Author: kannadanewsnow05

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ನಸಿರ್ ಅಹಮದ್ ಹಾಗೂ ಎಂಎಲ್ಸಿ ಅಬ್ದುಲ್ ಜಬರ್ ಅವರ ವಿರುದ್ಧ ಪಕ್ಷ ಕಠಿಣವಾದ ಕ್ರಮ ತೆಗೆದುಕೊಂಡಿದೆ ಈ ವಿಚಾರವಾಗಿ ಮಾಜಿ ಸಚಿವ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬೇಸರ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಪಕ್ಷ ನಿಷ್ಠರ ವಿರುದ್ಧವೇ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಪರ ಇದ್ದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ವಿರುದ್ಧ ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಂದ ಇಂತಹ ಅಸಹಾಯಕತೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಯಾವ ಯೋಚನೆ ಇದೆಯೋ ನನಗೆ ಗೊತ್ತಿಲ್ಲ ಎಂದು ರಾಜಣ್ಣ ಬೇಸರ ವ್ಯಕ್ತಪಡಿಸಿದರು.

Read More

ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಇಂದು ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಡಿಒ ಅಧಿಕಾರಿ ಮುಖದ ಮೇಲೆ ಅರ್ಜಿ ಎಸೆದು ಶಾಸಕ ಸಮೃದ್ಧಿ ಮಂಜುನಾಥ್ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಯಲೂರು ಜನಸ್ಪಂದನ ಕಾರ್ಯಕ್ರಮದಲ್ಲಿ ಪಿಡಿಒ ವಿರುದ್ಧ ಕೆಂಡಮಂಡಲ ಆಗಿದ್ದಾರೆ. ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್ ರೆಡ್ಡಿ ವಿರುದ್ಧ ಅವರು ಈ ರೀತಿ ಕಿಡಿಕಾರಿದ್ದಾರೆ. ಗ್ರಾಮಗಳಲ್ಲಿ ಸಮಸ್ಯೆಗಳ ಸರಮಾಲೆ ಕಂಡು ಬರುತ್ತಿದ್ದು ಪಿಡಿಒ ಏನು ಕೆಲಸ ಮಾಡುತ್ತಿಲ್ಲ ಎಂದು ದೂರು ಬಂದಿದೆ ಕೂಡಲೇ ಪಿಡಿಒ ಅಧಿಕಾರಿಯನ್ನು ಬದಲಾಯಿಸಬೇಕು ಎಂದು ದೂರುಗಳು ಬಂದಿವೆ. ತಾಯಲೂರು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್ ರೆಡ್ಡಿ ವಿರುದ್ಧ ಅಲ್ಲ 9 ಕೇಸ್ ನಿಮ್ಮದೇ ಬರುತ್ತಿದೆ.ನಿಮ್ಮ ವಿರುದ್ಧ ದೂರು ಕೊಡಲು ಅವರೇನು ಹುಚ್ಚರ? ನಿಮಗೆ ಇಷ್ಟ ಆದ್ರೆ ಕೆಲಸ ಮಾಡಿ ಇಲ್ಲ ಹೋಗ್ತಾ ಇರಿ. ಆ ದೇವಸ್ಥಾನದ ಸಮೀಪ ಮಟನ್ ಅಂಗಡಿ ಹಾಕಲಿಕ್ಕೆ ಹೇಗೆ ಪರಮಿಸನ್…

Read More

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ 6 ಜನರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯ ವಿವರ: ಯಾದಗಿರಿಯಿಂದ ರಾಯಚೂರಿನ ಕಡೆಗೆ ತೆರಳುತ್ತಿದ್ದ ಕಾರಿಗೆ, ಬೆಂಗಳೂರಿನಿಂದ ಕಲಬುರ್ಗಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಅಪಘಾತ ಸಂಭವಿಸಿದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಓಡಿ ಬಂದಿದ್ದಾರೆ. ಕಾರು ಬೆಂಕಿಗೆ ಆಹುತಿಯಾದ ಕಾರಣ ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಗಿತ್ತು ಎನ್ನಲಾಗಿದೆ. ವಿಷಯ ತಿಳಿದ ಸುರಪುರ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಬೇಕಿದ್ದು, ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Read More

