Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ. ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣಾವರ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಹಳಿ ದಾಟುವಾಗ ಸೂಪರ್ ಫಾಸ್ಟ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು : ಕಾಳಿಂಗ ಸರ್ಪಗಳ ಸೆರೆಗೆ ಕಾರ್ಯಪಡೆಯ ರಚಿಸಲು ತೀರ್ಮಾನಿಸಲಾಗಿದೆ. ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಮನೆಗಳು, ತೋಟಗಳಲ್ಲಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿವೆ. ಕಾಳಿಂಗ ಸರ್ಪಗಳು ಹೆಚ್ಚಿರುವ ಪ್ರದೇಶದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕಾಳಿಂಗ ಸರ್ಪಗಳ ಸೆರೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ಪ್ಲಾನ್ ಮಾಡಲಾಗಿದೆ. ಕಾಳಿಂಗ ಸರ್ಪಗಳ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಟ್ರೇನಿಂಗ್ ನೀಡಲಾಗಿದ್ದು, ಅರಣ್ಯ ಇಲಾಖೆಯ ವಿಭಾಗದ ಇ ಐವರು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಸಂಘ ಸಂಸ್ಥೆಗಳು ಖಾಸಗಿ ವ್ಯಕ್ತಿಗಳಿಂದ ಸೆರೆ ಹಿಡಿಯದಂತೆ ಸೂಚನೆ ನೀಡಲಾಗಿದೆ. ಚಿಕ್ಕಮಂಗಳೂರು, ಉತ್ತರಕನ್ನಡ ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸುತ್ತಿವೆ. ಇಟಿಎಫ್ ಮತ್ತು ಎಲ್ ಟಿ ಎಫ್ ಮಾದರಿಯಲ್ಲಿ ಕಾಳಿಂಗ ಸರ್ಪಗಳ ಸರಿಗೆ ಪ್ಲಾನ್…
ಬೆಂಗಳೂರು : ಬೆಂಗಳೂರಿನಲ್ಲಿ 7 ಕೋಟಿ 11 ಲಕ್ಷ, ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂಎಸ್ ಎಟಿಎಂ ವಾಹನ ಕಂಪನಿಯ ಮತ್ತೊಂದು ನಿರ್ಲಕ್ಷ ಬಯಲಾಗಿದೆ. ವಾಹನವನ್ನು ಸಿಎಂಎಸ್ ಕಂಪನಿ ಬಳಕೆ ಮಾಡುತ್ತಿತ್ತು.ಎಲ್ಲಾ ವಾಹನಗಳಲ್ಲಿ ನಾಲ್ಕು ಕ್ಯಾಮರಗಳು ಅಳವಡಿಕೆ ಆಗಿರುತ್ತದೆ. ಹಳೆ ವಾಹನಗಳ ಸಿಸಿಟಿವಿ ವಿಜುವಲ್ ಡಿವಿಆರ್ ನಲ್ಲಿ ಮಾತ್ರ ಇರುತ್ತದೆ ಹೊಸ ವಾಹನಗಳ ಸಿಸಿಟಿವಿ ಕಂಟ್ರೋಲ್ ಮುಂಬೈನಲ್ಲಿದೆ ಸಿಸಿಟಿವಿ ರೆಕಾರ್ಡಿಂಗ್ ಮುಂಬೈನ ಕೇಂದ್ರ ಕಚೇರಿಯಲ್ಲಿ ಇರುತ್ತದೆ.ಬಹುತೇಕ ವಾಹನಗಳಲ್ಲಿ ಈ ರೀತಿ ಸಿಸಿಟಿವಿ ಅಪ್ಡೇಟ್ ಇಲ್ಲ ಇದೇ ಕಾರಣಕ್ಕೆ ಹಳೆ ವಾಹನ ಟಾರ್ಗೆಟ್ ಮಾಡಿ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು ಕಳೆದ ವಾರವಷ್ಟೆ ದೆಹಲಿಗೆ ಕಾಂಗ್ರೆಸ್ಸಿನ 9 ಶಾಸಕರ ತಂಡ ಭೇಟಿ ನೀಡಿತ್ತು. ಇದೀಗ ಇಂದು ದೆಹಲಿಗೆ ತೆರಳಿದ ಕಾಂಗ್ರೆಸ್ನ 6 ಶಾಸಕರ ಮತ್ತೊಂದು