Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಶಿಕ್ಷಕರ ಹುದ್ದೆ ಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಆದೇಶ ಹೊರಡಿಸಲಾಗುತ್ತದೆ ಎಂದು ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅದೇ ರೀತಿ ಕಲ್ಯಾಣ ಕರ್ನಾಟಕದಲ್ಲೂ ನೇಮಕಾತಿ ಆದೇಶ ಹೊರಡಿಸುತ್ತೇವೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ ಆರನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಕೆಗೂ ಅವಕಾಶ ಕಲ್ಪಿಸಲಾಗಿದ್ದು ಕರ್ನಾಟಕ ಪಬ್ಲಿಕ್ ಶಾಲೆಗೆ 3000 ಕೋಟಿ ರೂಪಾಯಿ ಮೀಸಲು ಇಡಲಾಗಿದೆ. ನವೆಂಬರ್ ಎರಡನೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಗುದ್ದಲಿ ಪೂಜೆ ಮಾಡಲಿದ್ದಾರೆ. ಆಧಾರಿತ ಶಿಕ್ಷಣ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈಗ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುತ್ತದೆ ಎಂದು ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ…
ಗೋವಾ : ಮಾವೊವಾದಿ ನಕ್ಸಲರ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗಿದೆ. ದೇಶದಲ್ಲಿ ಈಗ ಕೇವಲ 11% ನಕ್ಸಲಿಸಂ ಪ್ರಭಾವ ಉಳಿದಿದೆ. ಛತ್ತೀಸ್ಗಡದ ಮೂರು ಜಿಲ್ಲೆಗಳಲ್ಲಿ ಮಾತ್ರ ನಕ್ಸಲಿಸಂ ಪ್ರಭಾವ ಇದೆ 100ಕ್ಕೂ ಹೆಚ್ಚು ಜಿಲ್ಲೆಗಳು ನಕ್ಸಲರ ಮುಕ್ತ ಆಗಿವೆ. ನಕ್ಸಲ್ ಪ್ರಭಾವದ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ದೇಶದಲ್ಲಿ ಈಗ ನಕ್ಸಲರು ಶರಣಾಗತಿ ಆಗುತ್ತಿದ್ದಾರೆ ಎಂದು ಗೋವಾದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದರು. ಇಂದು ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ಐಎನ್ಎಸ್ ವಿಕ್ರಾಂತ್ನಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ, ನಾನು ಮಿಲಿಟರಿ ಉಪಕರಣಗಳ ಬಲವನ್ನು ಗಮನಿಸುತ್ತಿದ್ದೆ. ಈ ದೊಡ್ಡ ಹಡಗುಗಳು, ಗಾಳಿಗಿಂತ ವೇಗವಾಗಿ ಚಲಿಸುವ ವಿಮಾನಗಳು, ಈ ಜಲಾಂತರ್ಗಾಮಿ ನೌಕೆಗಳು, ಅವು ತಮ್ಮಲ್ಲಿ ಪ್ರಭಾವಶಾಲಿಯಾಗಿವೆ, ಆದರೆ ಅವುಗಳನ್ನು ನಿಜವಾಗಿಯೂ ಅಸಾಧಾರಣವಾಗಿಸುವುದು ಅವುಗಳನ್ನು ನಿರ್ವಹಿಸುವವರ ಧೈರ್ಯ. ಈ ಹಡಗುಗಳು ಕಬ್ಬಿಣದಿಂದ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಜಿಟಿ ಮಾಲ್ ನ ಮೂರನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಲ್ಲಿ ಈ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮಾಲ್ ಓಪನ್ ಆಗುತ್ತಿದ್ದಂತೆ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಕೆ.ಪಿ ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವೇತನ ನೀಡದ ಹಿನ್ನೆಲೆ, ಬೆಂಗಳೂರಿನಲ್ಲಿ ಓಲಾ ಕಂಪನಿಯ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದು ಸಿಇಓ ವಿರುದ್ಧ FIR ದಾಖಲಾಗಿದೆ. ಕಂಪನಿಯ ಇಂಜಿನಿಯರ್ ಆಗಿದ್ದ ಕೆ ಅರವಿಂದ್ ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭತ್ಯೆ ಹಾಗೂ ವೇತನ ನೀಡದೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಓಲಾ ಸಂಸ್ಥೆಯ ಸಿಇಒ ಭವೇಶ್ ಅಗರ್ವಾಲ್ ಮತ್ತು ಹಿರಿಯ ಸಿಬ್ಬಂದಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಇದೀಗ ಸುಬ್ರಮಣಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನು ಕೆ ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಅಕೌಂಟಿಗೆ ಹಣ ಬಂದೆಡೆ. 