ಬೆಳಗಾವಿ: ನನ್ನ ತಂದೆಯವರು ಮುಖ್ಯಮಂತ್ರಿ ಆಗಿ ಇರುವವರೆಗೂ ನಾನು ಯಾವುದೇ ಸಚಿವ ಸ್ಥಾ‌ನದ ಆಕಾಂಕ್ಷಿ ಅಲ್ಲ. ತಂದೆ ಮುಖ್ಯಮಂತ್ರಿ ಇದ್ದಾಗ ಸಚಿವ ಸ್ಥಾನ ಕೇಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ಮಾತನಾಡಿದರು. ಯತೀಂದ್ರ ಅವರನ್ನು ಮಂತ್ರಿಯಾಗಿ ನೋಡಬಹುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನಗಿಂತ ಅರ್ಹತೆ ಇರುವರಿಗೆ, ಅನುಭವ ಇರುವವರಿಗೆ ಮತ್ತು ಹಿರಿಯರಿಗೆ ಸಚಿವ ಸ್ಥಾನ ಅವಕಾಶ ಸಿಗಬೇಕು. ಅದೇ ರೀತಿ ಹೊಸ ಶಾಸಕರೂ ಸಚಿವ ಸ್ಥಾನ ಕೇಳಿದ್ದಾರೆ. ಯಾವುದೇ ಕ್ಯಾಬಿನೆಟ್​ನಲ್ಲಿ ಹೊಸಬರು, ಅನುಭವ ಇರುವವರು ಇರುತ್ತಾರೆ. ಈ ಬಾರಿಯೂ ಅದನ್ನು ಮಾಡುತ್ತಾರೆ ಎಂದರು. ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಗೆಲ್ಲುತ್ತೀರಾ ಎಂಬ ಪ್ರಶ್ನೆಗೆ, ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಎಲ್ಲಿಗೆ ಹೋದ್ರೂ ಒಳ್ಳೆಯ ವಾತಾವರಣ ಇತ್ತು. ಹೀಗಾಗಿ, ಬಾಗಲಕೋಟೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಇನ್ನು ದಾವಣಗೆರೆಯಲ್ಲೂ ಒಳ್ಳೆಯ ವರದಿ ಇದೆ. ಅಲ್ಲಿಯೂ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Read More

ಚಿಕ್ಕಮಗಳೂರು : ನಿನ್ನೆ ಮಂತ್ರಾಲಯ ಸಮೀಪ ಭೀಕರ ಅಪಘಾತ ಸಂಭವಿಸಿದ್ದು ಈ ಒಂದು ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಬಾಲಕಿ ಸಾವನಪ್ಪಿದ್ದಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತೇಜಸ್ವಿನಿ (16) ಸಾವನಪ್ಪಿದ್ದಾಳೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಶೆಟ್ಟಿಗೆರೆ ಗ್ರಾಮದ ಬಾಲಕಿ ತೇಜಸ್ವಿನಿ ಎಂದು ತಿಳಿದುಬಂದಿದೆ. ನಿನ್ನೆ ಆಕೆಯ ತಾಯಿ ಲೋಲಾಕ್ಷಿ ಸಾವನಪ್ಪಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ತೇಜಸ್ವಿನಿ ಸಹ ಸಾವನಪ್ಪಿದ್ದಾಳೆ. ಈ ಒಂದು ಭೀಕರ ರಸ್ತೆಪಕದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೊಡೆವೆ ಗ್ರಾಮದ ಇಬ್ಬರು ಬೇಲೂರು ತಾಲೂಕಿನ ಶೆಟ್ಟಿಗೀರಿ ಗ್ರಾಮದ 7 ಜನರು ಸಾವನ್ನಪ್ಪಿದ್ದಾರೆ. ಮಂತ್ರಾಲಯ ತಾಲೂಕಿನ ಕಲ್ಲುದೇವ ಕುಂಟ ಬಳಿ ಒಂದು ಘಟನೆ ನಡೆದಿತ್ತು.

