Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಎರಡು ವರ್ಷದ ಮಗುವೊಂದು ರಸ್ತೆಯಲ್ಲಿ ಆಟವಾಡುತ್ತಿರುವಾಗ ವೇಗವಾಗಿ ಬಂದಂತಹ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ, ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಸಾವನ್ನಪ್ಪಿದೆ. ಶಿವಮೊಗ್ಗ ಹೊರವಲಯದ ವೀರೂಪಿನ ಕೊಪ್ಪದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಕಾರು ಡಿಕ್ಕಿಯಿಂದ ತೀವ್ರವಾಗಿ ಗಾಯಗೊಂಡಿದ್ದ ವಿನಯ್ (2) ಇದೀಗ ದುರ್ಮರಣ ಹೊಂದಿದ್ದಾನೆ. ಅಪಘಾತವಾದ ತಕ್ಷಣ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.
ಹಾಸನ : ಹಾಸನದಲ್ಲಿ ಯುವಕನ ಬರ್ಬರ ಕೊಲೆ ಆಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಈ ಒಂದು ಕೊಲೆ ನಡೆದಿದೆ. ಬೇಲೂರು ಪಟ್ಟಣದ ಹೊಳೆ ಬೀದಿಯ ನಿವಾಸಿ ಗಿರೀಶ್ (22) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಕೊಲೆಗೈದು ಅಜ್ಜಯ್ಯನ ಹಳ್ಳಿಯ ನಿವಾಸಿ ಶ್ರೀನಿವಾಸ್ ಪರಾರಿಯಾಗಿದ್ದಾನೆ. ಕೊಲೆ ಕುರಿತಂತೆ ಬೇಲೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಒಂದು ಕಡೆ ನವೆಂಬರ್ ನಲ್ಲಿ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದ್ದು ಮತ್ತೊಂದು ಕಡೆಗೆ ನಾಯಕತ್ವ ಬದಲಾವಣೆ ಕೂಗು ಸಹ ಕೇಳಿ ಬಂದಿದೆ. ಇದೇ ವಿಚಾರವಾಗಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಅಗತ್ಯವಿದ್ರೆ ಬಿಹಾರ ಚುನಾವಣೆಯ ಬಳಿಕ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್. ನಾವು ಇಲ್ಲಿ ಕುಳಿತುಕೊಂಡು ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಅವಶ್ಯಕತೆ ಇದ್ದರೆ ಬಿಹಾರ ಚುನಾವಣೆ ನಂತರ ಹೈಕಮಾಂಡ್ನವರೇ ತೀರ್ಮಾನ ಮಾಡುತ್ತಾರೆ. ಪುನಾರಚನೆಯೋ?, ಎರಡೂವರೆ ವರ್ಷದ ನಂತರ ಅಧಿಕಾರ ಬದಲಾವಣೆಯೋ?, ಏನೇ ಇದ್ರೂ ಹೈಕಮಾಂಡ್ ತೀರ್ಮಾನ ಮಾಡಲಿದೆ. ನಾವು ಇಲ್ಲಿ ಮಾತಾಡೋದರಿಂದ ಗೊಂದಲ ಆಗುತ್ತೆ ಎಂದರು. ಶಿವಕುಮಾರ್ ಅವರಿಗೆ ಹೋಲಿಕೆ ಮಾಡುವ ನಾಯಕರು ಈಗ ಯಾರಿದ್ದಾರೆ?. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹೇಳೋದಕ್ಕೆ ನಮಗೆ ಸಾಮರ್ಥ್ಯ ಇಲ್ಲ. ಅವರು ನಮ್ಮ ನಾಯಕರು. ನಮ್ಮ…