ತಂಡ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಶಾಸಕರಾದ ಕದಲೂರು ಉದಯ್ ನೇತೃತ್ವದಲ್ಲಿ ಆರು ಜನ ಶಾಸಕರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರ ಭೇಟಿಗೆ ಈ ಒಂದು ಶಾಸಕರ ತಂಡ ಪಟ್ಟು ಹಿಡಿದಿದ್ದು, ಕಳೆದ ವಾರ ಅಷ್ಟೇ ಕಾಂಗ್ರೆಸ್ಸಿನ 9 ಶಾಸಕರು ದೆಹಲಿಗೆ ತೆರಳಿದ್ದರು ಮತ್ತೆ 6 ಶಾಸಕರ ತಂಡ ದೆಹಲಿಗೆ ತೆರಳಿದೆ. ಹಾಗಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಗದಗ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು ಎಷ್ಟು ದಿನ ತನ್ನಗಿದ್ದ ನಾಯಕತ್ವ ಬದಲಾವಣೆ ಇದೀಗ ಹೈಕಮಾಂಡ್ವರೆಗೂ ತಲುಪಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಅವರನ್ನು ಭೇಟಿಯಾಗಿ ಈ ವಿಚಾರವಾಗಿ ಚರ್ಚೆ ಮಾಡಿದ್ದು, ಇನ್ನೊಂದು ಕಡೆ ಡಿಕೆ ಶಿವಕುಮಾರ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಸರತ್ತು ನಡೆಸಿದ್ದಾರೆ. ಇದರ ಮಧ್ಯ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೋಗತಿ ಒಬ್ಬರು ಭವಿಷ್ಯ ನುಡಿದಿದ್ದಾರೆ. ಹುಲಿಗೆಮ್ಮ ದೇವಿಯ ಜೋಗತಿ ಬೈಲಮ್ಮ ಬಾಳಮ್ಮಣ್ಣವರು ಭವಿಷ್ಯ ನುಡಿದಿದ್ದು, ಗದಗದ ರಾಜೋಟೇಶ್ವರ ನಿಗರದ ನಿವಾಸಿ ಜೋಗತಿ ಭೈಲಮ ಅವರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮತ್ತೊಂದು ಕಡೆ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬಾಗಲಕೋಟೆ, ಹಾವೇರಿ ಹಾಗೂ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ ಬೆಂಬಲಿಗರು ದೇವರಿಗೆ ಪೂಜೆ ಸಲ್ಲಿಸಿ ಈಡುಗಾಯಿ ಒಡೆದು ಹರಕೆ ಸಲ್ಲಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ…
ಗುಜರಾತ್ : ಗುಜರಾತಿನ ಸೌರಾಷ್ಟ್ರದ ಹಲವಡೆ ಲಘು ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಗುಜರಾತ್ನ ಸೌರಾಷ್ಟ್ರ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ. ಗಾಂಧಿನಗರದಲ್ಲಿರುವ ಭೂಕಂಪನ ಸಂಶೋಧನಾ ಸಂಸ್ಥೆ (ಐಎಸ್ಆರ್) ಪ್ರಕಾರ, ಭಾರತೀಯ ಕಾಲಮಾನ ಬೆಳಗಿನ ಜಾವ 3.06 ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಸೌರಾಷ್ಟ್ರದ ತಲಾಲಾದಿಂದ 15 ಕಿ.ಮೀ ಈಶಾನ್ಯ (NNE) ದಲ್ಲಿ, 21.188°N ಅಕ್ಷಾಂಶ ಮತ್ತು 70.546°E ರೇಖಾಂಶದಲ್ಲಿತ್ತು. ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಸಾವುನೋವುಗಳ ವರದಿಯಾಗಿಲ್ಲ.
