Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಒಬ್ಬ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಹೌದು ಶೃಂಗೇರಿಯ ಹರಿಹರ ಬೀದಿಯ ಬಿದಿಯಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಧ್ರುವ ನೇಣಿಗೆ ಶರಣಾಗಿರುವ ವಿದ್ಯಾರ್ಥಿಯನ್ನು ಧ್ರುವ (16) ಎಂದು ತಿಳಿದು ಬಂದಿದೆ. ನನಗೆ ಕೊಳಲು ನುಡಿಸುವ ಶಾಲೆಗೆ ಸೇರಿಸಿ ಎಂದು ಈಗಾಗಲೇ ಧ್ರುವ ಪೋಷಕರ ಬಳಿ ತಿಳಿಸಿದ್ದ. ಈ ವೇಳೆ ಪೋಷಕರಿಗೆ ಧ್ರುವ ಒತ್ತಾಯ ಮಾಡಿದ್ದ ಎಸ್ ಎಸ್ ಎಲ್ ಸಿ ವ್ಯಾಸಂಗ ಮುಗಿದ ನಂತರ ಪೋಷಕರು ಕೊಳಲು ನುಡಿಸುವ ಶಾಲೆಗೆ ಸೇರಿಸುವುದಾಗಿ ಹೇಳಿದ್ದರುಬೇಸರದಿಂದ ಪರೀಕ್ಷೆಗೆ ಗೈರಾಗಿ ಧ್ರುವ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : 14 ಮುಡಾ ನಿವೇಶನಗಳ ಕ್ರಯಪತ್ರ ಹಿಂದಿರುಗಿಸುತ್ತೇನೆ : ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪತ್ನಿ ಪಾರ್ವತಿ!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ED ಸಂಕಷ್ಟ ಎದುರಾಗಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಸಿಐಆರ್ ದಾಖಲಿಸಿಕೊಂಡಿದೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ನಿ ಪಾರ್ವತಿಯವರು 14 ನಿಮಿಷಗಳ ಕ್ರಯ ಪತ್ರವನ್ನು ಹಿಂದಿರುಗಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಮುಡಾ ಸೈಟ್ ಹಿಂದಿರುಗಿಸಲು ಬಯಸುತ್ತಿದ್ದೇನೆ ಎಂದು ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ ಪಾರ್ವತಿ ಪತ್ರ ಬರೆದಿದ್ದಾರೆ.ಮುಡಾಗೆ ಸಂಬಂಧ ಪಟ್ಟಂತೆ 14 ನಿವೇಶನಗಳ ಪತ್ರಗಳನ್ನು ಹಿಂದಿರುಗಿಸುವುದಾಗಿ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ವಿಜಯನಗರದಲ್ಲಿ ಮೂರನೇ ಮತ್ತು ನಾಲ್ಕನೇ ಹಂತದಲ್ಲಿ ಈ ಒಂದು ನಿವೇಶನಗಳು ಇವೆ. ಹಾಗಾಗಿ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಪತ್ನಿ ಪಾರ್ವತಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಒಂದು ಪ್ರಕರಣ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.
