Subscribe to Updates
Get the latest creative news from FooBar about art, design and business.
Author: kannadanewsnow05
SHOCKING : ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : 4ನೇ ಮಗುವು ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ!
ಬೆಳಗಾವಿ : ರಾಜ್ಯದಲ್ಲೊಂದು ಮನಕಲಕುವ ಘಟನೆ ನಡೆದಿದ್ದು, ತಾಯಿಯೊಬ್ಬಳು ತನಗೆ 4ನೇ ಮಗುವು ಹೆಣ್ಣಾಗಿ ಹುಟ್ಟಿದ್ದರಿಂದ ಬೇಸರಗೊಂಡು ತಾಯಿಯೊಬ್ಬಳು ಹಸುಗೂಸನ್ನೇ ಕತ್ತು ಹಿಸುಕಿ ಕೊಂದು ಹಾಕಿರುವಂತ ಘಟನೆ ನಡೆದಿದೆ. ಬೆಳಗಾವಿಯಲ್ಲಿ ಹಸುಗೂಸನ್ನೇ ಪಾಪಿ ತಾಯಿಯೊಬ್ಬಳು ಕೊಂದು ಹಾಕಿದ್ದಾಳೆ. 3 ದಿನದ ಹೆಣ್ಣಮಗು ಕತ್ತು ಹಿಸುಕಿ ಕ್ರೂರಿ ತಾಯಿ ಕೊಂದು ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಹಿರೇಮುಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಹಳಕಟ್ಟಿ(28) ಎಂಬುವರೇ ಹಸುಗೂಸು ಕೊಂದ ಪಾಪಿ ತಾಯಿಯಾಗಿದ್ದಾರೆ. ನವೆಂಬರ್ 23ರಂದು ಮುದಕವಿಯಲ್ಲಿ ಅಶ್ವಿನಿಗೆ ಹೆರಿಗೆಯಾಗಿತ್ತು. ಗಂಡು ಮಗು ನಿರೀಕ್ಷೆಯಲ್ಲಿದ್ದ ಅಶ್ವಿನಿಗೆ ಹೆಣ್ಣುಮಗು ಜನಿಸಿದ್ದರಿಂದ ನಿರಾಸೆಯಾಗಿತ್ತು. ಮಗಳು ಉಸಿರಾಡ್ತಿಲ್ಲ ಅಂತ ಡ್ರಾಮಾವನ್ನು ಅಶ್ವಿನಿ ಮಾಡಿ ಆಸ್ಪತ್ರೆಗೆ ಮಗು ತಂದಿದ್ದಾರೆ. ಈ ವೇಳೆ ಅಶ್ವಿನಿ ಉಸಿರುಗಟ್ಟಿಸಿ ಹಸುಗೂಸು ಕೊಂದಿರುವಂತ ಕೃತ್ಯ ಬೆಳಕಿಗೆ ಬಂದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ದರೋಡೆ ಪ್ರಕರಣದಲ್ಲಿ ಪೊಲೀಸರು 7.01 ಕೋಟಿ (ಶೇ.98) ಹಣವನ್ನು ರಿಕವರಿ ಮಾಡಿದ್ದಾರೆ. ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ತಂಡದ ಕಾರ್ಯವನ್ನು ಶ್ಲಾಘಿಸಿದ್ದು, ಹೆಚ್ಚುವರಿ ಬಹುಮಾನ ಘೋಷಿಸಿದ್ದಾರೆ. ಇನ್ನು CMS ಸಿಬ್ಬಂದಿ ವಿಚಾರಣೆ ವೇಳೆ ಮತ್ತೊಂದು ನಿರ್ಲಕ್ಷದ ಕುರಿತು ಬಯಲಾಗಿದೆ. ಹೌದು ಕೋಟ್ಯಾಂತರ ದರೋಡೆ ನಡೆದರೂ ಸಹ ಸಿಎಂಸಿ ಸಿಬ್ಬಂದಿಗಳಿಗೆ ಊಟವೆ ಮುಖ್ಯವಾಗಿತ್ತು. ಸಿದ್ದಾಪುರ ಠಾಣೆ ಪೊಲೀಸರು CMS ವಾಹನ ಸಿಬ್ಬಂದಿ ವಿಚಾರಣೆ ವೇಳೆ ಮತ್ತಷ್ಟು ಸಂಗತಿಗಳು ಬೆಳಕಿಗೆ ಬಂದಿವೆ. ಅಷ್ಟು ದೊಡ್ಡ ದರೋಡೆ ನಡೆದಿದ್ದರೂ ಸಿಬ್ಬಂದಿಗೆ ಊಟವೇ ಮುಖ್ಯವಾಗಿತ್ತು. ನ.19ರಂದು CMS ವಾಹನ ಅಡ್ಡಗಟ್ಟಿ 7.11 ಕೋಟಿ ರೂ ದರೋಡೆ ನಡೆದಿತ್ತು. ಇನ್ನೋವಾ ಕಾರಿನಲ್ಲಿ ಕಸ್ಟೋಡಿಯನ್, ಗನ್ಮ್ಯಾನ್ ಕರೆದೊಯ್ದಿದ್ದರು. ಮಾರ್ಗಮಧ್ಯೆ ಕಸ್ಟೋಡಿಯನ್, ಗನ್ಮ್ಯಾನ್ ಇಳಿಸಿ ಗ್ಯಾಂಗ್ ತೆರಳಿತ್ತು. ದರೋಡೆಕೋರರು ಇಳಿಸಿದ್ದ ಸ್ಥಳದಿಂದ ಠಾಣೆಗೆ ಕೂಗಳತೆ ದೂರದಲ್ಲಿದ್ದರು ಈ ಬಗ್ಗೆ CMS ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ ಎಂದು…
ತುಮಕೂರು : ಡಿ.ಕೆ. ಶಿವಕುಮಾರ್ ಕಾಂಗ್ರೆಸ್ನಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ ಅವರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ. ಅಲ್ಲದೇ ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ನಾವೇ ಡಿ.ಕೆ. ಶಿವಕುಮಾರ್ಗೆ ಬಾಹ್ಯ ಬೆಂಬಲ ಕೊಡುತ್ತೇವೆ ಎಂದರೆ ನಾವು ಒಪ್ಪುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ತಿಳಿಸಿದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ನಾವು ಅವರೊಂದಿಗೆ ಸೇರಿ ಸರಕಾರವನ್ನೂ ಮಾಡಲ್ಲ. ಪಕ್ಷದಿಂದ ಹೊರಬಂದು ಚುನಾವಣೆ ಮಾಡುವುದು ಕಷ್ಟ. ಅಕಸ್ಮಾತ್ ಕೇಂದ್ರದವರು ಡಿ.ಕೆ. ಶಿವಕುಮಾರ್ಗೆ ಮುಖ್ಯಮಂತ್ರಿ ಆಗಲು ಬಾಹ್ಯ ಬೆಂಬಲ ಕೊಡಿ ಎಂದರೆ ಅದಕ್ಕೆ ನಮ್ಮ ಯಾವುದೇ ತಕರಾರರಿಲ್ಲ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಘನತೆ, ಗೌರವ, ಮಾನ, ಮರ್ಯಾದೆ ಇದೆಲ್ಲವೂ ಇದ್ದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಸರಕಾರ ವಿಸರ್ಜನೆ ಮಾಡಿ ಜನಾಶಿರ್ವಾದ ಪಡೆದುಕೊಂಡು ಬರಲಿ ಎಂದರು. 70 ಜನ ಶಾಸಕರು ಡಿ.ಕೆ. ಶಿವಕುಮಾರ್…
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ನಡೆಯುತ್ತಿದ್ದು ಸದ್ಯ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಈ ವಿಚಾರವಾಗಿ ತೀವ್ರ ಜಟಾಪಟಿ ನಡೆಯುತ್ತಿದೆ. ಇದೀಗ ಇಂದು ಬೆಂಗಳೂರಲ್ಲಿ ಡಿಕೆ ಶಿವಕುಮಾರ್ ಅವರು ಸದಾಶಿವ ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಒಂದೇ ಕಾರಿನಲ್ಲಿ ತೆರಳಿರುವುದು ಕುತೂಹಲ ಮೂಡಿಸಿದೆ. ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀವು ಯಾವುದಕ್ಕೂ ಆತಂಕ ಪಡಬೇಡಿ ಎಂದು ಅಭಯ ನೀಡಿದ್ದಾರೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಸಂಗ್ರಹಿಸಿ ಎಂದು ದೆಹಲಿಗೆ ತೆರಳಿದ್ದು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಬಳಿಕ ನಿಮಗೆ ಅವರು ಕರೆ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ರಾಹುಲ್ ಗಾಂಧಿ ಸಭೆ ಮಾಡಿದರೆ ನಾನು ಈ ವಿಚಾರವಾಗಿ ಚರ್ಚಿಸುತ್ತೇನೆ. ನಾಳೆ ಸಭೆ ಮಾಡಿದರೆ ಚರ್ಚಿಸುತ್ತೇನೆ ಇದು ಬಹಿರಂಗವಾಗಿ ಮಾತನಾಡುವ ವಿಷಯವಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ…
ಗದಗ : ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಧರಣಿ ನಡೆಸುತ್ತಿದ್ದಾರೆ. ಗದಗದ ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ವೇಳೆ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಉಪನ್ಯಾಸಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ತಕ್ಷಣ ಎಚ್ಚೆತ್ತುಕೊಂಡು ಪೋಲಿಸ್ ಸಿಬ್ಬಂದಿಗಳು ಪೆಟ್ರೋಲ್ ಬಾಟಲಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ವೇಳೆ ಚಾಕು ಪ್ರದರ್ಶಿಸಿ ಉಪನ್ಯಾಸಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಕೌನ್ಸೆಲಿಂಗನ್ನು ತಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ. ಅಥಿತಿ ಉಪನ್ಯಾಸಕರ ನೇಮಕಾತಿಗೆ ಅವೈಜ್ಞಾನಿಕ ನಿಯಮ ಜಾರಿ ಮಾಡಿದ್ದಕ್ಕೆ ಕಿಡಿಕಾರಿದ್ದಾರೆ. ಕಳೆದ 20 ರಿಂದ 30 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು ಅತಂತ್ರರಾಗಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬಾಗಲಕೋಟೆ ಹಾಗು ಗದಗ ಸೇರಿದಂತೆ ಹಲವು ಜಿಲ್ಲೆಗಳಿಂದ ಉಪನ್ಯಾಸಕರು ಆಗಮಿಸಿದ್ದಾರೆ. ಈಗಾಗಲೇ ಸೇವೆ ಸಲ್ಲಿಸುತ್ತಿರುವವರನ್ನೇ ನೇಮಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ. ಧರಣಿ ನಿರತ ಪ್ರಥಮ ದರ್ಜೆ ಕಾಲೇಜು ಅಥಿತಿ ಉಪನ್ಯಾಸಕರು ಆಗ್ರಹಿಸಿದ್ದಾರೆ.
