Author: kannadanewsnow05

ಬೆಂಗಳೂರು : ವಿಚಿತ್ರ ಪ್ರಕರಣದ ಕುರಿತು ನಿನ್ನೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಕೇಸ್ ಏನೆಂದರೆ ಮಗುವಿಗೆ ಬಾಡಿ ಲೋಷನ್ ತರಲಿಲ್ಲವೆಂದು ಪತ್ನಿ ಪತಿಯ ವಿರುದ್ಧ ಹೂಡಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತನ್ನ ವಿರುದ್ಧ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ಮತ್ತು ಆ ಸಂಬಂಧ ನಗರದ 32ನೇ ಎಸಿಜೆಎಂ ಕೋರ್ಟ್‌ನಲ್ಲಿರುವ ನ್ಯಾಯಿಕ ಪ್ರಕ್ರಿಯೆ ರದ್ದು ಕೋರಿ 33 ವರ್ಷದ ವ್ಯಕ್ತಿಯೊಬ್ಬರು ದಾಖಲಿಸಿರುವ ಕ್ರಿಮಿನಲ್ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಅರ್ಜಿದಾರರ ಪರ ವಾದಿಸಿದ ವಕೀಲೆ ಕೆ.ರಾಮುಲಾ, ಅರ್ಜಿದಾರರು ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆಂಬ ಮಾಹಿತಿ ತಿಳಿದ ಕೂಡಲೇ ಪತ್ನಿ ಬೇಕೆಂದೇ ಈ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಆಕೆ ಆರೋಪಿಸಿರುವ ಅಂಶಗಳೆಲ್ಲಾ ಅಸ್ಪಷ್ಟ ಹಾಗೂ ವಿರೋಧಾಭಾಸದಿಂದ ಕೂಡಿವೆ ಎಂದರು. ಪ್ರಕರಣದ ಸಾಕ್ಷಿಗಳೂ ಸುಳ್ಳು ಹೇಳಿಕೆ ದಾಖಲಿಸಿದ್ದು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ 1860ರ ಕಲಂ…

Read More

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900 ಎಂಎಂ ಹಾಗೂ 700ಎಂಎಂ ವ್ಯಾಸದ ನೀರು ಸರಬರಾಜು ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಕಾವೇರಿ ನೀರು ಸರಬರಾಜು ಯೋಜನೆಯ ಮೊದಲನೇ ಮತ್ತು ಎರಡನೇ ಹಂತಗಳ ಜಲರೇಚಕ ಯಂತ್ರಗಾರಗಳನ್ನು ಫೆಬ್ರವರಿ 5 ಗುರುವಾರದಂದು ಬೆಳಗ್ಗೆ 6ರಿಂದ ಫೆಬ್ರವರಿ 6 ಶುಕ್ರವಾರ ಬೆಳಗ್ಗೆ 6 ಗಂಟೆವರೆಗೆ ರವರೆಗೆ ಒಟ್ಟು 24 ಗಂಟೆ ಸ್ಥಗಿತಗೊಳಿಸಲಾಗುತ್ತಿದೆ. ಯಾವ ಪ್ರದೇಶದಲ್ಲಿ? ಬೆಂಗಳೂರು ನಗರದ ಎ.ಜಿ.ಎಸ್ ಬಡಾವಣೆ, ಸಾರ್ವಭೌಮನಗರ ಸುಬ್ರಮಣ್ಯಪುರ, ಬಿ.ಹೆಚ್.ಸಿ.ಎಸ್ ಬಡಾವಣೆ,…