ನವದೆಹಲಿ : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಂಡು ವರದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಪಶ್ಚಿಮಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಈ ಕುರಿತು ಸೂಚನೆ ನೀಡಿದ್ದು, ಮುಂದಿನ ವಿಚಾರಣೆ ನವೆಂಬರ್ 3ರಂದು ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿತು. ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹೆತ ಹಾಗೂ ಎನ್.ವಿ ಅಂಜಾರಿಯಾ ಅವರ ಪೀಠದಿಂದ ಆದೇಶ ಹೊರಡಿಸಲಾಗಿದೆ. 2023ರ ಪ್ರಾಣಿ ಜನನ ನಿಯಂತ್ರಣ ನಿಯಮಗಳ ಅನುಷ್ಠಾನದ ಕುರಿತು ವರದಿ ಸಲ್ಲಿಸದ ರಾಜ್ಯಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇದುವರೆಗೂ ಪಶ್ಚಿಮಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳು ಮಾತ್ರ ಪಾಲಿಸಿದ್ದು ನವೆಂಬರ್ 3ರಂದು ಎಲ್ಲಾ ರಾಜ್ಯಗಳ ಮುಖ್ಯ…
ಚಿಕ್ಕಬಳ್ಳಾಪುರ : ಅಂತರಾಷ್ಟ್ರೀಯ ದರೋಡೆಕೋರ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರನ್ನು ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ ಬರೆದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಬರೆದು ವಿಕೃತಿ ಮೆರೆದಿದ್ದಾರೆ. ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಇರುವಂತಹ ಟಿಪ್ಪು ಬೇಸಿಗೆ ಅರಮನೆಯ ಮೇಲೆ ಕಿಡಿಗೇಡಿಗಳು ಈ ರೀತಿ ಹೆಸರು ಬರೆದು ವಿಕೃತಿ ಮೆರೆದಿದ್ದಾರೆ. ಲಾರೆನ್ಸ್ ಬಿಷ್ಣೋಯಿ ಕುಖ್ಯಾತ ಅಂತರಾಷ್ಟ್ರೀಯ ದರೋಡೆಕೋರನಾಗಿದ್ದು ಭಾರತೀಯ ಪುರಾತತ್ವ ಇಲಾಖೆ ಅಧೀನದಲ್ಲಿ ಈ ಒಂದು ಅರಮನೆ ಇದೆ. ಅರಮನೆಯ ಗೋಡೆಯ ಮೇಲೆ ಲಾರೆನ್ಸ್ ಬಿಷ್ಣೋಯಿ ಹೆಸರು ಕೆತ್ತನೆ ಮಾಡಿ ವಿಕೃತಿ ಮೆರೆದಿದ್ದಾರೆ. ಪ್ರವಾಸಕ್ಕೆ ಎಂದು ಬರುವ ಪ್ರವಾಸಿಗರು ಈ ಒಂದು ಹೆಸರು ಬರೆದಿದ್ದಕ್ಕೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರು : ನಿನ್ನೆ ಮೈಸೂರಲ್ಲಿ ಹುಲಿ ದಾಳಿಯಿಂದ ರೈತ ರಾಜಶೇಖರ್ (58) ಸಾವನಪ್ಪಿದ್ದ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಮೈಸೂರು ಎಸ್ಪಿಗೆ ರಾಜ್ಯ ರೈತ ಸಂಘ ಲಿಖಿತವಾಗಿ ದೂರು ಸಲ್ಲಿಸಿದೆ. ಹೌದು ಅರಣ್ಯ ಇಲಾಖೆ ನಿರ್ಲಕ್ಷಕ್ಕೆ ರೈತ ರಾಜಶೇಖರ್ ಬಲಿಯಾಗಿದ್ದಾನೆ. ಅರಣ್ಯಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಜ್ಯ ರೈತ ಸಂಘ ಲಿಖಿತವಾಗಿ ಎಸ್ಪಿಎ ದೂರು ನೀಡಿದ್ದಾರೆ. ಬೆಣ್ಣೆಗೆರೆಯಲ್ಲಿ ನಿನ್ನೆ ಹುಲಿ ದಾಳಿಗೆ ರೈತ ರಾಜಶೇಖರ್ ಬಲಿಯಾಗಿದ್ದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಣ್ಣಿಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಧಿಕಾರಿಗಳ ನಿರ್ಲಕ್ಷದಿಂದ ಈ ಘಟನೆ ಸಂಭವಿಸಿದೆ ಎಂದು ರೈತರು ಅಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕರು ಸೈಬರ್ ವಂಚನೆಗೆ ಬಲಿಯಾಗುತ್ತಿದ್ದಾರೆ. ಇದೀಗ ವಿದೇಶದಲ್ಲಿ ಕುಳಿತು ಬೆಂಗಳೂರಿನಲ್ಲಿರುವ ವಿಸ್ಡಮ್ ಫೈನಾನ್ಸ್ ಕಂಪನಿಯ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ಕೋಟಿ ಕೋಟಿ ಲೂಟಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಸ್ಮಾಯಿಲ್ ಬಂಧಿತ ಆರೋಪಿ. ಕೇಸ್ ಸಂಬಂಧ ಹ್ಯಾಕ್ ಮಾಡುವ ತಂಡದ ಜೊತೆಗೆ ಲಿಂಕ್ ಹೊಂದಿದ್ದ ಬೆಳಗಾವಿ ಮೂಲದ ಆರೋಪಿ ಇಸ್ಮಾಯಿಲ್ನನ್ನ ಪೊಲೀಸರು ಬಂಧಿಸಿದ್ದಾರೆ. ದುಬೈ, ಚೀನಾ, ಹಾಂಕಾಂಗ್ನಲ್ಲಿ ಕುಳಿತು ಹ್ಯಾಕ್ ಮಾಡುತ್ತಿದ್ದ ತಂಡದೊಂದಿಗೆ ಇಸ್ಮಾಯಿಲ್ ಸಂಪರ್ಕದಲ್ಲಿದ್ದ, ಸರ್ವಸರ್ ಅಕ್ಸೆಸ್ ಕೂಡ ನೀಡಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ವಂಚನೆ ಮಾಡಿದ್ದು ಹೇಗೆ? ವಿಪಿಎನ್ ನೆಟ್ವರ್ಕ್ ಬಳಸಿ ಬರೋಬ್ಬರಿ 47 ಕೋಟಿ ಕದ್ದ ಸೈಬರ್ ವಂಚಕರು ಹಣವನ್ನ 600 ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಆತನ ಬ್ಯಾಂಕ್ ಖಾತೆಯಲ್ಲಿ 10 ಕೋಟಿ ಹಣ…
ಮೈಸೂರು : ಹುಲಿ ದಾಳಿಯಿಂದ ನಿನ್ನೆ ಮೈಸೂರಿನಲ್ಲಿ ರೈತರ ರಾಜಶೇಖರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಹಕಾರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಗ್ರಾಮಸ್ಥರು ಘೆರಾವ್ ಹಾಕಿರುವ ಘಟನೆ ನಡೆದಿದೆ. ಮೈಸೂರಿನ ಕೆಆರ್ ಆಸ್ಪತ್ರೆ ಶವಗಾರದಲ್ಲಿ ರೈತರು ಪ್ರತಿಭಟನೆ ನಡೆಸಿದ್ದು ಸಂಬಂಧಪಟ್ಟ ಅರಣ್ಯ ಅಧಿಕಾರಿಗಳನ್ನು ಅಮಾನತು ಮಾಡಬೇಕು, ಮತನ ಕುಟುಂಬಕ್ಕೆ ಪರಿಹಾರ ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ ನಿನ್ನೆ ಹುಲಿದಾಳಿಯಿಂದ ರೈತ ರಾಜಶೇಖರ್ ಸಾವನಪ್ಪಿದ್ದ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಜಮೀನಿನಲ್ಲಿ ದನ ಮೆಯಿಸುವಾಗ ಹುಲಿ ದಾಳಿ ಮಾಡಿತ್ತು ಈ ವೇಳೆ ಸರಗೂರು ತಾಲೂಕಿನಲ್ಲಿಯೇ ಸಚಿವ ಈಶ್ವರ ಖಂಡ್ರೆ ಇದ್ದರು ಮೃತದೇಹವನ್ನು ತೆಗೆಯದೆ ಕುಟುಂಬಸ್ಥರು ಮತ್ತು ಜನರು ಪ್ರತಿಭಟಿಸಿದ್ದರು. ಇಂದು ಶವಗಾರದ ಬಳಿ ಸಚಿವ ಈಶ್ವರ ಖಂಡ್ರೆ ಆಗಮಿಸಿದ್ದಾರೆ. ಇವಳೆ ಗ್ರಾಮಸ್ಥರು ಈಶ್ವರ ಖಂಡ್ರೆ ಅವರನ್ನು ತಡೆದು ಘೇರಾವ್ ಪ್ರತಿಭಟನೆ ನಡೆಸಿದರು. ಇವಳೇ ರೈತರು ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು…