ಕಲಬುರ್ಗಿ : ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಗಿ ಹಾಕಿ ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಬಿಗ್ ಫೈಟ್ ನಡೆಯುತ್ತಿದೆ, ಇದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿಬರುತ್ತಿದೆ. ಈ ವಿಚಾರವಾಗಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಇವರ ಕಿತ್ತಾಟದ ನಡುವೆ ದಲಿತರ ಹಾಗು ಮುಸ್ಲಿಮರನ್ನು ಕಡೆಗಣಿಸುತ್ತಿದ್ದಾರೆ .ದೇಶದ ಏಕತೆಗೆ ಮುಸ್ಲಿಮರು ನಮ್ಮ ಪಕ್ಷಕ್ಕೆ ಬರಬೇಕು ಅವರು ರಾಜ್ಯದ ಮುಖ್ಯಮಂತ್ರಿ ಆದರೆ ಸ್ವಾಗತ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು. ಕಲ್ಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳು ಸೃಷ್ಟಿಯಾಗಿವೆ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಲಿಂಗಾಯತ ಗುಂಪುಗಳಿವೆ. ಇಬ್ಬರ ಕುರ್ಚಿಕ ಕಚ್ಚಾಟದಲ್ಲಿ ಈ ಸರ್ಕಾರ ಬಿದ್ದು ಹೋಗುತ್ತದೆ. ಕಾಂಗ್ರೆಸ್ ನಲ್ಲಿ ದಲಿತರು ಮತ್ತು ಮುಸ್ಲಿಮರನ್ನು ಕಡೆಗಣಿಸಲಾಗಿದೆ. ಯಾರ ಬಾಯಿಂದ ಕೂಡ ಮುಸಲ್ಮಾನರು ಸಿಎಂ ಆಗಲಿ ಅಂತ ಬರುತ್ತಿಲ್ಲ. ಮುಸ್ಲಿಮರು ಏಕೆ ಸಿಎಂ ಮಾಡುತ್ತಿಲ್ಲ? ಎಂದು…
ಮಂಡ್ಯ : ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಿಟ್ಟು ಕೊಡುವ ಮನಸ್ಸು ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಎಲ್ಲರಿಗೂ ಹೆದರಿಕೊಳ್ಳುವ ಸ್ಥಿತಿ ಇದೆ. ಅದಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡ್ತಾರೆ ಅಂತ ಅನಿಸಲ್ಲ. ಸಿದ್ದರಾಮಯ್ಯ ಎಚ್ಡಿ ದೇವೇಗೌಡರ ಗರಡಿಯಲ್ಲಿ ಪಳಗಿದವರು. ಸಿದ್ದರಾಮಯ್ಯ ಬರಿ ಪಾಲಿಟಿಕ್ಸ್ ಕಲಿತರು. ಓಲೈಕೆ, ಗುರ್ ಅನ್ನೋದು ಬಿಟ್ಟರೆ ಪಾಲಿಟಿಕ್ಸ್ ಚೆನ್ನಾಗಿ ಮಾಡುತ್ತಾರೆ. ಎರಡೂವರೆ ವರ್ಷ ಒಳ್ಳೆಯ ಕೆಲಸ ಮಾಡಿದರೆ ಮುಂದುವರೆಯಲಿ ಅಂತಿದ್ರು ಸಿದ್ದರಾಮಯ್ಯ ಮುಂದುವರೆಯಲಿ ಅಂತ ಜನರೇ ಧ್ವನಿ ಎತ್ತುತ್ತಿದ್ದರು. ಆದರೆ ಜನರು ಮುಖಕ್ಕೆ ಛಿ ಥು ಅಂತ ಉಗಿಯುತ್ತಿದ್ದಾರೆ. ಪೊಲೀಸರ ಸರ್ಪಗಾವಲಿನಲ್ಲಿ ಕಾರ್ಯಕ್ರಮ ಮಾಡಿ ಹೋಗುತ್ತಿದ್ದಾರೆ. ಇವರು ಎಷ್ಟೊತ್ತಿಗೆ ತೊಳುಗುತ್ತಾರೋ ಅನ್ನೋ ಸ್ಥಿತಿ ಇದೆ 2023ರಲ್ಲಿ ಡಿಕೆ ಶಿವಕುಮಾರ್ ಸೋಲಿಸುವುದಕ್ಕೆ…
ಮಂಡ್ಯ : ರಾಜ್ಯ ಕಾಂಗ್ರೆಸ್ ನಲ್ಲಿ ಸದ್ಯ ಬದಲಾವಣೆಯ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಈ ವಿಚಾರವಾಗಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ದಲಿತರನ್ನು ಓಟಿಗಷ್ಟೇ ಇಟ್ಟುಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಬಿಟ್ಟು ಕೊಡ್ತಾರೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ ಎಂದರು. ಮಂಡ್ಯದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ದಲಿತರನ್ನು ಓಟಿಗಷ್ಟೇ ಇಟ್ಟುಕೊಂಡಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪರಮೇಶ್ವರವರನ್ನು ಸೋಲಿಸಿದರು. ಶ್ರೀನಿವಾಸ್ ಪ್ರಸಾದ್ ಅವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕಿದರು. ನಂತರ ಡಿಸಿಎಂ ಪಟ್ಟಕ್ಕೆ ಜಿ ಪರಮೇಶ್ವರ್ ಬೇಡಿಕೊಂಡಿದ್ದರು. ಆದರೂ ಸಿದ್ದರಾಮಯ್ಯ ತಿರಸ್ಕಾರ ಮಾಡಿದರು. ಈಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಪಟ್ಟ ಬಿಟ್ಟು ಕೊಡ್ತಾರ?ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ ಎಂದು ವಾಗ್ದಾಳಿ ನಡೆಸಿದರು.
ಕನಕಪುರ : ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಿಲ್ಲ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ. ಬಸವರಾಜ ರಾಯರೆಡ್ಡಿ, ಡಿವಿ ಸದಾನಂದ ಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಾನೇನು ಅವರ ವಕ್ತಾರ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಹೈಕಮಾಂಡ್ ಹೇಳಿದ್ಮೇಲೆನೆ ಸಂಪುಟ ಪುನಾರಚನೆ : ಸಿಎಂ ಸ್ಪಷ್ಟನೆ ರಾಜ್ಯದಲ್ಲಿ ನಾಯಕತ್ವ ಜಟಾಪಟಿ ನಡೆಯುತ್ತಿದ್ದರೆ ಮತ್ತೊಂದು ಕಡೆ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಅನ್ನೋದು ಮತ್ತೊಂದು ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಸಿಎಂ ಸಿದರಾಮಯ್ಯ ಯಾರು ಏನೇ ಹೇಳಿದರೂ ಕೂಡ ಕೊನೆಗೆ ಹೈಕಮಾಂಡ್ ಹೇಳಿದ್ಮೇಲೇನೆ ಸಂಪುಟ ಪುನಾರಚನೆ ಆಗಲಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು ಶಾಸಕರು ದೆಹಲಿಗೆ ಹೋಗಲು ಸ್ವತಂತ್ರರು ದೆಹಲಿಗೆ ತೆರಳಿರುವ ಶಾಸಕರು ಏನು ಹೇಳುತ್ತಾರೋ ಹೇಳಲಿ ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಕೇಳಲು…
ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 7.1 ಕೋಟಿ ರೂಪಾಯಿ ಹಣ ರಿಕವರಿ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದರು. ನಮ್ಮ ಪೊಲೀಸರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶೇಕಡ 98.6 ರಷ್ಟು ಹಣ ರಿಕವರಿ ಆಗಿದೆ ದರೋಡೆ ಪ್ರಕರಣದಲ್ಲಿ ಇದುವರೆಗೂ 9 ಆರೋಪಿಗಳ ಬಂಧನ ಆಗಿದೆ. ಚೆನ್ನೈ ಆಂಧ್ರ ಪೊಲೀಸರು ಸಹ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಾಗಲೇ ತಂಡಕ್ಕೆ 5 ಲಕ್ಷ ಬಹುಮಾನ ಘೋಷಿಸಲಾಗಿದೆ. ಹೆಚ್ಚುವರಿಯಾಗಿ 2 ಲಕ್ಷ ಬಹುಮಾನ ನೀಡುತ್ತಿದ್ದೇವೆ. ಸದ್ಯ 9 ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದರು.













