Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಮನೆಯ ಬಳಿ ನಿಂತಿದ್ದ ಬಾಲಕನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಮನೆಯವರ ಶಬ್ದಕ್ಕೆ ಹೆದರಿ ಚಿರತೆ ಬಾಲಕನನ್ನು ಬಿಟ್ಟು ಪರಾರಿ ಆಗಿರುವ ಘಟನೆ ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮನೆಯ ಎದುರು ಬಾಲಕ ಸಮರ್ಥ್ (10) ನಿಂತಿದ್ದಾಗ ಏಕಾಏಕಿ ಚಿರತೆ ದಾಳಿ ಮಾಡಿದೆ. ಈ ವೇಳೆ ಬಾಲಕನ ಚೀರಾಟವನ್ನು ಕೇಳಿ ಮನೆಯವರು ಮನೆ ಹೊರಗಡೆ ಲೈಟ್ ಹಾಕಿದ್ದಾರೆ. ಮನೆಯವರ ಶಬ್ದಕ್ಕೆ ಹೆದರಿಕೊಂಡು ಚಿರತೆ ಬಾಲಕನನ್ನು ಬಿಟ್ಟು ಹೋಗಿದೆ. ಬಾಲಕನ ತಲೆ, ಕುತ್ತಿಗೆ ಹಾಗೂ ಕೈಕಾಲಿಗೆ ತೀವ್ರ ಗಾಯಗಳಾಗಿದ್ದು ಬೆಂಗಳೂರಿನ ಸೆಂಟ್ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬ ಪಿಡಿಒ ಅಧಿಕಾರಿ ಬಳಿ ಇದ್ದಂತಹ ಫೈಲ್ ಅನ್ನು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಹನುಮಂತಪುರ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಪಿಡಿಒ ಗೀತಾಮಣಿ ಬಳಿ ಇದ್ದ ಕಡತ ಎಗರಿಸಿದ ಕಿರಾತಕ, ಅಲ್ಲಿಂದ ಪರಾರಿಯಾಗಿದ್ದಾನೇ. ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಗೀತಾಮಣಿ ಅವರು ಹೆದ್ದಾರಿ ಪಕ್ಕ ನಿಂದು ಮೊಬೈಲ್ನಲ್ಲಿ ಮಾತನಾಡುವಾಗ ಈ ಒಂದು ಘಟನೆ ನಡೆದಿದೆ. ಇನ್ನು ಕಡತ ಕಸಿದುಕೊಂಡು ಪರಾರಿಯಾಗಿರುವ ವ್ಯಕ್ತಿಯನ್ನು ಗುಂಡೇನಹಳ್ಳಿ ಅರುಣ್ ಕುಮಾರ್ ಎಂದು ಹೇಳಲಾಗುತ್ತಿದ್ದು, ಆತನ ವಿರುದ್ಧ ಕಡತ ಕದ್ದಿರುವ ಆರೋಪ ಕೇಳಿ ಬಂದಿದೆ. ಕೋರ್ಟ್ ಅಲ್ಲಿ ಇದ್ದ ಅರುಣ್ ಕುಮಾರ್ ವಿರುದ್ಧ ಭೂಮಿವಾದ ಕೇಸ್ ಇದೆ. ನಾಳೆ ಕೋರ್ಟ್ ನಲ್ಲಿ ಭೂವಿವಾದ ಪ್ರಕರಣ ವಿತರಣೆ ನಡೆಯಲಿದೆ. ಹಾಗಾಗಿ ಸಂಬಂಧ ಪಟ್ಟಂತಹ ಮೂಲ ಕಡತ ಎಗರಿಸಿದ್ದಾನೆ ಎಂದು ಗೀತಾಮಣಿ ಗಂಭೀರವಾದ ಆರೋಪ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರೆಯುವ ಮುನ್ಸೂಚನೆ ಇದೆ. ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿಗೆ ಸೂಚಿಸಿದ್ದೇನೆ. ನಾವು ಈಗಾಗಲೇ ಬೆಂಗಳೂರಿನಲ್ಲಿ ಸುಮಾರು 60 ಎನ್ಡಿಆರ್ಎಫ್/ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಅಲ್ಲದೆ ಯಾವುದೇ ಅಗತ್ಯಕ್ಕಾಗಿ ಸ್ಟ್ಯಾಂಡ್ನಲ್ಲಿರಲು ಇನ್ನೂ 40 ಜನರನ್ನು ಮರು ನಿಯೋಜಿಸಿದ್ದೇವೆ.ತಕ್ಷಣದ ಪ್ರತಿಕ್ರಿಯೆಗಾಗಿ ನಾವು ಅಗ್ನಿಶಾಮಕ ಮತ್ತು ತುರ್ತು ಸೇವೆಗಳನ್ನು ನಿಲ್ಲಿಸಿದ್ದೇವೆ. ಅಲ್ಲದೆ ಜಿಲ್ಲಾಡಳಿತ ಕೂಡ ಎಲ್ಲ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ ಎಂದು ತಿಳಿಸಿದ್ದಾರೆ. https://twitter.com/krishnabgowda/status/1846159097621524517?t=5wrq14xWGHa35MsPPSTkGg&s=19
