Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಬಿಎಂಟಿಸಿ ಕಂಡಕ್ಟರ್ ಗಳು ಸಂಸ್ಥೆಯ ಸ್ಕ್ಯಾನರ್ ಬದಲು ತಮ್ಮ ಸ್ಕ್ಯಾನರ್ ಹಾಕಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದ ಪ್ರಕರಣದ ಬೆನ್ನೆಲೆ ಇದೀಗ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೂಡ ಸಿಬ್ಬಂದಿಗಳು ಯುಪಿಐ ಸ್ಕ್ಯಾನರ್ ಮೂಲಕ 23 ಲಕ್ಷಕ್ಕೂ ಹೆಚ್ಚು ಹಣ ವಂಚನೆ ಎಸಗಿದ್ದು ಬೆಳಕಿಗೆ ಬಂದಿದೆ. ಹೌದು ರೋಗಿಗಳ ಅನುಕೂಲಕ್ಕಾಗಿ ಪರಿಚಯಿಸಲಾಗಿದ್ದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನೇ ದುರುಪಯೋಗಪಡಿಸಿಕೊಂಡು, ಆಸ್ಪತ್ರೆಯ ಕೆಲ ಕಳ್ಳ ಸಿಬ್ಬಂದಿಗಳು ಸುಮಾರು 23 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ದೋಚಿರುವುದು ಬಹಿರಂಗವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಅವರು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇತ್ತೀಚಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶುಲ್ಕ ಪಾವತಿಸಲು ಅನುಕೂಲ ಆಗಲಿ ಎಂದು ಯುಪಿಐ ವ್ಯವಸ್ಥೆ ಅಳವಡಿಸಲಾಗಿತ್ತು. ಸ್ಕ್ಯಾನರ್ ಲ್ಯಾಬ್ ಟೆಸ್ಟಿಂಗ್ ಸೇರಿದಂತೆ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಸೇವೆಗಳಿಗೆ ಶುಲ್ಕ ಪಾವತಿಸಲು ಯುಪಿಐ ವ್ಯವಸ್ಥೆ…
BREAKING : ಕೊಲ್ಕತ್ತಾದಲ್ಲಿ ಟರ್ಕಿ ಏರ್ಲೈನ್ಸ್ ವಿಮಾನ ತುರ್ತು ಭೂಸ್ಪರ್ಶ : 236 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಕೊಲ್ಕತ್ತಾ : ಕೊಲ್ಕತ್ತಾ ಏರ್ಪೋರ್ಟ್ ನಲ್ಲಿ ವಿಮಾನ ಒಂದು ತುರ್ತು ಭೂಸ್ಪರ್ಶ ಮಾಡಿದೆ. ಪಶ್ಚಿಮ ಬಂಗಾಳದ ಕೊಲ್ಕತ್ತಾ ಏರ್ಪೋರ್ಟ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ನೇಪಾಳದಿಂದ ವಿಮಾನ ಹೊರಟಿತು ಟರ್ಕಿ ಏರ್ಲೈನ್ಸ್ ನ TK-727 ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಕೋಲ್ಕತ್ತಾ ವಾಯು ಪ್ರದೇಶ ಮೂಲಕ ಈ ಒಂದು ವಿಮಾನ ಇಸ್ತಾನ್ ಬುಲ್ ಗೆ ಹೊರಟಿತ್ತು. ಇಂಜಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪೈಲಟ್ ಎಟಿಸಿ ಸಂಪರ್ಕ ಮಾಡಿದ್ದಾರೆ. ಕೊಲ್ಕತ್ತಾ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಪೈಲೆಟ್ ಸಂಪರ್ಕಿಸಿದ್ದಾರೆ ಎಟಿಸಿ ಗ್ರೀನ್ ಸಿಗ್ನಲ್ ಕೊಟ್ಟ ಬಳಿಕ ಫ್ಲೈಟ್ ಲ್ಯಾಂಡಿಂಗ್ ಆಗಿದೆ ವಿಮಾನದಲ್ಲಿ ಇದ್ದಂತಹ 236 ಪ್ರಯಾಣಿಕರು ಕೂಡ ಸೇಫ್ ಆಗಿದ್ದಾರೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಶಾಸಕರು ಇದೀಗ ಫಾರಿನ್ ಟೂರ್ ಹೊರಟಿದ್ದು ಅಧ್ಯಯನ ಹೆಸರಿನಲ್ಲಿ ರಾಜ್ಯದ ಶಾಸಕರು ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆಬ್ರುವರಿ 16 ರಿಂದ ಮಾರ್ಚ್ 3 ರವರೆಗೆ ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ. ಪಶು ಸಂಗೋಪನ ಇಲಾಖೆಯಿಂದ ಅಧ್ಯಯನ ಪ್ರವಾಸ ಇದ್ದು ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಗೆ ಶಾಸಕರು ಪ್ರವಾಸ ಕೈಗೊಳ್ಳಲಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಶಾಸಕರಿಂದ ವಿದೇಶ ಪ್ರವಾಸಕ್ಕೆ ತಯಾರಿ ನಡೆದಿದೆ. ಯಾವುದೇ ಸರ್ಕಾರ ಇರಲಿ ಶಾಸಕರನ್ನ ಆಗಾಗ ಅಧ್ಯಯನದ ಪ್ರವಾಸ ನಡೆಯುತ್ತದೆ.
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ ಅಹೋರಾತ್ರಿ ಧರಣಿ ನಡೆಸಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಈ ವೇಳೆ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಹಾಗೂ ಅರಸೀಕರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ವೈಯಕ್ತಿಕವಾಗಿ ಬೈದಾಡಿಕೊಂಡಿಕೊಂಡಿರುವ ಪ್ರಸಂಗ ನಡೆದಿದೆ. ದೇವೇಗೌಡ್ರಿಗೆ ದೋಖಾ ಮಾಡಿದ ಶಿವಲಿಂಗೇಗೌಡಗೆ ಧಿಕ್ಕಾರ ಎಂದು ಎಂದು ಶರಣು ಸಲಗರ್ ಘೋಷಣೆ ಕೂಗಿದರು. ಇದರಿಂದ ಕೆರಳಿದ ಶಿವಲಿಂಗೇಗೌಡ, ಚಿಂಚೋಳಿಯಲ್ಲಿ ನಿನ್ನ ಹೆಂಡತಿಯನ್ನು ತಹಶೀಲ್ದಾರ್ ಬಿಟ್ಟುಕೊಂಡು ಎಷ್ಟು ದುಡ್ಡು ಹೊಡೆದಿದ್ದೀಯಾ ಎಂದು ಗೊತ್ತಿದೆ. ಆರ್ಎಸ್ಎಸ್ ನವರೇ ನಿಮ್ಮ ಯೋಗ್ಯತೆಗೆ ಬೆಂಕಿ ಹಾಕ. ನಿಮಗೆ ಮಾನ ಮರ್ಯಾದೆ ಏನಾದರೂ ಇದೆಯಾ? ಸದನದಲ್ಲಿ ನಾವು ಕೂಡ ಈ ಹಿಂದೆ ಅನೇಕ ಧರಣಿ ಮಾಡಿದ್ದೇವೆ ಆದರೆ ನಿಮ್ಮ ತರಹ ಈ ರೀತಿ ಅಸಹ್ಯವಾಗಿ ಧರಣಿ ಮಾಡಿಲ್ಲ. ನಾಚಿಕೆ ಮಾನ…