ಮಂಡ್ಯ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದಂತಹ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 55 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮಂಡ್ಯದ ಜಿಲ್ಲಾ ಸತ್ರ ನ್ಯಾಯಾಲಯವು ಕಳೆದ ಶುಕ್ರವಾರ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ ಶನಿವಾರ ಮತ್ತು ಭಾನುವಾರ ರಜೆ ಇದ್ದಿದ್ದರಿಂದ ಇಂದು ಎಲ್ಲಾ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶುಕ್ರವಾರ ಎಲ್ಲ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿತ್ತು.ತಲಾ ಒಂದು ಲಕ್ಷ ಬಾಂಡ್ ಹಾಗೂ ಪ್ರತಿ ರವಿವಾರ ಠಾಣೆಗೆ ಬಂದು ಸಹಿ ಹಾಕುವಂತೆ ಕೋರ್ಟ್ ಆದೇಶ ನೀಡಿತ್ತು. ಅದರ ಅನ್ವಯ ಇಂದು 55 ಆರೋಪಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಮಹತ್ವವನ್ನ ಗುರುತಿಸಿ ಅಧಿಕೃತವಾಗಿ ‘ರಾಜ್ಯ ಮಾತಾ’ ಎಂದು ಘೋಷಿಸಿದೆ. ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಿವೈ ವಿಜಯೇಂದ್ರ ಸ್ವಾಗತಿಸಿದ್ದು, ಕರ್ನಾಟಕದಲ್ಲೂ ಗೋವನ್ನು ರಾಜ್ಯ ಮಾತೆ ಅಥವಾ ಕ್ಷೀರಮಾತೆ ಎಂದು ಘೋಷಿಸಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಬಿವೈ ವಿಜಯೇಂದ್ರ,ಗೋಮಾತೆಯನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ನಂದಿನಿ ಉತ್ಪನ್ನಗಳ ಮೂಲಕ ಕರ್ನಾಟಕ ವಿಶ್ವ ಮಾನ್ಯತೆ ಪಡೆಯುತ್ತಿದೆ. ನಂದಿನಿ ಉತ್ಪನ್ನಗಳ ಧಾತೆ ಗೋ ಮಾತೆ ಆದ್ದರಿಂದ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಗೋವನ್ನು ರಾಜ್ಯ ಮಾತೆ ಎಂದೇ ಘೋಷಿಸಲಿ ಇಲ್ಲವೇ ‘ಕ್ಷೀರಮಾತೆ’ ಎಂದು ಘೋಷಿಸಲಿ ಎಂದು ತಿಳಿಸಿದ್ದಾರೆ. https://twitter.com/BYVijayendra/status/1840763723775910205?t=D6X7ktGN0tW0VOFXMqFBUg&s=19
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದ್ದಾರೆ.ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ. ಇದರ ಬೆನ್ನಲ್ಲೆ ಇಂದು ಬೆಂಗಳೂರಿನಲ್ಲಿ ಕಾವೇರಿ ನಿವಾಸದಲ್ಲಿ ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಹತ್ವದ ವಿಷಯ ಚರ್ಚೆಯಾಗುವ ಸಾಧ್ಯತೆಯಿದ್ದು, ರಾಜಕೀಯ ಬೆಳವಣಿಗೆ ಹಾಗೂ ಕಾನೂನು ಹೋರಾಟದ ಬಗ್ಗೆ ಚರ್ಚಿಸಿದ್ದಾರೆ. ಸಭೆಯಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ಕೃಷ್ಣ ಬೈರೇಗೌಡ ಹಾಗೂ ಸಿಎಂ ಇಬ್ರಾಹಿಂ ಜೊತೆಗೆ ಚರ್ಚಿಸಿದ್ದಾರೆ. ಇಸಿಐಆರ್ ದಾಖಲಾದ ಬೆನ್ನಲ್ಲೇ ಸಚಿವರ ಜೊತೆಗಿನ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು ವಿಚಾರವಾಗಿ ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನಾಳೆ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಹೌದು ನಾಳೆ ಬೆಳಿಗ್ಗೆ 7:30 ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ವಾಟ್ಸಪ್ ಮೂಲಕ ಪೊಲೀಸರು ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ನಾಳೆ ಸ್ನೇಹಮಯಿ ಕೃಷ್ಣ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಗೆ ಹಾಜರಾಗಲಿದ್ದಾರೆ. ಮುಡಾ ಹಗರಣವನ್ನು ಬಯಲಿಗೆ ಎಳೆದಿದ್ದ ಸ್ನೇಹಮಯಿ ಕೃಷ್ಣ, ಟೀ ಕುಡಿತಂತೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಲೋಕಾಯುಕ್ತ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ ಎಂದು ಇಡಿಗೂ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಇಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಇಸಿಐಆರ್ ದಾಖಲಿಸಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ತಂದಿದೆ.
ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವೆ ಪರಸ್ಪರ ವಾಕ್ಸಮರ ತಾರಕಕ್ಕೆ ಏರಿದ್ದು, ಇದೀಗ ಎಡಿಜಿಪಿ ಯವರು ತಮ್ಮ ಸಿಬ್ಬಂದಿಗೆ ಬರೆದ ಪತ್ರದಲ್ಲಿ ಹಂದಿಗಳ ಜೊತೆಗೆ ಗಲಾಟೆ ಬೇಡ ಎಂದು ಉಲ್ಲೇಖಿಸಿದ್ದರು. ಈ ಒಂದು ವಿಚಾರವಾಗಿ ಇದೀಗ ಎಚ್ ಡಿ ಕುಮಾರಸ್ವಾಮಿ ವಿ ಡಿಜಿಪಿ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೆಚ್ಡಿ ಕುಮಾರಸ್ವಾಮಿ ಪತ್ರ ಬರೆದಿದ್ದು,ಐಪಿಎಸ್ ಅಧಿಕಾರಿಯಾಗಿ ಚಂದ್ರಶೇಖರ್ ಸೇವಾ ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಪರಿಶೀಲಿಸಬೇಕು.ಚಂದ್ರಶೇಖರ್ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖಾ ತನಿಖೆ ನಡೆಸಬೇಕು. ಕರ್ನಾಟಕ ಕೇಡರ್ ಅಲ್ಲದಿದ್ದರೂ ಇಲ್ಲಿ ಇರಲು ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಕೂಡ ಪರಿಶೀಲಿಸಬೇಕಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕೇಂದ್ರ ಸಚಿವ ಕುಮಾರಸ್ವಾಮಿ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಗಂಭೀರವಾದಂತಹ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದ್ದು, ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಡಾ ಕಚೇರಿ, ಸಿಎಂ ಸಿದ್ದರಾಮಯ್ಯ ನಿವಾಸ ಹಾಗೂ ಕಂದಾಯ ಇಲಾಖೆ ಮೇಲು ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳ ಮನೆಯ ಮೇಲೆ ಇಡಿ ದಾಳಿ ಮಾಡಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಡಾ ಕಚೇರಿ, ಕಂದಾಯ ಇಲಾಖೆಯ ಮೇಲು ಇಡಿ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದಾಳಿ ಮಾಡಿ ದಾಖಲೆಗಳನ್ನು ಕಲೆ ಹಾಕಲಿರುವ ಇಡಿ ಅಧಿಕಾರಿಗಳು, ಕೇಸಿಗೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಹಗರಣದಲ್ಲಿ ಆರೋಪಿಗಳಿಗೆ ನೋಟಿಸ್ ನೀಡಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಮುಡಾ ಹಾಗೂ ಕಂದಾಯ ಇಲಾಖೆಯಲ್ಲೂ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದ ಹೇಳಿಕೆಗೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ಸರ್ಕಾರ ಬೀಳಿಸುವ ಕುರಿತು ಬಿಜೆಪಿ ಯತ್ನ ಮಾಡುತ್ತಿದೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಿ.ಎಸ್ ಉಗ್ರಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮತ್ತು ಯತ್ನಾಳ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸುಮಾರು ಒಂದು ಸಾವಿರ ಕೋಟಿ ಹಣವನ್ನು ಸಂಗ್ರಹಿಸಿ ಇಟ್ಟಿದ್ದಾರೆ. ಆ ಹಣವನ್ನು ಬಳಸಿ ಜನಪರವಾಗಿ ಕೆಲಸ ಮಾಡಿರುವಂತಹ ಜನಾದೇಶ ಇರುವಂತಹ ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಬರುವ ಡಿಸೆಂಬರ್ ನಲ್ಲಿ ರಾಜಕೀಯ ಕ್ರಾಂತಿ ಆಗಲಿದ್ದು, ಸರ್ಕಾರವನ್ನು ತೆಗೆಯುವಂತಹ ಪ್ರಯತ್ನ ಆಗುತ್ತೆ ಎನ್ನುವ ಅಭಿಪ್ರಾಯವನ್ನು ಮಾಧ್ಯಮಗಳ ಮೂಲಕ ಹೇಳಿದ್ದಾರೆ. ಹಾಗಾಗಿ ಬಸನಗೌಡ ಪಾಟೀಲ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ ಅವರನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.ಇಂತಹ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ‘ECIR’ ದಾಖಲಿಸಿದ್ದಾರೆ. ಒಂದು ವೇಳೆ ಈ ಒಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಬಂಧನವಾದರೆ, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಆಡಳಿತ ರಾಜ್ಯದಲ್ಲೂ ಮರುಕಳಿಸುತ್ತಾ ಎಂದು ಜನರಲ್ಲಿ ಕುತೂಹಲ ಮೂಡಿಸಿದೆ. ಹೌದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ECIR ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದಂತ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ…












