Author: kannadanewsnow05

ಮೈಸೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಾಡಿದ ತಪ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳು ಬಂದವು.ಒಳ್ಳೆಯ ಆಡಳಿತ ಕೊಡುತ್ತೆ ಅಂತ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರು ಆದರೆ ಕಾಂಗ್ರೆಸ್ ಮಾಡುತ್ತಿರುವುದು ಏನು? ಎಂದು ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು. ಮೈಸೂರಿನಲ್ಲಿ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ FIR ವಿಚಾರವಾಗಿ ಪ್ರತಿಕ್ರಿಯೆ ನೀಡಿದರು ಅವರು, ಸೈಟ್ ವಾಪಸ್ ಕೊಟ್ಟು ತನಿಖೆ ಮಾಡಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಹೇಳಿದ್ದೆ, 14 ಸೇಟು ಅಕ್ರಮವಾಗಿ ಪಡೆದು 62 ಕೋಟಿ ಕೊಡಲಿ ವಾಪಸ್ ಕೊಡುತ್ತೀನಿ ಅಂತ ಹೇಳಿದ್ದರು. ಇಷ್ಟು ವರ್ಷ ಸಂಪಾದನೆ ಮಾಡಿದ ಹೆಸರಿಗೆ ಕಳಂಕ ಬಂದಿದೆ. ಅವರೇ ಕಳಂಕ ತಂದುಕೊಂಡಿದ್ದಾರೆ. ಒಳ್ಳೆಯ ಅಡ್ವೈಸರ್ ಇಟ್ಕೋಬೇಕು. ಬಿಜೆಪಿಯ ತಪ್ಪಿನಿಂದ ಕಾಂಗ್ರೆಸ್ ಗೆ 136 ಸೀಟ್ ಬಂದಿದೆ ಕಾಂಗ್ರೆಸ್ ಒಳ್ಳೆಯ ಆಡಳಿತ ಕೊಡುತ್ತೆ ಅಂತ ರಾಜ್ಯದ ಜನ ಗೆಲ್ಲಿಸಿದ್ದರು ಆದರೆ ಕಾಂಗ್ರೆಸ್ ಮಾಡುತ್ತಿರುವುದು ಏನು? ಎಂದು ಪ್ರಶ್ನಿಸಿದರು. ನಾಳೆ ಚಾಮುಂಡಿ…

Read More

ವಿಜಯಪುರ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿ, ಹೋರಾಟ ಪ್ರತಿಭಟನೆ ನಡೆಸುತ್ತಿವೆ ಇದರ ಮಧ್ಯ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪಕ್ಷಾತೀತವಾಗಿ ಬೆಂಬಲಿಸುತ್ತೇನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಪಕ್ಷಾತೀತವಾಗಿ ಬೆಂಬಲ ನೀಡುತ್ತೇನೆ. ಅವರ ನೇತೃತ್ವದಲ್ಲಿ ಎಲ್ಲ ಜನಾಂಗದವರಿಗೆ ನ್ಯಾಯ ಕೊಡುವ ಹೋರಾಟ ನಡೆದರೆ, ನಾವು ಅವರೊಂದಿಗೆ ಪಕ್ಷಾತೀತವಾಗಿ ಹೋಗಿ ಸಂಪೂರ್ಣ ಬೆಂಬಲಿಸುತ್ತೇವೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಒಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಸುಮಾರು 82 ಕೋಟಿ ರೂಪಾಯಿಗಳನ್ನು ಸರ್ಕಾರ ತಿಂದು ಹಾಕಿದೆ. ಈ ಒಂದು ಪ್ರಕರಣದ ವಿರುದ್ಧ ನಾವು ಬಸವಕಲ್ಯಾಣದಿಂದ ಬಳ್ಳಾರಿಯವರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಹೈಕಮಾಂಡ್ ಅನುಮತಿ ಮಾತ್ರ ಬೇಕಾಗಿದೆ.ಸಿದ್ದರಾಮಯ್ಯ ಅವರು ಈ ಹಿಂದೆ ಅಹಿಂದ ಮಾಡಿದಾಗ…

