Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಇತ್ತೀಚಿಗೆ ಕೋಲಾರದಲ್ಲಿ ಶಿಕ್ಷಕನೊಬ್ಬನ ಮೊಬೈಲ್ ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ ಇದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈಗ ಬೆಳಗಾವಿಯಲ್ಲಿ ಕಾಮುಕ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಶೌಚಾಲಯದ ಫೋಟೋ ತೆಗೆದುಕೊಂಡು ಬನ್ನಿ ಎಂದು ಹೇಳಿದ್ದಲ್ಲದೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ, ಆತನನ್ನು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಹೌದು ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ ಎಂದು ತಿಳಿದುಬಂದಿದ್ದು,ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರದಿದ್ದಾನೆ. ಅಲ್ಲದೇ, ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್ ಸಾದಿಕ್ ಹೇಳುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡಿದ್ದನು. ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು…
BREAKING : ಮಂಡ್ಯದಲ್ಲಿ ಗಣೇಶ ಮೇಲೆ ಚಪ್ಪಲಿ, ಕಲ್ಲು ಎಸೆದ ಮುಸ್ಲಿಂರು : ಠಾಣೆ ಎದುರು ಮೂರ್ತಿ ಇಟ್ಟು ಹಿಂದೂಗಳ ಧರಣಿ!
ಮಂಡ್ಯ : ಗಣೇಶ ಮೂರ್ತಿ ಪ್ರತಿಷ್ಠಾಪಿಸಿ 5ನೇ ದಿನವಾದ ಇಂದು, ರಾಜ್ಯದ ಎಲ್ಲಾ ಕಡೆ ಅತ್ಯಂತ ವಿಜೃಂಭಣೆಯಿಂದ ಗಣೇಶನ ವಿಸರ್ಜನೆ ಮಾಡಲಾಗುತ್ತೆ. ಆದರೆ ಇದೀಗ ಮಂಡ್ಯ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಮುಸ್ಲಿಂರು ಕಲ್ಲು, ಚಪ್ಪಲಿ ಎಸೆದಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ನಡೆದಿದೆ. ಹೌದು ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು , ಚಪ್ಪಲಿ ತೂರಿರುವ ಘಟನೆ ನಾಗಮಂಗಲ ಪಟ್ಟಣದ ಮಂಡ್ಯದ ರಸ್ತೆಯಲ್ಲಿ ನಡೆದಿದೆ. ಘಟನೆಯಿಂದ ಸ್ಥಳದಲ್ಲಿ ಉದ್ತಿಕ್ತ ವಾತಾವರಣ ನಿರ್ಮಾಣವಾಗಿದ್ದು, ಠಾಣೆ ಮುಂದೆ ಗಣಪತಿ ತಂದು ಹಿಂದೂ ಯುವಕರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಲ್ಲು ಚಪ್ಪಲಿ ತೂರಾಟ ಪ್ರಕರಷದಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.ಕೂಡಲೇ ಸ್ಥಳಕ್ಕೆ ಪೊಲೀಸ್ ಇಲಾಖೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದೆ. ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನುಕೋಮಿನವರು…
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಕುರಿತಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.ಆದರೆ ಇದಕ್ಕೆ ಛಲವಾದಿ ನಾರಾಯಣಸ್ವಾಮಿ ಅವರು ಮೂಲತಃ ಕಾಂಗ್ರೆಸ್ಸಿಗರು. ಅವರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ಇದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಕುರಿತು ಟ್ವೀಟ್ ನಲ್ಲಿ ಕಾಂಗ್ರೆಸ್ ನಾಯಕರು ಮಾತನಾಡಿರುವ ಬಗ್ಗೆ ಕಾಂಗ್ರೆಸ್ ಹಂಚಿಕೊಂಡಿದ್ದು, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ವಾಜಿದ ಅವರು ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರು ಮೂಲತಃ ಕಾಂಗ್ರೆಸ್ಸಿಗರು. ಅವರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ಇದೆ. ಇಂಥವರಿಗೆ ಖರ್ಗೆ ವಿರುದ್ಧ ಮಾತನಾಡುವ ಯೋಗ್ಯತೆ ಇದೆಯೇ? ಬಿಜೆಪಿ, ಆರ್ಎಸ್ಎಸ್ ನಾಯಕರನ್ನು ಮೆಚ್ಚಿಸುವುದಕ್ಕಾಗಿ ನಾರಾಯಣಸ್ವಾಮಿ ಅವರು ಖರ್ಗೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ನಮ್ಮ ನಾಯಕರ ವಿರುದ್ಧ ಮಾತನಾಡುವುದನ್ನು ಬಿಡದಿದ್ದರೆ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಇನ್ನೂ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆವಿ. ಗೌತಮ್, ವಿಧಾನಪರಿಷತ್…
ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆಯ ದಿನ ಬಹಳ ಪ್ರಮುಖವಾಗಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಯಲಿದೆ. ಹಾಗಾಗಿ ಇಡಿ ರಾಜ್ಯದ ಜನತೆ ಹೈಕೋರ್ಟ್ ಏನು ತೀರ್ಪು ನೀಡಲಿದೆ ಎಂದು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಬೆಳಗ್ಗೆ 12 ಗಂಟೆಗೆ ವಿಚಾರಣೆ ಆರಂಭವಾಗಲಿದೆ. ಈಗಾಗಲೇ ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಕಳೆದ ಸೆಪ್ಟೆಂಬರ್ 9 ರಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾ.ಎಂ. ನಾಗಪ್ರಸನ್ನ ಸೆ. 12ಕ್ಕೆ ವಿಚಾರಣೆ ಮುಂದೂಡಿ ಅದೇಶಿಸಿದ್ದರು.ಇದೀಗ ಕೊನೆಯ ವಾದವಾಗಿ ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು…
ಬೆಂಗಳೂರು : ಇಂದು ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಕನ್ನಡ ಭಾಷೆ ಮಾತನಾಡಿದಕ್ಕೆ ಕಾರ್ಮಿಕನ ಮೇಲೆ ಉತ್ತರ ಪ್ರದೇಶದ ಮೂವರು ಕಾರ್ಮಿಕರು ಹಲ್ಲೆ ನಡೆಸಿದ ವಿಚಾರವಾಗಿ, ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ ಕೆ ಬಾಬಾ ಸ್ಪಷ್ಟನೆ ನೀಡಿದ್ದು, ಈ ಗಲಾಟೆ ಭಾಷೆಗಾಗಿ ನಡೆದಿರುವಂತಹದ್ದಲ್ಲ, ಇದು ಪರಶಿವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾರ್ಮಿಕರ ಮೇಲೆ ಹಲ್ಲೆ ಆರೋಪದ ವಿಚಾರವಾಗಿ ಭಾಷೆ ವಿಚಾರಕ್ಕೆ ಜಗಳವಾಗಿಲ್ಲ. ಪರ್ಫ್ಯೂಮ್ ವಿಚಾರಕ್ಕೆ ಜಗಳವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಈ ಒಂದು ಗಲಾಟೆ ನಡೆದಿತ್ತು. ಕೃಷ್ಣಮೂರ್ತಿ ಎಂಬುವವರ ಕೈಮಗ್ಗದಲ್ಲಿ ಗಲಾಟೆ ನಡೆದಿತ್ತು. ಕಾರ್ಮಿಕ ಶಿವಲಿಂಗ ಪರ್ಫ್ಯೂಮ್ ಹಾಕಿಕೊಂಡು ಬರುತ್ತಿದ್ದ. ಪರ್ಫ್ಯೂಮ್ ಸ್ಮೆಲ್ ತಡೆದುಕೊಳ್ಳಲು ಆಗುತ್ತಿಲ್ಲವೆಂದು ಗಲಾಟೆ ನಡೆದಿದೆ. ಇಬ್ಬರು ಕಾರ್ಮಿಕರ ನಡುವೆ ಮಾತಿನ ಚಕಮತಿ ನಡೆದು ಹಾಕ್ಲೆ ನಡೆದಿದೆ. ಮೂವರು ಕಾರ್ಮಿಕರು ಸೇರಿ ಓರ್ವನ ಮೇಲೆ ಹಲ್ಲೆ ಮಾಡಿದ್ದಾರೆ. ಗಲಾಟೆಯ ಸಂಬಂಧ ಆನೇಕಲ್ ಪೊಲೀಸರಿಂದ…
