Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು,ಜಲಮಂಡಳಿ ಪೈಪ್ ಲೈನ್ ಸಂಪ್ ಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ಜಲಮಂಡಳಿ ಪೈಪ್ ಲೈನ್ ಸಂಪ್ ಗೆ ಬಿದ್ದು ಪ್ರೀತಂ (14) ಸಾವನ್ನಪ್ಪಿದ್ದಾನೆ. ಬೆಂಗಳೂರಿನ ದಕ್ಷಿಣ ತಾಲ್ಲೂಕಿನ ತಾತಂಗುಡಿ ಬಳಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ (ಬಿಡಬ್ಲ್ಯೂಎಸ್ಎಸ್ಬಿ) ಸೇರಿದ ತೆರೆದ ಕಾಂಕ್ರೀಟ್ ಕೋಣೆಗೆ ಬಿದ್ದು 14 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ ಹೊರಿಸಿದ್ದಾರೆ. ಘಟನೆ ಹಿನ್ನೆಲೆ ಮೃತ ಪ್ರೀತಮ್ ಎಂದು ಗುರುತಿಸಲ್ಪಟ್ಟ ಮೃತ ವಿದ್ಯಾರ್ಥಿ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಜನವರಿ 29 ರಂದು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಕಳೆದ ಮೂರು ದಿನಗಳಿಂದ ಬಾಲಕನಿಗಾಗಿ ದಣಿವರಿಯಿಲ್ಲದೆ ಹುಡುಕಾಟ ನಡೆಸಿದ್ದೇವೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Read More

ಬೆಂಗಳೂರು : ದ್ವೇಷ ಭಾಷಣ ತಡೆ ಬಿಲ್ ಗೆ ರಾಜ್ಯಪಾಲರು ಅಂಕಿತ ಹಾಕದ ವಿಚಾರವಾಗಿ 28 ಅಂಶಗಳನ್ನು ಪ್ರಶ್ನೆ ಮಾಡಿ ಅದನ್ನು ರಾಷ್ಟ್ರಪತಿಗೆ ಕಳುಹಿಸಿದ್ದಾರೆ. ರಾಷ್ಟ್ರಪತಿಗಳು ಅಬ್ಸರ್ವೇಷನ್ ಗೆ ವಾಪಸ್ ಕಳುಹಿಸಿದರ ನೋಡಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ವಾಕ್ ಸ್ವಾತಂತ್ರ್ಯ ಎಲ್ಲರಿಗೂ ಇದೆ ಹಾಗಂತ ಏನು ಬೇಕಾದರೂ ಮಾತನಾಡುವುದು ತಪ್ಪು. ಸಮಾಜದ ಮೇಲೆ ಅದು ಯಾವ ರೀತಿಯ ಪರಿಮಾಣ ಬೀರುತ್ತೆ ವ್ಯಕ್ತಿ ಮತ್ತು ಸಮುದಾಯದ ಬಗ್ಗೆ ಮಾತನಾಡುವುದು ಎಷ್ಟು ಪರಿಣಾಮ ಬೀರುತ್ತೆ ಇದೆಲ್ಲಾ ಯೋಚನೆ ಮಾಡಿ ದ್ವೇಷ ಭಾಷಣ ತಡೆ ಬಿಲ್ ಮಾಡಿದ್ದು ಎಂದರು. ರಾಜ್ಯದ ಹಲವು ಭಾಗಗಳಲ್ಲಿ ಕೆಲವರು ಭಾಷಣವನ್ನು ಮಾಡಿದ್ದರು ಭಾಷಣ ಮಾಡಿದ ಮೇಲೆ ಏನಾಗಿದೆ ಅಂತ ನಾವು ಗಮನಿಸಿದ್ದೇವೆ ಇದಕ್ಕೆ ಕಡಿವಾಣ ಹಾಕುವುದಕ್ಕೆ ಆ ಬಿಲ್ ಅನ್ನು ನಾವು ತಂದಿದ್ದು ನಿಮ್ಮ ಉದ್ದೇಶ ಏನಿದೆ? ಯಾರು ಏನಾದರೂ ಮಾಡಬಹುದಾ? ಎಂದು ಪರಮೇಶ್ವರ್ ಪ್ರಶ್ನೆ ಮಾಡಿದರು. ಉದ್ದೇಶಪೂರ್ವಕವಾಗಿ ಈ ಕಾಯಿದೆ…