ಬೆಂಗಳೂರು : ಡಿಜೆ ಹಳ್ಳಿ ಇನ್ಸ್ಪೆಕ್ಟರ್ ಸುನಿಲ್ ವಿರುದ್ಧ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ನನ್ನು ಸಸ್ಪೆಂಡ್ ಮಾಡಲಾಗಿದೆ ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು ಇನ್ಸ್ಪೆಕ್ಟರ್ ಹಾಗೂ ಎ ಎಸ್ ಐ ವಿರುದ್ಧ ಪ್ರಕರಣ ದಾಖಲಾಗಿದ್ದು ಮಾಡಲಾಗಿದೆ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಹೇಳಿಕೆ ನೀಡಿದರು. ಕಳೆದ ಕೆಲವು ದಿನಗಳ ಹಿಂದೆ ಸಂತ್ರಸ್ತ ಮಹಿಳೆ ಡಿಜಿ ಕಚೇರಿಗೆ ದೂರು ನೀಡಿದ್ದರು. ಕಳೆದ ಒಂದು ವರ್ಷದಿಂದ ಮನೆ ಹಾಗೂ ಹೋಟೆಲ್ಗೆ ಕರೆಸಿಕೊಂಡು ಇನ್ಸ್ಪೆಕ್ಟರ್ ಸುನಿಲ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ ಬ್ಯೂಟಿ ಪಾರ್ಲರ್ ಹಾಕಿ ಬಿಸಿನೆಸ್ ಮಾಡಲು ಹಣ ಕೊಡುತ್ತೇನೆ ಎಂದು ಹೇಳಿ ನನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸೆಗಿದ್ದಾರೆ. ಖಾಸಗಿ ಫೋಟೋ ಮತ್ತು ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ದೂರು…
ಮಂಡ್ಯ : ಮಂಡ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬಸ್ ರಿವರ್ಸ್ ತೆಗೆಯುವಾಗ ಅವಘಢ ನಡೆದಿದೆ. ಊಟ ಮಾಡುತ್ತ ಕುಳಿತಿದ್ದ ಮಹಿಳೆ ಮೇಲೆ ಬಸ್ ಹರಿದು ಮಹಿಳೆ ಸಾವನ್ನಪ್ಪಿದ್ದು, ಮತ್ತೊರ್ವ ಮಹಿಳೆಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಡ್ಯದ ಕೆಆರ್ಎಸ್ ನಲ್ಲಿ ರಾತ್ರಿ ನಡೆದಿದೆ. ಕೇರಳ ಮೂಲದ ಕೌಸಲ್ಯ ಮೃತ ಮಹಿಳೆ ಎಂದು ತಿಳಿದುಬಂದಿದೆ. ಮಂಡ್ಯದ ಕೆಆರ್ ಎಸ್ ಗೆ ಪ್ರವಾಸಕ್ಕೆ ಬಂದಿದ್ದ ಕೌಸಲ್ಯ. ಕೆಆರ್ಎಸ್ ವೀಕ್ಷಣೆ ಬಳಿಕ ಪಾರ್ಕಿಂಗ್ ಬಳಿ ಕೌಸಲ್ಯ ಹಾಗ ನಾರಾಯಣಿ ಊಟ ಮಾಡ್ತಿದ್ದರು. ಈ ವೇಳೆ ಬಸ್ ಚಾಲಕ ಹಿಂದೆ ಇದ್ದ ಮಹಿಳೆಯರನ್ನ ಗಮನಿಸದೆ ರಿವರ್ಸ್ ತೆಗೆದುಕೊಂಡಿದ್ದಾನೆ. ಮಕ್ಕಳನ್ನ ಪ್ರವಾಸಕ್ಕೆ ಕರೆತಂದಿದ್ದ ಕೆರಳ ಮೂಲದ ಬಸ್ ಇದಾಗಿದ್ದು, ಬಸ್ ಗುದ್ದಿದ ಪರಿಣಾಮ ಕೌಸಲ್ಯ ಸಾವನನಪ್ಪಿದ್ದರೆ, ನಾರಾಯಣಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಕೆಆರ್ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 
		



 










