Author: kannadanewsnow05

ಮೈಸೂರು : ಮಧು ಹೇರ್ ಕಟ್ ವಿಚಾರವಾಗಿ ವಿಜಯೇಂದ್ರ ಹೇಳಿಕೆ ವಿಚಾರ ಮೈಸೂರಿನಲ್ಲಿ ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ ಹೊರ ಹಾಕಿದ್ದಾರೆ. ಮಾತನಾಡುವವರು ಬಂದು ಹೇರ್ ಕಟ್ ಮಾಡಲಿ. ಡಿಕೆ ಗಡ್ಡದ ಬಗ್ಗೆ ಮಾತನಾಡಿ 130 ಸ್ಥಾನದಿಂದ 60ಕ್ಕೆ ಬಂದರು. ಈಗ ನನ್ನ ಕೂದಲು ಬಗ್ಗೆ ಮಾತಾಡಿ 26 ರಿಂದ 6ಕ್ಕೆ ಬರುತ್ತಾರೆ ಎಂದು ಲೇವಡಿ ಮಾಡಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಬಿಜೆಪಿಗರು ಮಾತಾಡಿದ್ರಾ? ಮೋದಿ ಕೊವಿಡ್ ಟೈಮ್ ನಲ್ಲಿ ಗಡ್ಡ ಬಿಟ್ಟಿದ್ದರು ಏಕೆ ಪ್ರಶ್ನೆಸಲಿಲ್ಲ? ನನ್ನ ಹೇರ್ ಸ್ಟೈಲ್ ಬಗ್ಗೆ ಮಾತನಾಡುವುದು ಒಂದು ವಿಷಯವಾ? ಎಂದು ಮೈಸೂರಿನಲ್ಲಿ ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಯತ್ತ ಮುಖ ಮಾಡಿದ್ದಾರೆ.ಇದೆ ವೇಳೆ ಈ ಬಾರಿ ಶಾಲಾ ಪಠ್ಯ ಪುಸ್ತಕದಲ್ಲಿ ಯಾವುದೇ ರೀತಿಯಾದ ಪರಿಷ್ಕರಣೆ ಇಲ್ಲ…

Read More

ಬಾಗಲಕೋಟೆ : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆಯಾಗಿದ್ದು, ಯುವತಿಯ ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹಳೆ ಟಕ್ಕಳಕಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆಯ ಬೀಳಗಿ ತಾಲೂಕಿನ ಹಳೆ ಟಕ್ಕಳಕಿ ಗ್ರಾಮದಲ್ಲಿ ಈ ಒಂದು ಯುವತಿಯ ಕೊಲೆ ಮಾಡಿ ದೇಹವನ್ನು ಛಿದ್ರ ಛಿದ್ರ ಮಾಡಿ ದುಷ್ಕರ್ಮಿಗಳು ಬಿಸಾಕಿದ್ದಾರೆ.ಮೃತ ಯುವತಿ ಅಂದಾಜು 20 ರಿಂದ 25 ವರ್ಷದವಳು ಎಂದು ಹೇಳಲಾಗುತ್ತಿದೆ. ಶವದ ಮೇಲೆ ಉದ್ದ ತೋಳಿನ ಪಿಂಕ್ ಟಿ-ಶರ್ಟ್ ಇದ್ದು, ಮೃತ ದೇಹದ ಮೇಲೆ ಟಿ-ಶರ್ಟ್ ಮೇಲೆ ಸ್ಮೈಲ್ ಎಂಬ ಬರಹವಿದೆ. ಯುವತಿಯ ಶವದ ಮೇಲೆ ಕಪ್ಪು ಜೀನ್ಸ್ ಪ್ಯಾಂಟ್ ಇದೆ. ಬಲಗಾಲಲ್ಲಿ ಗೆಜ್ಜೆ ಹಾಗೂ ಕಪ್ಪುದಾರ ಇದೆ ಕಳೆದ ನಾಲ್ಕು ದಿನಗಳ ಹಿಂದೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಯುವತಿಯ ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ.ಮಾಹಿತಿ ಕೊಟ್ಟರೆ ಪದೇ ಪದೇ ವಿಚಾರಣೆಗೆ ಕರೆಯುತ್ತಾರೆಂದು ಸ್ಥಳೀಯರು…

