Author: kannadanewsnow05

ಬೆಂಗಳೂರು : ಈಗಾಗಲೇ KPSC ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇದೀಗ KAS ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು…

Read More

ಬೆಂಗಳೂರು : KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ. ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್‌ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ, KPSC ನಲ್ಲಿ ಹಲವು ಬಾರಿ ನಾನಾ ಗೊಂದಲಗಳಾಗಿ, ನ್ಯಾಯಾಲಯಗಳ ಮೆಟ್ಟಿಲು ಏರಿರುವ ಚರಿತ್ರೆ ಇದೆ. ಭ್ರಷ್ಟಾಚಾರ KPSC ಯಿಂದ ಹೊರಗೆ ಹೋಗಬೇಕು ಇದರ ಬಗ್ಗೆ ಎರಡು ಮಾತಿಲ್ಲ. ನಾನು ಯಾವತ್ತಿಗೂ ಅಧಿಕಾರಿಗಳನ್ನು ವಹಿಸಿಕೊಂಡು ಹಾಗೂ ಕೆಪಿಎಸ್ಸಿ ವಹಿಸಿಕೊಂಡು ಮಾತನಾಡಲ್ಲ. ಎಲ್ಲಿ ನ್ಯಾಯ ಸಿಗಬೇಕು ಅದರ ಪರವಾಗಿಯೇ ಇರುತ್ತೇನೆ. ಯಾರು ತಪ್ಪು ಮಾಡಿದ್ದಾರೋ…

Read More

ಕೋಲಾರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕಾಮುಕ ತಂದೆಯೊಬ್ಬ ಮಗಳ ಮೀ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಹೀನ ಕೃತ್ಯ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಈ ಒಂದು ಬೆಚ್ಚಿ ಬೆಳಿಸುವ ಘಟನೆ ವರದಿಯಾಗಿದೆ. ಹೌದು ಕಾಮುಕ ತಂದೆಯೊಬ್ಬ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗೆ ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ತಾಯಿ ಇಲ್ಲದ ಹೆಣ್ಣು ಮಕ್ಕಳನ್ನು ತಂದೆ ತಾನೆ ನೋಡಿಕೊಳ್ಳುತ್ತಿದ್ದ. ಅಲ್ಲದೇ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಆಗಿದೆ. ಇದೀಗ 20 ವರ್ಷದ ಮಗಳ ಮೇಲೆ ನಿರಂತರವಾಗಿ 5 ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಹೊಟ್ಟೆನೋವು ಎಂದು ಆಸ್ಪತ್ರೆಗೆ ಹೋದಾಗ ಈ ಒಂದು ಕೃತ್ಯ ಬೆಳಕಿಗೆ ಬಂದಿದೆ. ಮಗಳ ದೂರಿನ ಮೇರೆಗೆ ಪೊಲೀಸರು ತಂದೆಯನ್ನು ಅರೆಸ್ಟ್ ಮಾಡಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ನಡೆದಿದ್ದು, ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಠಿ ತಾಂಡದಲ್ಲಿ ನಡೆದಿದೆ. ಮೃತರನ್ನು ನೀಲಾಬಾಯಿ ಶಂಕರ್ (35) ಪುತ್ರಿಯರಾದ ರಾಜೇಶ್ವರಿ (10) ನಿಶಾ (4) ಎಂದು ತಿಳಿದುಬಂದಿದೆ.ನೀಲಾಬಾಯಿಗೆ ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರ ಸೇರಿ ಒಟ್ಟು ಐದು ಜನ ಮಕ್ಕಳಿದ್ದು, ಬೇಬಿ (12) ಹಾಗೂ 11 ತಿಂಗಳ ಗಂಡು ಮಗು ಶೆವಾನನ್ನು ಮನೆಯಲ್ಲಿ ಬಿಟ್ಟು, ಇನ್ನುಳಿದ ಮೂವರು ಹೆಣ್ಣು ಮಕ್ಕಳನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ತಾಂಡಾದ ಬಳಿ ಇರುವ ಬಾವಿಗೆ ತೆರಳಿದ್ದಾರೆ. ಮೊದಲು ಇಬ್ಬರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿದ್ದಾಳೆ. ಇನ್ನೊಬ್ಬ ಮಗಳು ಸಂಜುಳನ್ನು ಬಾವಿಗೆ ತಳ್ಳುವಾಗ ಬಾಲಕಿ ತಪ್ಪಿಸಿಕೊಂಡು ಓಡಿ ಹೋಗಿ ತಾಂಡಾದಲ್ಲಿ ಈ ವಿಷಯ ತಿಳಿಸಿದ್ದಾಳೆ. ಆದರೆ ಅಲ್ಲಿನ ನಿವಾಸಿಗಳು ಬಾವಿಯ ಹತ್ತಿರ ಬರುವಷ್ಟರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ…

