Author: kannadanewsnow05

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್​ನ ವಿಚಾರಣೆ ನಡೆದಿತ್ತು.ಇದೀಗ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅದರ ಬೆನ್ನಲ್ಲೇ ಇಂದು ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ಸಹ ಏರ್ಪಡಿಸಲಾಗಿತ್ತು. ಆದರೆ ಇದೀಗ ಸತೀಶ್ ಜಾರಕಿಹೊಳಿ ದಿಡೀರ್ ಎಂದು ಡಿನ್ನರ್ ಮೀಟಿಂಗ್ ರದ್ದುಪಡಿಸಿದ್ದಾರೆ. ಹಾಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡೆ ತೀವ್ರ ಕುತೂಹಲ ಮೂಡಿಸಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು ಅಂತ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ರಾಹುಲ್‌ ಗಾಂಧಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಂದಿನ ಸನ್ನಿವೇಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇನ್ನೂ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದು ಸಚಿವರಿಗೆ ಡಿನ್ನರ್‌ ಪಾರ್ಟಿಯನ್ನು ಹಮ್ಮಿಕೊಳ್ಳಲಾಗಿತ್ತು, ಆದರೆ ನಿನ್ನೆ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮತ್ತು ಸತೀಶ್‌ ಕುಮಾರ್‌ ಮುಖಾಮುಖಿ ಬೇಟಿಯಾದ ಬಳಿಕ ಈ ಡಿನ್ನರ್‌ ಪಾರ್ಟಿಯನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ರಾಹುಲ್‌ ಗಾಂಧಿ ಬೇಜಾರು ಆಗಿದ್ದಾರೆ ಎನ್ನಲಾಗಿದೆ. ಬಿಹಾರ ವಿಧಾನಸಭೆಯಲ್ಲಿ ಹೀನಾಯ ಸೋಲಿನಿಂದ ಮನಸ್ಸು…

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಇದೀಗ ಜೈಲಿನಲ್ಲಿಯೇ ಕೈದಿಗಳಿಗೆ ಮತ್ತು ಏರಿಸುವ ಮದ್ಯ (ಕಳ್ಳಭಟ್ಟಿ) ತಯಾರಾಗುತ್ತಿದೆ. ಕಳ್ಳಭಟ್ಟಿ ತಯಾರಕರೇ ಕಾರಾಗೃಹದ ಮದ್ಯ ತಯಾರಿಕೆಯ ಲೀಡರ್ ಆಗಿದ್ದಾರೆ. ಕಳ್ಳಭಟ್ಟಿ ಕೇಸ್ನಲ್ಲಿ ಲಾಕ್ ಆದವರೇ ಕಳಭಟ್ಟಿ ತಯಾರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಳಬಟ್ಟಿ ಪ್ರಕರಣದಲ್ಲಿ ಯಾರು ಜೈಲಿನಲ್ಲಿ ಇರುತ್ತಾರೋ ಅವರೇ ಕಳಬಟ್ಟಿ ತಯಾರಿಸಿ ಇತರೆ ಕೈದಿಗಳಿಗೆ ನೀಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಲ್ಲಿ ಮದ್ಯದ ಫ್ಯಾಕ್ಟರಿಗೆ ತೆರೆದುಕೊಂಡಿದ್ದು ಈ ಕುರಿತು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೊಸ ವರ್ಷ ಆಚರಣೆ ಹಿನ್ನಲೆಯಲ್ಲಿ ಕಳ್ಳಬಟ್ಟಿ ತಯಾರಿಸಲಾಗುತ್ತಿದೆ ಎನ್ನಲಾಗುತ್ತಿದೆ. ಕೊಳೆತ ದ್ರಾಕ್ಷಿ ಮತ್ತು ಸೇಬು, ರಾಶಿ ರಾಶಿ ಹಣ್ಣುಗಳು ಚಕ್ಕೆ, ಗೋಧಿ ಸಕ್ಕರೆ ಮುಂತಾದ ಪದಾರ್ಥಗಳನ್ನು ಕೈದಿಗಳು ಸಂಗ್ರಹ ಮಾಡಿ ಇಟ್ಟುಕೊಂಡಿದ್ದಾರೆ ಕಳ್ಳಭಟ್ಟಿ ತಯಾರಿಕೆಗೆ ಒಂದೊಂದು ತಂಡ ಪ್ಲಾನ್ ಮಾಡಿದ್ದು, ಒಂದು ತಂಡ ಕೊಳೆತ ಹಣ್ಣು ಸಂಗ್ರಹ ಮಾಡುತ್ತದೆ. ಮತ್ತೊಂದು ತಂಡ ಜೈಲಿನ ಬೇಕರಿಯಿಂದ ಈಸ್ಟ್ ತಂದು ಎಲ್ಲಾ ಐಟಂಗಳು ಮಿಕ್ಸ್…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ ಎಸ್ ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು ಎಂದು ತಿಳಿದು ಬಂದಿದೆ. 2025 ಏಪ್ರಿಲ್ 14 ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆ ಅಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು ಬಿ ಆರ್ ಪಿ ಯ ಕೆಪಿಸಿಎಲ್ ನಲ್ಲಿ ಲತಾಪತಿ ಗುರುರಾಜ್ ಎಇಇ ಆಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ನಾಲೆಗೆ ಹಾರಿ ನವ ವಿವಾಹಿತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೆ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿದ್ದು ಪತಿ ಹಾಗೂ…