Read More

ಬೆಳಗಾವಿ : ಮನೆಗೆ ದಿನಾಲು ಕುಡಿದು ಬಂದು ಗಲಾಟೆ ಮಾಡುತ್ತಿದ್ದನ್ನು ಪ್ರಶ್ನಿಸಿದ್ದ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪತಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪುಲಗಡ್ಡಿ‌‌ಯಲ್ಲಿ ನಡೆದಿದೆ. ಮದ್ಯಪಾನ ಮಾಡಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪುಲಗಡ್ಡಿ‌‌ಯಲ್ಲಿ ನಡೆದಿದೆ. ತಡರಾತ್ರಿ ಯಲ್ಲವ್ವ ನಂದಿಯನ್ನು ಹತ್ಯೆ ಮಾಡಿದ ಅಣ್ಣಪ್ಪ ನಂದಿ ನೇಣಿಗೆ ಶರಣಾಗಿದ್ದಾನೆ. ನಿನ್ನೆ ಸಂಜೆ ಎಮ್ಮೆ‌ ಮಾರಿ ಆ ಹಣದಿಂದ ಕಂಠಪೂರ್ತಿ ಕುಡಿದು ಬಂದಿದ್ದ ಅಣ್ಣಪ್ಪ. ಇದನ್ನ‌ ಪ್ರಶ್ನಿಸಿದ್ದಕ್ಕೆ ಯಲ್ಲವ್ವ ಹತ್ಯೆಗೈದು ಅಣ್ಣಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು,ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಕುಖ್ಯಾತ ಕಳ್ಳನನ್ನು ಬಂಧಿಸಿದ್ದು, ಈತನ ಟಾರ್ಗೆಟ್ ಕೇವಲ ದುಬಾರಿ ಬೆಳೆಯ ಮೊಬೈಲ್ ಗಳು ಆಗಿದ್ದವು ಎನ್ನಲಾಗಿದೆ.ಆರೋಪಿಯನ್ನು ಬಂದಿಸಿದ ಪೊಲೀಸರು ಆತನ ಬಳಿ ಇದ್ದ ಬರೊಬ್ಬರೆ 19.50 ಲಕ್ಷ ಮೌಲ್ಯದ 32 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಹೌದು ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದು, ಆರೋಪಿ ಪಂಕಜ ಸಿಂಗನನ್ನು ಸಿದ್ದಾಪುರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಆರೋಪಿ ಬಳಿಯಿಂದ 19.50 ಲಕ್ಷ ಮೌಲ್ಯದ 32 ಮೊಬೈಲ್ ಗಳನ್ನು ಪಡೆದುಕೊಂಡಿದ್ದಾರೆ. ಇನ್ನು ತಲೆಮರಿಸಿಕೊಂಡ ಮೂರು ಆರೋಪಿಗಳಿಗೆ ಇದೀಗ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್ ಮಧ್ಯಾಹ್ನ 2:45 ಕ್ಕೆ ಮುಂದೂಡಿದೆ. ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಗುರುವಾರ ಅಥವಾ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲು ಭವಾನಿ ರೇವಣ್ಣ ಪರ ವಕೀಲರು ಮನವಿ ಮಾಡಿದರು. ಈವರೆಗೆ ಭವಾನಿ ರೇವಣ್ಣಗೆ ಎಸ್ಐಟಿ ನೋಟಿಸ್ ಹಜಾರಿಗೊಳಿಸಿಲ್ಲ ಹೀಗಾಗಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಎಸ್ಐಟಿ ಪರ ಎಸ್‍ಪಿಪಿ ಬಿಎನ್ ಜಗದೀಶ್ ಮನವಿ ಮಾಡಿದ್ದಾರೆ. ಈ ವೇಳೆ ಮುಂದಿನ ವಿಚಾರಣೆಯವರೆಗೂ ಬಂಧನದಿಂದ ರಕ್ಷಣೆ ನೀಡಲು ಹಾಗೂ ಮಧ್ಯಂತರ ಜಾಮಿನು ನೀಡಲು ಭವಾನಿ ರೇವಣ್ಣ ಪರ ವಕೀಲರು ಮನವಿ ಮಾಡಿದ್ದಾರೆ. ಈಗಾಗಲೇ ಒಂದು ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಜೆಡಿ…

