Author: kannadanewsnow05

ಕೊಪ್ಪಳ : ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಗೆ SCP/TSP ಹಣ ಬಳಕೆ ಮಾಡುತ್ತಿದೆ ಎಂದು ಈಗಾಗಲೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 5 ರಂದು ಪ್ರತಿಭಟನೆ ಹಮ್ಮಿಕೊಂಡಿದೆ ಇದರ ಬೆನ್ನಲ್ಲೆ ಸಚಿವ ಶಿವರಾಜ್ ತಂಗಡಗಿ ಗ್ಯಾರೆಂಟಿ ಯೋಜನೆಗಳಿಗೆ ಈ ಹಣ ಬಳಸಿದರೆ ತಪ್ಪೇನು? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಬಳಸುವುದರಲ್ಲಿ ತಪ್ಪೇನು? ಈ ಕುರಿತು ಸದನದಲ್ಲಿ ಕೇಳಲಿ ಉತ್ತರಿಸುತ್ತೇವೆ. ಗ್ಯಾರಂಟಿಗಳಿಗೆ ಎಸ್‌ಸಿಇಪಿ-ಟಿಎಸ್‌ಪಿ ಅನುದಾನ ವರ್ಗಾವಣೆ ಆರೋಪ‌ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಬೇಡ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿಗರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಎಂದು ವಾಗ್ದಾಳಿ ಮಾಡಿದ್ದಾರೆ. ಅನುದಾನ ಬಳಕೆ ಮಾಡಿದ್ದೀವಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಈ ಬಗ್ಗೆ ಸದನದಲ್ಲಿ ಅವರು ಕೇಳಲಿ. ನಾವು ಉತ್ತರ ಕೊಡಲು ಸಿದ್ದರಾಗಿದ್ದೇವೆ. ಗ್ಯಾರಂಟಿ ಯೋಜನೆ ಬೇಡ ಎಂದು ಬಿಜೆಪಿಯವರು ಹೇಳಲಿ. ಅವರಿಗೆ ಬಡವರ ಬಗ್ಗೆ ಕಾಳಜಿ…

Read More

ಬೆಂಗಳೂರು : ಇತ್ತೀಚಿಗೆ ಹೃದಯಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಕಾರಿನಲ್ಲಿ ಮಲಗಿಕೊಂಡಿದ್ದಾಗಲೇ ಉದ್ಯಮಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯ ಮಾನಸ್ ಆಸ್ಪತ್ರೆಯ ಬಳಿ ನಡೆದಿದೆ. ಹೌದು ಕೋಡಿಗೆಹಳ್ಳಿಯ ಮಾನಸ್ ಆಸ್ಪತ್ರೆಯ ಬಳಿ ಕಾರಿನಲ್ಲಿ ಉದ್ಯಮಿ ಅಶ್ವಿನ್ ಕುಮಾರ್ (42) ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಹೃದಯಘಾತದಿಂದ ಉದ್ಯಮಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ನಿನ್ನೆ ಬೆಳಿಗ್ಗೆ ಕೆಲಸದ ನಿಮಿತ್ಯ ಉದ್ಯಮಿ ಅಶ್ವಿನ್ ಕುಮಾರ್ ತೆರಳಿದ್ದರು. ಹಲವು ಬಾರಿ ಕರೆ ಮಾಡಿದರು ಅಶ್ವಿನ್ ಕುಮಾರ್ ಸಂಪರ್ಕಕ್ಕೆ ಸಿಗದೇ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಲೊಕೇಶನ್ ಪರಿಶೀಲನೆ ವೇಳೆ ಮಾನಸ ಆಸ್ಪತ್ರೆಯ ಬಳಿ ಇರುವುದು ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿದಾಗ ರಸ್ತೆ ಬದಿ ತನ್ನದೇ ಕಾರಿನಲ್ಲಿ ಉದ್ಯಮಿ ಶವವಾಗಿ ಪತ್ತೆಯಾಗಿದ್ದಾರೆ.ಡೋರ್ ಲಾಕ್ ಮಾಡಿಕೊಂಡು ಮಲಗಿರುವ ಸ್ಥಿತಿಯಲ್ಲಿದ್ದ ಉದ್ಯಮಿ ಪತ್ತೆಯಾಗಿದ್ದಾರೆ. ಕೂಡಲೇ ಕಾರಿನ ಗ್ಲಾಸ್ ಒಡೆದು ಪಕ್ಕದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉದ್ಯಮಿ ಅಶ್ವಿನ್ ಕುಮಾರ್ ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ. ಹೃದಯಾಘಾತದಿಂದ ಮೃತಪಟ್ಟ ಬಗ್ಗೆ…