ಮಂಡ್ಯ : ಸಿಎಲ್ 7 ಬಾರ್ ತೆರೆಯಲು ಲೈಸೆನ್ಸ್ ನೀಡಲು ಸುಂದರ್ ಎಂಬುವರಿಂದ 60 ಲಕ್ಷ ಬೇಡಿಕೆ ಆರೋಪದ ಹಿನ್ನೆಲೆಯಲ್ಲಿ ಆಡಿಯೋ ಸಹಿತ ಸುಂದರ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೋಮನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಸಿಎಲ್ 7 ಬಾರ್ ತೆರೆಯಲು ಲೈಸೆನ್ಸ್ ನೀಡಲು ಅರ್ಜಿ ಸಲ್ಲಿಸಿದ್ದ ಸುಂದರ್. ಮಂಡ್ಯದ ಕೆ.ಆರ್.ಪೇಟೆಯ ಸೋಮನಹಳ್ಳಿಯ ಸುಂದರ್ ಗೆ ಲೈಸೆನ್ಸ್ ನೀಡದೇ ಪದೇ ಪದೇ ಅರ್ಜಿ ವಜಾ ಮಾಡುತ್ತಿದ್ದ ಅಬಕಾರಿ ಅಧಿಕಾರಿಗಳು. ಸಣ್ಣ ಪುಟ್ಟ ನೆಪ ಹೇಳಿಕೊಂಡು ಅರ್ಜಿ ವಜಾ ಮಾಡುತ್ತಿದ್ದರು. ನ್ಯಾಯಾಲಯ ಆದೇಶ ನೀಡಿದ್ದರೂ ಲೈಸೆನ್ಸ್ ನೀಡಿರಲಿಲ್ಲ. ಲೈಸೆನ್ಸ್ ನೀಡಲು 60 ಲಕ್ಷ ಲಂಚಕ್ಕೆ ನಾಗಶಯನ ಬೇಡಿಕೆ ಆಡಿಯೋ ಸಹಿತ ದೂರು ನೀಡಿ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸಿದ್ದು, ಕಳೆದ ಒಂದು ವರ್ಷದಿಂದಲೂ ಹೋರಾಟ ಮಾಡುತ್ತಿದ್ದ ಸುಂದರ್. ಇದೇ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು. ಕೊನೆಗೂ ಎಚ್ಚೆತ್ತುಕೊಂಡು ನಾಗಶಯನರ ಇದೀಗ ಅಮಾನತುಗೊಂಡಿದ್ದಾನೆ ಸರ್ಕಾರ ಅಮಾನತ್ತು ಆದೇಶ ಪ್ರಕಟಿಸಿದೆ.
ಉತ್ತರಪ್ರದೇಶ : ಆನ್ಲೈನ್ ಗೇಮ್ ಗೀಳಿಗೆ ಮೂವರು ಬಾಲಕಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಒಬ್ಬ ಸಹೋದರಿಯನ್ನು ಉಳಿಸಲು ಹೋಗಿ ಇಬ್ಬರು ಸಹೋದರಿಯರು ಬಲಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಅರುಣ್ ಕುಮಾರ್ ಎಂಬಾತ ಸ್ಪೋಟಕವಾದ ಸಂಗತಿ ಬಿಚ್ಚಿಟ್ಟಿದ್ದಾರೆ. ಹೌದು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ಆನ್ಲೈನ್ ಗೇಮ್ ಗಿಳಿಗೆ ಮೂವರು ಬಾಲಕಿಯರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೆ ಇದೀಗ ಈ ಒಂದು ಪ್ರಕರಣಕ್ಕೆ ಪ್ರತ್ಯಕ್ಷದರ್ಶಿ ಹೇಳಿಕೆ ನೀಡಿದ್ದು ಒಬ್ಬ ಸಹೋದರಿಯನ್ನು ಉಳಿಸಲು ಹೋಗಿ ಮತ್ತಿಬ್ಬರು ಬಲಿಯಾಗಿದ್ದಾರೆ ಎಂದು ಅರುಣ್ ಕುಮಾರ್ ತಿಳಿಸಿದ್ದಾರೆ. ಪ್ರತ್ಯಕ್ಷ ದರ್ಶಿ ಅರುಣ್ ಕುಮಾರ್ ಅವರು ಹೇಳಿರುವ ಪ್ರಕಾರ ರಾತ್ರಿ 2ರ ಸುಮಾರಿಗೆ ಮನೆಯಲ್ಲಿ ಲೈಟ್ ಹಾಕಿದ್ದರು ನಾನು ಮಲಗುವ ಮುನ್ನ ಹೊರಗಡೆ ಬಂದು ಗಮನಿಸಿದೆ. ಬಾಲಕಿ ರೈಲಿಂಗ್ ಮೇಲೆ ಕುಳಿತು ಬೀಳಲು ಯತ್ನಿಸುತ್ತಿದ್ದಳು. ಆದರೆ ಮತ್ತೊಬ್ಬರು ಆಕೆಯನ್ನು ಹಿಂದಕ್ಕೆ ಎಳೆಯಲು ಯತ್ನಿಸುತ್ತಿದ್ದರು. ನಾನು ನನ್ನ ಪತ್ನಿ ಕರೆದು ಏನಾಗುತ್ತಿದೆ ಎಂದು ತೋರಿಸಿದೆ. ಸ್ಪಷ್ಟವಾಗಿ ಕಾಣಿಸದೆ ಇದಿದ್ದರಿಂದ ದಂಪತಿ…
ಬೆಳಗಾವಿ : ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಭೀಕರ ಕೊಲೆಯಾಗಿದೆ. ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ಕೊಲೆ ನಡೆದಿದ್ದು, ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ (48) ಭೀಕರವಾಗಿ ಕೊಲೆಯಾಗಿದ್ದಾರೆ. ಎರಡು ಸಿಗರೇಟ್ ಮತ್ತು ನೀರಿನ ಬಾಟಲಿ ತೆಗೆದುಕೊಂಡಿದ್ದ ನಾಲ್ವರು, ಹಣ ಕೊಡದೆ ಹೋಗುತ್ತಿದ್ದರು. ಈ ವೇಳೆ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ದುಡ್ಡು ಯಾಕೆ ಕೊಡಲ್ಲ ದುಡ್ಡು ಕೊಡಿ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಾಲ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಮನೆ ಯಜಮಾನನನ್ನು ಕಳೆದುಕೊಂಡು ಕುಟುಂಬದ ಸದಸ್ಯರ ಆಕ್ರಂದನ ಇದೀಗ ಮುಗಿಲುಮುಟ್ಟಿದ್ದು, ಘಟನೆ ಸಂಬಂಧ ಪ್ರಜ್ವಲ್ ಪಾಟೀಲ್, ನಿಖಿಲ್ ಚೌಗಲೆ, ವಿವೇಕ ಚೌಗಲೆ ಹಾಗೂ ಶ್ರೀಧರ್ ಪಾಟೀಲ್ ಯನ್ನು ಕಾಕತಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸಾಕು ನಾಯಿಗಳ ಕಾರಣಕ್ಕೆ ಪ್ರಕರಣಗಳು ಕೋರ್ಟ್ ಮೆಟ್ಟಿಲು ಏರುತ್ತಿದ್ದು ಸಾಕು ನಾಯಿಗಳನ್ನು ನಿಯಂತ್ರಿಸದ ಮಾಲಿಕರಿಂದಾಗಿ ಕೇಸುಗಳು ಹೆಚ್ಚುತ್ತಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ನಾಗ ಪ್ರಸನ್ನ ಅವರಿದ್ದ ಪೀಠ ಅಸಮಾಧಾನ ಹೊರಹಾಕಿದೆ. ಸಾಕು ನಾಯಿ ಕರೆದು ಇದು ಬೇರೆ ಮನೆಯ ಮುಂದೆ ಮಲ-ಮೂತ್ರ ವಿಸರ್ಜನೆ ಪ್ರಶ್ನಿಸಿದ್ದ ಮನೆಯ ಮಾಲೀಕ ಸಾಕು ನಾಯಿ ಮಾಲೀಕರ ನಡುವೆ ಗಲಾಟೆ ಆಗಿದೆ. ದೂರು ಪ್ರತಿಧೂರು ದಾಖಲಾಗಿ ಅಮೃತಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ ನಾಯಿ ಮಾಲಿಕ ದಾಖಲಿಸಿದ ಎಫ್ಐಆರ್ ಗೆ ಹೈಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ.