Read More

ಕೊಪ್ಪಳ : ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಪುರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ಅಜ್ಜಿ ಮಗಳು ಮೊಮ್ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ವರಿ (50), ಮಗಳಾದ ವಸಂತ (28) ಮೊಮ್ಮಗ ಸಾಯಿ ಧರ್ಮತೇಜ (5) ಸಾವನ್ನಪ್ಪಿದ್ದರೆ. ಅಜ್ಜಿ ಮತ್ತು ಮೊಮ್ಮಗನ ಶವ ಬೆಡ್ರೂಮ್ ನಲ್ಲಿ ಪತ್ತೆಯಾಗಿದೆ. ಮಗಳು ವಸಂತ ಮೃತ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಏನೋ ಸಾವಿನ ಕುರಿತು ಯಾವುದೇ ಆದಂತಹ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಸಂತ ಗೆಲುವು ವರ್ಷಗಳ ಹಿಂದೆ ಮದುವೆಯಾಗಿದ್ದು ಗಂಡನೊಂದಿಗೆ ಜಗಳವಾಡಿ ತವರು ಮನೆಯಲ್ಲಿ ಇದ್ದಳು ಅಲ್ಲದೆ, ವಸತಿಗೆ ಬೇರೊಬ್ಬರ ಜೊತೆಗೆ ಸಂಪರ್ಕ ಇತ್ತು ಎಂದು ಹೇಳಲಾಗುತ್ತಿದ್ದು, ಈಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಿಡುಗಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಮೇ 31ಕ್ಕೆ ಪ್ರಜ್ವಲ್ ರೇವಣ್ಣನ ಸಂಸದ ಸ್ಥಾನ ಅಂತ್ಯವಾಗುತ್ತದೆ ಪ್ರಜ್ವಲ್ ರೇವಣ್ಣ ಯಾವುದೇ ಕಾರಣಕ್ಕೂ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಾನು ಪ್ರಜ್ವಲ್ ವಿಡಿಯೋ ಗಮನಿಸಿದ್ದೇನೆ. ಬ್ಲೂ ಕರ್ನರ್ ನೋಟಿಸ್ ಮೂಲಕ ತನಿಖೆ ಆಗುತ್ತಿತ್ತು. ಈಗ ವಾಪಸ್ ಬರುತ್ತೇನೆ ಎಂದು ತಿಳಿಸಿದ್ದಾರೆ. ಕಾನೂನು ಮೂಲಕ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಮೇ 31ಕ್ಕೆ ಸಂಸದ ಸ್ಥಾನ ಅಂತ್ಯವಾಗುತ್ತದೆ.ಬಳಿಕ ರಾಜ ತಾಂತ್ರಿಕ ಪಾಸ್ಪೋರ್ಟ್ ಅಂತ್ಯವಾಗುತ್ತದೆ.ಇದೆಲ್ಲವನ್ನು ತಿಳಿದು ಮರಳಿ ಬರಲು ತೀರ್ಮಾನಿಸಿದ್ದಾರೆ. ವಿಡಿಯೋದಲ್ಲಿ ಷಡ್ಯಂತರ ಇದೆ ಅನ್ನೋ ಆರೋಪ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು ಎಸ್ಐಟಿ ಅಧಿಕಾರಿಗಳು ಇದರ ಬಗ್ಗೆ ಗಮನಿಸುತ್ತಾರೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ರಾವ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆಲುಗು ನಟಿ ಹೇಮಾ ಸೇರಿ 8 ಆರೋಪಿಗಳಿಗೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು ಇದೀಗ ಇಂದು ಮತ್ತೆ ಆರೋಪಿಗಳಿಗೆ ಸಿಸಿ ಬೇಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆಲುಗು ನಟಿ ಹೇಮಾ ಸೇರಿ 8 ಜನರಿಗೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು. ಆದರೆ ಹೇಮಾ ಸೇರಿದಂತೆ ಕೆಲವರು ವಿಚಾರಣೆಗೆ ಹಾಜರಾಗಿಲ್ಲ.ಹಾಗಾಗಿ ಇದೀಗ ಎಲ್ಲರಿಗೂ ಎರಡನೇ ಬಾರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಿನ್ನೆ ವಿಚಾರಣೆಗೆ ಆರೋಪಿಗಳು ಗೈರಾಗಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡುವಂತಹ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Read More

ತುಮಕೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ, ತುಮಕೂರು ಜಿಲ್ಲೆಯಲ್ಲಿ ಮೀರಿಸಂಹಿತೆಯನ್ನು ಗಾಳಿಗೆ ತೂರಿ ಬೆಳ್ಳಂಬೆಳಗ್ಗೆ ಮಧ್ಯ ಮಾರಾಟ ಮಾಡಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ರಸ್ತೆಯಲ್ಲಿ ಓಡಾಡುವ ಮಹಿಳೆಯರು ಹಾಗೂ ಮಕ್ಕಳು ವಿದ್ಯಾರ್ಥಿಗಳಿಗೆ ಮುಜುಗರ ಉಂಟಾಗಿದ್ದು ಗುಬ್ಬಿ ಪಟ್ಟಣದ ರಾಘವೇಂದ್ರ ವೈನ್ಸ್, ಸಿವಿಆರ್ ಲಿಕ್ಕರ್ ಶಾಪ್ ಹಾಗೂ ಚಾಮುಂಡಿ ವೈನ್ಸ್ ಮಾಲೀಕರಿಂದ ನೀತಿ ಸಂಹಿತೆ ಉಲ್ಲಂಘಿಸಿ ಮದ್ಯ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಾರ್ ಮಾಲೀಕರ ಭಂಡತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಅಬಕಾರಿ ಅಧಿಕಾರಿಗಳು ಹಾಗೂ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದರು ಯಾವುದೇ ರೀತಿಯಾದಂತಹ ಕ್ರಮ ತೆಗೆದುಕೊಂಡಿಲ್ಲ ಪೊಲೀಸರು ಹಾಗೂ ಅಬಕಾರಿ ಅಧಿಕಾರಿಗಳ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

Read More

ತುಮಕೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಸಂಭವಿಸಿದ್ದು ತುಮಕೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ ಪತ್ನಿಯ ನಡುವೆ ಗಲಾಟೆ ಶುರುವಾಗಿದೆ ಗಲಾಟೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪತಿ ಪತ್ನಿಯನ್ನು ಭೀಕರವಾಗಿ ಹೊಂದಿದ್ದಲ್ಲದೆ ದೇಹದ ಅಂಗಾಂಗಗಳನ್ನು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಹೌದು ಈ ಒಂದು ದುರ್ಘಟನೆ ತುಮಕೂರಿನ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತನೇ ಕೃತ್ಯ ಎಸಗಿದ್ದಾನೆ. ಆರೋಪಿಯು ಪತ್ನಿಯ ಕತ್ತು ಹಾಗೂ ದೇಹದ ಇತರ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಿವರಾಮ್​​ನನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಆರೋಪಿ ಶಿವರಾಮ್ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ ಎಂಬವರನ್ನು ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ…

Read More