Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ ಹೇಳಿಕೆಯನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಆರ್ ಬಿ ತಿಮ್ಮಾಪುರ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಆಗಿದೆ ಅಂತ ಹೇಳಿದ್ದಾರೆ. ತಿಮ್ಮಾಪುರಗೆ ಪಾಲು ಕೊಡಬೇಕು ಎಂಬ ಆಡಿಯೋ ವೈರಲ್ ಆಯ್ತು. ನನ್ನ ಬಳಿ ಆಡಿಯೋ ಪೆನ್ ಡ್ರೈವ್ ಇದೆ ಎಂದು ಇದೆ ವೇಳೆ ಅಶೋಕ್ ಪೆನ್ ಡ್ರೈವ್ ಅನ್ನು ಸದನದಲ್ಲಿ ಪ್ರದರ್ಶನ ಮಾಡಿದರು. ಜಂಟಿ ಆಯುಕ್ತ ನಾಗರಾಜಪ್ಪ ವಕೀಲ ರಮೇಶ ಸಂಭಾಷಣೆ ಮಾಡಿರುವ ಆಡಿಯೋ ಇದಾಗಿದ್ದು, ನಾಗರಾಜಪ್ಪ 18 ಲಕ್ಷಕ್ಕೆ ಬೇಡಿಕೆ ಇಟ್ಟ ಆಡಿಯೋ ಇದೆ. ಸಚಿವರಿಂದ ಅಥವಾ ಅವರ ಮಗನ ಕಡೆಯಿಂದ ಮೆಸೇಜ್ ಬರಬೇಕು ಹೀಗೆ ವಕೀಲ ರಮೇಶ್ಗೆ ಹೇಳಿದ್ದಾನೆ ಎಂದು ಆಡಿಯೋ ಸಂಭಾಷಣೆಯ ವಿವರವನ್ನು ಆರ್ ಅಶೋಕ್ ಇದೆ ವೇಳೆ ಓದಿದರು. ಪ್ರತಿ ಅಂಗಡಿಯಲ್ಲೂ ತಿಂಗಳಿಗೆ 10 ರಿಂದ 15 ಸಾವಿರ ರೂಪಾಯಿ ಕಲೆಕ್ಷನ್ ಆಗುತ್ತಿದ್ದು, ಒಟ್ಟು ಒಂದು ತಿಂಗಳಿಗೆ…
ನವದೆಹಲಿ : ಭಾರತ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಭಾರತ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ indiapost.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಡ್ರೈವ್ ಶಾಖೆ ಪೋಸ್ಟ್ಮಾಸ್ಟರ್ (BPM)/ಸಹಾಯಕ ಶಾಖೆ ಪೋಸ್ಟ್ಮಾಸ್ಟರ್ (ABPM)/ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ನೋಂದಣಿ ಪ್ರಕ್ರಿಯೆಯು ಜನವರಿ 30 ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 14, 2026 ರಂದು ಮುಕ್ತಾಯಗೊಳ್ಳುತ್ತದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆಬ್ರವರಿ 1 ರಂದು ಪ್ರಾರಂಭವಾಗಿ ಫೆಬ್ರವರಿ 16, 2026 ರಂದು ಕೊನೆಗೊಂಡಿತು. ತಿದ್ದುಪಡಿ ವಿಂಡೋ ಫೆಬ್ರವರಿ 17 ರಂದು ತೆರೆದು ಫೆಬ್ರವರಿ 18, 2026 ರಂದು ಮುಕ್ತಾಯಗೊಳ್ಳುತ್ತದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಕೆಳಗೆ ಓದಿ. ಅರ್ಹತಾ ಮಾನದಂಡಗಳು ವಯಸ್ಸಿನ ಮಿತಿ 18 ರಿಂದ 40 ವರ್ಷಗಳ ನಡುವೆ ಇರಬೇಕು. ಜಿಡಿಎಸ್ಗೆ ಸೇರಲು ಶೈಕ್ಷಣಿಕ ಅರ್ಹತೆಯೆಂದರೆ ಭಾರತ ಸರ್ಕಾರ/ರಾಜ್ಯ ಸರ್ಕಾರಗಳು/ಭಾರತದ ಯಾವುದೇ ಮಾನ್ಯತೆ ಪಡೆದ ಶಾಲಾ…
ಮುಂಬೈ : ಇತ್ತೀಚಿಗೆ ತಾನೇ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನಪ್ಪಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಸಚಿವೆ ಪಂಕಜಾ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಹೌದು ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ಈ ಒಂದು ಘಟನೆಯ ಸಂಭವಿಸಿದ್ದು, ಹೆಲಿಕಾಪ್ಟರ್ ನಲ್ಲಿ ಸಚಿವೆ ಪಂಕಜ ಮುಂಡೆ ಲಾತೂರ್ ಗೆ ತೆರಳಬೇಕಿತ್ತು. ಜಿಲ್ಲಾ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ಪಂಕಜಾ ತೆರಳಬೇಕಿತ್ತು. ಆದರೆ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಬಗ್ಗೆ ಪೈಲಟ್ ವರದಿ ನೀಡಿದ್ದಾರೆ. ಹಾಗಾಗಿ ಲಾತೂರ್ ಪ್ರಯಾಣವನ್ನು ಬಿಜೆಪಿ ನಾಯಕಿ ಪಂಕಜಾ ಮುಂದೂಡಿದ್ದಾರೆ. ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವರ್ ಸಾವನಪ್ಪಿದ ಬಳಿಕ ವಿಮಾನದಲ್ಲಿ ತೆರಳಲು ನಾಯಕರು ಇದೀಗ ಎಚ್ಚರವಹಿಸುತ್ತಿದ್ದಾರೆ.