Read More

ಬೆಂಗಳೂರು : ನಿನ್ನೆ ಬೆಳಂ ಬೆಳಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ದಾಳಿಯ ವೇಳೆ ಅಧಿಕಾರಿಗಳ ಅಕ್ರಮ ಆಸ್ತಿ ಕಂಡು, ಶಾಕ್ ಆಗಿದ್ದಾರೆ. ಇದುವರೆಗೂ ಲೋಕಾಯುಕ್ತ ಅಧಿಕಾರಿಗಳು 35.31 ಆಸ್ತಿ ಪತ್ತೆ ಹಚ್ಚಿದ್ದಾರೆ. ಹೌದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 10 ಮಂದಿ ನೌಕರರಿಗೆ ಸೇರಿದ 47 ಸ್ಥಳಗಳ ಮೇಲೆ ಏಕಕಾಲದಲ್ಲಿ ಮಂಗಳವಾರ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ಬೆಂಗಳೂರು ನಗರ, ಮೈಸೂರು, ಮಂಡ್ಯ, ಬೀದರ್, ಹಾವೇರಿ, ಧಾರವಾಡ, ಗದಗ, ಕೊಡಗು ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 10 ಮಂದಿ ಅಧಿಕಾರಿಗಳ ಮನೆ – ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿ ಸುಮಾರು 35.31 ಕೋಟಿ ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿ ಪತ್ತೆ ಹಚ್ಚಿದ್ಧಾರೆ.

