Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲೆಯ ವಾಹನ ಪಂಚರಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿದೆ. ಪರಿಣಾಮ ವಾಹನದಲ್ಲಿದ್ದ 16 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಇಂದು ಬೆಳಗ್ಗೆ ಪಿರಿಯಾಪಟ್ಟಣ ಬಳಿಯ ಕಂಪಲಪುರದ ಖಾಸಗಿ ಶಾಲೆಯ ವ್ಯಾನ್ ವಿವಿಧ ಗ್ರಾಮಗಳಿಂದ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೊರಟಿತ್ತು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಹಬ್ಬನಕುಪ್ಪೆ ಗ್ರಾಮದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿದೆ. ಗಾಯಗೊಂಡ ಮಕ್ಕಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಆಗಮಿಸಿ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದರು.
ಬೆಳಗಾವಿ : ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣನ ಅಬ್ಬರದಿಂದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಇದುವರೆಗೂ ಭಾರಿ ಮಳೆಯಿಂದಾಗಿ ಅನೇಕರು ಬಲಿಯಾಗಿದ್ದಾರೆ. ಇದೀಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರು ಪಾಲಾಗಿದ್ದಾರೆ. ಹೌದು ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದ ಕೃಷ್ಣ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆಯೊಬ್ಬರು ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮಾಂಜರಿ ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಾಂಜರಿ ಗ್ರಾಮದ ಸಂಗೀತಾ ಶಿವಾಜಿ ಮಾಂಜರೇಕರ್ (40) ಎಂದು ಗುರುತಿಸಲಾಗಿದೆ. ಕೆಲವು ದಿನಗಳಿಂದ ಕೃಷ್ಣಾ ನದಿ ತುಂಬಿ ಹರಿಯುತ್ತಿತ್ತು ಈ ಹಿನ್ನೆಲೆಯಲ್ಲಿ ಮಹಿಳೆ ಬಾಗಿನ ಅರ್ಪಿಸಲು ತೆರಳಿದ್ದರು. ಬಾಗಿನ ಅರ್ಪಿಸುವ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದು, ನೀರು ರಭಸವಾಗಿ ಹರಿತ್ತಿದ್ದ ಪರಿಣಾಮ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಅಂಕಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ನಟ ಶ್ರೀನಗರ ಕಿಟ್ಟಿ ಹಾಗೂ ನಟಿ ರಚಿತಾ ರಾಮ್ ಅವರ ನಟನೆಯ ಸಂಜು ವೆಡ್ಸ್ ಗೀತಾ-2 ಸಿನಿಮಾ ರಿಲೀಸ್ ಆಗಿತ್ತು. ಆದರೆ ಈ ಒಂದು ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಅವರು ಪ್ರಚಾರಕ್ಕೆ ಬರಲಿಲ್ಲ ಎಂದು ಚಿತ್ರದ ನಿರ್ದೇಶಕ ಫಿಲಂ ಚೇಂಬರಿಗೆ ದೂರ ನೀಡಿದರು ಇದೀಗ ನಟಿ ರಚಿತಾ ರಾಮ್ ಚಿತ್ರವೊಂದರ ಅಡ್ವಾನ್ಸ್ ಹಣ ಪಡೆದು ವಾಪಸ್ ನೀಡದ ಹಿನ್ನೆಲೆ ಫಿಲಂ ಚೇಂಬರ್ ನಲ್ಲಿ ಮತ್ತೊಂದು ದೂರು ದಾಖಲಾಗಿದೆ. ಹೌದು ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ‘ಉಪ್ಪಿ ರುಪ್ಪಿ’ ಸಿನೆಮಾಗಾಗಿ ನಟಿ ಅಡ್ವಾನ್ಸ್ ಪಡೆದಿದ್ದರು. ಹಣ ವಾಪಸ್ ನೀಡದ ಹಿನ್ನೆಲೆ ದೂರು ದಾಖಲಾಗಿದೆ. ಕಳೆದ 2 ತಿಂಗಳ ಹಿಂದೆಯೇ ದೂರು ದಾಖಲಾಗಿದೆ. 8 ವರ್ಷದ ಹಿಂದೆ ಉಪೇಂದ್ರ ರಚಿತಾ ನಟನೆಯಲ್ಲಿ ಈ ಒಂದು ಚಿತ್ರ ಮೂಡಿ ಬರಬೇಕಿತ್ತು. ಉಪ್ಪಿ ರಪ್ಪಿ ಚಿತ್ರದಲ್ಲಿ ಉಪೇಂದ್ರ ಜೊತೆಗೆ…
ಮೈಸೂರು : ಹೈದರಾಬಾದ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರಿನಲ್ಲಿರುವ ಜ್ಞಾನ ಸರೋವರ ಇಂಟರ್ನ್ಯಾಷನಲ್ ವಸತಿ ಶಾಲೆಗೆ ಬೆದರಿಕೆ ಕರೆ ಬಂದಿದೆ. ಮೈಸೂರು ತಾಲೂಕು ಭುಗತಹಳ್ಳಿ ಗ್ರಾಮದಲ್ಲಿರುವ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹೈದರಾಬಾದಲ್ಲಿ ನಡೆದ ರೇಪ್ ಕೇಸ್ ಸಂಬಂಧ ದುಷ್ಕರ್ಮಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಹೆಸರು ಮತ್ತು ಫೋನ್ ನಂಬರ್ ನೀಡಿ ಬೆದರಿಕೆ ಮೇಲ್ ಸಂದೇಶ ಕಳುಹಿಸಿದ್ದಾನೆ. ಈ ಕುರಿತು ಶಾಲಾ ಆಡಳಿತ ಮಂಡಳಿ, ಮೈಸೂರು ಎಸ್ಪಿಗೆ ದೂರು ನೀಡಿದ್ದಾರೆ.
ತುಮಕೂರು : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ತುಮಕೂರಿನಲ್ಲಿ ಒಂದೇ ದಿನ ಇಬ್ಬರು ವ್ಯಕ್ತಿಗಳು ಹೃದಯಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹೃದಯಘಾತದಿಂದ ಓರ್ವ ಅರಣ್ಯಪಾಲಕ ಸಾವನ್ನಪ್ಪಿದ್ದರೆ, ಇನ್ನು ತುಮಕೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತದಿಂದ ಅರಣ್ಯ ಪಾಲಕ ನವೀನ್ (31) ಸಾವನ್ನಪ್ಪಿದ್ದಾರೆ. ಬುಕ್ಕಾಪಟ್ಟಣದ ಅರಣ್ಯ ಪ್ರದೇಶದ ದಸೂಡಿಯಲ್ಲಿ ಈ ಒಂದು ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದಲ್ಲಿ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ನವೀನ್ ಸಾವನ್ನಪ್ಪಿದ್ದಾರೆ. ಇತ್ತೀಚಿಗೆ ಅಷ್ಟೇ ಮೃತ ನವೀನ್ ತುಮಕೂರಿಗೆ ವರ್ಗಾವಣೆಯಾಗಿದ್ದರು. ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಸಿಂಗಟಗೆರೆ ನಿವಾಸಿ ಎಂದು ತಿಳಿದುಬಂದಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇನ್ನು ಮತ್ತೋರ್ವ ವ್ಯಕ್ತಿ ನ್ಯಾಯಾಲಯ ಆವರಣದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ನ್ಯಾಯಾಲಯ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ತರಕಾರಿ ವ್ಯಾಪಾರಿ ರಂಗನಾಥ (35) ನ್ಯಾಯಾಲಯದ ಆವರಣದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ವಿವಾಹವಾಗುವುದಾಗಿ ವಿಚ್ಛೇದಿತ ಮಹಿಳೆಯನ್ನು ನಂಬಿಸಿ ಆಕೆಯೊಂದಿಗಿನ ಖಾಸಗಿ ವಿಡಿಯೋ ಸೆರೆಹಿಡಿದು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಬೆಂಗಳೂರಿನ ಕಾಡುಗೋಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಯುವಕನನ್ನು ಕಾಡುಗೋಡಿಯ ಶ್ರೀನಿವಾಸ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಆಂಧ್ರಪ್ರದೇಶ ಮೂಲದ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಶ್ರೀನಿವಾಸ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತೆಯು 2014ರಲ್ಲಿ ವಿವಾಹವಾಗಿದ್ದು, 2 ವರ್ಷ ಪತಿಯೊಂದಿಗೆ ಸಂಸಾರ ನಡೆಸಿದ್ದರು.ಕೌಟುಂಬಿಕ ಕಲಹದಿಂದ ದಂಪತಿ ನಡುವೆ ವೈಮನಸ್ಸು ಉಂಟಾಗಿತ್ತು. 2016ರಿಂದ ಪತಿಯಿಂದ ದೂರವಾಗಿದ್ದ ಸಂತ್ರಸ್ತೆ ವಿಚ್ಛೇದನ ಪಡೆದುಕೊಂಡಿದ್ದರು. ಇನ್ನು ಆರೋಪಿಯು ಕಾಡುಗೋಡಿಯಲ್ಲಿ ಡಿಜಿಟಲ್ ಸೇವಾ ಕೇಂದ್ರ ನಡೆಸುತ್ತಿದ್ದ. ಪತಿಯಿಂದ ದೂರವಾದ ನಂತರ ಜೀವನ ನಿರ್ವಹಣೆಗಾಗಿ ಕೆಲಸ ಹುಡುಕುತ್ತಿದ್ದ ಸಂತ್ರಸ್ತೆಗೆ ಆರೋಪಿಯ ಕೇಂದ್ರದಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ದೊರೆತಿತ್ತು. ಇತ್ತ ಶ್ರೀನಿವಾಸ್ ಮಹಿಳೆಯನ್ನು ಪರಿಚಯಿಸಿಕೊಂಡು ಅವರ ಜೊತೆಗೆ ಸಲುಗೆ ಬೆಳೆಸಿ ವಿವಾಹವಾಗುವುದಾಗಿ ನಂಬಿಸಿದ್ದ. ಬಾಡಿಗೆ ಮನೆ ಮಾಡಿ ಆಕೆಯೊಂದಿಗೆ ವಾಸಿಸುತ್ತಿದ್ದ. ಈ ನಡುವೆ ಮಹಿಳೆಯ ಗಮನಕ್ಕೆ ಬಾರದಂತೆ ಖಾಸಗಿ…
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ ನಡೆದಿದ್ದು, ಯುವಕನೊಬ್ಬ ಯುವತಿ ಕಿರುಕುಳ ತಾಳಲಾರದೆ ವಿಷ ಸೇವಿಸಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ನಡೆದಿದೆ. ಮೃತ ಯುವಕನನ್ನು ಮಂಜುನಾಥ್ ಎಂದು ತಿಳಿದುಬಂದಿದೆ. ಸಾವಿಗೆ ಗಗನ ಎಂಬ ಯುವತಿ ಕಾರಣ ಎಂದು ಜೂ 13ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವತಿ ನಂಬಿಸಿ ಮೋಸ ಮಾಡಿದ್ದಾಳೆ. ಆಕೆಗೆ ಬೇರೋಬ್ಬನ ಜೊತೆಯಲ್ಲಿ ಸಂಬಂಧವಿತ್ತು. ಆದ್ರೂ ಕೂಡ ನಾನು ಮದುವೆ ಆಗಲು ತೀರ್ಮಾನ ಮಾಡಿದ್ದೆ. ಆದರೆ ಆಕೆ ನನ್ನನ್ನು ಜೈಲಿಗೆ ಕಳಿಸಿದ್ದಳು. ಕಳೆದ ಫೆಬ್ರವರಿಯಲ್ಲಿ ಕುಂಬಳಗೋಡು ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಅದಲ್ಲದೆ ಬೇಲ್ ವಿಚಾರವಾಗಿ ಹಣ ಪಡೆದಿದ್ದಳು. ಹಣಕ್ಕೆ ಹೆಚ್ಚು ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾಳೆ ಎಂದು ವಿಡಿಯೋದಲ್ಲಿ ಆತ್ಮಹತ್ಯೆಗೆ ಶರಣಾದ ಮಂಜುನಾಥ್ ಆರೋಪ ಮಾಡಿದ್ದಾನೆ. ವಿಷದ ಮಾತ್ರೆಗಳನ್ನು ಸೇವಿಸಿದ ಮಂಜುನಾಥ್ ನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದು, ಮಂಜುನಾಥ್ ಕುಟುಂಬಸ್ಥರಿಂದ ಬೆಂಗಳೂರು…