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಈ ಒಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿ ಪ್ರಕರಣದ ಕುರಿತು ಮಾರ್ಚ್ 14ರಂದು ಆದೇಶ ಪ್ರಕಟಿಸಲಿದ್ದಾರೆ. ಇಂದು ಆರ್ಥಿಕ ವಿಶೇಷ ನ್ಯಾಯಾಲಯದಲ್ಲಿ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, DRI ಪರವಾಗಿ ವಕೀಲ ಮಧು ರಾವ್ ವಾದ ಮಂಡನೆ ಮಾಡಿದರು. 135 (1) A & B ಅಡಿ ಕೇಸ್ ದಾಖಲಿಸಿದ್ದಾರೆ. 50 ಲಕ್ಷ ರೂಪಾಯಿಗಿಂತ ಹೆಚ್ಚಿನ ಅಕ್ರಮ ಸಾಗಾಣೆ ನಿಷಿದ್ಧವಾಗಿದೆ. ಕಸ್ಟಂ ಕಾಯ್ದೆ 104ರ ಅಡಿ ಬಂಧನದ ಅಧಿಕಾರವಿದೆ. ಬಂಧನದ ನಂತರ ಅದಕ್ಕೆ ಕಾರಣಗಳನ್ನು ನೀಡಬೇಕು. ದುಬೈ ನಿಂದ ವಿಮಾನ ಬಂದು ಏರ್ಪೋರ್ಟ್ ನಲ್ಲಿ ನಿಂತಿತ್ತು. ರಾಜ್ಯದ ಪ್ರೊಟೊಕಾಲ್ ಆಫೀಸರ್…

Read More

ತುಮಕೂರು : ದನದ ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದ ಪರಿಣಾಮ 1 ಕರು ಸೇರಿದಂತೆ 4 ಹಸುಗಳು ಸಜೀವವಾಗಿ ದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದಲ್ಲಿ ನಡೆದಿದೆ. ಕಳೆದ ಮಾರ್ಚ್ 10 ರಂದು ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದ ರೈತ ಕೊಂಡಪ್ಪನ ಜಮೀನಿನ ತೋಟದಲ್ಲಿದ್ದ ದನದ ಹಟ್ಟಿಯಲ್ಲಿ ದುರ್ಘಟನೆ ಸಂಭವಿಸಿದೆ.ತೋವಿನಕೆರೆ ಗ್ರಾಮದ ರೈತ ಕೊಂಡಪ್ಪ ಎಂಬಾತನ ಜಮೀನಿನ ಶೆಡ್ಡಿನಲ್ಲಿ ಹಸುಗಳನ್ನು ಕಟ್ಟಿ ಹೋದ ನಂತರ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಶೆಡ್ಡಿಗೆ ವಿದ್ಯುತ್ ಸಂಪರ್ಕವು ಇಲ್ಲ, ಮತ್ತು ದೀಪದ ಬೆಳಕು ಇರದಿದ್ದರೂ ಹೇಗೆ ಬೆಂಕಿ ಆವರಿಸಿದೆ ಎಂದು ರೈತ ಅನುಮಾನ ವ್ಯಕ್ತಪಡಿಸಿದ್ದಾನೆ. ಸ್ಥಳಕ್ಕೆ ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ನಾಗಭೂಷನ್, ಕಂದಾಯ ಇಲಾಖೆ ಪ್ರತಾಪ್, ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : 2013ರಲ್ಲಿ ಹಲ್ಲೆ ಅಟ್ರಾಸಿಟಿ ಪ್ರಕರಣದಲ್ಲಿ ಸಚಿವ ಕೆ ಎಸ್ ಮುನಿಯಪ್ಪ ಗೆ ಸಂಕಷ್ಟ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೀಗ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ ಸಂತೋಷ ಗಜಾನನ ಭಟ್ ಅವರು ಕೆ.ಎಚ್ ಮುನಿಯಪ್ಪಗೆ ಜಾಮೀನು ನೀಡಿ ಆದೇಶಿಸಿದ್ದಾರೆ. 2013ರ ಹಲ್ಲೆ ಅಟ್ರಾಸಿಟಿ ಕೇಸ್ ನಲ್ಲಿ ಸಚಿವ ಕೇಸ್ ಮುನಿಯಪ್ಪ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕನ್ನಡಕ್ಕೆ ಸಂಬಂಧಪಟ್ಟಂತೆ ಮುನಿಯಪ್ಪ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಅವರು ಕೋರ್ಟಿಗೆ ಗೈರು ಹಾಜರಾಗಿದ್ದರು. ಹಾಗಾಗಿ ಜನಪ್ರತಿನಿಧಿ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಇಂದು ಕೋರ್ಟಿಗೆ ಸಚಿವ ಕುಂದು ಹಾಜರಾಗಬೇಕಿತ್ತು ರಾಬರ್ಟ್ ಸನ್ ಪೇಟೆ ಪೊಲೀಸರು ಪೊಲೀಸರ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವೇಳೆ ಕೊರ್ಯೆ ಬಿ ರಿಪೋರ್ಟ್ ತಿರಸ್ಕರಿಸಿದ ಮೇಲೆ ಸಚಿವ ಮುನಿಯಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು. ಹಾಗಾಗಿ ಇಂದು ಖುದ್ದು…

