Subscribe to Updates
Get the latest creative news from FooBar about art, design and business.
Author: kannadanewsnow05
BIG NEWS : ‘ETF’ & ‘LTF’ ಮಾದರಿಯಲ್ಲಿ ಕಾಳಿಂಗ ಸರ್ಪ ಸೆರೆಗೆ ಟಾಸ್ಕ್ ಫೋರ್ಸ್ ರಚನೆ : ಅರಣ್ಯ ಸಚಿವ ಈಶ್ವರ್ ಖಂಡ್ರೆ
ಚಿಕ್ಕಮಗಳೂರು : ಕಾಳಿಂಗ ಸರ್ಪಗಳ ಸೆರೆಗೆ ಕಾರ್ಯಪಡೆಯ ರಚಿಸಲು ತೀರ್ಮಾನಿಸಲಾಗಿದೆ. ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಮನೆಗಳು, ತೋಟಗಳಲ್ಲಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿವೆ. ಕಾಳಿಂಗ ಸರ್ಪಗಳು ಹೆಚ್ಚಿರುವ ಪ್ರದೇಶದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕಾಳಿಂಗ ಸರ್ಪಗಳ ಸೆರೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ಪ್ಲಾನ್ ಮಾಡಲಾಗಿದೆ. ಕಾಳಿಂಗ ಸರ್ಪಗಳ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಟ್ರೇನಿಂಗ್ ನೀಡಲಾಗಿದ್ದು, ಅರಣ್ಯ ಇಲಾಖೆಯ ವಿಭಾಗದ ಐವರು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಸಂಘ ಸಂಸ್ಥೆಗಳು ಖಾಸಗಿ ವ್ಯಕ್ತಿಗಳಿಂದ ಸೆರೆ ಹಿಡಿಯದಂತೆ ಸೂಚನೆ ನೀಡಲಾಗಿದೆ. ಚಿಕ್ಕಮಂಗಳೂರು, ಉತ್ತರಕನ್ನಡ ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸುತ್ತಿವೆ. ಇಟಿಎಫ್ ಮತ್ತು ಎಲ್ ಟಿ ಎಫ್ ಮಾದರಿಯಲ್ಲಿ ಕಾಳಿಂಗ ಸರ್ಪಗಳ ಸರಿಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.…
ಬೆಂಗಳೂರು : ರಾಜ್ಯ ರಾಜಕರಾಣದಲ್ಲಿ ಸಿಎಂ ಬದಲಾವಣೆ, ಅಧಿಕಾರ ಹಸ್ತಾಂತರದ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗದಗದ ರಾಚೋಟೇಶ್ವರ ನಗರದ ನಿವಾಸಿ, ಹುಲಿಗೆಮ್ಮ ದೇವಿಯ ಜೋಗತಿ ಭೈಲಮ್ಮ ಬಾಳಮಣ್ಣ ಭವಿಷ್ಯ ನುಡಿದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಹೌದು ಅಭಿಮಾನಿಯೊಬ್ಬರು ಭವಿಷ್ಯ ಕೇಳಿರುವ ವಿಡಿಯೋ ವೈರಲ್ ಆಗಿದೆ.ಗದ್ದುಗೆ ಹಾಕಿ ದೇವಿ ಕೊಡ ಎತ್ತುವ ಮೂಲಕ ಜೋಗತಿ ಅಮ್ಮ ಭವಿಷ್ಯ ನುಡಿಸಿದ್ದಾರೆ. ಅಂದ ಹಾಗೇ ಹುಲಿಗೆಮ್ಮ ದೇವಿ ನೀಡಿರುವ ಭವಿಷ್ಯ ಸುಳ್ಳು ಆಗುವುದಿಲ್ಲ ಎನ್ನುವುದು ಈ ಭಾಗದಲ್ಲಿ ನಂಬಿಕೆ ಹೆಚ್ಚಾಗಿದೆ, ಹೀಗಾಗಿ ಹುಲಿಗೆಮ್ಮ ದೇವಿ ನೀಡಿರುವ ಭವಿಷ್ಯದ ಬಗ್ಗೆ ಎಲ್ಲರಲ್ಲಿ ಚರ್ಚೆ ಮಾಡುವಂತೆ ಮಾಡಿದೆ. ಇನ್ನೂ ಇದೇ ವೇಳೆ ಜೋಗತಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು ಅವರು ಹುಲಿಗೆಮ್ಮ ದೇವಿ ನೀಡಿರುವ ಭವಿಷ್ಯ ಎಂದಿಗೂ ಕೂಡ ಸುಳ್ಳು ಆಗೋದಿಲ್ಲ. ಇನ್ನೂ ಒಂದುವರೆ ಎರಡು ತಿಂಗಳ ಒಳಗಾಗಿ ಡಿಕೆ ಶಿವಕುಮಾರ್ ಅವರು ಸಿಎಂ ಆಗ್ತಾರೆ. ಚಿಂತೆ ಮಾಡಬೇಡಿ ಅಂತ…
