Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ನಟ ಶ್ರೀನಗರ ಕಿಟ್ಟಿ ಹಾಗೂ ನಟಿ ರಚಿತಾ ರಾಮ್ ಅವರ ನಟನೆಯ ಸಂಜು ವೆಡ್ಸ್ ಗೀತಾ-2 ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಈ ಒಂದು ಚಿತ್ರದ ಪ್ರಚಾರಕ್ಕೆ ನಟಿ ರಚಿತಾ ರಾಮ್ ಪ್ರಚಾರಕ್ಕೆ ಬರಲಿಲ್ಲ ಎಂದು ಇದೀಗ ಫಿಲಂ ಚೇಂಬರ್ಗೆ ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಹೌದು ಚಿತ್ರದ ಪ್ರಚಾರಕ್ಕೆ ಬಾರದ ಹಿನ್ನೆಲೆಯಲ್ಲಿ ನಟಿ ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರಿಗೆ ದೂರು ನೀಡಲಾಗಿದೆ. ನಿರ್ದೇಶಕ ನಾಗಶೇಖರ್ ಹಾಗೂ ನಟ ಶ್ರೀನಗರ ಕಿಟ್ಟಿಯಿಂದ ಅದ್ದೂರಿ ಸಲ್ಲಿಕೆಯಾಗಿದೆ ನಾವು ಇಂತಹ ಕಲಾವಿದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮ ಸಿನಿಮಾಕ್ಕೆ ಒಂಚೂರು ಸಹಕಾರ ಕೊಟ್ಟಿಲ್ಲ ಎಂದು ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ಮನವೊಲಿಸಿದರೂ ಸಹ ಚಿತ್ರ ಪ್ರಚಾರಕ್ಕೆ ಅವರು ಒಪ್ಪಿಲ್ಲ. ನಟ ಶಿವರಾಜ್ ಕುಮಾರ್, ಉಪೇಂದ್ರ, ಸುದೀಪ್ ಅವರೆಲ್ಲರೂ ಸಹ ಚಿತ್ರಕ್ಕೆ ಸಪೋರ್ಟ್ ಕೊಟ್ಟಿದ್ದಾರೆ. ಆದರೆ ನಟಿ ರಚಿತಾ ರಾಮ್ ಚಿತ್ರದ…
ಶಿವಮೊಗ್ಗ : ಕಾಮಗಾರಿಯೊಂದರ ಬಿಲ್ ಬಿಡುಗಡೆಗಾಗಿ 30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ (RDWSD) ಸೆಕ್ಷನ್ ಆಫೀಸರ್ ಪರಶುರಾಮ ಎಚ್.ನಾಗರಾಳ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಿಲ್ ಬಿಡುಗಡೆ ಮಾಡಲು ಶೇ 3ರಷ್ಟು ಕಮಿಷನ್ಗೆ ಬೇಡಿಕೆ ಇಟ್ಟಿದ್ದ ಪರಶುರಾಮ ನಾಗರಾಳ, ಗುತ್ತಿಗೆದಾರರಿಂದ ಈಗಾಗಲೇ 1, 63 ಲಕ್ಷ ಪಡೆದಿದ್ದರು. ಇನ್ನೂ 70,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಗುತ್ತಿಗೆದಾರ ಲಿಂಗರಾಜ ಉಳ್ಳಾಗಡ್ಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ, 30,000 ನೀಡುವಾಗ ದಾಳಿ ನಡೆದಿದೆ. ಗುತ್ತಿಗೆದಾರ, ಸೊರಬ ತಾಲ್ಲೂಕಿನ ಹಸವಿ ಗ್ರಾಮದ ಲಿಂಗರಾಜ ಉಳ್ಳಾಗಡ್ಡಿ ಅವರು ಚೀಲನೂರು ಹಾಗೂ ಕಣ್ಣೂರು ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಪಿಎಂಶ್ರೀ ಯೋಜನೆಯಡಿ ಎಣ್ಣೆಕೊಪ್ಪ ಗ್ರಾಮದ ಶಾಲೆಯ ದುರಸ್ತಿ ಕಾಮಗಾರಿ ಕೈಗೊಂಡಿದ್ದರು.