ಕಲಬುರ್ಗಿ : ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆ ಅದರ ದೃಢಿಕರಣ ಪತ್ರಕ್ಕೆ ಗುತ್ತಿಗೆದಾರನ ಬಳಿ 1 ಲಕ್ಷ ಪಡೆಯುವ ವೇಳೆ ತಹಸೀಲ್ದಾರ್ ಕಚೇರಿಯ ಮುಜರಾಯಿ ವಿಭಾಗದ ಎಸ್ ಡಿ ಎ ನೌಕರನೊಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಾಳಗಿಯಲ್ಲಿ ನಡೆದಿದೆ. ಕಾಳಗಿ ತಾಲೂಕಿನ ಕೋರವಾರ ಅಣವೀರಭದ್ರೇಶ್ವರ ದೇವಸ್ಥಾನದ ಪಕ್ಕದಲ್ಲಿ ಪಂಚಾಯತ್ ರಾಜ್ ಇಲಾಖೆಯ 8 ಲಕ್ಷ ರೂ. ಅನುದಾನದಡಿ ನಿರ್ಮಿಸಲಾದ ಸಿಸಿ ರಸ್ತೆ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ದೃಢೀಕರಣ ಪತ್ರ ನೀಡಲು ಒಂದು ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಗುತ್ತಿಗೆದಾರ ಅಣವೀರಯ್ಯ ಹಿರೇಮಠ ಅವರು ಕಾಮಗಾರಿ ಪೂರ್ಣಗೊಳಿಸಿರುವ ಪ್ರಮಾಣ ಪತ್ರ ನೀಡುವಂತೆ ತಹಸಿಲ್ ಕಚೇರಿಗೆ ಅಲೆದಾಡುತ್ತಿದ್ದ. ಆದರೆ ವಿಳಂಬ ಧೋರಣೆಯಿಂದ ಸುಸ್ತಾಗಿ ಲಕ್ಷ ರೂ. ಲಂಚ ಕೊಡಲು ದೂರುದಾರ ಒಪ್ಪಿದ್ದರು. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ ನೇತೃತ್ವದಲ್ಲಿ ಡಿವೈಎಸ್ಪಿ ಗೀತಾ ಬೇನಹಾಳ, ಶೀಲವಂತ ಹೊಸಮನಿ, ಪಿಐ ರಾಜಶೇಖರ ಅವರಿದ್ದ ತಂಡ ಕಾರ್ಯಾಚರಣೆಯಲ್ಲಿ…
ವಿಜಯನಗರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರ ಸ್ಟೈರ್ ಕಾರಿಗೆ ಬೆಂಗಾಗಲು ಪಡೆ ವಾಹನ ಡಿಕ್ಕಿ ಹೊಡೆದಿರುವ ವಿಜಯನಗರ ಜಿಲ್ಲೆಯ ಕಾನಹೊಸಳ್ಳಿ ಬಳಿ ನಡೆದಿದೆ. ಆದರೆ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೆಂಗಾವಲು ಪಡೆಯ ಎ ಎಸ್ ಐ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಸ್ಥಾನ ಆಗ ಬದಲಾಗುತ್ತೆ ಈಗ ಬದಲಾಗುತ್ತೆ ಅಂತ ಹೇಳ್ತ ಎರಡುವರೆ ವರ್ಷ ಕಳೆಯಿತು. ಇದೀಗ ನವೆಂಬರ್ ನಲ್ಲಿ ಸಿಎಂ ಬದ್ಲಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ, ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳದೆ ಕಷ್ಟ ಆಗಿದೆ. ಸಿಎಂ ಬದಲಾವಣೆ ಅಂದ್ರೆ ಏನು ಹೇಳಬೇಕು ಎಂದು ಹೇಳಿಕೆ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸಚಿವ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟ ಆಗಿದೆ. ಸಿಎಂ ಬದಲಾವಣೆ ಆಗುತ್ತಾರೆ ಅಂದರೆ ನಾವೇನು ಹೇಳೋದು? ಸಿಎಂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಗಿದ ಅಧ್ಯಾಯವಾಗಿದೆ. ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಹೇಳಿಕೆ ನೀಡಿದರು.