Author: kannadanewsnow05

ಮೈಸೂರು : ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು, ಎಲ್ಲರನ್ನೂ ಪ್ರೀತಿಸುವವರ ಕೈಯಲ್ಲಿ ಅಧಿಕಾರ ಇರಬೇಕು ಎಂದು ಮೈಸೂರು ತಾಲೂಕಿನ ಪಿಲ್ಲಹಳ್ಳಿಯ ದಂಡಿನ ಮಾರಮ್ಮ ದೇಗುಲದಲ್ಲಿ ಕಳಸ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಷ್ಟಕಾಲ ಬಂದಾಗ ಮಾತ್ರ ದೇವರನ್ನು ಪ್ರಾರ್ಥನೆ ಮಾಡಬೇಡಿ. ಎಲ್ಲಾ ಕಾಲದಲ್ಲೂ ದೇವರನ್ನು ಪ್ರಾರ್ಥಿಸಿ. ದೇವನೊಬ್ಬ ನಾಮ ಹಲವು ಅನ್ನೋದನ್ನು ಎಲ್ಲರೂ ತಿಳಿದುಕೊಳ್ಳಿ. ದೇವರು ಒಬ್ಬರೇ ಅವರು ಎಲ್ಲಾ ಕಡೆ ಇದ್ದಾರೆ ನಮ್ಮಲ್ಲೂ ಇದ್ದಾರೆ. ದೇವಸ್ಥಾನದಲ್ಲಿ ಪೂಜೆ ಮಾಡಿದರೆ ಮಾತ್ರ ದೇವರು ಒಲಿಯುತ್ತಾನೆ. ಅಂತಲ್ಲ. ಕೆಟ್ಟದ್ದನ್ನು ಬಯಸಬಾರದು ಕೆಟ್ಟದಾಗಲಿ ಅಂದುಕೊಳ್ಳಬಾರದು ಎಲ್ಲರಿಗೂ ಒಳ್ಳೆಯದಾಗಲಿ ಅಂದಾಗ ಮಾತ್ರ ದೇವರು ಒಲಿಯುತ್ತಾನೆ. ಒಬ್ಬರಿಗೆ ಮಾತ್ರ ಒಳ್ಳೆಯದು ಮಾಡು ಅಂದರೆ ಒಳ್ಳೆಯದಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನನ್ನ ವ್ಯಕ್ತಿತ್ವದಿಂದ ಮಾತ್ರ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಜನರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆದೆ. ನೀವು ಆಶೀರ್ವಾದ ಮಾಡಿದ್ದರಿಂದಲೇ ಎಂಟು ಚುನಾವಣೆಯಲ್ಲಿ ಗೆದ್ದಿದ್ದೇನೆ ನೀವು ಗೆಲ್ಲಿಸಿದ್ದರಿಂದಲೇ ನಾನು ಸಿಎಂ ಆಗಲು ಸಾಧ್ಯವಾಯಿತು. ಹೀಗಾಗಿ…