Read More

ಬೆಂಗಳೂರು :ರಾಜ್ಯದಲ್ಲಿ ಚಾಣಕ್ಯ ಬಂದ ವೇಳೆ ಅಪಘಾತ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚಾರಣಕ್ಕೆ ತೆರಳುವವರಿಗೆ ಇದೀಗ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂರ್ಚಿಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಇದೀಗ ಬಿಡುಗಡೆ ಮಾಡಿದ್ದಾರೆ. ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಚಾರಣಕ್ಕೆ ಹೋಗುವವರಿಗೆ ಎಸ್ಓಪಿ ಕಡ್ಡಾಯಗೊಳಿಸಲಾಗಿದೆ. ಸೆವೆನ್ ಮಿನಿಸ್ಟರ್ ಕ್ವಾಟರ್ಸ್ನಲ್ಲಿ ಸಚಿವ ಈಶ್ವರ ಖಂಡ್ರೆ ಎಸ್ಓಪಿ ಅನ್ನು ಬಿಡುಗಡೆ ಮಾಡಿದರು. ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರಲ್ಲಿ ಚರಣಕ್ಕೆ ಬಂದು ಓರ್ವ ಬಾಲಕಿ ಸಾವನ್ನುಪ್ಪಿದ್ದಳು. ಘಟನೆಗಳು ಪುನರಾವರ್ತನೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎಸ್ಓಪಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಚಾಣಕ್ಯ ತೆರಳುವವರಿಗೆ ಎಸ್ಓಪಿ ಬಿಡುಗಡೆ ಮಾಡಿದ ಬಳಿಕ ಸಚಿವ ಈಶ್ವರ ಖಂಡ್ರೆ ಮಾತನಾಡಿ, ರಾಜ್ಯದಲ್ಲಿ 44 ಚಾರಣ ಪಾಯಿಂಟ್ ಗಳು ಚಾಲ್ತಿಯಲ್ಲಿವೆ. ಕಡ್ಡಾಯವಾಗಿ ಎಸ್ಓಪಿ ಜಾರಿಗೆ ತರಲು ಸೂಚನೆ ನೀಡಿದ್ದೇವೆ. ಚಾಲನೆಗಳ ಮೊಬೈಲ್ ಗೆ ಟ್ರ್ಯಾಕಿಂಗ್ ಆಪ್ ಅಳವಡಿಕೆ ಮಾಡುತ್ತೇವೆ. 10 ಚಾರಣಿಗರಿಗೆ ಒಬ್ಬ ಗೈಡ್ ಇರಲೇಬೇಕು. ಚಾರಣಕ್ಕೆ ಹೋಗುವವರು ಆನ್ಲೈನ್ ನಲ್ಲಿ ಬುಕಿಂಗ್ ಮಾಡಬೇಕು.…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿದ ನಶೆಯಲ್ಲಿ ವ್ಯಕ್ತಿಗೆ ಕಾರ್ ಶೋರೂಮ್ ಸಿಬ್ಬಂದಿಗಳು ಕಾರನ್ನು ಟೆಸ್ಟ್ ಡ್ರೈವ್ ಮಾಡಲು ಕೊಟ್ಟಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ಸುಮಾರು ನಾಲ್ಕು ವಾಹನಗಳಿಗೆ ಗುದ್ದಿ ವ್ಯಕ್ತಿ ಅಪಘಾತ ಮಾಡಿದ್ದಾನೆ. ಮಹಿಂದ್ರಾ ಶೋರೂಮ್ ಸಿಬ್ಬಂದಿ ಎಡವಟ್ಟಿನಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಭಿಲಾಶ್ ಎನ್ನುವ ವ್ಯಕ್ತಿ ಕುಡಿದ ಅಮಲಿನಲ್ಲಿ ನಾಲ್ಕೈದು ವಾಹನಗಳಿಗೆ ಗುದ್ದಿದ್ದಾನೆ ಏಪ್ರಿಲ್ 12ರಂದು ಬೆಂಗಳೂರಿನ ಮಹದೇವಪುರದಲ್ಲಿ ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ನಶೆಯಲ್ಲಿ ಅಭಿಲಾಷ್ ನಾಲ್ಕು ವಾಹನಗಳಿಗೆ ಗುದ್ದಿ ಜಖಂಗೊಳಿಸಿದ್ದಾನೆ. ಕಾರು ಗುದ್ದಿದ ರಭಸಕ್ಕೆ ರಮೇಶ್ ಎಂಬುವರ ಕಾಲು ಸಹ ಮುರಿತವಾಗಿದೆ. ಘಟನೆ ನಡೆದ ಸ್ಥಳದಲ್ಲಿ ಇದ್ದಂತಹ ಕೆಲವು ವ್ಯಕ್ತಿಗಳು ಅಭಿಲಾಶ್ ನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದು ಮಾದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೋಳಿ ತಿನ್ನುವವರೇ ಇದೀಗ ಆದಷ್ಟು ಎಚ್ಚರದಿಂದ ಇರುವುದು ಒಳ್ಳೆಯದು ಏಕೆಂದರೆ ರಾಜ್ಯಕ್ಕೆ H5N1 (ಹಕ್ಕಿ ಜ್ವರ) ಎಂಟ್ರಿ ಕೊಟ್ಟಿದ್ದು ಬೆಂಗಳೂರಿನ ಹೆಸರಘಟ್ಟದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ.ಕೋಳಿಗಳಲ್ಲಿ ಈ ಒಂದು ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪೌಲ್ಟ್ರಿ ಫಾರಂ ನಲ್ಲಿ ತಪಾಸಣೆ ನಡೆಸಲಾಗಿದ್ದು ತಪಾಸನೆ ವೇಳೆ ಕೋಳಿಗಳಲ್ಲಿ H5N1 ವೈರಸ್ ಇರುವುದು ಪತ್ತೆಯಾಗಿದೆ. ಹಾಗಾಗಿ ಫಾರಂ ನಲ್ಲಿರುವ 7,400ಕ್ಕೂ ಹೆಚ್ಚು ಕೋಳಿಗಳ ಜೀವಂತ ಸಮಾಧಿ ಮಾಡಲಾಗಿದ್ದು, ಸುಮಾರು 8 ಬಗೆಯ ತಳಿಯ ಸಾವಿರಾರು ಕೋಳಿಗಳ ಮಾರಣಹೋಮ ಆಗಿದೆ ಮೈಸೂರು ನಾಟಿಕೋಳಿ, ಕಾವೇರಿ, ಗಿರಿರಾಜ ಸೇರಿದಂತೆ 8 ತಳಿಗಳ ಸಾವಿರಾರು ಕೋಳಿಗಳನ್ನು ಜೀವಂತ ಸಮಾಧಿ ಮಾಡಲಾಗಿದೆ. ಸುಮಾರು 7400ಕ್ಕೂ ಹೆಚ್ಚು ಕೋಳಿಗಳನ್ನು ಜೀವಂತ ಸಮಾಧಿ ಮಾಡಲಾಗಿದ್ದು ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಈ ಒಂದು ಕ್ರಮ ಕೈಗೊಳ್ಳಲಾಗಿದೆ. ಸ್ಥಳಕ್ಕೆ ಪಶು ವೈದ್ಯಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ದೇಶದ ಹಲವು ರಾಜ್ಯಗಳಲ್ಲಿ ಆತಂಕ ಮೂಡಿಸಿರುವ ಮಾರಕ ಹಕ್ಕಿ ಜ್ವರ (H5N1) ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಕಾಲಿಟ್ಟಿದೆ. ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದ ಕೋಳಿ ಫಾರಂನಲ್ಲಿ ಈ ವೈರಸ್ ಇರುವುದು ದೃಢಪಟ್ಟಿದ್ದು, ಪಶುಸಂಗೋಪನಾ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ಹೆಸರಘಟ್ಟದ ಸರ್ಕಾರಿ ಫಾರಂನಲ್ಲಿ ಕೋಳಿಗಳು ಸರಣಿಯಾಗಿ ಸಾವನ್ನಪ್ಪುತ್ತಿದ್ದವು. ಇದರಿಂದ ಸಂಶಯಗೊಂಡ ಅಧಿಕಾರಿಗಳು ಸತ್ತ ಪಕ್ಷಿಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಪರೀಕ್ಷಾ ವರದಿಯಲ್ಲಿ ಕೋಳಿಗಳಿಗೆ ‘H5N1’ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ. ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ (Culling): ವೈರಸ್ ಮತ್ತಷ್ಟು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ, ಸೋಂಕು ಪತ್ತೆಯಾದ ಫಾರಂನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಕೋಳಿಗಳನ್ನು ನಾಶಪಡಿಸಲು (Culling) ಇಲಾಖೆ ನಿರ್ಧರಿಸಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕಾರ್ಯಾಚರಣೆಗೆ ಅಧಿಕಾರಿಗಳ ತಂಡ ಸಜ್ಜಾಗಿದೆ. ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಪ್ರಮುಖ ಸೂಚನೆಗಳು: ಹಕ್ಕಿ…

Read More

ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ  ಗಜಾನನ ಭಟ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆಗೊಳಿಸಲಾಗಿದೆ. ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ.ಎಸ್ ಭರತ್ ಕುಮಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿದ್ದು, 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾಯಿಸಿ ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ ಎಸ್ ಭರತ್ ಕುಮಾರ್, ಆದೇಶ ಹೊರಡಿಸಿದ್ದಾರೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ನಡೆಸಲಾಗಿದೆ, ಜೂನ್ 1 ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Read More