Read More

ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿರುವ ವಿಚಾರವಾಗಿ ಇದೀಗ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಜಾರಿ ನಿರ್ದೇಶನಲಯಕ್ಕೂ ದೂರು ನೀಡಿದ್ದಾರೆ. ಇ-ಮೇಲ್ ಹಾಗೂ ಪತ್ರ ಬರೆದು ದೂರು ನೀಡಿದ್ದಾರೆ. ಜಾರಿ ನಿರ್ದೇಶನಲಯದ ಬೆಂಗಳೂರು ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಮುಖ್ಯಮಂತ್ರಿಗಳ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು. ಇಂದು ಲೋಕಾಯುಕ್ತ ಎಸ್ ಪಿ ಉದೇಶ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ED ಗೂ ದೂರು ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

Read More

ಹುಬ್ಬಳ್ಳಿ : ಇತ್ತೀಚಿಗೆ ಕಾರ್ಮಿಕರ ಮಕ್ಕಳಿಗೆ ನೀಡಬೇಕಾಗಿದ್ದ ಲ್ಯಾಪ್ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು ಇದುವರೆಗೂ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ 6 ಸಿಬ್ಬಂದಿಗಳು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯ ಲ್ಯಾಪ್ಟಾಪ್ ಕಳ್ಳತನ ಕೇಸ್ ಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾರ್ಮಿಕ ಇಲಾಖೆಯ 101 ಲ್ಯಾಪ್ಟಾಪ್ ಕಳ್ಳತನವಾಗಿದೆ. ಇಲಾಖೆಯ ಅಸಿಸ್ಟೆಂಟ್ ಕಮಿಷನರ್ ಈ ಸಂಬಂಧ ದೂರು ನೀಡಿದ್ದರು. ಬೆಳಗಾವಿಯಿಂದ ತಂದು ಇಲಾಖೆಯ ಕಚೇರಿಯಲ್ಲಿ ಇಟ್ಟಿದ್ದರು. ಅಲ್ಲಿಯೇ ಕೆಲಸ ಮಾಡುವ ದೀಪಕ್ ಮತ್ತು ಕೃಷ್ಣ ಎನ್ನುವವರು ಕಳವು ಮಾಡಿದ್ದಾರೆ. ಇಬ್ಬರು SDA ಹಾಗೂ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನಾಲ್ವರು ಸಿಬ್ಬಂದಿ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಮೊದಲಿಗೆ ನಾಲ್ಕು ಲ್ಯಾಪ್ಟಾಪ್ಗಳನ್ನು ಮಾರಾಟ ಮಾಡಿದ್ದಾರೆ.ಆರು ಇಲಾಖೆ ಸಿಬ್ಬಂದಿ ಸೇರಿ ಒಟ್ಟು…

