Author: kannadanewsnow05

ಬೆಂಗಳೂರು : ಬೆಂಗಳೂರಿಗೆ ಮಾಲ್ಡಿವ್ಸ್ ಅಧ್ಯಕ್ಷರು ಭೇಟಿ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ರಾಜಭವನದಲ್ಲಿ ಔತಣಕೂಟ ಆಯೋಜನೆ ಮಾಡಲಾಗಿತ್ತು. ಔತನಕೂಟದಲ್ಲಿ ರಾಜ್ಯಪಾಲರದ ಥಾವರ್ ಚಂದ್ ಗೆಹ್ಲೊಟ್, ಸಿಎಂ ಸಿದ್ದರಾಮಯ್ಯ, ಸಚಿವ ಡಾ.ಕೆ ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ನಲ್ಲಿ ಕರ್ನಾಟಕ & ಮಾಲ್ಡೀವ್ಸ್ ನಡುವಿನ ಶೈಕ್ಷಣಿಕ, ಸಾಂಸ್ಕೃತಿಕ ವಿನಿಮಯವನ್ನು ಬಲಪಡಿಸಲು ಪ್ರಯತ್ನಿಸಲಾಗುತ್ತೆ ಎಂದು ತಿಳಿಸಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷರು ಮತ್ತು ಪ್ರಥಮ ಬಾರಿಗೆ ಬೆಂಗಳೂರಿಗೆ ಭೇಟಿ ನೀಡಿದ ಮಹಿಳೆಯನ್ನು ಸ್ವಾಗತಿಸಲು ನನಗೆ ಗೌರವವಿದೆ. ಮಹಿಳೆ ಈ ನಗರದಲ್ಲಿ ವಿದ್ಯಾರ್ಥಿಯಾಗಿದ್ದಳು ಎಂಬುದನ್ನು ಗಮನಿಸುವುದು ಸಂತೋಷಕರವಾಗಿದೆ. ಬೆಂಗಳೂರಿನ ಪ್ರಮುಖ ಐಟಿ ವಲಯದೊಂದಿಗೆ ಪಾಲುದಾರಿಕೆಯಲ್ಲಿ ಮಾಲ್ಡೀವ್ಸ್ ಸರ್ಕಾರದ ಆಸಕ್ತಿಯು ಉತ್ತೇಜನಕಾರಿಯಾಗಿದೆ ಮತ್ತು ಭಾರತದ ಸಿಲಿಕಾನ್ ವ್ಯಾಲಿಯಾಗಿ, ಮಾಲ್ಡೀವ್ಸ್‌ನಲ್ಲಿ ಐಟಿ ಬೆಳವಣಿಗೆಯನ್ನು ಬೆಂಬಲಿಸಲು ನಾವು ಉತ್ಸುಕರಾಗಿದ್ದೇವೆ. ಮಾಲ್ಡೀವ್ಸ್‌ಗೆ ಭೇಟಿ ನೀಡುವ ಅನೇಕ ಪ್ರವಾಸಿಗರಿಗೆ ಕರ್ನಾಟಕದ ಹೆಸರಾಂತ ಕರಕುಶಲ ಮತ್ತು ಕೈಮಗ್ಗಗಳನ್ನು ಉತ್ತೇಜಿಸುವ ಮೂಲಕ ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆ,…

Read More

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಸದ್ಯ ಬಳ್ಳಾರಿ ಜಿಲ್ಲೆಯಲ್ಲಿ ಇದ್ದಾರೆ.ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಬಳ್ಳಾರಿಗೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಬ್ಬರು ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರುವುದಕ್ಕೆ ಬಳ್ಳಾರಿಗೆ ಬಂದಿಲ್ವಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಜೈಲಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲ್ಲ ಎಂದು ತಿಳಿಸಿದರು. ಬಳ್ಳಾರಿ ಜೈಲಲ್ಲಿ ದರ್ಶನ್ ಇರುವ ಕಾರಣಕ್ಕೆ ಬಂದಿರಲಿಲ್ಲ ಎಂಬ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ದರ್ಶನ್ ಇರುವ ಕಾರಣಕ್ಕೆ ಬಳ್ಳಾರಿಗೆ ಬಂದಿಲ್ಲ ಅನ್ನೋದು ಸುಳ್ಳು. ಆದರೆ ಜೈಲಲ್ಲಿ ನಾನು ಯಾವುದೇ ಕಾರಣಕ್ಕೂ ನಟ ದರ್ಶನ್ ಭೇಟಿ ಮಾಡಲ್ಲ ಎಂದು ಅವರು ತಿಳಿಸಿದರು. ಇನ್ನು ಮೈಸೂರಿನಲ್ಲಿ ದಲಿತ ಕಾಂಗ್ರೆಸ್ ನಾಯಕರಿಂದ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆಗ ಸಚಿವ ಎಸ್ ಸಿ ಮಹದೇವಪ್ಪ ಮನೆಗೆ ಹೋಗಿದ್ದಾರೆ. ಸಚಿವರ ಭೇಟಿಯ ವೇಳೆ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ಸಚಿವರು ಸಭೆ ಸೇರಿದ್ದು ರಾಜಕೀಯ…

Read More

ಚಿಕ್ಕಮಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಸಂಕಷ್ಟಕ್ಕೆ ಸಿಲುಕಿದ್ದು, ಇದರ ಮಧ್ಯ ಸಿಎಂ ಬದಲಾವಣೆ ಕುರಿತು ಕೂಗು ಕೇಳಿ ಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ನಂತರ ಮತ್ತೊಬ್ಬ ಭವಿಷ್ಯದ ನಾಯಕ ಅಂದರೆ ಸತೀಶ್ ಜಾರಕಿಹೊಳಿ ಎಂದು ಪರೋಕ್ಷವಾಗಿ ಸತೀಶ್ ಮುಂದಿನ ಸಿಎಂ ಎಂದು ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು. ಚಿಕ್ಕಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಯವರು ಸರಳ ಸಜ್ಜನ ರಾಜಕಾರಣಿ. ಸಿಎಂ ಸಿದ್ದರಾಮಯ್ಯ ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ನಂತರ ಮತ್ತೊಬ್ಬ ನಾಯಕ ಇದ್ದರೆ ಅದು ಸತೀಶ್ ಜಾರಕಿಹೊಳಿ ಎಂದು ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆಯಲ್ಲಿ ಶಾಸಕ ಎಚ್.ಡಿ ತಮ್ಮಯ್ಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದು ನಂತರ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ನಾಯಕನಿದ್ದರೆ ಅದು ಸತೀಶ್ ಜಾರಕಿಹೊಳಿಯವರೇ. ಒಂದು ಕಡೆ ಡಿಕೆಶಿ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಸಾಕಷ್ಟು ಹಗ್ಗ ಜಗ್ಗಾಟ ನಡೆದಿತ್ತು. ಇದೀಗ ಈ ಒಂದು ಎಲ್ಲಾ ಜಟಾಪಟಿ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ಮಾಡಿದ್ದಾರೆ. ಹೌದು ಸಾಕಷ್ಟು ಜಟಾಪಟಿ ನಡುವೆ ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಮುಡಾ ಹಗರಣ ಸೇರಿದಂತೆ ಹಲವು ವಿಚಾರವಾಗಿ ರಾಜ್ಯಪಾಲರು ಹಲವು ಬಾರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ವರದಿ ಕೇಳಿದ್ದರು. ಅಲ್ಲದೆ ಕಾಂಗ್ರೆಸ್ ನಾಯಕರು ಕೂಡ ರಾಜ್ಯಪಾಲರ ಈ ಒಂದು ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು…

Read More

ಬೆಂಗಳೂರು : ರೈತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೇ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕ ವಿನಯ್ ಕುಲಕರ್ಣಿ ಅವರು ಸಂತ್ರಸ್ತೇ ಮಹಿಳೆಯ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಹೌದು  ಸಂತ್ರಸ್ತೆ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವಿಚಾರವಾಗಿ ಇಂದು ವಿನಯ್ ಕುಲಕರ್ಣಿ ಅವರು, ತನ್ನ ವಿಡಿಯೋ ಹಾಗೂ ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲು ಷಡ್ಯಂತರ ರೂಪಿಸಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ. ದೂರು ಆಧರಿಸಿ ಖಾಸಗಿ ಸುದ್ದಿ ವಾಹಿನಿ ಮತ್ತು ಸಂತ್ರಸ್ತೆ ವಿರುದ್ಧ ಸಂಜಯ ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಂತ್ರಸ್ತೆ ಅನೇಕ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಬ್ಲಾಕ್ ಮೇಲ್​ ಮಾಡಿದ್ದಾಳೆ. ಸಂತ್ರಸ್ತೆ ಮೂಲಕ ನನ್ನ ವಿರುದ್ಧ ಸಂಚು ರೂಪಿಸಿ ಮಾನಹಾನಿ ಮಾಡಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ದೂರಿನಲ್ಲಿ…