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ವ್ಯಕ್ತಿಯನ್ನು ಕೊಂದು ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ 16 ಬಾರಿ ಮಚ್ಚಿನಿಂದ ಕೊಚ್ಚಿ ಕ್ರೌರ್ಯ ಮೆರೆದಿದ್ದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಹೌದು ಸೌದತ್ತಿ ತಾಲೂಕಿನ ಬಸಡೋಣಿ ಗ್ರಾಮದ ಬಸಪ್ಪ (56) ಎಂಬಾತನನ್ನು ನಡುವಿನ ರಸ್ತೆಯಲ್ಲಿಯೇ ಈರಪ್ಪ ಎಂಬಾತ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹತ್ಯೆಯ ಬಳಿಕ ಸಿನಿಮಾ ಸ್ಟೈಲ್ ನಲ್ಲಿ ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ. ನಿನ್ನೆ ಸಂಜೆ ಬಸಪ್ಪನ ಬೈಕ್ ಅಡಗಟ್ಟಿ ಈರಯ್ಯ ಎಂಬಾತ ಕೊಲೆ ಮಾಡಿದ್ದಾನೆ. ಪೊಲೀಸರಿಗೆ ಕರೆ ಮಾಡಿ ಕೊಲೆ ಮಾಡಿದ್ದಾಗಿ ಮಾಹಿತಿ ನೀಡಿದ್ದಾನೆ. ಅಲ್ಲದೇ ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ. 2015ರಲ್ಲಿ ಈರಯ್ಯ ಎಂಬಾತನ ತಾಯಿಯ ಕೊಲೆಯಾದ ವ್ಯಕ್ತಿ ಓಡಿ ಹೋಗಿದ್ದ ಎನ್ನುವಂತ ಮಾಹಿತಿ ತಿಳಿದು ಬಂದಿದೆ. 2015ರಲ್ಲಿ ಓಡಿ ಹೋದಂತವರು ವಾಪಸ್ ಊರಿಗೆ ಬಂದಿರಲಿಲ್ಲ ಇನ್ನೊಂದು ಕಡೆ ಆರೋಪಿ…
ಬೆಂಗಳೂರು: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರದ ಮಾರಿಕಾಂಬ ದೇವಿ ದರ್ಶನದ ವೇಳೆ ಕುಸಿದು ಬಿದ್ದ ಮಾಜಿ ಸ್ಪೀಕರ್ ಕಾಡೋಡು ತಿಮ್ಮಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ. ಕಾಗೋಡು ತಿಮ್ಮಪ್ಪ ಒಬ್ಬ ಭಾರತೀಯ ನಿವೃತ್ತ ರಾಜಕಾರಣಿ, ಅವರು ಕರ್ನಾಟಕ ವಿಧಾನಸಭೆಯ 21 ನೇ ಸ್ಪೀಕರ್ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದರು ಮತ್ತು ಸಾಗರದಿಂದ ಆಯ್ಕೆಯಾದ ಕರ್ನಾಟಕ ವಿಧಾನಸಭೆಯ ಮಾಜಿ ಸದಸ್ಯರಾಗಿದ್ದರು. ಅವರು ಮೇ 2013 ರಲ್ಲಿ 14 ನೇ ವಿಧಾನಸಭೆಯ ಸ್ಪೀಕರ್ ಆಗಿ ಕೆಲಸ ಮಾಡಿದ್ದರು.
