದ್ದಾರೆ.ಸೋರೆಕುಂಟೆ ಗ್ರಾಮದ ಸರ್ವೆ ನಂಬರ್ 41/44ರಲ್ಲಿರುವ ನಾಲ್ಕು ಎಕರೆ ಜಮೀನನ್ನು ತುಮಕೂರಿನ ಹಿಂದಿನ ತಾಶಿಲ್ದಾರ್ ಸಿದ್ದೇಶ್ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಈ ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಬಸರಿಹಳ್ಳಿ ಗ್ರಾಮದ ಬಸವರಾಜು ಬಿನ್ ಲೇಟ್ ಮಲ್ಲಯ್ಯಗೆ ಸೇರಿದ ಜಮೀನು ಎಂದು ಹೇಳಲಾಗುತ್ತಿದ್ದು,ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಸರಿ ಹಳ್ಳಿಯ ನಿವಾಸಿ ಬಸವರಾಜು 1977 ಮತ್ತು 78 ರಲ್ಲಿ ಬಸವರಾಜು ಎಂಬವರಿಗೆ ಸಾಗುವಳಿ ಮಂಜೂರು ಮಾಡಲಾಗಿತ್ತು. 97ರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಬದಲಾಯಿಸಿರುವ ಸಂಬಂಧಿ ನಂಜಯ್ಯ, ನಕಲಿ ದಾಖಲೆ ಸೃಷ್ಟಿಸಿರುವ ನಂಜಯ್ಯ ಮೂಲ ಜಮೀನು ಮಾಲೀಕನ ಸಂಬಂಧಿ ಎಂದು ಹೇಳಲಾಗುತ್ತಿದೆ.…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ, ಇಡಿ ಕಾಟ ಕೊಡುತ್ತಿದ್ದರೆ, ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿವೆ. ಇದರ ಮಧ್ಯ ಕಾಂಗ್ರೆಸ್ ಪಕ್ಷದಲ್ಲೇ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ನಾನೇ ಮುಂದಿನ ಸಿಎಂ ಎಂದು ಹಲವು ಸಚಿವರು ಹೇಳಿಕೆ ನೀಡುತ್ತಾ ಬಂದಿದ್ದಾರೆ. ಹಾಗಾಗಿ ನಮ್ಮಲ್ಲಿ ಪ್ಲಾನ್ A B ಏನು ಇಲ್ಲ ನೇರವಾಗಿ C ಪ್ಲ್ಯಾನ್ ಅನುಷ್ಠಾನ ತರುತ್ತೇವೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಾಕಷ್ಟು ಬೆಳವಣಿಗೆಯ ಹಿನ್ನಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದ್ದು, ಈ ಬೆನ್ನಲ್ಲೇ ದಲಿತ ಸಚಿವರಾದ ಗೃಹ ಸಚಿವ ಜಿ ಪರಮೇಶ್ವರ್, ಮಹದೇವಪ್ಪ, ಹಾಗೂ ಸತೀಶ್ ಜಾರಕಿಹೊಳಿ ಸೀಕ್ರೆಟ್ ಸಭೆಯನ್ನು ನಡೆಸಿದ್ದಾರೆ.ಈ…

Read More

ಶಿವಮೊಗ್ಗ : ಹಾಲು ಮಾರಾಟದ ದರದಲ್ಲಿ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡುತ್ತಿರುವುದು ಒಂದು ಕಡೆ ಆದರೆ, ಇನ್ನೊಂದು ಕಡೆ ಹಾಲು ಖರೀದಿಸುವ ರೈತರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಷ್ಟದ ನೆಪ ಹೇಳಿ ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿ ಶಿಮೂಲ್ ತೀರ್ಮಾನಿಸಿದೆ. ಹೌದು ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಶಾಕ್ ನೀಡಿದ ಶಿಮೂಲ್, ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದ ಹಾಲು ಒಕ್ಕೂಟವಾದ ಶಿಮೂಲ್ ನಿಂದ ರೈತರಿಗೆ ಸಂಕಷ್ಟೇ ಎದುರಾಗಿದೆ. ನಷ್ಟದ ನೆನಪ ಹೇಳಿ ರೈತರಿಂದ ಖರೀದಿಸುವ ಹಾಲಿನ ದರ ಇಳಿಕೆ ಮಾಡಿದೆ. ಶಿಮೂಲ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಮಾಡಿ ಈ ಒಂದು ದರ ಇಳಿಕೆ ಮಾಡಲಾಗಿದೆ. ಶಿಮೂಲ್ 7 ಕೋಟಿ ನಷ್ಟದಲ್ಲಿದ್ದು ಅದರಿಂದ ಹೊರಬರಲು ಖರೀದಿಯ ದರ ಇಳಿಕೆ ಮಾಡಲಾಗಿದೆ.ಹಾಗಾಗಿ ನಿನ್ನೆಯಿಂದಲೇ ನೂತನ ದರ ಜಾರಿಯಾಗಿದೆ. 33.03 ರೂಪಾಯಿಗೆ ಹಾಲು ಉತ್ಪಾದಕರ ಸೊಸೈಟಿಗಳಿಂದ ಶಿಮೂಲ್…