Read More

ಬೆಂಗಳೂರು : ಇದು ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಅಬ್ಬರಿಸಿದ್ದು, ನಾಗರಬಾವಿ ಸಮೀಪದ ಚಂದ್ರ ಲೇಔಟ್​ನಲ್ಲಿ ಇಂದು ಜೆಸಿಬಿ ಘರ್ಜನೆ ಮಾಡಿದೆ. ಬೆಳ್ಳಂಬೆಳಿಗ್ಗೆ ಬಿಡಿಎ ಜೆಸಿಬಿಗಳು ನಾಗರಬಾವಿ ಸಮೀಪದ ಚಂದ್ರ ಲೇಔಟ್​ನಲ್ಲಿ ಘರ್ಜಿಸಿದ ಪರಿಣಾಮ ನಿನ್ನೆ ಇದ್ದ ಅಂಗಡಿಗಳೆಲ್ಲ ಇಂದು ನೆಲಸಮವಾಗಿ ಬಿಟ್ಟಿವೆ. ಬಿಡಿಎ ಜಾಗದಲ್ಲಿದ್ದ 40ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟುಗಳನ್ನ ಬಿಡಿಎ ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದೆ. ಹೌದು 9 ಎಕರೆ 13 ಗುಂಟೆಯ ಬಿಡಿಎ ಜಾಗ. ತನ್ನದೇ ಜಾಗವನ್ನ ಖಾಸಗಿ ವ್ಯಕ್ತಿ ಕಬ್ಜ ಮಾಡಿದ್ದು ಕೋರ್ಟ್ ಅಂಗಳದಲ್ಲಿ ಹಲವು ವರ್ಷಗಳಿಂದ ಜಾಗ ವಿವಾದದಲ್ಲಿತ್ತು. ವಿವಾದದ ಭೂಮಿ ಬಿಡಿಎಗೆ ಸೇರಿದೆ ಅಂತಾ ಆದೇಶ ಬಂದಿದ್ದೆ ತಡ ಪೊಲೀಸರ ಜೊತೆ ಎಂಟ್ರಿಕೊಟ್ಟ ಬಿಡಿಎ ಅಧಿಕಾರಿಗಳು ಸರ್ವೇ ನಂಬರ್ 78ರಲ್ಲಿದ್ದ 9 ಎಕರೆ ಜಾಗದ 500 ಕೋಟಿ ರೂ. ಮೌಲ್ಯದ ಜಾಗವನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಡಿಎ ಎಇ ರವಿಕುಮಾರ್, ಬಿಡಿಎ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಿಡಿಎ ಜಾಗವನ್ನ ಬಿಡಿಎ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.ಸದ್ಯ…

Read More

ಬೆಳಗಾವಿ : ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗೆ ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಗಲ್ಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. ಆರೋಪಿಯನ್ನು ಉದ್ದಪ್ಪ ರಾಮಪ್ಪ ಗಾಣಿಗೇರಗೆ(32) ಎಂದು ಹೇಳಲಾಗುತ್ತಿದ್ದು, 2017 ರಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಪುಸಲಾಯಿಸಿ ಕರೆದೊಯ್ದಿದ್ದ. ನಂತರ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಅಲ್ಲದೇ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ನೀಡಿದೆ. ಈ ಸಂಬಂಧ ಹಾರೋಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Read More

ಮಂಗಳೂರು : ಬಿಎಂಡಬ್ಲ್ಯು ಕಾರೊಂದು ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ. ಬೆಂಕಿ ಅನಾಹುತಕ್ಕೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.

Read More

ಬೆಂಗಳೂರು : ಸಾಮಾನ್ಯವಾಗಿ ಲವರ್ಸ್ ಗಳ ಮಧ್ಯ ಯಾವುದು ಒಂದು ಜಗಳಕ್ಕೆ ಬ್ರೇಕ್ ಅಪ್ ಆಗುವುದನ್ನು ನುಡಿರುತ್ತವೆ ಕೇಳಿರುತ್ತೇವೆ ಆದರೆ ಬೆಂಗಳೂರಿನಲ್ಲಿ ಸುಂದರಿಯೊಬ್ಬಳು ಬ್ರೇಕಪ್ ಗಾಗಿ ತನ್ನ ಪ್ರಿಯಕರಣ ಮೇಲೆ ತಾನೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ. ಇದೀಗ ಕಳ್ಳತನ ಮಾಡಿಸಿದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಹೌದು ಈ ಒಂದು ಘಟನೆ ನಡೆದಿದ್ದು, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುವತಿ ತನ್ನ ಸ್ನೇಹಿತರ ಜೊತೆ ಸೇರಿಕೊಂಡು ಮೊಬೈಲ್ ಕಸಿಯೋದು ಹೇಗೆ ಅನ್ನೋದು ಪ್ಲಾನ್ ಮಾಡಿದ್ಲು. ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶೃತಿ ಭೇಟಿಗೆ ತೆರಳಿದ್ದ. ಅದರಂತೆ ಭೇಟಿಯಾಗಿ ಆಕೆಯನ್ನು ಕರೆದುಕೊಂಡು ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದವರು, ವಂಶಿಕೃಷ್ಣನ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಜಗಳ ತೆಗೆದು ಆತನ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ. ಅಲ್ಲದೇ ವಂಶಿಕೃಷ್ಣನ ಜೊತೆಯಲ್ಲಿಯೇ ಇದ್ದ ಶೃತಿಯ ಮೊಬೈಲ್​ನ್ನು ಸಹ ಕಸಿದು ಕೊಂಡಿದ್ದಾರೆ. ನಂತರ ದೂರು ಕೊಡುವುದು ಬೇಡ,…