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯನ ನಡುವೆ ಕುರ್ಚಿಗಾಗಿ ಫೈಟ್ ನಡೆಯುತ್ತಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ನಾಗ ಸಾಧುಗಳು ಆಶೀರ್ವಾದ ಮಾಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ನಾಗ ಸಾಧುಗಳು ಡಿಕೆ ಶಿವಕುಮಾರ್ ಗೆ ಆಶೀರ್ವಾದ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮೇಲೆ ನಮ್ಮ ಸದ್ಗುರುಗಳ ಆಶೀರ್ವಾದ ಇದೆ.ಡಿಕೆ ಶಿವಕುಮಾರ್ ಅವರು ಸಿಎಂ ಆಗಲೆಂದು ಆಶೀರ್ವಾದ ಮಾಡಿದ್ದೇನೇ. ಸಿಎಂ ಆಗುವಂತೆ ನಾನು ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದ ಮಾಡಿದ್ದೇನೆ. ಅವರು ಉನ್ನತ ಮಟ್ಟಕ್ಕೆ ಬರುತ್ತಾರೆ ಅಭಿವೃದ್ಧಿ ಆಗುತ್ತಾ ಇರುತ್ತದೆ ಬೀದಿಗೆರೆ ನಾಗಬಾಬ ಆಶೀರ್ವಾದ ಮಾಡಿದ್ದಾರೆ. ನನ್ನ ಕೆಲಸ ಆಶೀರ್ವಾದ ಮಾಡೋದು ಹಾಗಾಗಿ ಬಂದಿದ್ದೇನೆ ಡಿಕೆ ಶಿವಕುಮಾರ್ ಚೆನ್ನಾಗಿರಲಿ. ಆಶೀರ್ವಾದ ದೇವರು ಹಾಗೂ ಸಂತರು ಮಾಡುತ್ತಾರೆ ಇನ್ನೇನಿದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ : ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದಾರೆ. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ತಪ್ಪಿಸಿದರು ಇದೀಗ ತಮ್ಮ ಮಾತು ಬದಲಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ. ಹೌದು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ದ ಆಗಿರುತ್ತೇನೆ ಎಂದು ಹನುಮಂತಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಹೈಕಮಾಂಡ್ ಎನ್ನು ತೀರ್ಮಾನ ತೆಗೆದುಕೊಳ್ಳುತೋ ಅದಕ್ಕೆ ಬದರಾಗುತ್ತೇವೆ ಎಂದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದ. ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ. ಅಕಸ್ಮಾತ್ ಹೈಕಮಾಂಡ್ ನನ್ನನ್ನೇ ಮುಂದುವರೆಸಲು ಹೇಳಿದರೆ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿನ ಜಯನಗರದ ಜಿಬಿಎ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ. ಅಗ್ನಿ ಅವಘಡ ವೇಳೆಯಲ್ಲಿ ಇಬ್ಬರು ಸಿಲುಕಿರುವ ಮಾಹಿತಿ ತಿಳಿದು ಬಂದಿದೆ. ಹಾಗಾಗಿ ಲಿಫ್ಟ್ ನಲ್ಲಿರುವಂತಹ ಇಬ್ಬರನ್ನು ರಕ್ಷಣೆ ಮಾಡಲು ಅಗ್ನಿಶಾಮಕ ಸಿಬ್ಬಂದಿಗಳು ಅರಸರ ಪಡುತ್ತಿದ್ದಾರೆ ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಯನಗರ ಠಾಣೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಯುವಕನಿಂದ ಬಿಬಿಎಂ ವಿದ್ಯಾರ್ಥಿನಿಯ ಬರ್ಬರ ಕೊಲೆಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ, ಪೊಲೀಸ್ ಠಾಣ ವ್ಯಾಪ್ತಿಯ ತಮ್ಮೇನಹಳ್ಳಿ ಈ ಒಂದು ಭೀಕರ ಕೊಲೆ ನಡೆದಿದೆ. ಪ್ರತಿಷ್ಟಿತ ಕಾಲೇಜಿನಲ್ಲಿ ಬಿಬಿಎಂ ಓದುತ್ತಿದ್ದ ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದು ಬಂದಿದೆ. ನಿನ್ನೆ ಬೆಳಿಗ್ಗೆ ಆರೋಪಿ ಪ್ರೇಮವರ್ಧನ್ ಜೊತೆಗೆ ದೇವಿಶ್ರೀ ತೆರಳಿದ್ದಾಳೆ. ದೇವಿಶ್ರೀಯನ್ನು ಸ್ನೇಹಿತೆಯ ರೂಮ್ಗೆ ಆರೋಪಿ ಕರೆದೊಂದಿದ್ದಾನೆ. ಬಳಿಕ ಯುವತಿಯನ್ನು ಕೊಲೆಗೈದು ಪ್ರೇಮ್ ವರ್ಧನ್ ರೂಮಿನಿಂದ ಪರಾರಿಯಾಗಿದ್ದಾನೆ. ಆಂಧ್ರಪ್ರದೇಶದ ಮೂಲದ ದೇವಿಶ್ರೀ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದಳು. ಸದ್ಯ ದೆವಿಶ್ರೀ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೊಲೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಕೋಲಾರ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಡಿವೈಡರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಈ ಒಂದು ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿಕ್ಕಿ ಆದ ಪರಿಣಾಮ ಚೆನ್ನೈ ಮೂಲದ ಗೋಪಿ (38) ಗೌತಮ ರಮೇಶ್ (28) ಹರಿಹರನ್ (27) ಜಯಶಂಕರ್ (30) ಎನ್ನುವವರು ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅಪ್ಪಟ ಅಭಿಮಾನಿ ಮಹದೇವು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮದ್ದೂರು ತಾಲೂಕಿನ ದೇವೇಗೌಡನದೊಡ್ಡಿ ಗ್ರಾಮದ ಮಹದೇವು ಆತ್ಮಹತ್ಯೆಗೆ ಶರಣಾಗಿದ್ದು, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದಲ್ಲಿ ಇ ಘಟನೆ ನಡೆದಿದೆ. ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವವರೆಗೂ ಚಪ್ಪಲಿ ತೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಅಲ್ಲದೇ ಮೃತ ಮಹದೇವು ಜೆಡಿಎಸ್ ಪಕ್ಷದ ಕಾರ್ಯಕರ್ತ ಕೂಡ ಆಗಿದ್ದರು. ಅಭಿಮಾನಿ ಮಹದೇವು ನಿಧನಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದು ಇಂದು ಮೃತ ಅಭಿಮಾನಿ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಕುಟುಂಬದ ಸದಸ್ಯರಿಗೆ ಜೆಡಿಎಸ್ ನಾಯಕರು ಸಾಂತ್ವನ ನೀಡಲಿದ್ದಾರೆ.
