Author: kannadanewsnow05

ಚಿಕ್ಕಮಗಳೂರು: ನಿನ್ನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಗಣಪತಿ ಮೂರ್ತಿ ತರಲು ಹೋಗುವಾಗ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮೃತರ ಕಣ್ಣುಗಳನ್ನು ದಾನ ಮಾಡಲು ಅವರ ಪೋಷಕರು ನಿರ್ಧರಿಸಿದ್ದು, ಇದರಿಂದ ನಾಲ್ವರು ಅಂಧರಿಗೆ ಮೃತ ಯುವಕರು ಬೆಳಕಾಗಿದ್ದಾರೆ. ಹೌದು ಅಪಘಾತದಲ್ಲಿ ಲಿಂಗದಹಳ್ಳಿ ಗ್ರಾಮದ ಶ್ರೀಧರ (20 ವರ್ಷ) ಮತ್ತು ಧನುಷ್ (17 ವರ್ಷ) ಸ್ಥಳದಲ್ಲೇ ಮೃತಪಟ್ಟಿದ್ದರು. ಇತರ ಮೂವರು ಗಂಭೀರ ಗಾಯಗೊಂಡಿದ್ದರು. ಮೃತ ಯುವಕರ ಪೋಷಕರು ತಮ್ಮ ಮಕ್ಕಳ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದು, ತರೀಕೆರೆ ಆಸ್ಪತ್ರೆಯ ವೈದ್ಯರ ನೆರವಿನಿಂದ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಯುವಕರ ಪೋಷಕರಾದ ಕುಬೇಂದ್ರ- ಪದ್ಮಾ ಮತ್ತು ರಮೇಶ್-ಶೋಭಾ ಅವರು ತಮ್ಮ ಮಕ್ಕಳ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದರಿಂದ ನಾಲ್ವರು ಅಂಧರಿಗೆ ದೃಷ್ಟಿ ದೊರಕಿದಂತಾಗುತ್ತದೆ ಎಂದು ತರೀಕೆರೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ದೇವರಾಜು ತಿಳಿಸಿದ್ದಾರೆ. ಘಟನೆ ಹಿನ್ನೆಲೆ? ಟಾಟಾ ಏಸ್ ವಾಹನದಲ್ಲಿ…

Read More

ಬೆಂಗಳೂರು : ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ನಾಳೆ ಮುಕ್ತಾಯವಾಗಲಿದೆ. ಹಾಗಾಗಿ ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರೂ ಆರೋಪಿಗಳು ವಿಚಾರಣೆಗೆ ಹಾಜರಾಗಲಿದ್ದು, ಜಾಮೀನಿಗಾಗಿ ದರ್ಶನ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ಮತ್ತೊಂದೆಡೆ ಡಿ ಗ್ಯಾಂಗಿಗೆ ಜೈಲುವಾಸ ಮುಂದುವರೆಯಲಿದೆಯಾ ಎಂದು ಕಾದು ನೋಡಬೇಕು. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಆರೋಪಿಗಳ ವಿಚಾರಣೆ ನಡೆಯಲಿದೆ. ಅಲ್ಲದೆ ನಾಳೆ ಆರೋಪಿಗಳ ಪರ ವಕೀಲರಿಗೆ ಚಾರ್ಜ್ ಶೀಟ್ ಪ್ರತಿಯನ್ನು ಸಲ್ಲಿಸಲಾಗುತ್ತದೆ. ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ನ್ಯಾಯಾಲಯಕ್ಕೆ ಹೋಲಿಸಲು ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಈ ಒಂದು ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ಅತ್ಯಂತ ಪ್ರಭಾವ ವಾದಂತಹ ಸಾಕ್ಷಿಗಳನ್ನು ಪೊಲೀಸರು…

