Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಹುಲಿ ದಾಳಿಯಿಂದ ರೈತ ರಾಜಶೇಖರ್ (58) ಸಾವನಪ್ಪಿದ್ದು ಜಮೀನಿನಲ್ಲಿ ದನ ಮೇಯಿಸುವಾಗ ಹುಲಿ ಏಕಾಏಕಿ ದಾಳಿ ಮಾಡಿದೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬೆನ್ನೆಕೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಖಂಡಿಸಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಈಗಾಗಲೇ ಹಲವು ನಾಯಕರು ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೆ, ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ ಎನ್ನುವ ಮೂಲಕ ಸಂಪುಟ ಪುನಾರಚನೆಯಲ್ಲಿ ಸಚಿವನಾಗುವ ಇಂಗಿತವನ್ನ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಕ್ತಪಡಿಸಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಸಂಪುಟ ಪುನರ್ ರಚನೆ ಆಗುವುದು ಮೊದಲೇ ಗೊತ್ತಿತ್ತು.ಶನಿವಾರ ಬೆಳಗಾವಿಯಲ್ಲಿ ಸಿಎಂ ಸಹ ಹೇಳಿದ್ದಾರೆ. ನನಗೆ ಸಚಿವನಾಗುವ ಸಂದರ್ಭ ಬರಲಿ. ಆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ನಾವು ಯಾವುದೇ ಅಧಿಕಾರವನ್ನ ಕೇಳಿ ಪಡೆದವನಲ್ಲ. ಭಗವಂತನ ಆಶೀರ್ವಾದ ಹಾಗೂ ಹೈಕಮಾಂಡ್ ಇಚ್ಛೆ ಇದ್ರೆ ಸಚಿವ ಸ್ಥಾನ ನನಗೆ ತಾನಾಗಿಯೇ ಬರುತ್ತದೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನ ನಾವು ನಿಭಾಯಿಸಲು ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸತೀಶ್ ಜಾರಕಿಹೊಳಿ ನಮ್ಮ ಮುಂದಿನ ಮಾರ್ಗದರ್ಶಕ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ‘ಅವರವರ ವೈಯಕ್ತಿಕ…
ಚಾಮರಾಜನಗರ : ನಿನ್ನೆ ತಾನೆ ಬೆಂಗಳೂರಿನಲ್ಲಿ ಆಸ್ತಿ ವಿಚಾರವಾಗಿ ಮಗನ ತಲೆಗೆ ತಂದೆಯು ಒಬ್ಬರು ಶೂಟ್ ಮಾಡಿದ ಘಟನೆ ವರದಿಯಾಗಿತ್ತು. ಅದರ ಬೆನ್ನಲ್ಲೇ ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಮೇಕಿಗಳ ವಿಚಾರವಾಗಿ ತಂದೆಯನ್ನು ಗಾಯಗೊಳಿಸಿ ನದಿಗೆ ತಳ್ಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಹೌದು ತಂದೆಯನ್ನು ಸ್ವಂತ ಮಗನೇ ಆಯುಧದಿಂದ ಗಾಯಗೊಳಿಸಿ ಕಾವೇರಿ ನದಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ನಡೆದಿದೆ. ಗೋಪಿನಾಥಂ ಗ್ರಾಮದ ಶಂಕರನ್ (70) ಹತ್ಯೆಯಾದವರು. ಈತನ ಎರಡನೇ ಮಗ ಗೋವಿಂದರಾಜ್ ಆರೋಪಿ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಶಂಕರನ್ ಮನೆಗೆ ಬಾರದ ಹಿನ್ನೆಲೆ ಕುಟುಂಬದವರು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಸಲ್ಲಿಸಿದ್ದರು. ಶನಿವಾರ ಸಂಜೆ ಕಾವೇರಿ ನದಿಯಲ್ಲಿ ಶಂಕರನ್ ಮೃತದೇಹ ಪತ್ತೆಯಾಗಿದೆ. ಮೃತನ ಪತ್ನಿ ಪಳನಿಯಮ್ಮ ತಮ್ಮ ಮಗ ಗೊವಿಂದರಾಜು ಅಪ್ಪನನ್ನು ಆಯುಧಗಳಿಂದ ಹೊಡೆದು ಕಾವೇರಿ ನದಿಗೆ ತಳ್ಳಿದ್ದಾನೆ ಎಂದು ದೂರು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆನೇಕಲ್ ತಾಲೂಕಿನ ಸಿದ್ದಯ್ಯನ ದೊಡ್ಡಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿದ್ದಯ್ಯನ ದೊಡ್ಡಿಯಲ್ಲಿ ಕಂಟೇನರ್ ಪಲ್ಟಿಯಾಗಿ ಇಬ್ಬರು ಸಾವನಪ್ಪಿದ್ದಾರೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಇಳಿಜಾರು ರಸ್ತೆಯ ಪಕ್ಕದ ಕಂದಕಕ್ಕೆ ಕಂಟೇನರ್ ಉರುಳಿ ಬಿದ್ದಿದೆ. ಕಂಟೇನರ್ ಕೆಳಗೆ ಇಬ್ಬರ ಮೃತ ದೇಹಗಳು ಸಿಲುಕಿಕೊಂಡಿವೆ. ಇನ್ನು ಘಟನೆಯಲ್ಲಿ ಕಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸಿದ್ದು, ಇದೀಗ ಮಾಜಿ ಸಚಿವ ಕೆ.ಎನ್ ರಾಜಣ್ಣ ಸಿಎಂ ಬದಲಾವಣೆ ಕುರಿತು ಸ್ಪೋಟಕ ಹೇಳಿಕೆ ಒಂದನ್ನು ನೀಡಿದ್ದು, ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಪುಟ ಪುನಾರಚನೆ ಮೇಲೆ ಬದಲಾವಣೆ ಭವಿಷ್ಯ ನಿರ್ಧಾರವಾಗಲಿದೆ. ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ. ಬಿಹಾರ್ ಚುನಾವಣೆ ಬಳಿಕ ಬದಲಾವಣೆ ಆಗುತ್ತೆ ಎಂದು ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರಲ್ಲಿ ಆಂಟಿ ಪ್ರೀತ್ಸೇ ಎಂದು ಅಂಕಲ್ ಒಬ್ಬ ಹಿಂದೆ ಬಿದ್ದು ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ನಗರದ ಫ್ಯಾಷನ್ ಡಿಸೈನರ್ ಒಬ್ಬರಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ತಮಿಳುನಾಡಿನ ಇವಿಪಿ ಫಿಲ್ಮ್ ಸಿಟಿ ಮಾಲೀಕ ಸಂತೋಷ್ ರೆಡ್ಡಿ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರೀತಿ ನಿರಕಾರಣೆ ಮಾಡಿದ್ದಕ್ಕೆ ಸಂತೋಷ್ ರೆಡ್ಡಿ ಫ್ಯಾಷನ್ ಡಿಸೈನರ್ ಮೇಲೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಫ್ಯಾಷನ್ ಡಿಸೈನರ್ ಪೊಲೀಸರಿಗೆ ದೂರು ನೀಡಿದ್ದಾರೆ.ಸಂತೋಷ್ ರೆಡ್ಡಿ ತನ್ನ ಕಸೀನ್ ಮದ್ವೆಗೆ ಬಟ್ಟೆ ಬೇಕು ಎಂದು ಫ್ಯಾಷನ್ ಡಿಸೈನರ್ನ್ನು ಸಂಪರ್ಕಿಸಿದ್ದರಂತೆ. ಮಗಳು ಭಾವನ್ಯ ರೆಡ್ಡಿಯಿಂದ ಫ್ಯಾಷನ್ ಡಿಸೈನರ್ ಸಂಪರ್ಕ ಮಾಡಿದ್ದನಂತೆ. ಪರಿಚಯ ಸ್ನೇಹಕ್ಕೆ ತಿರುಗಿ, ಫ್ಯಾಮಿಲಿ ಫ್ರೆಂಡ್ನಂತೆ ಇದ್ದನಂತೆ. ನಂತರ ನಿಮ್ಮ ಬ್ಯುಸಿನೆಸ್ಗೆ ಹೂಡಿಕೆ ಮಾಡ್ತಿನಿ ಎಂದಿದ್ದ. ಅಲ್ಲದೇ ತನ್ನ ಮಗಳು ಭಾವನ್ಯ ರೆಡ್ಡಿಗೆ ಗಂಡು ಇದ್ದರೆ ನೋಡಿ ಎಂದು ಸಂತ್ರಸ್ತೆಗೆ ಇನ್ನಷ್ಟು ಹತ್ತಿರವಾಗಿದ್ದ ಎನ್ನಲಾಗಿದೆ. ಒಂದು ದಿನ ತನ್ನ…
ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದು ಒಂದು ವರ್ಷವಾದರೂ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಸಂಗೊಳ್ಳಿ ರಾಯಣ್ಣನನ್ನು ಹಿಡಿಯಲು ನಮ್ಮವರೇ ನೀಡಿದ ಮಾಹಿತಿಯು ಬ್ರಿಟಿಷರಿಗೆ ಅನುಕೂಲವಾಗಿತ್ತು. ಚನ್ನಮ್ಮನ ಹೋರಾಟದ ಬಗ್ಗೆ ನಾಡಿಗೆ ತಿಳಿಸುವುದಕ್ಕಾಗಿ 2017ರಲ್ಲಿ ನಮ್ಮ ಸರ್ಕಾರವೇ ಕಿತ್ತೂರು ಚೆನ್ನಮ್ಮ ಜಯಂತಿ ಆರಂಭಿಸಿತು ಎಂಬುದು ನಮಗೆ ಹೆಮ್ಮೆಯ ವಿಷಯ. ಚನ್ನಮ್ಮನ ಸಾಹಸಗಾಥೆ ತಿಳಿಸಲು ಜಯಂತಿ ಆರಂಭಿಸಲಾಯಿತೇ ಹೊರತು ರಾಜಕೀಯ ಕಾರಣಕ್ಕಲ್ಲ. ಚನ್ನಮ್ಮನ ಹೆಸರು ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತೆ ಎಂದು ಸಿಎಂ ಹೇಳಿದರು. ಇದೆ ವೇಳೆ ಉತ್ತರಧಿಕಾರಿ ಬಗ್ಗೆಯೂ ಮಾತನಾಡಿದ ಅವ್ರು, ಲೀಡರ್ ಯಾರು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅಹಿಂದ ಸಂಘಟನೆ ಮುನ್ನಡೆಸುವ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತೇ ಎಂದು ಸಂಘಟನೆ ಮುನ್ನಡೆಸುವ ಬಗ್ಗೆ…
BREAKING : ನನ್ನ ಬಳಿಕ ಸತೀಶ್ ಜಾರಕಿಹೊಳಿ ಅಹಿಂದ ಸಂಘಟನೆ ಮುನ್ನಡೆಸುತ್ತಿದ್ದಾರೆ : ಸಂಚಲನ ಸೃಷ್ಟಿಸಿದ ಸಿಎಂ ಹೇಳಿಕೆ!
ಬೆಳಗಾವಿ : ಉತ್ತರಾದಿಯ ಕುರಿತು ಯತಿಂದ್ರ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೆ ಇದೀಗ ಉತ್ತರಧಿಕಾರಿಯ ಬಗ್ಗೆ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಪರೋಕ್ಷವಾಗಿ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿಯಂದು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಸತೀಶ್ ಜಾರಕಿಹೊಳಿ ಮುನ್ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದು ಲೀಡರ್ ಯಾರು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅಹಿಂದ ಸಂಘಟನೆ ಮುನ್ನಡೆಸುವ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತೇ ಎಂದು ಸಂಘಟನೆ ಮುನ್ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದು ಸೈದಾಂತಿಕವಾಗಿ ಅಹಿಂದ ಸಂಘಟನೆ ನಾನು ಮಾಡುತ್ತಿದ್ದೆ ಆಮೇಲೆ ಇದೀಗ ಸತೀಶ್ ಜಾರಕಿಹೊಳಿ ಅವರು ಮಾಡುತ್ತಿದ್ದಾರೆ ಅಂತ ಯತೀಂದ್ರ ಹೇಳಿದರೆ ಹೊರತು ಅವರೆ ಲೀಡರ್ ಆಗಬೇಕು ಅಂತ ಹೇಳಿಲ್ಲ. ಯಾರನ್ನ ಲೀಡರ್ ಮಾಡಬೇಕು ಅಂತ ಹೇಳುವುದು ಹೈಕಮಾಂಡ್ ನಾವು ಮಾಡಲ್ಲ ಯತೀಂದ್ರನು ಮಾಡಲ್ಲ ಯಾರು ಮಾಡಲ್ಲ ಎಂದರು.