ಹಾವೇರಿ : ವೇಗವಾಗಿ ಬಂದಂತಹ ಕಾರೊಂದು ರಸ್ತೆ ಪಕ್ಕದಲ್ಲಿದ್ದ ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ನಗರದ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿ 48ರ ತೋಟದ ಯಲ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಆಟೋ ಹುಬ್ಬಳ್ಳಿಯಿಂದ ರಾಣೆಬೆನ್ನೂರು ಕಡೆಗೆ ತೆರಳುತ್ತಿತ್ತು. ಕಾರು ದಾವಣಗೆರೆ ಕಡೆಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೃತರ ಹೆಸರು ಪತ್ತೆಯಾಗಿಲ್ಲ. ಮೃತರು ದಾವಣಗೆರೆ ಮೂಲದವರು ಎನ್ನಲಾಗಿದೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರೋಡ್ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ರಭಸಕ್ಕೆ ಆಟೋದಲ್ಲಿ ಸಾಗಿಸುತ್ತಿದ್ದ ಹಣ್ಣುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.ಸ್ಥಳಕ್ಕೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಕಲಬುರ್ಗಿ : ಕೊಲೆ ಪ್ರಕರಣದಲ್ಲಿ ಈ ಹಿಂದೆ ನಟ ದರ್ಶನ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಇದೀಗ ನಿನ್ನೆ ಕಲ್ಬುರ್ಗಿ ಜೈಲಿನಲ್ಲೂ ಕೂಡ ರಾಜ್ಯಾತಿಥ್ಯ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ 7 ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಜೈಲಿನ ನಿಯಮ ಮೀರಿ ಬಿಡಿ, ಸಿಗರೇಟ್, ಗುಟ್ಕಾ ಸಂಗ್ರಹಿಸಲಾಗಿತ್ತು. ಅಲ್ಲದೆ ಮೊಬೈಲ್ ಬಳಕೆ ಆರೋಪದ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಕಲಬುರ್ಗಿಯ ಫಾರತಾಬಾದ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿಸಲಾಗಿದೆ. ಕೈದಿಗಳಾದ ಸುನಿಲ್, ನಾಗೇಶ್, ವಿಶಾಲ್, ಜುಲ್ಬೀಕರ್, ಜಮೀರ್, ಸಾಗರ್ ಸೇರಿದಂತೆ ಏಳು ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿನ್ನೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿತ್ತು. ಈ ವೇಳೆ ಜೈಲಿನಲ್ಲಿ ಎರಡು ಮೊಬೈಲ್, ಗುಟ್ಕಾ ಹಾಗೂ ಎರಡು ರಾಡ್ಗಳು ಸಿಕ್ಕಿದ್ದವು ಈ ವೇಳೆ ಅವೆಲ್ಲ…
ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಮಧ್ಯ ಇಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಎನ್ನುವವರು ಲೋಕಾಯುಕ್ತ ಪೊಲೀಸರ ವಿರುದ್ಧವೇ ಗವರ್ನರ್ ಗೆ ಮತ್ತೊಂದು ದೂರು ನೀಡಿದ್ದಾರೆ. ಇದೀಗ ಶಾಸಕ ಜನಾರ್ಧನ ರೆಡ್ಡಿ ಅವರು ಮುಡಾ ಹಗರಣದ ದಾಖಲೆಗಳನ್ನು ತೆಗೆಸಿದ್ದೇ ಡಿಸಿಎಂ ಡಿಕೆ ಶಿವಕುಮಾರ್ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ. ವರಿಷ್ಠರು ಸಿದ್ದರಾಮಯ್ಯ ಅವರನ್ನು ಇಳಿಸುವ ಪ್ರಯತ್ನ ಮಾಡುವುದಿಲ್ಲ.ಅವರನ್ನು ಇಳಿಸಿದರೆ ಸರ್ಕಾರ ಬೀಳುತ್ತೆ ಅಂತ ಭಯ ಇದೆ ಎಂದು ಬಳ್ಳಾರಿಯಲಿ ಸಿಎಂ ಪರ ಶಾಸಕ ಜನಾರ್ಧನ್ ರೆಡ್ಡಿ ಬ್ಯಾಟಿಂಗ್ ಮಾಡಿದರು. ಮುಂದುವರೆದು ಬಿಜೆಪಿ ಕೂಡ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಯತ್ನ ಮಾಡಿಲ್ಲ. ಕಾಂಗ್ರೆಸಿಗರೇ ಸಿದ್ದರಾಮಯ್ಯರನ್ನು ಇಳಿಸಲು ಯತ್ನಿಸುತ್ತಿದ್ದಾರೆ. ಮುಡಾ ಹಗರಣ ದಾಖಲೆ ಡಿಕೆ ಅವರೇ ತೆಗೆಸಿದ್ದಾರೆ.ಅಧಿಕಾರದಲ್ಲಿ ಇದ್ದವರೇ ಆ ರೀತಿ ದಾಖಲೆ ತೆಗೆಯಲು ಸಾಧ್ಯ ಈ ವಿಚಾರ…
ಚಿತ್ರದುರ್ಗ : ತನ್ನ ಪತ್ನಿ ಸಾವಿನಿಂದ ನೊಂದ ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ಅನಾರೋಗ್ಯದಿಂದ ಪತ್ನಿ ಗೌರಮ್ಮ (60) ಮೃತಪಟ್ಟಿದ್ದರು. ಈ ವೇಳೆ ಪತ್ನಿ ಸಾವಿನಿಂದ ನೊಂದು ಪತಿ ಶಿವಣ್ಣ (70) ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ತುಮಕೂರು ಜಿಲ್ಲೆಯ ತಿಪಟೂರು ಮೂಲದ ವೃದ್ಧ ದಂಪತಿ ಎಂದು ತಿಳಿದುಬಂದಿದೆ. ವೃದ್ಧ ದಂಪತಿಗಳಿಗೆ ಯಾರು ಕೂಡ ಸಂಬಂಧಿಕರು ಇಲ್ಲ ಎನ್ನಲಾಗುತ್ತಿದೆ. ಕಳೆದ 20 ವರ್ಷಗಳಿಂದ ಮೊಳಕಾಲ್ಮೂರು ಪಟ್ಟಣದಲ್ಲಿ ದಂಪತಿಗಳು ನೆಲೆಸಿದ್ದರು.ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರೇ ವಿರುದ್ಧ ದಂಪತಿಗಳ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.
ಚಿಕ್ಕಬಳ್ಳಾಪುರ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿನ್ನೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿತು. ಬಳಿಕ ಇಂದು ನಟ ದರ್ಶನ್ ಹೈಕೋರ್ಟಿಗೆ ಬೇಲ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರ ಮಧ್ಯ ನಟ ದರ್ಶನ್ ಅವರ ಕುರಿತು ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪದ ಪಾಶ ಉಚ್ಚಿದರೆ ಎಲ್ಲವು ಸರಿಯಾಗುತ್ತೆ. ಈಗ ನಾವು ಪಾಯಸ ಮಾಡುವಾಗ ಬೆಲ್ಲ ಹಾಕಿ ಪಾಯಸ ಮಾಡುತ್ತೇವೆ. ಅದಕ್ಕೆ ಬೆಲ್ಲದಲ್ಲೇ ಕೊಳೆ ಇರುತ್ತದೆ. ಪಾಯಸ ಉಕ್ಕಿದಾಗ ಮೇಲೆ ಕೊಳೆ ಬರುತ್ತೆ. ಕೊಳೆ ತೆಗೆದಾಗ ಪಾಯಸ ಸಿಹಿಯಾಗುತ್ತದೆ. ಹಾಗೆ ಮನುಷ್ಯನ ಪಾಪ ಹೋಗಬೇಕು. ತಾನು ಮಾಡಿದ ಕರ್ಮ ಬಲವಂತವಾದರೆ ಯಾರೇನು ಮಾಡುವರು. ಮನುಷ್ಯ ಪುಣ್ಯ ಮಾಡೋಕೆ ಹೆದರಬಾರದು, ಪಾಪ ಮಾಡೋಕೆ ಹೆದರಬೇಕು. ಆದರೆ ನಾವು ಪಾಪ ಮಾಡೋಕೆ ಹೆದರುವುದಿಲ್ಲ ಪುಣ್ಯ ಮಾಡೋಕೆ ಹೆದರುತ್ತಿದ್ದೇವೆ ಎಂದು ಅವರು ತಿಳಿಸಿದರು.