Read More

ಮೈಸೂರು : ನನ್ನ ವ್ಯಕ್ತಿತ್ವದಿಂದ ಮಾತ್ರ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಜನರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆದೆ. ನೀವು ಆಶೀರ್ವಾದ ಮಾಡಿದ್ದರಿಂದಲೇ ಎಂಟು ಚುನಾವಣೆಯಲ್ಲಿ ಗೆದ್ದಿದ್ದೇನೆ ನೀವು ಗೆಲ್ಲಿಸಿದ್ದರಿಂದಲೇ ನಾನು ಸಿಎಂ ಆಗಲು ಸಾಧ್ಯವಾಯಿತು. ಹೀಗಾಗಿ ನಾನು ಮೈಸೂರು ತಾಲೂಕಿನ ಜನರನ್ನು ಮರೆಯುವುದಿಲ್ಲ. ನಿಮ್ಮೆಲ್ಲರ ಆಶೀರ್ವಾದ ಯಾವಾಗಲೂ ಇರಲಿ ಎಂದು ಪಿಲ್ಲಹಳ್ಳಿಯ ದಂಡಿನ ಮಾರಮ್ಮ ದೇಗುಲದಲ್ಲಿ ಕಳಸ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚಾಮುಂಡೇಶ್ವರಿ ವರುಣ ಕ್ಷೇತ್ರದ ಜನರಿಗೆ ಕೃತಜ್ಞತೆಯಿಂದ ಇರುವೆ, ವಿಶೇಷವಾಗಿ ಪಿಲ್ಲಹಳ್ಳಿ ಜನ ಯಾವತ್ತೂ ಕೈ ಬಿಟ್ಟಿಲ್ಲ. ದೇವರು ದೇವಸ್ಥಾನದ ಒಳಗೆ ಇರುತ್ತಾನೆ ಅನ್ನೋದು ನಂಬಿಕೆ ಅಷ್ಟೇ. ಪೂಜೆ ಮಾಡುವುದರಿಂದ ಒಳ್ಳೆಯದು ಆಗುತ್ತೆ ಅನ್ನೋ ನಂಬಿಕೆ ಇದೆ. ನಾನು ಅದಕ್ಕೆ ವಿರೋಧವಾಗಿಲ್ಲ. ನಮ್ಮೂರಲ್ಲೂ ದಂಡಿನ ಮಾರಮ್ಮನ ದೇವಸ್ಥಾನ ಇದೆ. ನಾನು ಚಿಕ್ಕವನಿದ್ದಾಗ ತಂಬಿಟ್ಟು ಆರತಿ ತೆಗೆದುಕೊಂಡು ಹೋಗುತ್ತಿದ್ದೆ. ಆಗ ತಂಬಿಟ್ಟು ಕೊಬ್ಬರಿ ಮಿಠಾಯಿ ತಿನ್ನುವುದೇ ಮಜಾ. ಕಷ್ಟಕಾಲ ಬಂದಾಗ ಮಾತ್ರ ದೇವರನ್ನು ಪ್ರಾರ್ಥನೆ ಮಾಡಬೇಡಿ. ಎಲ್ಲಾ ಕಾಲದಲ್ಲೂ…

Read More

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದರು.ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ. ಮೈಸೂರಿನ ಜನ ಮಾತ್ರ ಅಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ. ಈ ಬಗ್ಗೆ ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಬಜೆಟ್‌ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್. ಜನ ಅವಕಾಶ ಕೊಟ್ಟರೆ ಮಂಡಿಸುತ್ತೇನೆ ಎಂದಿದ್ದಾರೆ.

