Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಎನ್ ಆರ್ ಐ ವಿದ್ಯಾರ್ಥಿಗಳಿದ್ದ ದೇರಳಕಟ್ಟೆಯ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಜನರೇಟರ್ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ತಿಳಿದುಬಂದಿದೆ. ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಲಿಯುತ್ತಿರುವ ಎನ್ ಆರ್ ಐ ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿ ಬೆಂಕಿ ನಂದಿಸಿದೆ.
ಹಾಸನ : ಆಸ್ಪತ್ರೆಯಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಯುವಕನೊಬ್ಬನಿಗೆ ಮನಸೋಯಿಚ್ಛೆ ಸೆಕ್ಯೂರಿಟಿ ಗಾರ್ಡ್ಗಳು ಹಾಗೂ ಪೊಲೀಸ್ ಸಿಬ್ಬಂದಿಯೊಬ್ಬರು ಲಾಠಿಯಿಂದ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಸತತ ಅರ್ಧ ಗಂಟೆಗೂ ಹೆಚ್ಚು ಕಾಲ ಸೆಕ್ಯೂರಿಟಿ ಗಾರ್ಡ್ಗಳು ಯುವಕನ್ನು ಥಳಿಸಿದ್ದಾರೆ ಎನ್ನಲಾಗಿದೆ. ಮಳೆಯ ನಡುವೆಯೂ ಆಸ್ಪತ್ರೆಯ ಮುಂಭಾಗ ಲಾಠಿಗಳಿಂದ ಹಲ್ಲೆ ನಡೆಸಿದ ಸೆಕ್ಯೂರಿಟಿ ಗಾರ್ಡ್ಗಳ ಏಟಿಗೆ ಕಣ್ಣೀರಿಡುತ್ತಾ ಬೇಡಿಕೊಂಡರೂ ಬಿಡದೇ ಮನಸೋ ಇಚ್ಛೆ ಥಳಿಸಿದ್ದಾರೆ. ನಂತರ ಆಸ್ಪತ್ರೆಯ ಕೊಠಡಿಯೊಳಗೆ ಕರೆದೊಯ್ದು ಮೃಗೀಯ ವರ್ತನೆ ತೋರಿರುವ ಸೆಕ್ಯೂರಿಟಿ ಗಾರ್ಡ್ಗಳು ಕಣ್ಣೀರಿಡುತ್ತಾ ಕಾಲಿಗೆ ಬಿದ್ದು ಬೇಡಿಕೊಂಡರೂ ಬೆನ್ನು, ತಲೆ, ಕಾಲು, ಕೈಗೆ ಹಲ್ಲೆ ನಡೆಸಿದ್ದಾರೆ. ಯುವಕನ ಮೇಲೆ ಈ ರೀತಿ ಅಮಾನವೀಯವಾಗಿ ಹಲ್ಲೆ ನಡೆಸಿದ ಸೆಕ್ಯೂರಿಟಿ ಕಾರ್ಡ್ ಹಾಗೂ ಕಾನ್ಸ್ಟೇಬಲ್ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ತೆಲಂಗಾಣ : ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಪವಿತ್ರ ಸ್ನಾನ ಮಾಡಲು ಬಾಸರಾದ ಸಮೀಪ ಗೋದಾವರಿ ನದಿಗಿಳಿದ ಐವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಿನ್ನೆ ನಡೆದಿದೆ. ಸುಮಾರು 20 ಜನರ ಗುಂಪು ಜನಪ್ರಿಯ ಜ್ಞಾನ ಸರಸ್ವತಿ ದೇವಾಲಯಕ್ಕೆ ಭೇಟಿ ನೀಡಲು ಹೈದರಾಬಾದ್ ನಿಂದ ಬಾಸರಕ್ಕೆ ಆಗಮಿಸಿತ್ತು.ದೇವಾಲಯಕ್ಕೆ ಭೇಟಿ ನೀಡುವ ಮುನ್ನ ಐವರು ಬಾಲಕರು ಪವಿತ್ರ ಸ್ನಾನ ಮಾಡಲು ನದಿಗಿಳಿದರು. ಈ ಸಂದರ್ಭ ನದಿ ನೀರಿನ ಮಟ್ಟ ಇದ್ದಕ್ಕಿದ್ದಂತೆ ಏರಿಕೆಯಾಯಿತು. ಐವರು ಬಾಲಕರು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋದರು ಎಂದು ಬಾಸಿನಾದ ಎಎಸ್ಪಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ. ಅನಂತರ ರಕ್ಷಣಾ ತಂಡ ಐವರ ಬಾಲಕರನ್ನು ಪತ್ತೆ ಹಚ್ಚಿತು ಹಾಗೂ ಸಮೀಪದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿತು. ಆದರೆ, ವೈದ್ಯರು ಎಲ್ಲಾ ಐವರು ಬಾಲಕರು ಆಸ್ಪತ್ರೆಗೆ ತರುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು.