Read More

ವಿಜಯಪುರ : ವಿಜಯಪುರದ HMK ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಹನುಮಂತ ಕನವಡಿ ಎಂಬವರಿಗೆ ಸೇರಿದ ಕಾರು ಸರ್ವಿಸ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ. ಕಾರು ಸರ್ವಿಸ್ ಸೆಂಟರ್ ಗೆ ರಿಪೇರಿ ಮತ್ತು ಸರ್ವಿಸ್ಗಾಗಿ ಬಂದಿದ್ದು, ಸುಮಾರು 20 ಕಾರುಗಳು ಸುಟ್ಟು ಭಸ್ಮವಾಗಿದ್ದು 1 ಕೋಟಿಗೂ ಅಧಿಕ ನಷ್ಟವಾಗಿದೆ. ಅಗ್ನಿ ದುರಂತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಂಗಡಿಯಲ್ಲಿದ್ದ 35 ಲಕ್ಷ ಮೌಲ್ಯದ ಕಾರಿನ ಬಿಡಿ ಭಾಗಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಘಟನೆ ಕುರಿತಂತೆ ವಿಜಯಪುರದ ಗೋಲಗುಂಬಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಂಡೀಗಢ : ಲೈಂಗಿಕ ಕಿರುಕುಳ ಕೇವಲ ಸ್ಪರ್ಶ ದಿಂದ ಮಾತ್ರವೇ ಆಗಬೇಕಿಲ್ಲ ‘ಪ್ರೈಯಿಂಗ್ ಕಿಸ್, ಕಣ್ಣು ಹೊಡೆಯುವುದು ಕೂಡ ಲೈಂಗಿಕ ಕಿರುಕುಳವೆಂದೇ ಆಗುತ್ತದೆ. ಅದು ಮಹಿಳೆಯ ಘನತೆಗೆ ಧಕ್ಕೆ ಎಂದು ಚಂಡೀಗಢ ಕೋರ್ಟ್ ವ್ಯಕ್ತಿಯೋರ್ವನಿಗೆ 10,000 ರು. ದಂಡ ಹಾಕಿದೆ. 2021ರಲ್ಲಿ ಮನೆಯ ಮುಂದೆ ಕಸ ಗುಡಿಸುವ ವೇಳೆ ಅಶೋಕ್ ಕುಮಾರ್ ಎಂಬಾತ 500 ರು. ನೋಟು ಬಿಸಾಡಿ, ಫೈಯಿಂಗ್ ಕಿಸ್ ಕೊಟ್ಟಿದ್ದಾನೆ. ಇದನ್ನು ವಿರೋಧಿಸಿ ಮಹಿಳೆ ಅಶೋಕ್ ಮನೆಗೆ ತೆರಳಿದಾಗ, ಅಸಭ್ಯ ಚಿಹ್ನೆ ತೋರಿ ದುರ್ವತನೆ ಮೆರೆದಿದ್ದಾನೆ. ಪರಿಣಾಮ ಮಹಿಳೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಪ್ರಕರಣದ ವಿಚಾರಣೆ ವೇಳೆ ಅಶೋಕ್ ಕುಮಾರ್ ಪರ ವಕೀಲರು, ಅಶೋಕ್ ಐಸ್ ತರಲು ದುಡ್ಡ ತೆಗೆದಾಗ 500 ರು. ನೋಟು ಬಿದ್ದಿತ್ತು ಎಂದು ವಾದಿಸಿದ್ದಾರೆ. ಆದರೆ ಇದನ್ನು ಒಪ್ಪದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ನೋಟು ಬಿಸಾಡುವುದು, ಅಸಭ್ಯ ಚಿಹ್ನೆಗಳನ್ನು ತೋರುವುದು, ಫೈಯಿಂಗ್ ಕಿಸ್ ಕೊಡುವುದೂ ಸಹ ಕಿರುಕುಳವೆಂದೇ ಪರಿಗಣಿಸಲಾಗುತ್ತದೆ ಎಂದಿದೆ. ದೋಷಿಯಂದು 20,000 ರು. ಶೂರಿಟಿ…

Read More

ಉಡುಪಿ : ಯಾರಿಗೆ ಯಾವಾಗ ಅದೃಷ್ಟ ಖುಲಾಯಿಸುತ್ತೆ ಅಂತ ಹೇಳೋಕಾಗಲ್ಲ. ಇದೀಗ ದುಬೈನ ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾ‌ರ್ ಎಂಬ ಯುವಕ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ (20 ಮಿಲಿಯನ್ ದಿರಮ್) ರೂ. ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಮಸ್ಕತ್‌ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದಾರೆ. ಜ.20 ರಂದು ಬಿಗ್ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು. ಹೀಗಾಗಿ ಅದರಲ್ಲಿ ಅರ್ಧ ಹಣ ಅಂದರೆ ಸರಿ ಸುಮಾರು 24.5 ಕೋಟಿ ರು. ಹಣ ಅವರ ಗೆಳೆಯನಿಗೆ ಸಿಗಲಿದೆ. ಡ್ರಾ ಫಲಿತಾಂಶ ನೇರ ಪ್ರಸಾರವಾಗಿದ್ದು, ಕಾರ್ಯಕ್ರಮ ಆಯೋಜಕರೊಂದಿಗೆ ಶಾಂತನು ಸಂತಸ ವ್ಯಕ್ತಪಡಿಸಿದ್ದಾರೆ. 2021ರಿಂದಲೂ ಬಿಗ್ ಟಿಕೆಟ್ ರಾಫಲ್‌ಗಳಲ್ಲಿ ಭಾಗವಹಿಸುತ್ತಿದ್ದೆ. ಈ ಗೆಲುವು ತುಂಬಾ ಅನಿರೀಕ್ಷಿತವಾಗಿತ್ತು.…

Read More

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಒಟ್ಟು 2000 ಹುದ್ದೆಗಳ ಭರ್ತಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದಕ್ಕೆ ಆರ್ಥಿಕ ಇಲಾಖೆಯ ಸಲಹೆಗಳನ್ವಯ ನೇಮಕಾತಿಗೆ ಷರತ್ತು ಬದ್ದ ಅನುಮತಿ ನೀಡಿ ಇಲಾಖೆಯ ಉಪ ಕಾರ್ಯದರ್ಶಿ ಬುಧವಾರ ಆದೇಶ ಮಾಡಿದ್ದಾರೆ. ಈ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮ ಗಳನ್ವಯ ಆಗತ್ಯ ವಿದ್ಯಾರ್ಹತೆ, ನೇಮಕಾತಿ ವಿಧಾನದಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು. ಕಲ್ಯಾಣ ಕರ್ನಾಟಕ ವೃಂದಕ್ಕೆ…

Read More

ಬೆಂಗಳೂರು : ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಫೆ.9, ಸೋಮವಾರದಿಂದ ಹೊಸ ದರಗಳು ಜಾರಿಗೆ ಬರಲಿದ್ದು, ನಿರ್ವಹಣಾ ವೆಚ್ಚದ ಹೆಚ್ಚಳವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ದರ ಏರಿಕೆಗೆ ಮೆಟ್ರೋ ಪ್ರಯಾಣಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕಳೆದ ವರ್ಷ ಅಂದರೆ 2025ರ ಫೆಬ್ರವರಿ 9ರಂದು ಬಿಎಂಆರ್‌ಸಿಎಲ್ ದರಗಳಲ್ಲಿ ಗಣನೀಯ ಬದಲಾವಣೆ ಮಾಡಿತ್ತು. ಕಾಕತಾಳೀಯ ಎಂಬಂತೆ ಈ ವರ್ಷವೂ ಫೆಬ್ರವರಿ 9ರಿಂದಲೇ ಹೊಸ ದರಗಳು ಜಾರಿಯಾಗುತ್ತಿವೆ. ಈ ಬಾರಿ ಶೇಕಡಾ 5ರಷ್ಟು ಏರಿಕೆ ಮಾಡಲಾಗಿದ್ದು, ಕನಿಷ್ಠ ಮತ್ತು ಗರಿಷ್ಠ ದರಗಳಲ್ಲಿ 2 ರಿಂದ 5 ರೂಪಾಯಿಗಳವರೆಗೆ ವ್ಯತ್ಯಾಸವಾಗುವ ಸಾಧ್ಯತೆಯಿದೆ. ಬಿಎಂಆರ್‌ಸಿಎಲ್ ಇಂದೇ ಅಥವಾ ನಾಳೆ ಅಧಿಕೃತ ದರ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನಡೆದ ಬೆಂಗಳೂರು ಮೆಟ್ರೋ ರೈಲು ನಿಗಮದ ಉನ್ನತ ಮಟ್ಟದ ಬೋರ್ಡ್ ಸಭೆಯಲ್ಲಿ ದರ ಏರಿಕೆಯ ಕುರಿತು ಸುದೀರ್ಘ ಚರ್ಚೆ ನಡೆದಿತ್ತು. ವಿದ್ಯುತ್ ವೆಚ್ಚದ ಹೆಚ್ಚಳ,…