Read More

ಮಂಡ್ಯ : ರಾಜ್ಯ ಅಷ್ಟೆ ಅಲ್ಲದೆ ಇಡೀ ದೇಶದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಂಡ್ಯ ಜಿಲ್ಲೆಯಲ್ಲಿ ನಡೆದಂತಹ ಹೆಣ್ಣು ಭ್ರೂಣಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರಿಂದ ಮತ್ತೆ ಮೂವರು ಆರೋಪಿಗಳ ಬಂಧನವಾಗಿದೆ. ಬಂಧಿತರನ್ನು ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಎಂದು ತಿಳಿದುಬಂದಿದ್ದೆ. ಸದ್ಯ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಸ್ಕ್ಯಾನಿಂಗ್ ಯಂತ್ರ, ಒಂದು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಇದುವರೆಗೂ 12 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನೂ 6- 7 ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದ ಮತ್ತೊಂದು ಸ್ಪೋಟಕವಾದಂತಹ ಅಂಶ ಬಹಿರಂಗವಾಗಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸುವಾಗ ಆತನ ಎಡಗಣ್ಣಿಗೆ ಗಂಭೀರವಾದ ಗಾಯವಾಗಿತ್ತು. ಇದೀಗ ಎಡಗಣ್ಣಿಗೆ ಹೇಗೆ ಗಾಯ ಆಗಿತ್ತು ಎಂಬುದರ ಕುರಿತು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ ಅಂದು ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾ ಸ್ವಾಮಿ ಎಡೆಗಣ್ಣಿಗೆ ಏಟು ಬಿದ್ದಿದ್ದು ಹೇಗೆ? ಅಂದು ದರ್ಶನ್ ರೇಣುಕಾಸ್ವಾಮಿಯ ಮೇಲೆ ಹಲ್ಲೆ ನಡೆಸುವಾಗ ಸಿನೆಮಾ ಸ್ಟೈಲ್ ನಲ್ಲಿ ರೇಣುಕಾ ಸ್ವಾಮಿ ಕಣ್ಣಿಗೆ ಪಂಚ್ ಕೊಟ್ಟಿದ್ದಾರೆ. ತಮ್ಮ ಪಟಾಲಂ ಮಾತು ಕೇಳಿ ಕಣ್ಣಿಗೆ ಪಂಚ್ ಕೊಟ್ಟಿದ್ದ ಆರೋಪಿ ದರ್ಶನ್. ತಮ್ಮ ಸುತ್ತಲೂ ಇದ್ದ ಕೆಲವು ಆರೋಪಿಗಳಿಬ್ಬರ ಮಾತು ಕೇಳಿ ದರ್ಶನ್ ಎಡಗಣ್ಣಿಗೆ ಪಂಚ್ ಕೊಟ್ಟಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲೋ ಉಲ್ಲೇಖವಾಗಿದೆ. ಹೊಡಿರಿ ಬಾಸ್ ಹೊಡಿರಿ ಅತ್ತಿಗೆನ ಕೆಟ್ಟ ದೃಷ್ಟಿಯಲ್ಲಿ ನೋಡಿದ ಈ ಕಣ್ಣು ಇರಬಾರದು ಎಂದು ಇಬ್ಬರು ರೇಣುಕಾ ಸ್ವಾಮಿಯ…

Read More

ಬೆಂಗಳೂರು : ರಾಜ್ಯದಲ್ಲಿ ಇದೀಗ ಉತ್ತರ ಕರ್ನಾಟಕ ಭಾಗ ಸೇರಿದಂತೆ ದಕ್ಷಿಣ ಒಳನಾಡು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10 ರವರೆಗೂ ಭಾರೀ ಮಳೆ ಮುನ್ಸೂಚನೆ ಇದೆ. ಇನ್ನು ಶಿವಮೊಗ್ಗ, ಹಾಸನ ಚಿಕ್ಕಮಗಳೂರಿಗೆ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದ್ದು, ಭಾರೀ ಗಾಳಿ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಪ್ಟೆಂಬರ್ 8 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ…

Read More

ಶಿವಮೊಗ್ಗ : ಗಣೇಶ ಹಬ್ಬದಲ್ಲಿ ಡೊಳ್ಳು ಬಾರಿಸುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನರಿನ ಅರಬಿಳಚಿ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾನ್ಸ್​ಟೇಬಲ್ ಸೇರಿ ಕೆಲವರು ಗಾಯಗೊಂಡಿದ್ದಾರೆ. ಹೌದು ಅರಬಿಳಚಿ ಕ್ಯಾಂಪ್ ಗ್ರಾಮದಲ್ಲಿ ಶನಿವಾರ ಸಂಜೆ ಗಣೇಶ ಹಬ್ಬದ ವೇಳೆ ಡೊಳ್ಳು ಬಾರಿಸುವ ವಿಚಾರವಾಗಿ ಎರಡು ಸಂಘಗಳ ಮಧ್ಯೆ ಗಲಾಟೆ ನಡೆದಿದೆ. ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಘರ್ಷಣೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್​ಟೇಬಲ್ ಸೇರಿ ಕೆಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಗಣಪತಿ ಸಂಘಗಳು ಒಂದೇ ಡೊಳ್ಳಿನ ತಂಡದವರಿಗೆ ಹೇಳಿದ್ದರು. ಆದರೆ ಎರಡೂ ಸಂಘಗಳ ಮೆರವಣಿಗೆ ಒಂದೇ ವೇಳೆ ಇದ್ದಿದ್ದರಿಂದ ಡೊಳ್ಳಿನ ತಂಡಕ್ಕೆ ಇನ್ನೊಂದು ಗಣಪತಿ ಸಂಘದ ಮೆರವಣಿಗೆಗೆ ಹೋಗಲು ತಡವಾಗಿದೆ. ಇದರಿಂದ ಗಣಪತಿ ಸಂಘದವರು ಆಗಮಿಸಿದಾಗ ಗಲಾಟೆಯಾಗಿದೆ.ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ತುಕಡಿ ನಿಯೋಜಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ, ಭದ್ರಾವತಿ ಡಿವೈಎಸ್ಪಿ ಹಾಗೂ…