Read More

ಬೆಂಗಳೂರು: ದೇಶಾದ್ಯಂತ ಸುದ್ದಿ ಪ್ರಸಾರ ಮತ್ತು ಲೇಖನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಈ ಕಾಲದಲ್ಲಿ, ಓದುಗರಿಗೆ ಮತ್ತು ಬರಹಗಾರರಿಗೆ ಹೊಸ ಅವಕಾಶವನ್ನು ನೀಡುತ್ತಿದೆ ಖ್ಯಾತ ಡಿಜಿಟಲ್ ಮಾಧ್ಯಮ ‘ಕನ್ನಡ ನ್ಯೂಸ್ ನೌ’ (Kannada News Now). ನಿಮ್ಮ ಸುತ್ತಮುತ್ತ ನಡೆಯುವ ವಿದ್ಯಮಾನಗಳು ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸುವ ಮೂಲಕ ನೀವು ಹಣವನ್ನು ಸಂಪಾದಿಸುವ ಹೊಸ ಅವಕಾಶ ನಿಮಗಾಗಿ ಇಲ್ಲಿದೆ. ಇದೀಗ ಕೇವಲ ಸುದ್ದಿಯನ್ನು ಓದುವುದು ಅಷ್ಟೇ ಅಲ್ಲ, ನೀವು ಕೂಡ ಆ ಸುದ್ದಿಯ ಹಿಂದಿನ ಲೇಖಕರಾಗಬಹುದು. ನಿಮ್ಮೂರಿನಲ್ಲಿ ನಡೆಯುವ ಪ್ರಮುಖ ಘಟನೆಗಳು, ವಿಶೇಷ ಲೇಖನಗಳು ಅಥವಾ ಮಾಹಿತಿಗಳನ್ನು ನಮಗೆ ಕಳುಹಿಸುವ ಮೂಲಕ ಹಣ ಗಳಿಸಬಹುದಾಗಿದೆ. ಭಾಗವಹಿಸುವುದು ಹೇಗೆ? ನೀವು ಸುದ್ದಿಯನ್ನು ಬರೆಯುವ ಹಂಬಲ ಹೊಂದಿದ್ದರೆ ಮತ್ತು ಆ ಮೂಲಕ ಸಂಪಾದನೆ ಮಾಡಬೇಕೆಂದು ಬಯಸಿದರೆ, ಈ ಕೂಡಲೇ ನಿಮ್ಮ ಬಗ್ಗೆ ಮಾಹಿತಿಯನ್ನು kannadanewsnow@gmail.com ಗೆ ಮೇಲ್ ಮಾಡಿ. ನಮ್ಮ ತಂಡದ ಮುಖ್ಯಸ್ಥರಾದ ರಂಜಿತ್ ಅವರು ನಿಮ್ಮ ಸಂಪರ್ಕಿಸಲಿದ್ದಾರೆ. ಚಿತ್ರದಲ್ಲಿ ನೀವು ನೋಡಿರುವಂತೆ, ಒಬ್ಬ…

Read More

ಮೈಸೂರು : ಮೈಸೂರು ಜಿಲ್ಲೆ ಟಿ ನರಸೀಪುರದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರವಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಮೈಸೂರಿನಲ್ಲಿ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು. ರೇಷ್ಮೆ ಕಾರ್ಖಾನೆಯಲ್ಲಿ ನಮ್ಮ ಕ್ಷೇತ್ರದ ಜನರೇ ಕೆಲಸ ಮಾಡುತ್ತಿದ್ದಾರೆ. ನಾವು ಯಾಕೆ ರೇಷ್ಮೆ ಕಾರ್ಖಾನೆ ಮುಚ್ಚುತ್ತೇವೆ. ಸುಮ್ಮನೆ ಕೆಲವರು ಸುಳ್ಳು ಹೇಳಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಈ ವಿಚಾರವಾಗಿ ಅಧಿಕಾರಿಗಳಿಂದ ತಾಂತ್ರಿಕ ವರದಿ ಕೇಳಿದ್ದೇವೆ. ಕ್ರೀಡಾಂಗಣದಿಂದ ತೊಂದರೆಯಾದರೆ ಬೇರೆ ಜಾಗ ಹುಡುಕುತ್ತೇವೆ. ನಮಗೆ ಕಾರ್ಖಾನೆಯೂ ಮುಖ್ಯ ಕ್ರೀಡಾಂಗಣವು ಮುಖ್ಯವಾಗಿದೆ. ಕ್ರೀಡಾಂಗಣಕ್ಕಾಗಿ ಕಾರ್ಖಾನೆಯನ್ನು ಎಂದಿಗೂ ಮುಚ್ಚುವುದಿಲ್ಲ ಎಂದು ಮೈಸೂರಿನಲ್ಲ ಯತಿಂದ್ರ ಸಿದ್ಧರಾಮಯ್ಯ ಹೇಳಿಕೆ ನೀಡಿದರು.