Read More

ಬೆಂಗಳೂರು : ವಿಧಾನಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ವಿಬಿ-ಜಿ ರಾಮ್ ಜಿ ಬಿಲ್ ವಿರೋಧಿಸಿ ನಿರ್ಣಯವನ್ನು ಸರ್ಕಾರ ಪಾಸ್ ಮಾಡಿಕೊಂಡಿದೆ. ಜಿ ರಾಮ ಜಿ ಕಾಯ್ದೆ ವಿರುದ್ಧ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದರು. ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ನಿರ್ಣಯವನ್ನು ಸ್ಪೀಕರ್ ಯುಟಿ ಖಾದರ್ ಮತಕ್ಕೆ ಹಾಕಿದ್ದರು. ನಿರ್ಣಯ ಅಂಗೀಕರವಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಪ್ರಕಟಿಸಿದರು. ಬಳಿಕ ಅನಿರ್ದಿಷ್ಟವಧಿಗೆ ವಿಧಾನಸಭೆ ಕಲಾಪ ಮುಂದೂಡಲಾಯಿತು. ಸಚಿವ ಪ್ರಿಯಾಂಕ್ ಖರ್ಗೆ ಮಾತಾಡಿ, ಅಡ್ವಾಣಿಯವರೇ ನರೇಗಾ ಯೋಜನೆಯನ್ನ ಹೊಗಳಿದ್ದರು. ಕಾರ್ಮಿಕರ ಬದುಕಿನ ಬಗ್ಗೆ ವರುಣ್ ಗಾಂಧಿ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾಗ, ನರೇಗಾ ಪಾರದರ್ಶಕವಾಗಿದೆ ಅಂತ ಕೇಂದ್ರ ಸರ್ಕಾರವೇ ಉತ್ತರ ಕೊಟ್ಟಿತ್ತು. ವಿಬಿ ಜಿ ರಾಮ್ ಜಿ ಕಾಯ್ದೆ ಒಕ್ಕೂಟ ವಿರೋಧಿ, ಸಂವಿಧಾನ ವಿರೋಧಿ. ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೊರೆಸುವ ಸಂಚಿನ ಕಾಯ್ದೆ ಅಂದರು. ನಿರ್ಣಯ ಅಂಗೀಕಾರಕ್ಕೆ ಮನವಿ ಮಾಡಿದರು. ಆದರೆ, ಪ್ರಿಯಾಂಕ್ ಖರ್ಗೆ ಸುಳ್ಳು ಹೇಳ್ತಿದ್ದಾರೆ ಅಂತ ಆರಗ ಜ್ಞಾನೇಂದ್ರ ಆಕ್ಷೇಪಿಸಿದರು. ಅಶೋಕ್ ಸಿಡಿದೆದ್ದು,…

Read More

ಬೆಂಗಳೂರು : ಸಿಟಿ ರವಿಯನ್ನು ಈ ದಿನದ ಮಟ್ಟಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಮಾನತುಗೊಳಿಸಿದ್ದಾರೆ. ಸಿಟಿ ರವಿ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ಒಂದು ಕ್ರಮ ಕೈಗೊಂಡಿದ್ದಾರೆ. ವಿಪಕ್ಷ ನಾಯಕರು, ಪರಿಷತ್ ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ರಾತ್ರಿ ಎಂಟು ಗಂಟೆಯೊಳಗೆ ಸಿಟಿ ರವಿ ಸದನಕ್ಕೆ ಕರೆತರುವಂತೆ ಹೇಳಿದ್ದೆ. ಬಿಜೆಪಿ ಸದಸ್ಯ ಸಿಟಿ ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ ಹಾಗಾಗಿ ಅಮಾನತುಗೊಳಿಸಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ. ಆ ಮೂಲಕ ಸಿಟಿ ರವಿ ಅಮಾನತುಕೊಂಡಿದ್ದಾರೆ.

Read More

ನವದೆಹಲಿ : ಕರ್ನಾಟಕವನ್ನು ರಕ್ಷಿಸಿ ಎಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಗದ್ಗದಿತರಾದ ಪ್ರಸಂಗ ನಡೆಯಿತು. ರಾಜ್ಯದ ನೀರಾವರಿಯ ಬಗ್ಗೆ ರಾಜ್ಯಸಭೆಯಲ್ಲಿ ಎಚ್ ಡಿ ದೇವೇಗೌಡರು ಮಾತನಾಡುವಾಗ ಗದ್ಗದಿತರಾದ ಘಟನೆ ನಡೆದಿದೆ. ನನ್ನ ರಾಜ್ಯಸಭಾ ಅವಧಿ ಒಂದು ತಿಂಗಳಲ್ಲಿ ಮುಗಿಯುತ್ತೆ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಅವರ ಹಿತ ಕಾಪಾಡಿರಿ. ಸದನದ ಎಲ್ಲ ಸದಸ್ಯರು ಕರ್ನಾಟಕವನ್ನು ರಕ್ಷಣೆ ಮಾಡಬೇಕು. ಕರ್ನಾಟಕ ರಕ್ಷಣೆ ಮಾಡಿ ಎಂದು ಕೈಮುಗಿದು ಬೇಡುತ್ತೇನೆ. ನಾನು ಜೀವನದ ಕೊನೆ ಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಚ್ಡಿ ದೇವೇಗೌಡರ ಮಾತಿಗೆ ಇಡೀ ಸದನ ಒಂದು ಕ್ಷಣ ಮೌನವಾಯಿತು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ ದಯಮಾಡಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿ. ರಾಜ್ಯದ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ, ನೆನೆಗುದಿಗೆ ಬಿದ್ದ ಯೋಜನೆಗಳಿಗೆ ಅನುಮೋದನೆ ನೀಡಿ ಎಂದು ಎಚ್ ಡಿ ದೇವೇಗೌಡರು ಕೈ ಮುಗಿದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

Read More