ನವದೆಹಲಿ: ಉತ್ತರ ಪ್ರದೇಶನ ಗಾಜಿಯಾಬಾದ್ನ ಹಿಂಡನ್ ಏರ್ಪೋರ್ಟ್ ನಿಂದ ಕೋಲ್ಕತಾಗ ತೆರಳಲಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆಗುವ ಕೊನೇ ಕ್ಷಣದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದೆ. ಹಾಗಾಗಿ ಮತ್ತೊಂದು ವಿಮಾನ ಅನಾಹುತ ತಪ್ಪಿದೆ. ಹೌದು ಗಾಜಿಯಾಬಾದ್ನಿಂದ ಕೋಲ್ಕತಾಗೆ ಹೊರಟಿದ್ದ ವಿಮಾನ ಟೇಕಾಫ್ ಆಗುವ ಅಂತಿಮ ಕ್ಷಣದಲ್ಲಿ ದೋಷ ಪತ್ತೆಯಾಗಿದೆ. ಹೀಗಾಗಿ ವಿಮಾನ ಟೇಕಾಫ್ ಮುಂದೂಡಿಕೆ ಮಾಡಲಾಯಿತು. ರನ್ ವೇಯಲ್ಲಿದ್ದ ಐಎಕ್ಸ್ 1511 ಸಂಖ್ಯೆಯ ವಿಮಾನ ಇನ್ನೇನು ಟೇಕಾಫ್ ಆಗಬೇಕಿತ್ತು, ಆದರೆ ಅಂತಿಮ ಕ್ಷಣದಲ್ಲಿ ವಿಮಾನದ ಸಿಬ್ಬಂದಿ ದೋಷ ಪತ್ತೆ ಮಾಡಿ ಬೇರೆ ವೇಳೆ ನಿಗದಿ ಅಥವಾ ಟಿಕೆಟ್ ರದ್ದುಪಡಿಸಿದರೆ ಪೂರ್ತಿ ಹಣ ಮರು ಪಾವತಿಸುವುದಾಗಿ ಹೇಳಿದೆನೆಂದು ಏರಿಂಡಿಯಾ ವಕ್ತಾರ ತಿಳಿಸಿದ್ದಾರೆ.
ಬೆಂಗಳೂರು : ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. https://twitter.com/dineshgrao/status/1934156690120696008?t=yk2ZxhKhqSVbJEFQhr4mbg&s=19
ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು. ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿಯಲ್ಲಿ ಜನರೊಂದಿಗೆ ಜನತಾದಳ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ವರ್ಗಕ್ಕೆ ಕುಮಾರಸ್ವಾಮಿ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ರೈತಾಪಿ ವರ್ಗಕ್ಕೆ 35 ಕೋಟಿ ರೂಪಾಯಿ ಯೋಜನೆಯನ್ನು ನೀಡಿದ್ದಾರೆ. ಪಂಚರತ್ನ ಯೋಜನೆ ಕನಸು ನನಸು ಆಗಬೇಕು.ಈ ಭ್ರಷ್ಟ ಸರ್ಕಾರ ತೊಲಗಬೇಕು ಹೆಚ್ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು.