Read More

ಮೈಸೂರು : ಬಜೆಟ್ ನಲ್ಲಿ ಸಾಲ ಮಾಡಿದ್ದನ್ನು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದು, ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ ಹೀಗಾಗಿ ಸಾಲ ಮಾಡಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಿನ್ನೆ ಬಜೆಟ್ ನಲ್ಲಿ ಸಾಲ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ರಾಜ್ಯದಲ್ಲಿ ಅಭಿವೃದ್ಧಿಗಾಗಿ ಸಾಲ ಮಾಡಲೇಬೇಕಾಗುತ್ತದೆ. ರಾಜ್ಯದ ಮಿತಿಯ ಒಳಗಡೆ ಸಾಲ ಮಾಡಿದ್ದೇನೆ. ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯದಿಂದ ಜನರಿಗೆ ಹೊರೆಯಾಗಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಸಾಲ ಮಾಡಿದ್ದಾರೆ? ಈ ಬಗ್ಗೆ ರಾಜ ಬಿಜೆಪಿ ನಾಯಕರಿಗೆ ಗೊತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆಸಿದರು. ನಾನು ಯಾವುದೇ ಒಂದು ವರ್ಗದ ಪರವಾಗಿ ಬಜೆಟ್ ಮಂಡಿಸಿಲ್ಲ. ಇದು ಎಲ್ಲಾ ವರ್ಗದ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read More

ಉತ್ತರಪ್ರದೇಶ : ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂ ಸ್ಪರ್ಶವಾಗಿದೆ. ಉತ್ತರ ಪ್ರದೇಶದ ಉಪಮುಖ್ಯಮಂತ್ರಿ *ಕೇಶವ ಪ್ರಸಾದ್ ಮೌರ್ಯ* ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದ ಕಾರಣದಿಂದ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ಈ ಕುರಿತ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: * *ಘಟನೆ ಎಲ್ಲಿ ನಡೆಯಿತು?: ಕೇಶವ ಪ್ರಸಾದ್ ಮೌರ್ಯ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ, ಮಾರ್ಗಮಧ್ಯೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಇದರಿಂದಾಗಿ ಹೆಲಿಕಾಪ್ಟರ್ ಅನ್ನು ಸುರಕ್ಷಿತವಾಗಿ ಹತ್ತಿರದ ಮೈದಾನದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. * *ಸುರಕ್ಷತೆ: ಅದೃಷ್ಟವಶಾತ್, ಈ ಘಟನೆಯಲ್ಲಿ ಉಪಮುಖ್ಯಮಂತ್ರಿಗಳು ಸೇರಿದಂತೆ ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ *ಸುರಕ್ಷಿತವಾಗಿದ್ದಾರೆ*. ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ.