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆ 2,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 56 ಹೊಸ ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 56 ಕೊರೊನ ಕೇಸ್ ಪತ್ತೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಕೋರೋನ ಸೋಂಕಿತರ ಸಂಖ್ಯೆ 2045 ಕ್ಕೆ ಏರಿಕೆಯಾಗಿದೆ. ಇನ್ನು ಕರೋನ ಆಕ್ಟಿವ್ ಪ್ರಕರಣಗಳ ಸಂಖ್ಯೆ 653 ಇವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಮನೆಯೊಂದು ಖುಷಿ ಬಿದ್ದಿದೆ ಪರಿಣಾಮ ಪೂರ್ವ ಬಾಲಕ ಸಾವನ್ನಪ್ಪಿದ್ದು ಮಹಿಳೆಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜೇವರ್ಗಿ ತಾಲೂಕಿನ ಗುಡೂರು ಎಂಬ ಗ್ರಾಮದಲ್ಲಿ ನಡೆದಿದೆ. ಮನೆ ಕುಸಿದು ಮೃತಪಟ್ಟ ಬಾಲಕನನ್ನು ಶಿವಪ್ಪ (10) ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಭಾಗಮ್ಮ (60) ಎನ್ನುವ ಮಹಿಳೆಗೆ ಗಂಭೀರವಾದ ಗಾಯಗಳಾಗಿವೆ. ಮಹಿಳೆನು ತಕ್ಷಣ ಕಲ್ಬುರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ
ದಕ್ಷಿಣಕನ್ನಡ : ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣಗಳಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಧ್ಯಪ್ರವೇಶಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರ ವಿರುದ್ಧ ತನಿಖೆ ನಡೆಸಿ 2 ವಾರದಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತನಿಖಾ ವಿಭಾಗದ ಡಿಜಿಗೆ ಸೂಚಿಸಲಾಗಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮನೆಗೆ ಇದೀಗ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೆ ಈ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ಮಧ್ಯ ಪ್ರವೇಶ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಸರಾ ವಿರುದ್ಧ ತನಿಖೆಗೆ ಆದೇಶಿಸಿದೆ. ಪ್ರಕರಣದ ಸಮಗ್ರ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಇದೀಗ ಆದೇಶ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗದ ತನಿಖಾ ವಿಭಾಗದ…
ಕೊಪ್ಪಳ : ನನ್ನ ಕತ್ತು ಕೊಯ್ದರು ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ. ಮತ್ತೆ ನಾನು ಬಿಜೆಪಿಗೆ ಹೋಗುತ್ತೇನೆ ಆದರೆ ಈಗ ಹೋಗಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದರು. ಕೊಪ್ಪಳದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಮತ್ತೆ ಬಿಜೆಪಿಗೆ ಹೋಗುತ್ತೇನೆ ಆದರೆ ಸದ್ಯ ಹೋಗಲ್ಲ ಆದರೆ ನನ್ನ ಕತ್ತು ಕೊಯ್ದರು ಕಾಂಗ್ರೆಸ್ ಗೆ ಮಾತ್ರ ಸೇರಲ್ಲ ಎಂದು ತಿಳಿಸಿದರು.ದಕ್ಷಿಣ ಕನ್ನಡದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಗೃಹ ಸಚಿವರಿಗೆ ಸ್ಪೀಕರ್ ಯುಟಿ ಖಾದರ್ ಪತ್ರ ಬರೆದ ವಿಚಾರವಾಗಿ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಸ್ಪೀಕರ್ ಯುಟಿ ಖಾದರ್ ಕೋಮುವಾದಿಯಾಗಿದ್ದಾರೆ. ಮುಸ್ಲಿಂ ಗೂಂಡಾ ಯುವಕನ ಹತ್ಯೆಯಾಗಿದೆ. ಈ ಸೌಹಾರ್ದತೆ ಬಗ್ಗೆ ಗ್ರಹ ಸಚಿವರಿಗೆ ಪತ್ರ ಬರೆದಿದ್ದಾರೆ. ಸ್ಪೀಕರ್ ಆಗಿರುವ ಯುಟಿ ಖಾದರ್ ಅವರು, ಸಭಾಧ್ಯಕ್ಷರಾಗಿ ನಡೆದುಕೊಳ್ಳಬೇಕು ಹಿಂದೂ ಕಾರ್ಯಕರ್ತರ ಕೊಲೆ ಆದಾಗ ಏಕೆ ಮಾತಾಡಿಲ್ಲ? ಎಂದು ಪ್ರಶ್ನಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ದೊಡ್ಡ ಪ್ರಮಾಣದಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಕೋಟ್ಯಾಂತರ ರೂಪಾಯಿಗೆ ಬೆಲೆಬಾಳುವ ಜಮೀನಿಗಾಗಿ, ಜೀವಂತ ಇರುವ ವ್ಯಕ್ತಿಯ ಹೆಸರಿನಲ್ಲಿ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿ ಮಾಡಿರುವ ಘಟನೆ ನಡೆದಿದೆ. ಕೋಟ್ಯಾಂತರ ಮೌಲ್ಯದ ಭೂಮಿಗಾಗಿ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಲಾಗಿದೆ. ಜಮೀನು ಮಾಲೀಕ 50 ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ ಎಂದು ಡೆತ್ ಸರ್ಟಿಫಿಕೇಟ್ ಸೃಷ್ಟಿಸಲಾಗಿದೆ. ಚೆಮಸಂದ್ರ ಗ್ರಾಮದ ಮುನಿಯಪ್ಪಗೆ ಡೆತ್ ಸರ್ಟಿಫಿಕೇಟ್ ನೀಡಿ ವಂಚನೆ ಎಸಗಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ ಚೇಮಸಂದ್ರ ಗ್ರಾಮದ ನಿವಾಸಿಯಾಗಿರುವ ಮುನಿಯಪ್ಪನಿಗೆ ಭೂಮಿ ಮಾರಿದ್ದ ನಾಗೇಶ್ ಹಾಗು ಖರೀದಿಸಿದ ನರೇಂದ್ರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ನರೇಂದ್ರ ಮತ್ತು ನಾಗೇಶ ಸೇರಿದಂತೆ ಇದೀಗ 21 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. 21 ಜನರ ವಿರುದ್ಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ಜಮೀನು ಲಪಟಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.ಜಮೀನಿನಲ್ಲಿ ಪತ್ನಿಯ ಸಮಾಧಿಯ ಮುಂದೆ ನಿಂತು…
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜೈಲಲ್ಲಿ ಇದ್ದ ಆರೋಪಿ ಐಶ್ವರ್ಯ ಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ಪಿ ಎಮ್ ಎಲ್ ಎ ಪ್ರಕರಣದಲ್ಲಿ ಐಶ್ವರ್ಯ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಇದೀಗ ಐಶ್ವರ್ಯ ಗೌಡಳಿಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಅನುಸೂಚಿತ ಪ್ರಕರಣವಿಲ್ಲದಿದ್ದರು ಇಡಿ ಬಂಧಿಸಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಐಶ್ವರ್ಯ ಗೌಡ ಪರ ವಕೀಲ ಎಸ್ ಸುನಿಲ್ ಕುಮಾರ್ ವಾದಿಸಿದರು. ಹಾಗಾಗಿ ಸೇಷನ್ಸ್ ಕೋರ್ಟ್ ಐಶ್ವರ್ಯ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದೇ ಒಂದು ಪ್ರಕರಣದಲ್ಲಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಕಮೆಂಟ್ ನೀಡಿದೆ ಕಳೆದ ಜೂನ್…
ಮಂಗಳೂರು : ಮಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರೊಂದು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್ವೆಲ್ ನಡುವೆ ನಿನ್ನೆ ತಡರಾತ್ರಿ ನಡೆದಿದೆ. ಮೃತ ವೈದ್ಯರನ್ನು ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಅಲ್ಲಿಯೇ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಮೊಹಮ್ಮದ್ ಅಮಲ್ (29) ಎಂದು ತಿಳಿದುಬಂದಿದೆ. ಇನ್ನು ಕಾರಿನಲ್ಲಿದ್ದ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ನಂತೂರಿನ ತಾರೆತೋಟ ಬಳಿ ಘಟನೆ ನಡೆದಿದ್ದು, ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸ್ಕಿಡ್ ಆಗಿ ಡಿವೈಡರ್ಗೆ ಬಡಿದು ಬಳಿಕ ಮೂರು ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದರು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಒಂದು ವಿಚಿತ್ರವಾದ ಘಟನೆ ನಡೆದಿದ್ದು, ವಿಷಕಾರಿ ಹಾವು ಕಚ್ಚಿಸಿಕೊಂಡ ಬಳಿಕ ರೈತನೋಬ್ಬ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿರುವ ಘಟನೆ, ಬೆಳಗಾವಿಯಲ್ಲಿ ನಡೆದಿದೆ. ಹೌದು ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಈ ಒಂದು ಘಟನೆ ನಡೆದಿದ್ದು ಜಮೀನಿನಲ್ಲಿ ಕೆಲಸ ಮಾಡುವಾಗ ರೈತನಿಗೆ ಹಾವು ಕಚ್ಚಿದೆ. ಕೂಡಲೇ ಹಾವನ್ನು ಬಾಟಲಿಯಲ್ಲಿ ಹಾಕಿಕೊಂಡು ರೈತ ಯಲ್ಲಪ್ಪ ಆಸ್ಪತ್ರೆಗೆ ಬಂದಿದ್ದಾನೆ. ರುಸೇಲ್ಸ್ ಎಂಬ ವಿಷಕಾರಿ ಹಾವು ಕಡಿದ ಹಿನ್ನೆಲೆಯಲ್ಲಿ ರೈತನ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿಯ ಬಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.