ಕೋಲಾರ : ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಕೂಗು ಜಾಸಿಯಾಗಿದ್ದು, ಸದ್ಯ ಕಾಂಗ್ರೆಸ್ ನಾಯಕರು ದಿನಕ್ಕೊಂದರಂತೆ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದೀಗ ಶಾಸಕ ಕೊತ್ತೂರು ಮಂಜುನಾಥ್ ಕೂಡ ಕೋಲಾರ ಭಾಗದವರಿಗೂ ಸಿಎಂ ಸ್ಥಾನ ಕೊಡಲಿ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿಎಂ ಸ್ಥಾನದ ಕುರಿತು ಭಾರಿ ಪೈಪೋಟಿ ನಡೆಯುತ್ತಿದ್ದು, ಉತ್ತರ ಕರ್ನಾಟಕಕ್ಕೆ, ಬೆಳಗಾವಿ ಭಾಗಕ್ಕೆ ಕೇಳುತ್ತಾರೆ. ಆದರೆ ಕೋಲಾರಕ್ಕೂ ಕೊಡಲಿ ಬಿಡಿ. ಬೆಂಗಳೂರಿಗೂ ಹತ್ತಿರವಾಗಿದೆ. ಕೋಲಾರ ಭಾಗದಿಂದ ಸಿಎಂ ಸ್ಥಾನ ಕೇಳೋದು ತಪ್ಪಿಲ್ಲ. ಕೋಲಾರ ಅಭಿವೃದ್ಧಿಯಾಗಲಿ ಎಂದರು. ಸಿಎಂ ಬದಲಾವಣೆ ಬಗ್ಗೆ ಯಾರೋ ಹೇಳುವ ಮಾತುಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ, ನಮ್ಮ ಪಕ್ಷದ ಹೈಕಮಾಂಡ್ ಸಿಎಂ ಬದಲಾವಣೆ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಿಲ್ಲ. ಇದೆಲ್ಲ ವಿರೋಧ ಪಕ್ಷಗಳ ಊಹಾಪೋಹವಾಗಿದ್ದು, ಉತ್ತರಿಸುವ ಅವಶ್ಯಕತೆ ಇಲ್ಲ ಹಾಗಾಗಿ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಆದ್ದರಿಂದ ಬದಲಾವಣೆಗೆ ಪ್ರಶ್ನೆಯೂ ಇಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಐದು…
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಸಿಎಂ ಸ್ಥಾನದ ಕುರಿತು ಭಾರಿ ಚರ್ಚೆ ಆಗುತ್ತಿದ್ದು, ಇದರ ಮಧ್ಯ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಆಗುವ ಕುರಿತು ಅಭಿಪ್ರಾಯ ಹೇಳಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ನಾನೆ ಮುಖ್ಯಮಂತ್ರಿಯಾಗಿ ಮುಂದುವರೆಯಲು ಯಾವುದೇ ಸಂಶಯವಿಲ್ಲ ಎಂದು ತಮ್ಮ ಟ್ವೀಟ್ ಖಾತೆ ಮೂಲಕ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಟ್ವೀಟ್ ನಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಮುಂದೆ ಯಾರು ಮುಖ್ಯಮಂತ್ರಿ? ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟದ ಉಪ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್…
ಬೆಂಗಳೂರು : ಜಿಎಸ್ಟಿ ಮತ್ತು ಇಡಿ ಅಧಿಕಾರಿಗಳು ಬೆಂಗಳೂರಿನ ಉದ್ಯಮಿ ಒಬ್ಬರಿಗೆ ಕೇಸ್ ಮುಚ್ಚಿಹಾಕುವುದಾಗಿ 1.5 ಕೋಟಿ ಪಡೆದು ವಂಚನೆ ಎಸಗಿದ್ದ ನಾಲ್ವರು GST ಅಧಿಕಾರಿಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು 13 ದಿನಗಳ ಕಾಲ ಸಿಸಿಬಿ ಕಸ್ಟರ್ಡ್ಗೆ ನೀಡಿ ಬೆಂಗಳೂರಿನ ಒಂದನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಜಿಎಸ್ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳು ಎಂದು ತಿಳಿದುಬಂದಿದ್ದು, ಇಂದು ನ್ಯಾಯಾಲಯದಲ್ಲಿ ಸಿಸಿಬಿ ಅಧಿಕಾರಿಗಳು ಎಲ್ಲಾ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಹಾಜರುಪಡಿಸಿದ್ದರು. ಬಂಧಿತ ನಾಲ್ವರು ಅಧಿಕಾರಿಗಳಿಗೆ 13 ದಿನ ಸಿಸಿಬಿ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ ಒಂದನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಜಿ ಎಸ್ ಟಿ ಅಧಿಕಾರಿಗಳನ್ನು ಸಿಸಿಬಿ ಅಧಿಕಾರಿಗಳು ಮುಂದೆ ಹಾಜರುಪಡಿಸಿದ್ದರು. ಇದೀಗ ಎಲ್ಲಾ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನು 13 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ…
ಬೆಂಗಳೂರು : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಸೇರಿದಂತೆ ಇತರೆ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಬಿ ನಾಗೇಂದ್ರ ಅವರೇ ನಕಲಿ ಅಕೌಂಟ್ ತೆರೆಯಲು ಸೂಚನೆ ನೀಡಿದರು ಎಂಬ ಸ್ಫೋಟಕ ವಾದಂತಹ ಮಾಹಿತಿ ಬಯಲಾಗಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ನಿನ್ನೆ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದರು ಈ ವೇಳೆ ಮಾಜಿ ಸಚಿವ ಭೀ ನಾಗೇಂದ್ರ ಅವರೇ ಒಂದು ಹಗರಣಕ್ಕೆ ಮಾಸ್ಟರ್ ಮೈಂಡ್ ಎಂದು ಉಲ್ಲೇಖವಾಗಿದ್ದು ಇದೀಗ ಮತ್ತೊಂದು ಸ್ಫೋಟಕವಾದ ಮಾಹಿತಿ ಬಹಿರಂಗವಾಗಿದೆ. ಇಡಿ ಅಧಿಕಾರಿಗಳು ಪ್ರಕರಣದ ಸಂಪೂರ್ಣ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದರಲ್ಲಿ ಬಿ.ನಾಗೇಂದ್ರ ಅವರೇ ಅಧಿಕಾರಿಗಳಿಗೆ ನಕಲಿ ಖಾತೆಗಳನ್ನು ಸೃಷ್ಟಿಸಿ ಎಂದು ಸೂಚನೆ ನೀಡಿದ್ದಾರೆ ಎನ್ನುವುದನ್ನು ಇಡಿ…
ಬೆಂಗಳೂರು : ಇತ್ತೀಚಿಗೆ ಕೊಲ್ಕತ್ತಾದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಈಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹೆಚ್ಚಾಗಿರುವ ಘಟನೆ ಬೆಳಕಿಗೆ ಬಂದಿದೆ ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಬೆಂಗಳೂರಿನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ವರದಿಯಾಗಿದೆ. ಬಟ್ಟೆ ಒಣಗಿ ಹಾಕುವ ಸಲುವಾಗಿ ಬಾಲಕಿ ಮಹಡಿಯ ಮೇಲೆ ತೆರಳಿದಾಗ ಈ ಒಂದು ಪೈಶಾಚಿಕ ಕೃತ್ಯ ನಡೆದಿದೆ. ಪೋಷಕರು ಇಲ್ಲದನ್ನು ಗಮನಿಸಿ, ಮಹಡಿ ಮೇಲೆ ಹೋಗಿದ್ದನ್ನ ದೃಢ ಪಡಿಸಿಕೊಂಡ ದುರುಳ ಬಾಲಕಿ ಕೂಗದಂತೆ ಬೆದರಿಕೆ ಹಾಕಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಾಲಕಿಯ ಮೇಲೆ ಅತ್ಯಾಚಾರ ಬೆಸೆಗೆ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ. ಅತ್ಯಾಚಾರ ಆರೋಪಿಯ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸದ್ಯ ಕಾಮುಕನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.…