ಬೆಂಗಳೂರು : ಸೈಬರ್ ವಂಚಕರು ದೊಡ್ಡ ದೊಡ್ಡ ಶ್ರೀಮಂತರನ್ನು ಬುಟ್ಟಿಗಿ ಹಾಕಿಕೊಂಡು ಹಣ ಪಡೆದು ವಂಚನೆ ಎಸುಗುತ್ತಿರುವ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪ್ರಧಾನಮಂತ್ರಿ ಕಚೇರಿಯ ಸಿಬ್ಬಂದಿ ಹೆಸರಿನಲ್ಲೇ ವೈದ್ಯನೊಬ್ಬನಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದು, ಈ ಸಂಬಂಧ ಬೆಂಗಳೂರಿನ ವಿಜಯನಗರ ಠಾಣೆ ಪೊಲೀಸರು ವಂಚಕನನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಬಂಧಿತನನ್ನು ವಿಜಯನಗರ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ ಅಮಿತ್ ಶಾ ದತ್ತು ಪುತ್ರ ಎಂದು ಹೇಳಿಕೊಂಡು ರಾಜಕಾರಣಿಗಳಿಗೂ ಯಾಮಾರಿಸಿದ್ದ. ಅಲ್ಲದೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆ ವೇದಿಕೆಯನ್ನು ಹಂಚಿಕೊಂಡಿದ್ದ. ಈಗ ಈತ ಪೆÇಲೀಸರ ಅತಿಥಿಯಾಗಿದ್ದಾನೆ. ಏನು ಕೆಲಸವೂ ಇಲ್ಲದ ಸುಜಯೇಂದ್ರ ಎಲ್ಲರ ಬಳಿಯೂ ಕೇಂದ್ರ ಸರ್ಕಾರ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಅದೇ ರೀತಿ ಜಮ್ಮು ಕಾಶ್ಮೀರದ ವೈದ್ಯರೊಬ್ಬರ ಬಳಿ ದೇವನಹಳ್ಳಿಯ ಬಳಿಯಲ್ಲಿ ಆಯುರ್ವೇದ ಹಾಸ್ಪಿಟಲ್ ತೆರಲು ಅವಕಾಶ ಮಾಡಿಕೊಡ್ತೀನಿ ಅಂತ 2.7 ಕೋಟಿ ಹಣವನ್ನು ವಸೂಲಿ ಮಾಡಿದ್ದಾನೆ.ಈಗ ಸುಜಯೇಂದ್ರ ಬಂಧನದ ಬಳಿಕ ಆತನ…
ಕೊಪ್ಪಳ : ಕೆರೆಯಲ್ಲಿ ತೆಪ್ಪ ಮಗುಚಿ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಲಕಸಮುದ್ರ ಗ್ರಾಮದಲ್ಲಿ ನಡೆದಿದೆ ಫಕೀರ್ ಸಾಬ್ (36) ಹಾಗೂ ಶರಣಪ್ಪ ಎಮ್ಮೆರ್ (32) ನಿರುಪಾಲಾಗಿದ್ದಾರೆ. ನಿನ್ನೆ ಸಂಜೆ ಮೀನು ಹಿಡಿಯಲು ಫಕಿರ್ ಸಾಬ್ ಹಾಗು ಶರಣಪ್ಪ ಕೆರೆಗೆ ಹೋಗಿದ್ದರು. ಗಾಳಿಯ ರಭಸಕ್ಕೆ ತೆಪ್ಪ ಮಗುಚಿ ಇಬ್ಬರು ನಿರುಪಾಲಾಗಿದ್ದಾರೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರಿಂದ ಇಬ್ಬರ ಮೃತ ದೇಹಕ್ಕೆ ಶೋಧ ನಡೆಯುತ್ತಿದ್ದು ಸ್ಥಳಕ್ಕೆ ಯಲಬುರ್ಗಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.