ಬೆಂಗಳೂರು : ಬೆಂಗಳೂರಲ್ಲಿ ಕರ್ನಾಟಕದ ಇತಿಹಾಸದಲ್ಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದ್ದು 7 ಕೋಟಿ ಹಣವನ್ನು ದೋಚಿ ಪರಾರಿಯಾಗಿದ್ದಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಇದುವರೆಗೂ 6 ಕೋಟಿ ಎಪ್ಪತ್ತು ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಇನ್ನುಳಿದ ಹಣ ಹಾಗೂ ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇದೀಗ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂಎಸ್ ವಾಹನದಲ್ಲಿದ್ದ ಡಿವಿಆರ್ ಇನ್ನೂವರೆಗೂ ಪತ್ತೆಯಾಗಿಲ್ಲ. ಅರಣ್ಯ ಪ್ರದೇಶದಲ್ಲಿ ದರೋಡೆಗೆ ಡಿವಿಆರ್ ಅನ್ನು ಎಸೆದಿದ್ದು ಸಿಎಂಎಸ್ ವಾಹನದಲ್ಲಿದ್ದ ಡಿವಿಆರ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ದರೋಡೆಯ ವೇಳೆ ಡಿವಿಆರ್ ಸಮೇತ ಹೊತ್ತೊಯ್ದಿದ್ದರು. ಆರೋಪಿಗಳ ಗುರುತು ಸಿಗುತ್ತೆ ಅಂತ ಡಿವಿಆರ್ ಕೂಡ ಕಳ್ಳತನ ಮಾಡಿದ್ದಾರೆ. ಚಿತ್ತೂರು ಮಾರ್ಗದ ಅರಣ್ಯದಲ್ಲಿ ದರೋಡೆ ಗ್ಯಾಂಗ್ ಡಿವಿಆರ್ ಅನ್ನು ಎಸೆದಿದೆ. ಪ್ರಮುಖ ಸಾಕ್ಷಿ ಆಗಿರುವುದರಿಂದ ಡಿ ವಿ ಆರ್ ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಜೊತೆಗೆ 7 ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಬೆಂಬಲಿಗರು ರಾಜ್ಯಾದ್ಯಂತ ಪೂಜೆ ನಡೆಸುತ್ತಿದ್ದಾರೆ. ಬಾಗಲಕೋಟೆ ಹಾವೇರಿ, ಬೆಳಗಾವಿಯಲ್ಲಿ ಬೆಂಬಲಿಗರು ಪೂಜೆ ಸಲ್ಲಿಸಿದ್ದು 1001, 101 ಈಡುಗಾಯಿ ಮಾಡಿದು ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಮುನ್ನೆಲೆಗೆ ಬಂದ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಪೂಜೆ ಸಲ್ಲಿಸಿದ್ದಾರೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪೂಜೆ ಸಲ್ಲಿಕೆ ಮಾಡಲಾಗಿದ್ದು, ಡಿಕೆ ಶಿವಕುಮಾರ್ ಆದಷ್ಟು ಬೇಗ ಸಿಎಂ ಆಗಲೆಂದು ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯ ತವರಲ್ಲೂ ಕೂಡ ಡಿಕೆ ಶಿವಕುಮಾರ್ ಪರವಾಗಿ ಪೂಜೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಪೂಜೆ ಸಲ್ಲಿಸಲಾಗಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಾಲಾಧಾರಿಗಳು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ.