Read More

ಹುಬ್ಬಳ್ಳಿ : ಲಂಚ ಪಡೆಯುವಾಗ ಮಹಿಳಾ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆಯ ಅಧಿಕಾರಿ ಹೀನಾ ಕೌಸರ್ ಅಧಿಕಾರಿಯನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಲಯ ಒಂದರ ಕಚೇರಿ ಅಧಿಕಾರಿಯಾಗಿರುವ ಹಿನಾ ಕೌಸರ್ ಮಾಳಪ್ಪ ತಳವಾರ್ ಎಂಬವರಿಂದ 3500 ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಣದ ಸಮೇತ ಹೀನ ಕೌಸರ್ ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಹೀನ ಮಾಳಪ್ಪ ಎಂಬವರ ಬಳಿ 4500 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಈ ವೇಳೆ ಮಾಳಪ್ಪ ಮುಂಗಡವಾಗಿ ರೂ.1000 ನೀಡಿದ. ಇಂದು ಉಳಿದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ 16 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣದಿಂದ ಬ್ಯಾನ್ ಮಾಡಲಾಗಿದೆ. ಇದೀಗ ಮೊಬೈಲ್ ಅಡಿಕ್ಟ್ ವಿದ್ಯಾರ್ಥಿ ಒಬ್ಬ ಮೊಬೈಲ್ ಇಲ್ಲದೆ ಒದ್ದಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮೊಬೈಲ್ ಅಡಿಕ್ಷನ್ ನಿಂದ ವಿದ್ಯಾರ್ಥಿ ಪರದಾಡುತ್ತಿದ್ದಾನೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ವಿದ್ಯಾರ್ಥಿ ಮೊಬೈಲ್ ಇಲ್ಲದೆ ಯಾವ ರೀತಿ ಪರದಾಡುತ್ತಿದ್ದಾನೆ ಅಂದರೆ ವಿಡಿಯೋ ನೋಡಿ ಜನರು ಶಾಕ್ ಆಗಿದ್ದಾರೆ. ಮೊಬೈಲ್ ನೊಂದಿಗೆ ವಿದ್ಯಾರ್ಥಿ ಜೀವನ ನಡೆಸುತ್ತಿದ್ದ ಆ ರೀತಿ ಮೊಬೈಲ್ ಗೆ ವಿದ್ಯಾರ್ಥಿ ಅಡಿಕ್ಟ್ ಆಗಿದ್ದ ಮೊಬೈಲ್ ಅಡಿಕ್ಷನ್ ಇಂದ ಪೋಷಕರು ಹೇಗೆ ಆತನನು ಹೊರಗೆ ತರುವುದು ಎಂದು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

Read More

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಿಜೆಟ್ ಮಂಡನೆ ಮಾಡಿದರು. ಬಜೆಟ್ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲ ಮಾಡದೇ ಯಾವುದೇ ಕುಟುಂಬ, ದೇಶ, ರಾಜ್ಯವಾಗಲಿ ಅಭಿವೃದ್ಧಿ ಆಗಲು ಸಾಧ್ಯವಿಲ್ಲ. ಆದರೆ, ವಿತ್ತೀಯ ಶಿಸ್ತು ಮಾನದಂಡದ ಒಳಗಡೆ ಇರಬೇಕು ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಾವು ಸಾಲಗಾರರಾಗಿಲ್ಲ. ಹಣಕಾಸು ಹೊಣೆಗಾರಿಕೆ ಅಧಿನಿಯಮದ ಮಾನದಂಡದ ಒಳಗೆ ಇದ್ದೇವೆ. ಹಣಕಾಸು ಹೊಣೆಗಾರಿಕೆ ಅಧಿನಿಯಮದ ಪ್ರಕಾರ ವಿತ್ತೀಯ ಕೊರತೆ ಜಿಡಿಪಿಯ ಶೇ.3ರ ಒಳಗಡೆ ಇರಬೇಕು. ಒಟ್ಟು ಹೊಣೆಗಾರಿಕೆ ಜಿಡಿಪಿಯ ಶೇ25ರ ಒಳಗಡೆ ಇರಬೇಕು. 2026-27 ಸಾಲಿನಲ್ಲಿ ರಾಜ್ಯದ ಜಿಡಿಪಿ 33.05 ಲಕ್ಷ ಕೋಟಿ ಇರಲಿದೆ. ಅದರಲ್ಲಿ ನಮ್ಮ ಸಾಲ ಒಟ್ಟು 8.24 ಲಕ್ಷ ಕೋಟಿ ಆಗಲಿದೆ. ಇದು ಎಸ್​​ಜಿಡಿಪಿಯ ಶೇ.24.94ರಷ್ಟು ಆಗಲಿದೆ ಎಂದರು. ಅಭಿವೃದ್ಧಿಗೆ ಪೂರಕವಾದ ಮುಂಗಡ ಪತ್ರ ಮಂಡಿಸಿದ್ದೇನೆ. ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ಆಗಿದೆ. ಈ ಬಾರಿ ಸುಮಾರು 38,455 ಕೋಟಿ ರೂ‌.ಗಳಷ್ಟು ಅಂದರೆ…

Read More