ಬೆಂಗಳೂರು : ನಟ ಧ್ರುವ ಸರ್ಜಾ ಅವರು ನಟಿಸಿರುವ ಮಾರ್ಟಿನ್ ಸಿನಿಮಾದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಕೆಟ್ಟದಾಗಿ ರಿವ್ಯೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅಭಿಮಾನಿಗಳು ದೂರ ನೀಡಿದ್ದರು. ಹಾಗಾಗಿ ಸುಧಾಕರನನ್ನು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಳಿಕ ಇನ್ನೊಮ್ಮೆ ಈ ರೀತಿ ಪುನರಾವರ್ತಿತ ಆಗ್ಬಾರ್ದು ಎಂದು ವಾರ್ನಿಂಗ್ ಕೊಟ್ಟು ಕಳುಸಿದ್ದಾರೆ ಎಂದು ತಿಳಿದುಬಂದಿದೆ. ನಟ ಧ್ರುವ ಸರ್ಜಾ ಅವರ ಮಾರ್ಟಿನ್ ಸಿನಿಮಾದ ಕುರಿತಂತೆ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಸಾಮಾಜಿಕ ಜಾಲತಾಣದಲ್ಲಿ ನಾನು ಜೀವನದಲ್ಲಿ ನೋಡಿದ ಅತ್ಯಂತ ಕೆಟ್ಟ ಸಿನಿಮಾ. ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಎಲ್ಲರೂ ಕೆಜಿಎಫ್ ಸಿನಿಮಾ ಕಾಪಿ ಮಾಡುತ್ತಿದ್ದಾರೆ. ಕೆಜಿಎಫ್ ಸಿನಿಮಾ ಮಾದರಿಯಲ್ಲಿಯೇ ಕಳಪೆಯಾಗಿ ಉಪೇಂದ್ರ ಅವರ ‘ಕಬ್ಜ’ ಸಿನಿಮಾ ಮಾಡಲಾಗಿದೆ. ಕಬ್ಜ ಸಿನಿಮಾದ ಮುಂದುವರಿದ ಕಳಪೆ ಭಾಗ ಎನ್ನುವಂ ರೀತಿಯಲ್ಲಿ ಮಾರ್ಟಿನ್ ಸಿನಿಮಾ ಮಾಡಲಾಗಿದೆ ಎಂದು ಹೇಳಿಕೆ ನೀಡಿರುವ ವಿಡಿಯೋ ಅಪ್ಲೋಡ್ ಮಾಡಿದ್ದರು. ಈ ಕುರಿತು ನಟ ಧ್ರುವ ಸರ್ಜಾ…
BREAKING : ನನ್ನ ಕೇಸ್ ಬಗ್ಗೆ ಬಹಿರಂಗಪಡಿಸಿದರೆ ‘ರಾಜಕೀಯ ನಿವೃತ್ತಿ’ ಘೋಷಿಸುತ್ತೇನೆ : ಸರ್ಕಾರಕ್ಕೆ ಸಿಟಿ ರವಿ ಸವಾಲು
ವಿಜಯಪುರ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಪಡೆದ ವಿಚಾರವಾಗಿ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು, ಇದರಲ್ಲಿ ನನ್ನ ಕೇಸ್ ಕೂಡ ಪಡೆದಿದ್ದಾರೆ ಅಂತ ಹೇಳಿದ್ದಾರೆ. ಹಾಗಾದರೆ ನನ್ನ ಮೇಲೆ ಯಾವ ಕೇಸ್ ಇತ್ತು? ಯಾರು ಅರ್ಜಿ ಹಾಕಿದ್ದರು ಎಂಬುದನ್ನು ಬಹಿರಂಗಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸರ್ಕಾರಕ್ಕೆ ಸವಾಲು ಹಾಕಿದರು. ವಿಜಯಪುರದಲ್ಲಿ ಎಂಎಲ್ಸಿ ಸಿಟಿ ರವಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ನವರು ಸುಳ್ಳು ಬುರುಕರು ಸುಳ್ಳು ಹೇಳಿದ್ದಾರೆ.ನನ್ನ ಮೇಲೆ ಯಾವುದೇ ಒಂದು ಮೊಕದ್ದಮೆ ಇರಲಿಲ್ಲ. ನಾನು ಯಾವುದೇ ಅರ್ಜಿ ಈ ಸರ್ಕಾರಕ್ಕೆ ಕೊಟ್ಟಿಲ್ಲ. ನನ್ನ ಯಾವ ಪ್ರಕರಣ ಇಂಪಾರ್ಟೆಂಟ್ ಇಲ್ಲ. ಜನರ ದಿಕ್ಕು ತಪ್ಪಿಸಲು ನನ್ನ ಕೇಸ್ ಬಗ್ಗೆ ಹೇಳುತ್ತಿದ್ದಾರೆ ಎಂದು ತಿಳಿಸಿದರು. ಸಿಟಿ ರವಿ ಕೇಸ್ ಸಹ ಹಿಂಪಡೆದಿದ್ದೇವೆ ಅಂತ ಹೇಳಿದ್ದಾರೆ. ನಮಗೆ ಇವರ ಕೃಪೆ ಬೇಡ.ನನ್ನ ವಿರುದ್ಧದ ಕೆ ಎಸ್ ಹಿಂಪಡೆದ ಆದೇಶದ ಪ್ರತಿ ಕೊಡಿ ನನ್ನ ಮೇಲೆ…