Read More

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಶಾಸಕ ಮುನಿರತ್ನ ವಿಚಾರವಾಗಿ ನೋಟಿಸ್ ಕೊಟ್ಟಿದ್ದೇವೆ. ಎಫ್ ಎಸ್ ಎಲ್ ವರದಿ ಬಳಿಕ ಶಾಸಕ ಸ್ಥಾನದ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಚಾಟನೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿಕೆ ನೀಡಿದರು. ಜಾತಿಗಣತಿ ಹೇಳಿ ಮಾಡಿಸಿದ್ದಾರೆಂದು ನಿಮ್ಮ ಪಕ್ಷದವರೇ ಹೇಳುತ್ತಿದ್ದಾರೆ. ಡಿಕೆ ಶಿವಕುಮಾರ್, ಕೆ. ಸುಧಾಕರ್, ಶಾಮನೂರು ಶಿವಶಂಕರಪ್ಪ ವಿರೋಧ ಮಾಡುತ್ತಿದ್ದಾರೆ. ಲಿಂಗಾಯತ ಸಮುದಾಯದವರು ಕೂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ನಿಮ್ಮ ಗೊಂದಲಗಳನ್ನು ಬಿಜೆಪಿಯ ಮೇಲೆ ಹಾಕಬೇಡಿ ಎಂದು ವಿಧಾನಸೌಧದಲ್ಲಿ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಬೆಳಗಾವಿ ಸಚಿವರು ರೋಡ್ ಶೋ ಮಾಡುತ್ತಿದ್ದಾರೆ. ಉದ್ಯಮಿಗಳು ಮಾಡುವ ರೀತಿ ಸಚಿವರು ರೋಡ್ ಶೋ ಮಾಡುತ್ತಿದ್ದಾರೆ.ಕೊಡಗು, ಚಾಮರಾಜನಗರ, ಚಿಕ್ಕಮಂಗಳೂರು ಕಡೆಗೆ ರೋಡ್ ಶೋ ನಡೆಸಿದ್ದಾರೆ. ನಾನೇ ಸಿಎಂ ನಾನೇ ಸಿಎಂ ಅಂತ ಯಾರು ಹೇಳುತ್ತಿದ್ದಾರೆ? ಡಿಕೆ ಹೇಳಿಕೆಗಳಿಗೆ ಕಡಿವಾಣ ಹಾಕ್ತಿನಿ ನೋಟಿಸ್ ಕೊಡುತ್ತೇವೆ ಅಂದ್ರು.ಕಾಂಗ್ರೆಸ್ನವರ…