ರಾಯಚೂರು : ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ಶಾಕ್ ನಿಂದ ಬಾಲಗೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೆಚ್ಚುವರಿ ಮುಖ್ಯ ಶಿಕ್ಷಕ ಪರಸಪ್ಪ ಮೈಲಾರಪ್ಪ ಚಲವಾದಿ ಅಮಾನತು ಮಾಡಲಾಗಿದೆ ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿ ತೋರಿದ ಆರೋಪದ ಅಡಿ ಮುಖ್ಯ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ. ಪರಸಪ್ಪ ಮೈಲಾರಪ್ಪನನ್ನು ಅಮಾನತುಗೊಳಿಸಿ ರಾಯಚೂರು ಡಿಡಿಪಿಐ ಕೇಡಿ ಬಡಿಗೇರ್ ಆದೇಶ ಹೊರಡಿಸಿದ್ದಾರೆ ಕುರಕುಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿತ್ತು ಅವರ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕುರಕುಂದ ಗ್ರಾಮದ ಶಾಲೆಯಲ್ಲಿ ವಿದ್ಯುತ್ ಶಾಕ್ ನಿಂದ 5 ನೇ ತರಗತಿಯ ತನುಶ್ರೀ ಮೃತಪಟ್ಟಿದ್ದಳು. ಘಟನೆ ಸಂಭಂದ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು : “ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸೇರಿ ಅಂದಾಜು 2 ಸಾವಿರ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ” ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ವಿಟಿಯು ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ – 186, ಪಾಲಿಟೆಕ್ನಿಕ್ನಲ್ಲಿ 941, ಕಾಲೇಜು ಶಿಕ್ಷಣ ಇಲಾಖೆಯಲ್ಲಿ 826, ಯುವಿಸಿಇನಲ್ಲಿ 79 ಸೇರಿದಂತೆ ಅಂದಾಜು 2 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು. ಆ ಮೂಲಕ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ನೌಕರರ ಕೊರತೆಯನ್ನು ನೀಗಿಸಲಾಗುವುದು ಎಂದರು. ವಿಟಿಯು ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಇದಕ್ಕಾಗಿ ಏಷ್ಯನ್ ಡೆವಲೆಪ್ಮೆಂಟ್ ಬ್ಯಾಂಕ್ನಿಂದಾಗಿ ಸೆಂಟರ್ ಆಪ್ ಎಕ್ಸಲೆನ್ಸ್ ಆರಂಭಿಸುತ್ತಿದ್ದೇವೆ. ಇಂದು ಪದವಿ ಪಡೆದ ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಸ್. ವಿದ್ಯಾಶಂಕರ್ ಅವರು ಮಾತನಾಡಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಂತ್ರಜ್ಞಾನ ಅಳವಡಿಕೊಳ್ಳುವಲ್ಲಿ ಮುಂದಿದೆ. ಇದಕ್ಕಾಗಿ ಹಲವು ಕಂಪನಿಗಳ ಜತೆಗೆ ಒಪ್ಪಂದ ಮಾಡಿಕೊಂಡಿದೆ.…
ಬಾಗಲಕೋಟೆ : ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಅನೈತಿಕ ಸಂಬಂಧ ಎಂದು ಅನುಮಾನ ಬಂದು ಮಹಿಳೆಯ ಪತಿ ತನ್ನ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಖಾನಾಪುರ ಎಸ್ ಕೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸೋಮಶೇಖರ ಎಂದು ತಿಳಿದುಬಂದಿದೆ. ಮಹಿಳೆಯ ಪತಿ ಹಾಗು ಸೋಮಶೇಖರ್ ಸ್ನೇಹಿತರಗಿದ್ದರು. ಇಂದು ಕಂಠಪೂರ್ತಿ ಕುಡಿಸಿ ಕಲ್ಲಿನಿಂದ ತಲೆ ಮತ್ತು ಮುಖ ಜಜ್ಜಿ ಕೊಲೆ ಮಾಡಿದ್ದಾನೆ. ಖಾನಾಪುರ ಎಸ್ಕೆ ಗ್ರಾಮದ ಮಾವಿನ ತೋಟದಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಒಂದೇ ಹುಡುಗಿಗಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ದೇವಸಂದ್ರದಲ್ಲಿ ಒಂದೇ ಹುಡುಗಿಗೆ ಗಲಾಟೆ ನಡೆದಿದೆ. ಈ ವೇಳೆ ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ. ನೇಪಾಳ ಮೂಲದ ಯುವತಿಯನ್ನು ಮಾಮು ಮತ್ತು ರೋಷನ್ ಇಬ್ಬರು ಪ್ರೀತಿಸುತ್ತಿದ್ದರು. ಫೆಬ್ರವರಿ 2ರಂದು ದೇವಸಂದ್ರದಲ್ಲಿ ಮಾತನಾಡೋಕೆ ಇಬ್ಬರು ಸೇರಿದ್ದಾರೆ ಎಂಟ್ರಿ ಕೊಟ್ಟಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ನಡೆದು ಜಗಳ ವಿಕೋಪಕ್ಕೆ ತಿರುಗಿ ರೋಷನ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ರೋಷನಗೆ ಚಾಕು ಇರಿಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ರೋಷನಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ಓಡಾಟ ಕಂಡು ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ ಬೆಂಗಳೂರಿನ ಅಂಜನಾಪುರದ 7ನೇ ಬ್ಲಾಕ್ ರಸ್ತೆಯಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು ಬೆಂಗಳೂರಿನಲ್ಲಿ ಮನೆಯ ಮುಂದೆ ಚಿರತೆ ಬಿಂದಾಸ್ ಆಗಿ ಓಡಾಡಿರುವ ದೃಶ್ಯ ಸೆರೆಯಾಗಿದೆ. ಚಿರತೆ ಹೆಜ್ಜೆ ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದೆ. ತುರಹಳ್ಳಿ ಅರಣ್ಯ ಪ್ರದೇಶದಿಂದ ಚಿರತೆ ಬಂದಿರುವಂತಹ ಶಂಕೆ ವ್ಯಕ್ತವಾಗಿದ್ದು ಜನರು ಹೊರಗಡೆ ಬರಲು ಭಯ ಭೀತರಾಗಿದ್ದಾರೆ.