ಹುಬ್ಬಳ್ಳಿ : ಅವರಿಬ್ಬರೂ 8 ವರ್ಷದಿಂದ ಪರಸ್ಪರವಾಗಿ ಪ್ರೀತಿಸಿ ಮನೆಯವರ ವಿರೋಧದ ನಡುವೆ ಕಳೆದ ಎರಡು ವರ್ಷದ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಮನೆಯವರು ಯುವಕನ ಮನೆಗೆ ಬಂದು ಬಲವಂತವಾಗಿ ಯುವತಿಯನ್ನು ಹೊತ್ತೋಯ್ದ ಘಟನೆ ಹುಬ್ಬಳ್ಳಿಯ ಭೈರಿಕೊಪ್ಪದಲ್ಲಿ ನಡೆದಿದೆ. ಹೌದು ನಿರಂಜನ ಮತ್ತು ಸುಷ್ಮಾ 8 ವರ್ಷಗಳ ಹಿಂದೆ ಪ್ರೀತಿಸುತ್ತಿದ್ದರು. ಕಳೆದ ಎರಡು ವರ್ಷದ ಹಿಂದೆ ಈ ಜೋಡಿ ರೆಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಪೋಷಕರು ಇಂದು ಯುವತಿಯನ್ನು ಹೊತ್ತೊಯ್ದಿದ್ದಾರೆ. ಪೋಷಕರ ವಿರೋಧದ ನಡುವೆ ಯುವಕ, ಯುವತಿ ಮದುವೆಯಾಗಿ ಬೇರೆಯಾಗಿ ಒಟ್ಟಿಗೆ ಜೀವಿಸುತ್ತಿದ್ದರು. ಆದರೆ ಇಂದು ಪೋಷಕರು ಯುವತಿಯನ್ನು ಹೊತ್ತೋಯ್ದಿರುವ ಘಟನೆ ನಡೆದಿದೆ. ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿ ದೂರವಾಗಿ ದಂಪತಿ ವೇದನೆ ಅನುಭವಿಸಿದರು, ಪ್ರಿಯಕರ ಪತಿ ನಿರಂಜನನ್ನು ಬಿಟ್ಟಿರಲಾಗದೆ ಸುಷ್ಮಾ ಮತ್ತೆ ನಿರಂಜನ್ ಮನೆಗೆ ಬಂದಿದ್ದಾಳೆ. ಸುಷ್ಮಾಳ ಹುಡುಕಿಕೊಂಡು ತಂದೆ ಪರಶುರಾಮ್ ನಿರಂಜನ್ ಮನೆಗೆ ಬಂದಿದ್ದಾರೆ. ಸುಷ್ಮಾಳ ಮಾವಂದಿರಾದ ಮಹಾಂತೇಶ್ ಮತ್ತು ಮಂಜುನಿಂದ ದಂಪತಿಗೆ ಧಮ್ಕಿ ಹಾಕಿದ್ದಾರೆ. ಪತಿ…
ಚಿಕ್ಕಮಗಳೂರು : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಚಿಕ್ಕಮಂಗಳೂರಿನಲ್ಲಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಈ ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಚಿಕ್ಕಮಂಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು. ಕವಿಕಲ್ ಗಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನ ಕವಿಕಲ್ ಗಂಡಿ ಬಳಿ ಈ ಒಂದು ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ನಡೆಸುವ ಆರಂಭದ ದಿನದಿಂದಲೂ ಹಲವಾರು ದುರಂತಗಳು ನಡೆದಿದೆ. ಈಗಾಗಲೇ ಚಿತ್ರತಂಡದ ಮೂರು ಕಲಾವಿದರು ಸಾವನ್ನಪ್ಪಿದ್ದು, ನಿನ್ನೆ ತಾನೆ ಶೂಟಿಂಗ್ ಮಾಡುವಾಗ ಹಡಗು ಮಗುಚಿ ಬಿದ್ದಿದ್ದು, ಚಿತ್ರದ ನಾಯಕರು ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರು ಸೇಫ್ ಆಗಿದ್ದಾರೆ. ಇದೀಗ ಕಾಂತಾರ ಚಿತ್ರ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು ಶಿವಮೊಗ್ಗ ಜಿಲ್ಲಾ ಆಡಳಿತದಿಂದ ಚಿತ್ರಿಕರಣಕ್ಕೆ ಅನುಮತಿ ಪಡೆಯದಿದ್ದರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ನೋಟಿಸ್ ನೀಡಿ ಉತ್ತರ ನೀಡುವಂತೆ ತಿಳಿಸಿದ್ದಾರೆ. ಹೌದು ಅನುಮತಿ ಪಡೆಯದೆ ಕಾಂತಾರ ಸಿನಿಮಾ ಶೂಟಿಂಗ್ ನಡೆಸುತ್ತಿದ್ದು, ಸ್ಥಳೀಯ ಆಡಳಿತದಿಂದ ಅನುಮತಿ ಇಲ್ಲದೆ ಕಾಂತರಾ ಸಿನಿಮಾ ಶೂಟಿಂಗ್ ನಡೆಸುತ್ತಿದ್ದಾರೆ. ಹಾಗಾಗಿ ಚಿತ್ರತಂಡಕ್ಕೆ ನೋಟಿಸ್ ನೀಡುವುದಕ್ಕೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಗುರುದಟ್ ಹೆಗ್ಡೆ ಸೂಚನೆ ನೀಡಿದ್ದಾರೆ. ಮಾಸ್ತಿಕಟ್ಟೆ ಮಾಣಿ ಡ್ಯಾಮ್ ಬಳಿ ಕಾಂತಾರ ಚತ್ರಿಕರಣ ನಡೆಯುತ್ತಿದ್ದು, ತಹಶೀಲ್ದಾರ್ ರಶ್ಮಿ ಮೂಲಕ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು…
ಮೊದಲ ಪತ್ನಿಗೆ ಡಿವೋರ್ಸ್, 3ನೇ ಪತ್ನಿಯೊಂದಿಗೆ ವಾಸ : ನ್ಯಾಯ ಕೇಳಲು ಹೋದ 2ನೇ ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ
ಮೈಸೂರು : ಆತ ಮೂರು ಮದುವೆಯಾಗಿದ್ದ ಮೊದಲನೇ ಪತ್ನಿಗೆ ವಿಚ್ಛೇದನ ನೀಡಿದ ಬಳಿಕ ಎರಡನೇ ಮದುವೆಯಾದ ಆದರೆ ವಿಚ್ಛೇದನ ನೀಡಿದ ಪತ್ನಿಯ ಹಾಗೂ ಮಕ್ಕಳಿಗೆ ಆಸ್ತಿಯನ್ನು ನೀಡಿದ್ದ. ಬಳಿಕ ಮೂರನೇ ಮದುವೆಯಾದ ಆತ ಎರಡನೇ ಪತ್ನಿಗೆ ಏನನ್ನು ನೀಡದೆ ನಡು ಬೀದಿಯಲ್ಲಿ ಕೈಬಿಟ್ಟಿದ್ದಾನೆ. ನ್ಯಾಯ ಕೇಳಲು ಹೋದ 2ನೇ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಮೂರು ಮದುವೆಯಾದವನಿಂದ ಎರಡನೇ ಪತ್ನಿಗೆ ಕಿರುಕುಳ ಆರೋಪ ಕೇಳಲು ಹೋಗಿದ್ದ ಎರಡನೇ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದಲ್ಲಾಳು ಗ್ರಾಮಲ್ಲಿ ನಡೆದಿದೆ. ಗ್ರಾಮದ ಮಹದೇವಪ್ಪ 2ನೇ ಪತ್ನಿ ನೇತ್ರಾವತಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದಲ್ಲಾಳು ಗ್ರಾಮದಲ್ಲಿ ಮೊದಲ ಪತ್ನಿಗೆ ವಿಚ್ಛೇದನ ನೀಡಿ ಮಹದೇವಪ್ಪ ಆಕೆಯ ಮಕ್ಕಳಿಗೆ ಆಸ್ತಿ ನೀಡಿದ್ದಾನೆ. 2ನೇ ಪತ್ನಿಯನ್ನು ತೊರೆದು ಮೂರನೇ ಪತ್ನಿಯ ಜೊತೆಗೆ ಸದ್ಯ ಮಹಾದೇವಪ್ಪ ವಾಸಿಸುತ್ತಿದ್ದಾನೆ.…