Read More

ಕಲಬುರ್ಗಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಇದುವರೆಗೂ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿದ್ದರು ಸಹ ಈ ಒಂದು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮತ್ತೊಂದು ಜೀವ ಬಲಿಯಾಗಿದ್ದು ಕಲ್ಬುರ್ಗಿಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.ಚಂದ್ರಕಾಂತ ಪೂಜಾರಿ (35) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಕಲಬುರಗಿ ನಗರದ ಸಿದ್ದಾರೂಢ ಕಾಲೋನಿ ನಿವಾಸಿಯಾಗಿದ್ದ ಚಂದ್ರಕಾಂತ, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಚಂದ್ರಕಾಂತ ತಮ್ಮ ಸ್ನೇಹಿತರಿಗೆ ಆಡಿಯೋ ಸಂದೇಶವೊಂದನ್ನು ರೆಕಾರ್ಡ್ ಮಾಡಿದ್ದಾರೆ. ನಾನು ರೊಕ್ಕಕ್ಕಾಗಿ ಸಾಯುತ್ತಿಲ್ಲ, ಮಂದಾಕಿನಿ ಪಾಟೀಲ್ ಮತ್ತು ಅವರ ಮಗನ ಟಾರ್ಚರ್ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಮೃತ ಚಂದ್ರಕಾಂತ ಪೂಜಾರಿ,…

Read More

ಕಲಬುರ್ಗಿ : ಕಲ್ಬುರ್ಗಿಯ ನಗರದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಿಢೀರ್ ಎಂದು ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಇಂದು ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಲಬುರಗಿ ಕಚೇರಿಯ ಮೇಲೆ ಲೋಕಾಯುಕ್ತರ ತಂಡ ದಾಳಿ ನಡೆಸಿದೆ.. ಲೋಕಾಯುಕ್ತ SP ಉಮೇಶ್ ನೇತ್ರತ್ವದ ತಂಡ ದಾಳಿ ಮಾಡಿದ್ದು ಇಲಾಖೆಯ ಕಡತಗಳನ್ನ ಪರಿಶೀಲನೆ ಮಾಡಿದೆ. ನಿಗಮದಲ್ಲಿನ ಯೋಜನೆ, ಅನುದಾನಗಳು ಪಟ್ಟಿ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ನಡೆಸಿದೆ.

Read More

ಬೆಳಗಾವಿ : ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಕುಟುಂಬಗಳ ನಡುವೆ ಕಲ್ಲು ತೂರಾಟ ಹಾಗೂ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆಸಲಾಗಿದ್ದು, ಈ ಒಂದು ಗಲಾಟೆಯಲ್ಲಿ ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಳೆ ವಂಟಮೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಮಾಹಿತಿ ತಿಳಿದ ಕಾಕತಿ ಪೊಲೀಸರು ಸ್ಥಳಕ್ಕೆ ದೌಡಯಿಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಗುಂಪುಗಳ ನಡುವೆ ಮಾರಮಾರಿ ಆಗಿದ್ದು ಪರಸ್ಪರ ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹಳೆ ವಂಟಮೂರಿಯಲ್ಲಿ ನಡೆದಿದೆ. ಗುಂಪು ಘರ್ಷಣೆಯಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಕುಡಗೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕುಟುಂಬದ ಮಧ್ಯ ಏರ್ಪಟ್ಟ ಜಾಗದ ವಿವಾದಕ್ಕೆ ಈ ಒಂದು ಕಲ್ಲುತೂರಾಟ ನಡೆದಿದೆ. ಮಾರುತಿ ಹೊನ್ನುರೆ ಹಾಗು ಪರಸಪ್ಪ ಹೋಳಿಕಾರ್ ಕುಟುಂಬದ ಮಧ್ಯ ಈ ಒಂದು ಗಲಾಟೆ ನಡೆದಿದೆ. ಗಲಾಟೆ ಮಾಡುತ್ತಲೇ ವಾಗ್ವಾದ ತಾರಕಕ್ಕೆ ಏರಿ ಮನೆಯ ಮೇಲ್ಚಾವಣಿ ಏರಿದ ಕೆಲವು ಉದ್ರಿಕ್ತರು ಪಕ್ಕದ ಮನೆಯ ಮೇಲೆ ಕಲ್ಲು ತೂರಾಟ…

Read More