30ನೇ ತಾರೀಕು 17 ಲಕ್ಷ 46 ಸಾವಿರ ಹಣ ಅಕೌಂಟಿಗೆ ಬಂದಿತ್ತು. ಕಂಪನಿಯಿಂದ ಅರವಿಂದ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ಅನುಮಾನದಿಂದ ಕುಟುಂಬ ಕಂಪನಿ ಅವರನ್ನು ಪ್ರಶ್ನೆ ಮಾಡಿದ್ದಾರೆ. ಸುಮಾರು 28 ಪುಟಗಳ ಡೆತ್ ನೋಟ್ ಬರೆದಿದ್ದರು ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂಪನಿಯ ಹೋಮೋಲೋಗೇಶನ್ ಇಂಜಿನಿಯರಿಂಗ್…
ಹಾಸನ : ಐತಿಹಾಸಿಕ ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡು ವಾಪಸ್ ತೆರಳುವಾಗ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ. ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು. ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಅಪಘಾತದಲ್ಲಿ ಆಕ್ಟಿವಾ ಸವಾರ…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಇದೀಗ ಆರ್ ಎಸ್ ಎಸ್ ವಿರುದ್ಧ ಸಮರ ಮುಂದುವರೆದಿದೆ. ಜಿಲ್ಲೆಯ ಚಿತ್ತಾಪುರದಲ್ಲಿ ಅಷ್ಟೇ ಅಲ್ಲದೆ ಇನ್ನು ಎರಡು ಕಡೆಗೆ ಪಥ ಸಂಚಲನಕ್ಕೆ ಬ್ರೇಕ್ ಹಾಕಲಾಗಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ಮತ್ತು ಕುಮ್ಮನಶಿರಸಿಗಿಯಲ್ಲಿ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅವಕಾಶ ನಿರಾಕರಿಸಲಾಗಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ವಿಚಾರವಾಗಿ ನೆನ್ನೆ ದೊಡ್ಡ ಹೈಡ್ರಾಮಾನೆ ನಡೆದಿದ್ದು, ನಿರ್ಬಂಧದ ನಡುವೆಯೂ ಕಾರ್ಯಕರ್ತರು ಪತಸಂಚಲನಕ್ಕೆ ಹೊರಟಿದ್ದರು. ಸೇಡಂ ಪಟ್ಟಣದಲ್ಲಿ ಮತ ಸಂಚಲನಕ್ಕೆ ಹೊರಟಿದ್ದ ಗಣ ವೇಷಧರಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ದೊಡ್ಡ ಹೈಡ್ರಾಮಾವೆ ಆಗಿದೆ ಹೀಗಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ಹೆಚ್ಚಾಗಿದ್ದು, ಇದಕ್ಕೆಲ್ಲ ಸಚಿವ ಪ್ರಿಯಾಂಕ ಖರ್ಗೆ ಒತ್ತಡವೇ ಕಾರಣ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಬೆಂಗಳೂರು : ಇಂದು ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಪಟಾಕಿ ಸಿಡಿಸುವ ವೇಳೆ ಮಕ್ಕಳ ಜೊತೆಗೆ ಪೋಷಕರು ಇರಲೇಬೇಕು. ಏಕೆಂದರೆ ಪಟಾಕಿ ಸಿಡಿಸುವಾಗ ಮಕ್ಕಳಿಗೆ ಯಾವುದೇ ಅನಾಹುತ ಆಗದಂತೆ ಎಚ್ಚರದಿಂದ ಇರಬೇಕಾದದ್ದು ಪೋಷಕರ ಕರ್ತವ್ಯ. ಇದೀಗ ಪಟಾಕಿ ಸಿಡಿದ ಪರಿಣಾಮ ಬೆಂಗಳೂರಲ್ಲಿ ಐವರು ಬಾಲಕರ ಕಣ್ಣಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಲ್ಲಿ ಪಟಾಕಿ ಅವಘಡದಿಂದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಪಟಾಕಿ ಸಿಡಿಸಲು ಹೋಗಿ ಇಬ್ಬರು ಬಾಲಕರ ಕಣ್ಣಿಗೆ ಗಾಯವಾಗಿದೆ. 12 ಹಾಗೂ 14 ವರ್ಷದ ಬಾಲಕರ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಳು ಬಾಲಕರಿಗೆ ಸದ್ಯ ಮಿಂಟೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಸಂಜೆ ರಾಕೆಟ್ ಪಟಾಕಿ ಸಿಡಿದು ಬಾಲಕರ ಕಣ್ಣಿಗೆ ಗಾಯವಾಗಿದೆ. ಇನ್ನು ನಾರಾಯಣ ನೇತ್ರಾಲಯದಲ್ಲಿ ಮೂರು ಪಟಾಕಿ ಸಿಡಿತದಿಂದ ಮೂವರು ಬಾಲಕರು ಗಾಯಗೊಂಡಿರುವ ಘಟನೆ ವರದಿಯಾಗಿದೆ. 15 ವರ್ಷದ ಮಕ್ಕಳಿಗೆ ಪಟಾಕಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟಾಕಿ…