ಬೆಂಗಳೂರು : ಆರ್ಎಸ್ಎಸ್ ಮತ್ತು ಸರ್ಕಾರದ ನಡುವೆ ಸಂಘರ್ಷ ಮತ್ತೆ ತಾರಕಕ್ಕೆ ಏರಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಚಿವರು ವಾಗ್ದಾಳಿ ನಡೆಸಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಯಾರು ಕಾನೂನಿನಗಿಂತ ದೊಡ್ಡವರ ಅವರು? ಕಲ್ಲಡ್ಕ ಅಲ್ಲ ಅವರಪ್ಪನಾದರೂ ಅಷ್ಟೇ ಕಾನೂನು ಪ್ರಕಾರವೇ ನಡೆದುಕೊಳ್ಳಬೇಕು ಎಂದು ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಂವಿಧಾನಕ್ಕಿಂತ ದೊಡ್ಡವರಾದರೇನ್ರಿ ಕಲ್ಲಡ್ಕ ಪ್ರಭಾಕರ್ ಭಟ್? ಕಾನೂನು ಮೀರಿದರೆ ಸರಕಾರ ಏನು ಸುಮ್ಮನೆ ಕೂತಿರುತ್ತಾ? ಕೋರ್ಟ್ ಪರ್ಮಿಷನ್ ಕೊಟ್ಟರೆ ಮಾಡಲಿ ಬೇಡ ಅಂತ ಅನಲ್ಲ. ಪರ್ಮಿಷನ್ ಇಲ್ಲದೆ ಮಾಡಿದರೆ ಸರ್ಕಾರ ಸುಮ್ಮನೆ ಕೂರುತ್ತ? ಇಂತಹ ಪ್ರಚೊದನಕಾರಿ ಹೇಳಿಕೆಗಳನ್ನು ಕೊಡದು ಬಿಟ್ಟು ಕಾನೂನು ಪಾಲನೆ ಮಾಡಿ. ಕಾನೂನು ಪಾಲನೆ ಮಾಡಿದರೆ ಎಲ್ಲರಿಗೂ ಒಳ್ಳೆಯದು ಅವರಿಗೆ ಮತ್ತು ಅವರ ಸಂಸ್ಥೆಗಳಿಗೆ ಒಳ್ಳೆಯದು. ಸುಮ್ಮನೆ ಬಾಯಿಗೆ ಬಂದ ಹಾಗೆ ಮಾತನಾಡುವುದು ಅಲ್ಲ ಶಾಖೆಗಳಲ್ಲಿ ಮಾತಾಡಿದಂಗೆ ಪಬ್ಲಿಕ್ ನಲ್ಲಿ ಮಾತನಾಡಿದರೆ ಪಬ್ಲಿಕ್ ನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.
ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಬಾಲಕನನ್ನು ರಕ್ಷಿಸಲು ಹೋದ ಸಹೋದರರಿಬ್ಬರು ನಿರುಪಾಲಾಗಿರುವ ಘಟನೆ ವರದಿಯಾಗಿದೆ. ಮೈಸೂರಿನ ಬಡಗಲಹುಂಡಿಯಲ್ಲಿ ಈ ಒಂದು ದುರಂತ ಸಂಭವಿಸಿದ್ದು, ವರುಣ ನಾಲೆ ನೀರಿನಲ್ಲಿ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ನಂದನ್ (25) ಮತ್ತು ರಾಕೇಶ್ (20) ಎಂದು ತಿಳಿದುಬಂದಿದೆ. ವರುಣ ನಾಲೆಯಲ್ಲಿ ಬಾಲಕನನ್ನು ಕಾಪಾಡಕ್ಕೆ ಹೋಗಿದ್ದಾರೆ ಆದರೆ ಇಬ್ಬರು ಕೂಡ ಸಾವನಪ್ಪಿದ್ದಾರೆ. ಮರದ ಕೊಂಬನ್ನು ಹಿಡಿದು ಜೀವ ಉಳಿಸಿ ಎಂದು ಬಾಲಕ ಹೊರಡುತ್ತಿದ್ದ. ಬಾಲಕನ ರಕ್ಷಣೆಗೆ ಇಬ್ಬರು ಸಹೋದರರು ನಾಲೆಗೆ ಇಳಿಯುತ್ತಾರೆ. ಆದರೆ ಇಬ್ಬರು ಮೃತಪಟ್ಟಿದ್ದಾರೆ. 15 ದಿನಗಳ ಹಿಂದೆ ಅಷ್ಟೇ ನಂದನ್ ಪ್ರೀತಿಸಿದ ಯುವತಿಯ ಜೊತೆಗೆ ಮದುವೆಯಾಗಿದ್ದ. ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.