Read More

ವಿಜಯಪುರ : ರಾಜ್ಯಾದ್ಯಂತ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲೆಡೆ ಗಣೇಶ ಮೂರ್ತಿಯನ್ನು ಮೆರವಣಿಗೆ ಡಿಜೆ ಸಾಂಗ್, ತಮಟೆ ಮೂಲಕ ವಿಜೃಂಭಣೆಯಿಂದ ಕೂರಿಸಲಾಗುತ್ತಿದೆ. ಆದರೆ ವಿಜಯಪುರ ಪಾಲಿಗೆ ಕಟ್ಟಡದಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ಸ್ಥಳಕ್ಕೆ ಜಲ ನಗರ ಪೊಲೀಸರು ಭೇಟಿ ನೀದ್ದಿದ್ದಾರೆ. ಹೌದು ವಿಜಯಪುರದ ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ್ ಜಾದವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ್ ಗೋಸ್ವಾಮಿ, ಮಾಜಿ ಸದಸ್ಯ ಸೇರಿದಂತೆ ಇತರರು ಗಣೇಶ ಪ್ರತಿಷ್ಠಾಪನೆ ಮಾಡಲಾಯಿತು.ರಾತ್ರೋರಾತ್ರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಪ್ರತಿ ವರ್ಷವೂ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಆಚರಣೆ ಮಾಡಲಾಗುತ್ತಿತ್ತು. ಪಾಲಿಕೆಯ ಎಲ್ಲ ಸಿಬ್ಬಂದಿಯ ಒಂದು ದಿನದ ವೇತನ ಹಬ್ಬಕ್ಕೆ ನೀಡಲಾಗುತ್ತಿತ್ತು. ಸತ್ಯನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಪಾಲಿಕೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರಲಿಲ್ಲ. ಹಾಗಾಗಿ ರಾತ್ರೋರಾತ್ರಿ ಪಾಲಿಕೆಯ ಸದಸ್ಯರು ಸೇರಿಕೊಂಡು ಗಣೇಶ…

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಮಹಿಳೆಯರಿಗೆ ಮತ್ತು ಯುವತಿಯರಿಗೆ ಸೇಫ್ ಆಗಿದೆಯಾ? ಎಂಬ ಅನುಮಾನ ಮೂಡುತ್ತಿದೆ. ಹೌದು ಏಕೆಂದರೆ ಇತ್ತೀಚಿಗೆ ಬೆಂಗಳೂರಿನಲ್ಲಿ ಅತ್ಯಾಚಾರ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಹಾಲು ತರಲು ತೆರಳಿದ್ದ ಮಹಿಳೆಯನ್ನು ಎಳೆದೋಯ್ಯಲು ಯತ್ನಿಸಿದ ವ್ಯಕ್ತಿಯನ್ನು ಹಿಡಿದುಕೊಂಡು ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ನಗರದ ಬನ್ನೇರುಘಟ್ಟದಲ್ಲಿ ನಡೆದಿದೆ. ಹೌದು ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬನ್ನೇರುಘಟ್ಟ ರಾಷ್ಟ್ರೀಯ ಕಲ್ಕೆರೆ ಕಾಲೋನಿ ಬಳಿ ರಾತ್ರಿ ಘಟನೆ ನಡೆದಿದೆ. ಮಹಿಳೆ ಹಾಲು ತೆಗೆದುಕೊಂಡು ಬರಲು ತಳ್ಳಿದಾಗ ನಶೆಯಲ್ಲಿದ್ದ ವ್ಯಕ್ತಿ ಈ ವೇಳೆ ಮಹಿಳೆಯ ಬಾಯಿಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಆತಂಕಗೊಂಡು ಸಹಾಯಕ್ಕಾಗಿ ಮಹಿಳೆ ಕಿರುಚಿಕೊಂಡಿದ್ದಾಳೆ. ಮಹಿಳೆಯ ನೆರವಿಗೆ ಬಂದ ಗ್ರಾಮದ ಯುವಕರ ಗುಂಪು, ಕುಡಿದ ನಶೆಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಹಿಡಿದು ಹಲ್ಲೆ ಮಾಡಿದ್ದಾರೆ.ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ.ಹಲ್ಲೆ ಮಾಡಿದ ನಂತರ ಆಟೋದಲ್ಲಿ ಕರೆದೊಯ್ಯುವಾಗ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ವ್ಯಕ್ತಿಯನ್ನು ಯುವಕರು…