ಬಾಗಲಕೋಟೆ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ, ಎರಡು ಕುಟುಂಬಗಳ ನಡುವೆ ಮಾರಮಾರಿ ನಡೆದಿದೆ. ಈ ವೇಳೆ ಯುವಕನೋರ್ವನನ್ನು ರಾಡ್ ಇಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೆಳಕಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ರಾಡ್ನಿಂದ ಹೊಡೆದು ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ವಿಶ್ವನಾಥ್ ಹನುಮಂತಪ್ಪ (26) ಯುವಕನನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಲಿಂಗಾಪುರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಹೊಲದಿಂದ ಬರುವ ವೇಳೆ ವಿಶ್ವನಾಥ್ನನ್ನು ಅಡ್ಗಟ್ಟಿ ರಾಡ್ ನಿಂದ ಸಂಬಂಧಿಕರೇ ಹಲ್ಲೆ ಮಾಡಿದ್ದಾರೆ. ಅಕ್ಟೋಬರ್ 16 ರಂದು ವಿಶ್ವನಾಥ್ ಮೇಲೆ ಹಲ್ಲೆ ನಡೆದಿದೆ ರಾಡ್ ನಿಂದ ಆರು ಮಂದಿ ಹಲ್ಲೆ ಮಾಡಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಕುಟುಂಬಗಳ ನಡುವೆ ಮಾರಮಾರಿ ನಡೆದಿದೆ. ಗಲಾಟೆಯಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ. ಗಣೇಶ್ ಮರೆಮ್ಮನವರ, ಪ್ರಕಾಶ, ರಂಗಪ್ಪ, ಕುಮಾರ, ಯಲ್ಲಪ್ಪ ಬಸಪ್ಪ ಮತ್ತು ಯಂಕಪ್ಪ ಎಂಬುವವರು ವಿಶ್ವನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಜಮೀನಿನಿಂದ ಮನೆಗೆ ತೆರುಳುವಾಗ…
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ಆರ್ಎಸ್ಎಸ್ ಸಂಚಲನಕ್ಕೆ ನಿರಾಕರಣೆ ಹಿನ್ನೆಲೆಯಲ್ಲಿ, ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿತು. ಈ ವೇಳೆ ಕಲ್ಬುರ್ಗಿ ಹೈಕೋರ್ಟ್ ಅರ್ಜಿದಾರರಿಗೆ ಮತ್ತೊಂದು ಅರ್ಜಿ ಸಲ್ಲಿಸಲು ಸೂಚನೆ ನೀಡಿತ್ತು. ನವೆಂಬರ್ 2 ರಂದು ಕಲ್ಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ಪಥಸಂಚಲನ ವಿಚಾರವಾಗಿ ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠದ ಸೂಚನೆಯಂತೆ ಮುಖಂಡರು ಕಲ್ಬುರ್ಗಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಹೌದು ನಿನ್ನೆ ಹೊಸ ಅರ್ಜಿ ಸಲ್ಲಿಕೆಗೆ ಆರ್ ಎಸ್ ಎಸ್ ಮುಖಂಡರು ಮುಂದಾಗಿದ್ದರು.ನಿನ್ನೆ ಡಿಸಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾಗ ಮನವಿ ಪತ್ರ ಖುದ್ದಾಗಿ ನೀಡಲು ಜಿಲ್ಲಾಧಿಕಾರಿ ಕಚೇರಿ ಮತ್ತು ನಿವಾಸಕ್ಕೆ ತೆರಳಿದ್ದರು ಡಿಸಿ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನಿವಾಸದ ಸಿಬ್ಬಂದಿಗಳಿಂದ ಫೋನ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಆಪ್ತ ಸಹಾಯಕರಿಗೆ ಫೋನ್ ಮಾಡಿಸಿದ್ದಾರೆ. ಆಪ್ತ ಸಹಾಯಕರು ಕೂಡ ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರ ಅಧಿಕೃತ ಎರಡು ಇ-ಮೇಲ್ ಗೆ ಪತ್ರ ರವಾನಿಸಿದ್ದಾರೆ. ಪಥ ಸಂಚಲನಕ್ಕೆ ಅನುಮತಿ ನೀಡುವಂತೆ…
ಕಲಬುರ್ಗಿ : ನಾಡಿನಾದ್ಯಂತ ಇಂದು ಎಲ್ಲರು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಇದ್ದರೆ, ಕಲ್ಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದಲ್ಲಿ ಭೂಮಿ ಕಂಪಿಸಿದೆ. ಬೆಳಗ್ಗೆ 8:00 ಸುಮಾರಿಗೆ ಈ ಒಂದು ಭೂಮಿ ಕಂಪಿಸಿದ ಅನುಭವ ಆಗಿದೆ ಈ ವೇಳೆ ತಕ್ಷಣ ಜನರು ಭಯದಿಂದ ಮನೆಯಿಂದ ಹೊರಗಡೆ ಹೊಡಿ ಬಂದಿದ್ದಾರೆ. ಅಲ್ಲದೆ ಆತಂಕದಿಂದ ಗ್ರಾಮಸ್ಥರು ಬಯಲು ಪ್ರದೇಶದಲ್ಲಿ ಕೆಲವು ಹೊತ್ತು ಕಾಲ ಕಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಆಗಿರುವ ಕುರಿತು ಮಾಹಿತಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.