Read More

ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಕೇರಳ ಮೂಲದ ಐವರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಅಬ್ದುಲ್ ಶಾಕೀರ್ (24), ಹಸನ್ ಆಶೀರ್ (34), ಮೊಹಮ್ಮದ್ ನೌಷಾದ್ (22), ಯಾಸೀನ್ ಇಮ್ರಾಜ್ ಅಲಿಯಾಸ್​ ಇಂಬು (35), ಕೇರಳದ ಕಣ್ಣೂರು ಜಿಲ್ಲೆಯ ರಿಯಾಜ್ ಎ.ಕೆ. (31) ಎಂದು ಗುರುತಿಸಲಾಗಿದೆ. ಮಾಹಿತಿ ಬಂದ ಬಳಿಕ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿ ದಾಳಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 3,50,000 ರೂ. ಮೌಲ್ಯದ 70 ಗ್ರಾಂ ಎಂಡಿಎಂಎ, 5 ಮೊಬೈಲ್ ಫೋನ್​ಗಳು, 1460 ರೂ. ನಗದು, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ 4,25,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಬೆಂಗಳೂರು : ಇದೆ ಅಕ್ಟೋಬರ್ 23 ರಿಂದ 25 ರವರೆಗೆ ಬೆಳಗಾವಿಯಲ್ಲಿ ಕಿತ್ತೂರು ವಿಜಯೋತ್ಸವ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು ವಿಧಾನಸೌಧದ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು. ಇದೇ ವೇಳೆ ಕಿತ್ತೂರು ಉತ್ಸವದ ಪೋಸ್ಟರ್​ ಬಿಡುಗಡೆ ಮಾಡಿ,ಕಿತ್ತೂರು ರಾಣಿ ಚೆನ್ನಮ್ಮನವರು ನಮಗೆಲ್ಲ ಸ್ವಾಭಿಮಾನದ ಸಂಕೇತ. ಬ್ರಿಟಿಷರು ಜಾರಿಗೆ ತಂದಿದ್ದ ತೆರಿಗೆ ನೀತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ವಿರೋಧ ಮಾಡಿದ್ದರು. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡಲ್ಲ ಅಂತ ನೇರವಾಗಿ ಹೇಳಿದರು. 1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದರು. ಬೆಳಗಾವಿಯಲ್ಲಿ…

Read More

ವಿಜಯಪುರ : ಸಾಲಭಾದೆ ತಾಳದೆ ರಾಜ್ಯದಲ್ಲಿ ಇಂದು ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಂಡಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾದ ಗ್ರಾಮದ ರೈತ ರೇವಣಸಿದ್ದ ಸಂಗಪ್ಪ ಚಿವಟೆ (35) ಇಂದು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಗ್ರಾಮದಲ್ಲಿ ಸ್ಥಳೀಯರಿಂದ ಹಾಗೂ ಸಹಕಾರಿ ಸಂಘದಲ್ಲಿ ಸಂಗಪ್ಪ ಬೆಳೆ ಸಾಲ ಪಡೆದಿದ್ದರು ಎನ್ನಲಾಗಿದೆ. ಘಟನೆ ಕುರಿತಂತೆ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲಗೂರು ಇನ್ನು ಮಂಡ್ಯ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ ನಡೆದಿದ್ದು, ಹಲಗೂರು ಸಮೀಪದ ನಂದೀಪರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ವಿಷ ಕುಡಿದ ರೈತ ಸಿದ್ದೇಗೌಡ (55) ಮೃತಪಟ್ಟ ರೈತ ಎಂದು ತಿಳಿದುಬಂದಿದೆ. ಕೊಳವೆಬಾವಿ ಕೊರೆಸಲು ಸ್ಥಳೀಯರಿಂದ ₹3 ಲಕ್ಷ ಕೈಸಾಲ ಮತ್ತು ದಳವಾಯಿ ಕೋಡಿಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75 ಸಾವಿರ ಬೆಳೆ ಸಾಲ ಪಡೆದಿದ್ದರು. ಬಹಳ ದಿನಗಳಿಂದ ಸಾಲ ತೀರಿಸಲಾಗದೇ ಬೇಸರದಿಂದ ಕಳೆದ ಸೆ.26 ರಂದು…