Read More

ರಾಮನಗರ : ಸದ್ಯ ರಾಜ್ಯದಲ್ಲಿ ಕೆಲವು ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಅದರಲ್ಲೂ ಚನ್ನಪಟ್ಟಣ ಉಪಚುನಾವಣೆ ತೀವ್ರ ಪೈಪೋಟಿ ನೀಡಿದೆ. ಈಗಾಗಲೇ ಮೈತ್ರಿ ಪಕ್ಷಗಳು ಸಿದ್ಧತೆ ಮಾಡಿಕೊಂಡಿದ್ದು, ಇನ್ನೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕೆ ಇಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಈ ಮಧ್ಯ ಅಭ್ಯರ್ಥಿ ಆಯ್ಕೆಯ ವಿಚಾರ ಹೈಕಮಾಂಡಿಗೆ ಬಿಟ್ಟಿದ್ದು ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇಂದು ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದ ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಯುವಕರಿಗೆ ಗೌರಿ- ಗಣೇಶ ಮೂರ್ತಿಯನ್ನು ವಿತರಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ, ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಲುಪಿಸುವ ಕೆಲಸವಾಗುತ್ತಿದ್ದು, ಟಿಕೆಟ್ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು, ಈಗಾಗಲೇ…

Read More

ನವದೆಹಲಿ : ಭಾರತದ ಸರ್ವೋಚ್ಚ ನ್ಯಾಯಾಲಯವು (Supreme Court) ಶಿಕ್ಷಣದಲ್ಲಿ ಪದವಿ (B.Ed.) ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮಾನ್ಯವಾದ ಅರ್ಹತೆ ಅಲ್ಲ ಎಂದು ಪುನರುಚ್ಚರಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ ಅತ್ಯಗತ್ಯ ಅರ್ಹತೆ ಎಂದು ತಿಳಿಸಿದೆ. ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ದೇವೇಶ್ ಶರ್ಮಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ (2023 INSC 704) ಪ್ರಕರಣದಲ್ಲಿ ಹಿಂದಿನ ತೀರ್ಪನ್ನು ಉಳಿಸಿಕೊಂಡು ತೀರ್ಪು ನೀಡಿದೆ. ಭಾರತೀಯ ಸಂವಿಧಾನದ 21 ಎ ಮತ್ತು ಶಿಕ್ಷಣ ಹಕ್ಕು ಕಾಯಿದೆ, 2009 ರ ಅಡಿಯಲ್ಲಿ ಖಾತ್ರಿಪಡಿಸಲಾದ ಭಾರತದಲ್ಲಿ ಪ್ರಾಥಮಿಕ ಶಿಕ್ಷಣದ ಮೂಲಭೂತ ಹಕ್ಕು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ‘ಉಚಿತ’ ಮತ್ತು ‘ಕಡ್ಡಾಯ’ ಶಿಕ್ಷಣವನ್ನು ಒಳಗೊಂಡಿರುತ್ತದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ. ಮಕ್ಕಳಿಗೆ ನೀಡಬೇಕಾದ ‘ಗುಣಮಟ್ಟದ’ ಶಿಕ್ಷಣವನ್ನು ಸಹ ಒಳಗೊಂಡಿದೆ. ಆದ್ದರಿಂದ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲು ಮೂಲಭೂತ ಶಿಕ್ಷಣದ ಮಿತಿಯನ್ನು ಹಾದುಹೋಗದ ಕಾರಣ ಬಿ.ಇಡಿ…

Read More