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ನಲ್ಲಿ ಇಷ್ಟು ದಿನ ಒಳಗೊಳಗೆ ಕುದಿಯುತ್ತಿದ್ದ ಅಧಿಕಾರ ಹಂಚಿಕೆಯ ಜ್ವಾಲಾಮುಖಿ ಸ್ಫೋಟಗೊಂಡಿದೆ. ಕಾಂಗ್ರೆಸ್ನ ದಿಗ್ಗಜ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ಕುರ್ಚಿ ಕಾಳಗಕ್ಕೆ ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಹೈರಾಣಾಗಿದ್ದಾರೆ. ಸದ್ಯ ಕುರ್ಚಿ ಕಿತ್ತಾಟದ ಚೆಂಡು ರಾಹುಲ್ ಗಾಂಧಿ ಅಂಗಳಕ್ಕೆ ತಲಪುತ್ತಿದೆ. ಹೌದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎರಡೂ ಬಣಗಳ ನಾಯಕರು ದೆಹಲಿಗೆ ಪರೇಡ್ ನಡೆಸುತ್ತಿದ್ದಂತೆಯೇ ಖರ್ಗೆ ಎಚ್ಚೆತ್ತುಕೊಂಡಿದ್ದರು. ಸಮಸ್ಯೆ ಇತ್ಯರ್ಥಕ್ಕೆ ಬೆಂಗಳೂರಿಗೆ ಬಂದರು. ಆದರೆ, ಈ ಸಮಸ್ಯೆ ಎಐಸಿಸಿ ಅಧ್ಯಕ್ಷರ ವ್ಯಾಪ್ತಿಯನ್ನೂ ಮೀರಿದ ಬಿಕ್ಕಟ್ಟಿನಂತಾಗಿದೆ. ಇದೇ ಕಾರಣಕ್ಕೆ, ‘ನನ್ನ ಬಳಿ ಏನೂ ಇಲ್ಲ’ ಎಂದು ಖರ್ಗೆ ಹೈಕಮಾಂಡ್ ನಾಯಕರತ್ತ ಬೊಟ್ಟು ಮಾಡಿ ತೋರಿಸಿದ್ದಾರೆ. ಪಕ್ಷದಲ್ಲಿ ಹೀಗೆ ಗೊಂದಲಗಳಾದರೆ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಸದ್ಯ ಪಕ್ಷದಲ್ಲಿ ನಡೆಯುತ್ತಿರುವ ಗೊಂದಲವನ್ನ ಬಗಹರಿಸಿ. ಡಿಕೆ ಆಪ್ತರಿಂದ ಸಹಿ ಸಂಗ್ರಹ ಮಾಡ್ತಿದ್ದಾರೆ. ಇದೆಲ್ಲಾ ಪಕ್ಷಕ್ಕೆ ಒಳ್ಳೆಯದಲ್ಲ. ನೀವೇ…
ಚಾಮರಾಜನಗರ : ಕೇರಳದಲ್ಲಿ ಅಮೀಬಾ ವೈರಸ್ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು ಕೆರಳಿಕೆ ತಳ್ಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಮಾರ್ಗಸೂಚಿ ಹಾಗೂ ಕೇರಳದ ಗಡಿ ಮೂಲೆಹೊಳೆ ಚೆಕ್ಪೋಸ್ಟ್ ನಲ್ಲಿ ಜಾಗೃತಿ ಕಾರ್ಯ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಯಲ್ಲಿ ಗುಂಡ್ಲುಪೇಟೆ ತಾಲೂಕು ಜಾಗೃತಿ ಕಾರ್ಯ ನಡೆಸುತ್ತಿದ್ದಾರೆ. ಭಿತ್ತಿಪತ್ರ ಹಿಡಿದು ಅಲೀಂ ಪಾಷಾ ಜಾಗೃತಿ ಮೂಡಿಸುತ್ತಿದ್ದಾರೆ. ಶಬರಿಮಲೆಗೆ ತೆರಳುವ ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣು ಇಡಲಾಗಿದೆ ಕೇರಳದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ತಿಳಿಸುತ್ತಿದ್ದಾರೆ. ಜ್ವರ, ತಲೆನೋವು ಇದ್ದವರು ನಿರ್ಲಕ್ಷಿಸಬೇಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.