Read More

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಆಶಿಸಿದರು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ…

Read More

ಬೆಂಗಳೂರು : 2025ರ ಬೇಸಿಗೆ ಋತುಮಾನ ಮಾರ್ಚ್ – ಮೇವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಈ ಕೆಳಕಂಡಂತೆ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಗರಿಷ್ಟ ತಾಪಮಾನ : 2025 ರ ಬಿಸಿ ವಾತಾವರಣದ ಅವಧಿಯಲ್ಲಿ (ಮಾರ್ಚ್ ನಿಂದ ಮೇ (MAM)), ಉತ್ತರ ಒಲೆನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಲೆನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ ಮತ್ತು ಮಲೆನಾಡು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನ ನಿಂದ ಗರಿಷ್ಠ ತಾಪಮಾನದ ಸಾಧ್ಯತೆಗಳಿದೆ. 2025ರ ಬೇಸಿಗೆ (ಮಾರ್ಚ್ ಮೇ) ಅವಧಿಗೆ ರಾಜ್ಯದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಕನಿಷ್ಠ ತಾಪಮಾನದ ಸಾಧ್ಯತೆಗಳಿದೆ. ಬಿಸಿಗಾಳಿ ದಿನಗಳು : 2025ರ ಬೇಸಿಗೆ (ಮಾರ್ಚ್ – ಮೇ) ಅವಧಿಗೆ ರಾಜ್ಯದ ಹಲವೆಡೆ 2 ರಿಂದ 14 ದಿನಗಳು ಬಿಸಿಗಾಳಿ ದಿನಗಳು ಕಾಣಬರುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ…

Read More

ಬೆಲಗಾವಿ : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶಾಸಕ ರಾಜು ಕಾಗೆಯವರ ಹಿರಿಯ ಪುತ್ರಿ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಲಕಾರಿಯಾಗದೆ ಶನಿವಾರ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ 10 ಗಂಟೆಗೆ ಕಾಗವಾಡ ಶಾಸಕ ರಾಜು ಕಾಗೆ ಅವರ ಸ್ವಗ್ರಾಮದಲ್ಲಿ‌ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ನವದೆಹಲಿ : ರಾಜ್ಯದ ಹಲವು ಹೋಟೆಲ್ ಗಳಲ್ಲಿ ಇಡ್ಲಿ ತಯ್ಯಾರಿಸುವ ವೇಳೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚಿಗೆ ರಾಜ್ಯ ಸರ್ಕಾರ ಇಡ್ಲಿ ತಯ್ಯಾರಿಕೆ ವೇಳೆ ಪ್ಲಾಸ್ಟಿಕ್ ಬ್ಯಾನ್ ಮಾಡಿತ್ತು. ಇದೀಗ ಕೇಂದ್ರ ಸರ್ಕಾರ ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ. ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ. ಹೋಟೆಲ್‌ಗಳಲ್ಲಿ ತಯಾರಿಸಲಾಗುವ ಆಹಾರದ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು, * ಇಡ್ಲಿ ಬೇಯಿಸುವಾಗ ಬಳಸಲಾಗುವ ಪ್ಲಾಸ್ಟಿಕ್ ಹಾಳೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೇ ಎಫ್‌ಎಸ್‌ಎಸ್ ಎಐ, ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಈ ಸೂಚಿಸಿದೆ.