Read More

ಬೆಂಗಳೂರು : ಚಿತ್ರದುರ್ಗದ ಹರಿಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ.ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ಮುಂದುವರೆದಿದೆ.ಆದರೆ ಇನ್ನೊಂದು ಬದಿಯಲ್ಲಿ ದರ್ಶನ್​ ನಂಬಿ ಕೊಲೆ ಆರೋಪದಲ್ಲಿ ಭಾಗಿ ಆಗಿ ಬೇಲ್​ ಸಿಕ್ಕಿರೋ ಆರೋಪಿಗಳ ಜಾಮೀನು ಅರ್ಜಿಗೆ ಶ್ಯೂರಿಟಿ ಹಾಕೋರು ಯಾರು ಇಲ್ಲದಂತಾಗಿತ್ತು. ಆದರೆ ಇಂದು ಆರೋಪಿಗಳು ಕೋರ್ಟಿಗೆ ಶ್ಯೂರಿಟಿ ಸಲ್ಲಿಸಿದ್ದಾರೆ. ಹೌದು ಇಂದು ಆರೋಪಿಗಳು ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿದ್ದಾರೆ. ಕಾರ್ತಿಕ್ ಕೇಶವಮೂರ್ತಿ ಹಾಗೂ ನಿಖಿಲ್ ಶ್ಯೂರಿಟಿಯನ್ನು ಇದೀಗ ಕೋರ್ಟ್ ಸ್ವೀಕಾರ ಮಾಡಿದೆ. ಶ್ಯೂರಿಟಿ ಸಲ್ಲಿಕೆ ಬಳಿಕ ತುಮಕೂರು ಜೈಲಿನಿಂದ ನಾಳೆ ಅಥವಾ ನಾಡಿದ್ದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ಸೆಪ್ಟೆಂಬರ್ 23 ರಂದು ರೇಣುಕಾ ಸ್ವಾಮಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳಾದ ನಿಖಿಲ್ ನಾಯ್ಕ್ ಮತ್ತು ಕಾರ್ತಿಕ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದೇ ದಿನ ಮುಂಜಾನೆ ಪ್ರಕರಣದ ಮತ್ತೊಬ್ಬ ಆರೋಪಿ ಕೇಶವ…

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಗದ್ದನಕೇರಿಯ ರಾಮಾರೂಢ ಮಠದ ಸ್ವಾಮೀಜಿಗೆ ನಿಮ್ಮ ಮೇಲೆ ಗಂಭೀರ ಆರೋಪ ಬಂದಿದೆ ಎಂದು, ಮೊಬೈಲ್ ಅಲ್ಲಿ ಎಡಿಜಿಪಿ ಮಾತನಾಡುತ್ತಿದ್ದೇನೆ ಹೇಳಿಕೊಂಡು ಎರಡು ಕಂತಿನಲ್ಲಿ 1 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಜೆಡಿಎಸ್ ನಾಯಕ ಪ್ರಕಾಶ್ ಮುಧೋಳನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಮುಧೋಳನಿಂದ ಇದೀಗ ಪೊಲೀಸರು 87 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಬಾಗಲಕೋಟೆ ಎಸ್ ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ಮೂರು ಪೊಲೀಸ್ ತಂಡ ರಚಿಸಲಾಗಿತ್ತು. ಕೂಡಲೇ ಕ್ರಮ ಕೈಗೊಂಡು ಒಂದೇ ದಿನದಲ್ಲಿ ಪ್ರಕಾಶ್ ಮುಧೋಳ ಬಂಧನ ಮಾಡಲಾಗಿದೆ.ಬಂಧಿತನಿಂದ 87 ಲಕ್ಷ ರೂ.ಹಣ, ಇನ್ನೋವಾ, ಔರಾ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕಾಶ್ ಮುಧೋಳ್ ಹಿನ್ನೆಲೆ? ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಿರ್ಜಿ ಮೂಲದವನಾದ ಆರೋಪಿ ಪ್ರಕಾಶ್ ಎಂಬಾತ 2024 ರಲ್ಲಿ ರಾಮದುರ್ಗ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಲೆಕ್ಷನ್​ಗೆ ನಿಂತಿದ್ದ. ಇತನ ಮೇಲೆ ಈ ಹಿಂದೆ 3 ಕಳ್ಳತನ, 3 ಚೀಟಿಂಗ್, 3 ಸುಲಿಗೆ,…

Read More

ಬೆಂಗಳೂರು : ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ. ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ…

Read More