ಶಿವಮೊಗ್ಗ : ನಿನ್ನೆ ಜಿಲ್ಲೆಯ ಭದ್ರಾವತಿ ತಾಲ್ಲೂಕು ಕಚೇರಿಯ ಮಾನ್ಯ ತಹಶೀಲ್ದಾರ್ ಪರಸಪ್ಪ ವಿರುದ್ಧ ಮಾನಸಿಕ ಕಿರುಕುಳ ಆರೋಪಿಸಿ, ಡೆತ್ ನೋಟ್ ಬರೆದಿಟ್ಟು ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ ನದಿಗೆ ಹಾರಿದ್ದ ಘಟನೆ ಇಂದು ಭದ್ರಾವತಿ ತಾಲ್ಲೂಕಿನಲ್ಲಿ ಆತಂಕ ಮೂಡಿಸಿದೆ. ಅದೃಷ್ಟವಶಾತ್, ಸ್ಥಳೀಯ ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಆ ವ್ಯಕ್ತಿಯ ಜೀವ ಉಳಿಯಿತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅಜ್ಜಿಹಳ್ಳಿ ಗ್ರಾಮದ ನಿವಾಸಿ ಆರ್.ಜಿ. ಅಭಿಷೇಕ್ (ಪುತ್ರ: ಆರ್.ಎಂ. ಗಂಗಾಧರಪ್ಪ) ಅವರು ಈ ಗಂಭೀರ ಹೆಜ್ಜೆ ಇಟ್ಟಿದ್ದು ಭದ್ರಾವತಿ ತಹಶೀಲ್ದಾರ್ ಅವರಿಂದ ನಿರಂತರ ಮಾನಸಿಕ ಒತ್ತಡ ಹಾಗೂ ಕಿರುಕುಳ ಎದುರಿಸುತ್ತಿದ್ದೇನೆ ಎಂದು ಹೇಳಿಕೊಂಡು, ಡೆತ್ ನೋಟ್ ಬರೆದು ವಾಟ್ಸಪ್ನಲ್ಲಿ ಸಂದೇಶ ಕಳುಹಿಸಿದ್ದಾಗಿ ತಿಳಿದುಬಂದಿದೆ. ಅಭಿಷೇಕ್ ತಮ್ಮ ನೋಟ್ನಲ್ಲಿ, 01-02-2026, 02-02-2026 ಹಾಗೂ 03-02-2026ರಂದು ಇ-ಪೌತಿ ಖಾತೆ ಪ್ರಕ್ರಿಯೆ ಹಾಗೂ ಆಗರದಹಳ್ಳಿ ಗ್ರಾಮದ ಸರ್ವೆ ನಂ.56, 49 ಮತ್ತು 50 ಸಂಬಂಧಿಸಿದ ವಿಚಾರಗಳಲ್ಲಿ ಅತಿಯಾದ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ್ದಾರೆ. ಪಿಟಿಸಿಎಲ್ ಕಾಯ್ದೆಯಡಿ ತಡಸ…
ಬೆಂಗಳೂರು : ಬೆಂಗಳೂರಲ್ಲಿ ಹೆದ್ದಾರಿ ಕಾಮಗಾರಿಯ ವೇಳೆ ರಸ್ತೆ ಕುಸಿದು ಬಿದ್ದು ಫುಲ್ ಟ್ರಾಫಿಕ್ ಜಾಮ್ ಆಗಿರುವ ಘಟನೆ ಬೆಂಗಳೂರು ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಈ ವೇಳೆ ತೀವ್ರವಾದ ಸಂಚಾರ ದಟ್ಟಣೆ ಉಂಟಾಯಿತು. ಸರ್ವಿಸ್ ರಸ್ತೆ ಕಾಮಗಾರಿ ವೇಳೆ ರಸ್ತೆ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಟ್ರಾಫಿಕ್ ನಲ್ಲಿ ಸಿಲುಕಿ ಅಂಬುಲೆನ್ಸ್ ಮತ್ತು ಬಸ್ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಹೆದ್ದಾರಿ ಪ್ರಾದಿಕಾರ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಇದೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಂದಗತಿ ಮತ್ತು ಅವೈಜ್ಞಾನಿಕ ಕಾಮಗಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.