Read More

ತುಮಕೂರು : ಮದುವೆಯಾದ ಬಳಿಕ ಕೇವಲ ಒಂದುವರೆ ವರ್ಷದಲ್ಲಿ ಯುವತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆದಿದೆ.ಮೃತ ಯುವತಿಯನ್ನು ಕಲಾವತಿ (28) ಎಂದು ತಿಳಿದುಬಂದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಕಲಾವತಿ ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದಳು. ಆದರೆ ಇಂದು ಕಲಾವತಿ ನಿಗೂಢವಾಗಿ ಸಾವನಪ್ಪಿದ್ದು, ಪತಿಯ ಪೋಷಕರ ವಿರುದ್ಧ ಮೃತಳ ಕುಟುಂಬಸ್ಥರು ಇದೀಗ ಆರೋಪ ಮಾಡುತ್ತಿದ್ದಾರೆ. ಕಲಾವತಿ ಪತಿ ನರಸಿಂಹಮೂರ್ತಿ, ನಾದಿನಿ ರೂಪ ಹಾಗೂ ಮೋಹನ್ ಎಂಬುವರ ಮೇಲೆ ಮೃತಳ ಪೋಷಕರಿಗೆ ಆರೋಪ ಮಾಡಿದ್ದಾರೆ. ಘಟನೆ ಬಳಿಕ ಕಲಾವತಿ ಪತಿಯ ಕುಟುಂಬಸ್ಥರು ಪರಾರಿಯಾಗಿದ್ದಾರೆ. ಫೆಬ್ರುವರಿ 26ರಂದು 112ಕ್ಕೆ ಕರೆ ಮಾಡಿದ್ದ ಕಲಾವತಿ ಮೊಬೈಲ್ ಕಳೆದಿದೆ ಅಂತ ಕಲಾವತಿ ದೂರು ನೀಡಿದ್ದಳು. ಅಂದಿನಿಂದಲೇ ಕಲಾವತಿ ಆಸ್ಪತ್ರೆಗೆ ದಾಖಲಾಗಿದ್ದಳು. ಆಸ್ಪತ್ರೆಯಲ್ಲಿಯೇ ಕಲಾವತಿ ನಿಗೂಢವಾಗಿ ಸವನಪ್ಪಿದ್ದಾಳೆ. ಈ ವೇಳೆ ನಿಮ್ಹಾನ್ಸ್ ಆಸ್ಪತ್ರೆಗೆ ವೈದರು ಹೃದಯಘಾತದಿಂದ ಸಾವನಪ್ಪಿದ್ದಾಳೆ ಎಂದು ತಿಳಿಸಿದ್ದು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಕೂಡ ಯಾವುದೇ ಭಯವಿಲ್ಲದೆ ಸಾಲ ನೀಡಿದವರಿಗೆ ಕಿರುಕುಳ ನೀಡಲು ಮುಂದುವರಿಸಿದ್ದಾರೆ. ಇದೀಗ ಧಾರವಾಡದಲ್ಲಿ ಬಡ್ಡಿ ದಂಧೆ ಕೋರರ ಕಿರುಕುಳಕ್ಕೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆನಿಸಿರುವ ಘಟನೆ ವರದಿಯಾಗಿದೆ. ಬಡ್ಡಿ ದಂಧೆ ಕೊರರ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಸುನಿಲ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಸುನಿಲ್ ಎನ್ನುವ ವ್ಯಕ್ತಿ ಇದೀಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 30,000 ಪಡೆದು 2.50 ಲಕ್ಷ ರೂಪಾಯಿ ಬಡ್ಡಿ ಕಟ್ಟಿದರು ಕೂಡ ಸಂತು ಮತ್ತು ಶಿವು ಎನ್ನುವವರು ಕಿರುಕುಳ ನೀಡುತ್ತಿದ್ದರು. ಮತ್ತೆ ಬಡ್ಡಿ ಕಟ್ಟುವಂತೆ ಸುನಿಲಗೆ ಸಂತು ಮತ್ತು ಶಿವು ಎನ್ನುವವರು ಕಿರುಕುಳ ನೀಡುತ್ತಿದ್ದರು.ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು ಸಹ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಮಾನಸಿಕವಾಗಿ ಬೆಸತ್ತು ವಿಷ ಸೇವಿಸಿ ಸುನಿಲ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥ ಸುನಿಲನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಕುಂದಗೋಳ…

Read More

ವಿಜಯಪುರ : ಪ್ರತಿ ವರ್ಷದಂತೆ ಈ ವರ್ಷವೂ ವಿಜಯಪುರ ಜಿಲ್ಲೆಯ ಸಾರವಾಡ ಬಳಿ ಇರುವ ಬಬಲಾದಿ ಸದಾಶಿವ ಮುತ್ಯಾ ಮಠದ ಪೀಠಾಧಿಪತಿ ಸಿದ್ದರಾಮಯ್ಯ ಹೊಳಿಮಠ ಕಾಲಜ್ಞಾನ ಭವಿಷ್ಯ ನುಡಿದ್ದಾರೆ. 2025 ನೇ ಸಾಲಿನ ಭವಿಷ್ಯ ವಾಣಿ ನುಡಿದಿದ್ದಾರೆ. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುವ ಸಂದರ್ಭದಲ್ಲೆ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ದೇಶದ ರಾಜಕೀಯ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಕಲಿಯುಗದ ಆಟ ಸರ್ವನಾಶ ಹೊಂದುವ ಸಮಯ ಬಂದಿತು. ತಿಳಿಯಿರಣ್ಣ. Bಶಿಕ್ಷಣ ಕ್ಷೇತ್ರದಲ್ಲಿ ಹೊಸ ತಿರುವು ಆಗುತ್ತದೆ. ಹಣದ ಹಿಂದೆ ಹೋಗುವವರ ಬಂಧುತ್ವ ಸಮಯ ತಿಳಿಯಿರಣ್ಣ. ಈ ವರ್ಷ ವಿದ್ಯುತ್ ಶಕ್ತಿ ಹಾಗೂ ನೀರಿನ ಕೊರತೆ ಬಹಳ ಆಗುತ್ತದೆ ಎಂದು ಬರದ ಮುನ್ಸೂಚನೆ ನೀಡಿದ ಸದಾಶಿವ ಮುತ್ಯಾನ ಕಾಲಜ್ಞಾನ ಭವಿಷ್ಯ. ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ ಆಗುತ್ತದೆ ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೆ ಅಚ್ಚರಿಯ ಭವಿಷ್ಯವಾಣಿ ನುಡಿದಿದ್ದಾರೆ. ಭೂಕಂಪ, ಅಗ್ನಿ…

Read More

ಮೈಸೂರು : ಕುಡಿದ ನಶೆಯಲ್ಲಿ ಮನುಷ್ಯ ತಾನು ಏನು ಮಾಡುತ್ತೇನೆ ಎನ್ನುವುದು ತನಗೆ ಅರಿವು ಇರುವುದಿಲ್ಲ. ಇದೀಗ ಇಂಥದ್ದೇ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕುಡಿದ ನಶೆಯಲ್ಲಿ ಬಂದು ಬಳಿಕ ಮನೆಯವರ ಬಳಿ ಗಲಾಟೆ ಮಾಡಿ ಮತ್ತೆ ಕುಡಿಯೋಕೆ ಹಣ ಕೇಳಿದ್ದಾನೆ, ಈ ವೇಳೆ ಗಲಾಟೆ ಮಧ್ಯದಲ್ಲಿ ಬೀಡಿ ಸೇದಿ ಮನೆಯ ಬೆಡ್ ಮೇಲೆ ಇಟ್ಟ ಪರಿಣಾಮ ಆ ಒಂದು ಚಿಕ್ಕ ಬಿಡಿಎ ಕಡೆಯಿಂದ ಇಡೀ ಮನೆ ಹೊತ್ತಿ ಹೊಡೆದಿರುವ ಘಟನೆ ಮೈಸೂರಿನ ಅಗ್ರಹಾರದ ಮಧುವನ ಬಡಾವಣೆಯಲ್ಲಿ ನಡೆದಿದೆ. ಹೌದು ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿ ಇಟ್ಟ ಕಿಡಿಗೇಡಿ, ಮೈಸೂರಿನ ಮಧುವನ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಿಗ್ಗೆ ಕುಡಿದು ಬಂದು ಮತ್ತೆ ಕೊಡಲು ಹಣ ಕೇಳಿದ್ದ. ಮನೆಯವರ ಜೊತೆ ಗಲಾಟೆ ಮಾಡಿಕೊಂಡು ಬಿಡಿ ಸೇದುತ್ತಿದ್ದ ಗುರು ಎಂಬ ವ್ಯಕ್ತಿ ಕುಡಿದ ನಶೆಯಲ್ಲಿ ಬಿಡಿ ಸೇದಿ ಬೆಡ್ ಮೇಲೆ ಇಟ್ಟಿದ್ದ. ಹಾಸಿಗೆ ಹೊತ್ತಿಕೊಂಡಿದ್ದ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ.…

Read More