Read More

ಬೆಂಗಳೂರು : ಯುವಕನೊಬ್ಬ  ಇನ್ಸ್ಟಾಗ್ರಾಮ್ ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿ, ಬಳಿಕ ಪ್ರೀತಿಗೆ ತಿರುಗಿದ ನಂತರ ಮದುವೆಯಾಗುವುದಾಗಿ ನಂಬಿಸಿ  ಬಲವಂತದಿಂದ ಎರಡು ಬಾರಿ ಅತ್ಯಾಚಾರ ಮಾಡಿದ್ದು ಅಲ್ಲದೆ, ಯುವತಿ ಪ್ರೆಗ್ನೆಂಟ್ ಆದಾಗ ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಯುವತಿಯ ದೂರಿನ ಮೇಲೆ ಇದೀಗ ಯುವಕನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಹೌದು ಛತ್ತೀಸ್​ಗಢ ಮೂಲದ ಯುವತಿ ಬೆಂಗಳೂರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. 2021ರಲ್ಲಿ ಇನ್‌ಸ್ಟಾಗ್ರಾಂನಲ್ಲಿ ಕೇರಳ ಮೂಲದ ಬಿಲಾಲ್ ರಫೀಕ್‌ ಎಂಬಾತನ ಪರಿಚಯವಾಗಿತ್ತು. ನಂತರ ಪರಸ್ಪರ ಪ್ರೀತಿಸಲಾರಂಭಿಸಿದ್ದೆವು. ಈ ಸಂದರ್ಭದಲ್ಲಿ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಬಿಲಾಲ್ ರಫೀಕ್ 2 ಬಾರಿ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳಸಿದ್ದ. ಎರಡೂ ಬಾರಿಯೂ ತಾನು ಗರ್ಭಿಣಿಯಾದಾಗ ಆತನೇ ಪುಸಲಾಯಿಸಿ ಗರ್ಭಪಾತ ಮಾಡಿಸಿದ್ದ ಎಂದು ಯುವತಿ ತಿಳಿಸಿದ್ದಾಳೆ. 2024ರಲ್ಲಿ ಆರೋಪಿಯಿಂದ 3ನೇ ಬಾರಿ ಗರ್ಭಿಣಿಯಾದಾಗ ತನ್ನ ಒತ್ತಾಯದ ಕಾರಣಕ್ಕೆ ಆರೋಪಿ ಮದುವೆಗೆ ಸಮ್ಮತಿಸಿದ್ದ. ಎರಡೂ ಕುಟುಂಬಸ್ಥರು ಮದುವೆ ಮಾಡಿಕೊಳ್ಳಲು ಒಪ್ಪಿಗೆ ನೀಡಿದ್ದರು. ಬಳಿಕ ಆರೋಪಿಯ ಪೋಷಕರು…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನ್ನ ಡೆತ್ ನೋಟ್ನಲ್ಲಿ ಮಹಾಲಕ್ಷ್ಮಿ ಕುರಿತ ಹಲವು ವಿಷಯಗಳನ್ನು ಬರೆದಿಟ್ಟು ಸೂಸೈಡ್ ಮಾಡಿಕೊಂಡಿದ್ದಾನೆ. ಹೌದು ಮುಕ್ತಿ ರಂಜನ್ ರಾಯ್ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಮಹಾಲಕ್ಷ್ಮಿ ಕುರಿತಂತೆ ಹಲವು ವಿಷಯಗಳನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಹಲವು ವಿಷಯಗಳು ಪೊಲೀಸರ ತನಿಖೆಯ ವೇಳೆ ಬಹಿರಂಗವಾಗಿವೆ. ಡೆತ್ ನೋಟ್ ನಲ್ಲಿ ನಾನು ಅವಳನ್ನು ಕೊಲ್ಲದಿದ್ದರೆ ನನ್ನನ್ನು ಕೊಲ್ಲುತ್ತಿದ್ದಳು ಅಂತ ಆತ್ಮಹತ್ಯೆ ಮಾಡಿಕೊಂಡ ಹಂತಕ ಮುಕ್ತಿ ರಂಜನ್ ಸಾಯುವ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದ ಮಹಾಲಕ್ಷ್ಮಿ ಕೊಲೆ ರಹಸ್ಯ ಈಗ ಬಯಲಾಗಿದೆ. ಡೆತ್ ನೋಟ್ ನಲ್ಲಿನ ರಹಸ್ಯ ಏನು? ಮಹಾಲಕ್ಷ್ಮಿ ತನ್ನನ್ನು ಕೊಲ್ಲಲು ಮುಂದಾಗಿದ್ದಳು ಮತ್ತು ದೇಹವನ್ನು ಎಸೆಯುವುದಕ್ಕೆ ಕಪ್ಪು ಸೂಟ್‌ಕೇಸ್ ಸಹ ಖರೀದಿಸಿದ್ದಳು ಎಂದು ಬರೆದಿದ್ದಾನೆ.…

Read More

ಬೀದರ್ : ಪೋಷಕರ ಜೊತೆ ಜಮೀನಿಗೆ ತೆರಳಿದ್ದಾಗ ಸಿಡಿಲು ಬಡಿದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮೆಹಕರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುಕೇಶ್ ಭೀಮಣ್ಣ ಮೊಳಕೆರ (16) ಎಂಬ ಬಾಲಕ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾನೆ. ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಮೇಹಕರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಮುಕೇಶ್ ಸೋಯಾಬೀನ್ ಕಟಾವಿಗೆ ತೆರಳಿದ್ದ. ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಯೊಂದನ್ನು ರಾಜ್ಯ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಮಹಿಳಾ ಅಧಿಕಾರಿ, ಶಿಕ್ಷಕಿಯರು ಹಾಗೂ ಸಿಬ್ಬಂದಿಗೆ ಕಿರುಕುಳ, ಮಾನಸಿಕ ಹಿಂಸೆ, ದುರುದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಲೈಂಗಿಕ ದೌರ್ಜನ್ಯ ಮುಂತಾದ ಘಟನೆಗಳ ಪರಿಹಾರಕ್ಕೆ 9 ಮಹಿಳಾ ಅಧಿಕಾರಿಗಳ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.ಈ ಸಮಿತಿಯು ಕಾಲಕಾಲಕ್ಕೆ ಶಿಕ್ಷಣ ಇಲಾಖೆ ಅಧೀನದ ಮಹಿಳಾ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕಿಯರ ದೂರು ಪರಿಶೀಲನೆ ನಡೆಸುತ್ತದೆ. ಅಲ್ಲದೆ ಇತ್ತೀಚಿಗೆ ಕನ್ನಡ ಚಿತ್ರರಂಗದಲ್ಲಿಯೂ ಕೂಡ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಟ ಚೇತನ ಅಹಿಂಸಾ ಸೇರಿದಂತೆ ಹಲವು ಹಿರಿಯ ನಟ ನಟಿಯರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇರಳ ಮಾದರಿಯಲ್ಲಿ ಹೇಮಾ ಸಮಿತಿ ರಚನೆ ಮಾಡಿ ಎಂದು…

Read More