Read More

ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಟ್ರಕ್ ಗೆ ಡಿಕ್ಕಿಯಾಗಿ ಶಾಲಾ ವಾಹನದಲ್ಲಿರುವ ಎಂಟು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರೈಚೂರ್ ಜಿಲ್ಲೆಯ ಮಾನ್ವಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಎಂಟು ಮಕ್ಕಳಿಗೆ ಗಾಯಗಳಾಗಿದ್ದು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂಞಚ್ ಸನ್ನಿಧಿ ಎಂಬ ವಿದ್ಯಾರ್ಥಿನಿಗೆ ಗಂಭೀರವಾದ ಗಯಗಳಾಗಿದ್ದು ಆಕೆಯನ್ನು ರಾಯಚೂರಿನ ಖಾಸಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆನ್ನೆ ಸಂಜೆ ನಡೆದಿರುವ ಅಪಘಾತ ಇಂದು ತಳವಾಗಿ ಬೆಳಕಿಗೆ ಬಂದಿದೆ. ಮಾನ್ವಿ ಪಟ್ಟಣದ ಖಾಸಗಿ ಶಾಲೆಗೆ ಶಾಲಾ ವಾಹನ ಸೇರಿದೆ. ಮಕ್ಕಳನ್ನು ಬಿಟ್ಟು ಬರಲು ಕೊಟ್ನೆಕಲ್ ಗ್ರಾಮಕ್ಕೆ ಶಾಲಾ ವಾಹನ ತೆರುಳುತ್ತಿತ್ತು.ಸುಮಾರು 15ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಶಾಲಾ ಬಸ್ ಕರೆದುಕೊಂಡು ಹೋಗುತ್ತಿತ್ತು ಈ ವೇಳೆ ಟ್ರಕ್ ಓವರ್ಟೇಕ್ ಮಾಡಲು ಹೋಗಿ ಶಾಲಾ ಬಸ್ ಗೆ ಡಿಕ್ಕಿ ಹೊಡೆದಿದೆ. ಶಾಲಾ ಬಸ್ ಡಿಕ್ಕಿಯಾಗಿ ಎಂಟು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮಾನ್ವಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಒಂದರ ಮೇಲೆ ಮೂವರು ವಿದ್ಯಾರ್ಥಿಗಳು ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಮರ್ಥ ಸುಖದೇವ್ ಅಪ್ಪಾಜಿಗೋಳ (20) ಎಂದು ತಿಳಿದುಬಂದಿದೆ. ಇನ್ನು ಬೈಕ್ ನಲ್ಲಿ ಇದ್ದಂತಹ ಇನ್ನಿಬ್ಬರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಚಿಕ್ಕೋಡಿ ಪಟ್ಟಣದಲ್ಲಿ ಮೂರು ಬೈಕ್ ಮೇಲೆ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಸಮರ್ಥ ಸ್ಥಳದಲ್ಲಿ ಸಾವನಪ್ಪಿದ್ದು, ಉಳಿದ ಇಬ್ಬರು ಸ್ನೇಹಿತರಾದ ಅರವಿಂದ ಶಂಕರ ಮ್ಯಾಗೇರಿ (19) ಹಾಗೂ ಸಚಿನ್ ಮಹಾಂತೇಶ್ ಬಡಕೆ (19) ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಬೆಳಗಾವಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ಪದವಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ವೇತನ, ಪಿಎಫ್ (ಪ್ರಾವಿಡೆಂಟ್ ಫಂಡ್), ಇಎಸ್ಐ ಮತ್ತು ಇತರ ಸವಲತ್ತುಗಳ ಪಾವತಿಯಲ್ಲಿ ವಿಳಂಬದ ಜೊತೆಗೆ ಕಡಿಮೆ ಪಾವತಿ ಮೂಲಕ ಹೊರಗುತ್ತಿಗೆ ಸಿಬ್ಬಂದಿಯನ್ನು ಖಾಸಗಿ ಏಜೆನ್ಸಿಗಳು ಶೋಷಣೆ ಮಾಡುತ್ತಿವೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು 2028ರ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಹಾಗಾಗಿ ಡಿಸೆಂಬರ್ 8 ರಿಂದ ಆರಂಭವಾಗಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಸರ್ಕಾರ ಮಂಡಿಸಲು ತಯಾರಿ ನಡೆಸಿದೆ. ಖಾಸಗಿ ಹೊರಗುತ್ತಿಗೆ ಸಂಸ್ಥೆಗಳ ಜೊತೆಗಿನ ಎಲ್ಲಾ ವ್ಯವಸ್ಥೆ ಮತ್ತು ಒಪ್ಪಂದಗಳನ್ನು ಸರ್ಕಾರವು ಮಾರ್ಚ್ 31, 2028 ರೊಳಗೆ ಹಂತಹಂತವಾಗಿ ಕಡಿತಗೊಳಿಸಲಿದೆ. ಅಲ್ಲಿಯವರೆಗೆ, ಹೊರಗುತ್ತಿಗೆ ಪಡೆದ ಉದ್ಯೋಗಿಗಳನ್ನು ನಿರ್ವಹಿಸಲು ರಾಜ್ಯಾದ್ಯಂತ ‘ಬೀದರ್ ಮಾದರಿ’ಯನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

Read More

ಧಾರವಾಡ : ಕೊಲ್ಹಾಪುರದ ಕನ್ನೆರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಲಾಗಿತ್ತು. ಈ ವಿಚಾರವಾಗಿ ಶ್ರೀಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಕನ್ನೇರಿ ಮಠದ ಶ್ರೀಗಳಿಗೆ ಹಾಕಿದ್ದ ನಿರ್ಬಂಧ ತೆರವುಗೊಳಿಸಿ ಆದೇಶ ನೀಡಿದೆ. ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ಪ್ರಕಟಿಸಿದ್ದು ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧಿಸಿದಂತೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದರು. ನವೆಂಬರ್ 5 ರಂದು ಹಳ್ಳಿಕೇರಿಯಲ್ಲಿ ಕಾರ್ಯಕ್ರಮ ನಿಗದಿಯಾಗಿತ್ತು. ಕನ್ಹೆರಿ ಕಾಡಸಿದ್ದೇಶ್ವರ ಶ್ರೀಗಳ ಕಾರ್ಯಕ್ರಮ ಇತ್ತು.ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಈ ವೇಳೆ ಜಿಲ್ಲಾಧಿಕಾರಿ ಕಾರ್ಯಕ್ರಮಕ್ಕೆ ಬರದಂತೆ ನಿರ್ಬಂಧ ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಕನ್ನೇರಿ ಶ್ರೀಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಿರ್ಬಂಧ ತೆರವು ಮಾಡಿ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ದುಃಖ ಮೊದಲು ಕನ್ನೇರಿ ಶ್ರೀ ಗಳಿಗೆ ಲಿಂಗಾಯತ ಸಮುದಾಯದ ಕುರಿತು ಅವಹೇಳನ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ನಿರ್ಬಂಧ ವಿಧಿಸಲಾಗಿತ್ತು ಈ ಕುರಿತು…

Read More