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ  ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್ಐಟಿ ವಶದಲ್ಲಿ ಇದ್ದು ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಇದರ ಮಧ್ಯ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮುನಿರತ್ನ ಅವರ ಗನ್ ಮ್ಯಾನ್ ಶ್ರೀನಿವಾಸ್ ನಾಪತ್ತೆಯಾಗಿದ್ದಾನೆ. ಹಾಗಾಗಿ SIT ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇಂದು ಶ್ರೀನಿವಾಸ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಹೌದು ಬೆಂಗಳೂರಿನ ಸಿಂಗನಾಯಕನಹಳ್ಳಿಯ ಗನ್ ಮ್ಯಾನ್ ಶ್ರೀನಿವಾಸ್ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎರಡು ವಾಹನಗಳಲ್ಲಿ ಬಂದಿರುವ ಎಸ್ಐಟಿಯ 8 ಅಧಿಕಾರಿಗಳ ತಂಡ ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇದೀಗ ತನಿಖೆ ಮುಂದುವರೆದಿದೆ. ಬೇರೆ ಬೇರೆ ಆಯಾಮಗಳಲ್ಲಿ ಎಸ್ಐಟಿ ತನಿಖೆ ಚುರುಗೊಳಿಸಿದೆ.ಸಂತ್ರಸ್ತ ಮಹಿಳೆ ಮತ್ತು ಆರೋಪಿ ನಡುವೆ ಗನ್ ಮ್ಯಾನ್ ಮಧ್ಯವರ್ತಿ ಆಗಿರುವಂತಹ ಶಂಕೆ ವ್ಯಕ್ತವಾಗಿದೆ. ಸಂತ್ರಸ್ತೆಯನ್ನು ಬೈಕಿನಲ್ಲಿ ಪಿಕ್ ಅಪ್ ಮತ್ತು ಡ್ರಾಪ್ ಮಾಡಿದ ಆರೋಪ ಕೇಳಿ ಬಂದಿದೆ. ಪ್ರಕರಣದಲ್ಲಿ ಶ್ರೀನಿವಾಸ್ ಪಾತ್ರದ ಬಗ್ಗೆ SIT…

Read More

ಬೆಂಗಳೂರು : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ A1 ಆರೋಪಿ ಎಂದು ಉಲ್ಲೆಖಿಸಿ FIR ದಾಖಲಿಸಲಾಗಿದೆ. ಹೌದು ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ A1 ಆರೋಪಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, A2 ಆರೋಪಿಯಾಗಿ ಇಡಿ, A3 ಕೇಂದ್ರ ಬಿಜೆಪಿ ಪದಾಧಿಕಾರಿಗಳು, A4 ಆರೋಪಿಯಾಗಿ ನಳಿನ್ ಕುಮಾರ್ ಕಟೀಲ್, A5 ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ A6 ಆರೋಪಿಗಳನ್ನಾಗಿ ಮಾಡಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಆದರ್ಶ ಅಯ್ಯರ್ ಎಂಬುವವರು ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ದೂರಿನ ಪ್ರತಿ, ದಾಖಲೆಗಳನ್ನು ಠಾಣೆಗೆ ಕಳುಹಿಸಲು ನಿನ್ನೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸೂಚನೆ ನೀಡಿತ್ತು. ಬೆಂಗಳೂರಿನ ತಿಲಕ ನಗರ ಠಾಣೆಗೆ ಕಳುಹಿಸುವಂತೆ ಜಡ್ಜ್…

Read More