Read More

ವಿಜಯನಗರ : ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ದಿನವೊಂದು ಟ್ವಿಸ್ಟ್ ಸಿಗುತ್ತಿದೆ. ಇದೀಗ ಈ ಒಂದು ಪ್ರಕರಣದ ಆರೋಪಿಯಾಗಿರುವ ಅಕ್ಷಯನನ್ನು ಹೆಚ್ಚಿನ ವಿಚಾರಣೆ ನಡೆಸಿದ ಪೊಲೀಸರಿಗೆ ಶಾಕ್ ಆಗಿದೆ. ತನಿಖೆಯ ವೇಳೆ ಹಣ ಕೊಡದಿದ್ದಕ್ಕೆ ತಂದೆ ತಾಯಿ ತಂಗಿಯ ಕೊಲೆ ಮಾಡಿದ್ದಾನೆ ಎಂದು ಶಂಕೆ ವ್ಯಕ್ತವಾಗಿದೆ. ತನಿಖೆ ವೇಳೆ ತಂಗಿ ಗರ್ಭಿಣಿ ಎಂದು ಅಕ್ಷಯ್ ಕಥೆ ಕಟ್ಟಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಅಕ್ಷಯ್ ಬೆಟ್ಟಿಂಗ್ ಮತ್ತು ಜೂಜಿನ ಚಟಕ್ಕೆ ಬಿದ್ದಿದ್ದ. ಹಣದ ವಿಚಾರವಾಗಿ ಮನೆಯವರನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಹಗರಿಬೊಮ್ಮನಹಳ್ಳಿಯಲ್ಲಿ ಅಕ್ಷಯ್ ಕುಟುಂಬ ಒಂದು ಮನೆ ಹೊಂದಿತ್ತು. ಆ ಮನೆ ಮಾರಾಟದಿಂದ ಒಂದೂವರೆ ಕೋಟಿ ಹಣ ಬರುತ್ತಿತ್ತು. ಈ ಹಣವನ್ನು ತಂದೆ ಮದುವೆಗೆ ಇಟ್ಟುಕೊಂಡಿದ್ದರು. ಆದರೆ ಬೆಟ್ಟಿನಿಂದ ಅಕ್ಷಯ ಸಾಲ ಮಾಡಿಕೊಂಡಿದ್ದ ಮನೆ ಮಾರಾಟದ ಹಣ ಕೊಡುವಂತೆ ಆತ ಬಲವಂತ ಮಾಡಿದ್ದಾನೆ. ಆದರೆ ಮನೆಯವರು ಈತನಿಗೆ ಹಣ ಕೊಟ್ಟಿರಲಿಲ್ಲ ಆ ಹಣಕ್ಕಾಗಿ ಅಕ್ಷೆ ಕೊಲೆ ಮಾಡಿರುವ…

Read More

ಬೆಂಗಳೂರು : ಗಾಳಿಪಟದ ದಾರ ಕಾಲಿಗೆ ಸಿಲುಕಿ ವ್ಯಕ್ತಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಆರ್ ಟಿ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಜನವರಿ 31 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗಾಯಗೊಂಡ ವ್ಯಕ್ತಿ ಜಿವಿಎ ಕಸದ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು ಕಾಲಿನ ನರ ಕಟ್ ಆಗಿವೆ. ಮೊದಲಿಗೆ ಬೈಕ್ ಸವಾರನಿಗೆ ಗಾಳಿಪಟದ ದಾರ ಕಾಣಿಸಿದೆ. ಆತ ದಾರ ಬಿಡಿಸಿಕೊಂಡು ಮುಂದಕ್ಕೆ ಸಾಗಿದ್ದಾನೆ. ಈ ವೇಳೆ ಹಿಂದೆ ನಡೆದುಕೊಂಡು ಬರುತ್ತಿದ್ದ ನಾಗಾರ್ಜುನನಿಗೆ ಗಾಳಿಪಟದ ದಾರ ಸಿಲುಕಿಕೊಂಡಿದೆ. ಬೈಕ್ ಸವಾರ ಮುಂದೆ ಹೋದಾಗ ಹಿಂದೆ ಇದ್ದ ನಾಗಾರ್ಜುನ ಕಾಲಿಗೆ ಸುತ್ತಿಕೊಂಡು ಗಂಭೀರವಾದ ಗಾಯಗಳಾಗಿದ್ದು, ಇದೀಗ ನಾಗಾರ್ಜುನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗಾರ್ಜುನ ಕಾಲಿನ ನರಗಳು ಕಟ್ ಆಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಚಾಮರಾಜನಗರ : ಕಳೆದ ಕೆಲವು ದಿನಗಳ ಹಿಂದೆ ಆರತಕ್ಷತೆಗೆ ತೆರಳುತ್ತಿದ್ದ ವೇಳೆ ವರನಿಗೆ ವಧುವಿನ ಮಾಜಿ ಪ್ರಿಯಕರ ಚಾಕು ಇರಿದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಪೊಲೀಸರು ವಧು ಹಾಗೂ ಆಕೆಯ ಪ್ರಿಯಕರ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿರನ್ನ ನಯನಾ ಹಾಗೂ ಈಕೆಯ ಬಾಯ್ ಫ್ರೆಂಡ್ ದರ್ಶನ್ ಮತ್ತು ಅಪ್ರಾಪ್ತನನ್ನು ಬಂಧಿಸಲಾಗಿದ್ದು, ಗೋಕುಲ್ ಹಾಗೂ ಇನ್ನೋರ್ವ ತಲೆ ಮರೆಸಿಕೊಂಡಿದ್ದಾರೆ.ಚಾಕು ಇರಿದ ದರ್ಶನ್ ತಮಟೆ ಬಾರಿಸುವ ಕೆಲಸ ಹಾಗೂ ಪುಸ್ತಕಗಳನ್ನು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದನು. ಈ ವೇಳೆ ರವೀಶ್ ನನ್ನ ಮದುವೆ ಆಗಲು ಸೂಚಿಸಿದ್ದ ನಯನಾ ಬಳಿಕ ರವೀಶ್​ನ ಫೋನ್ ಅನ್ನು ದರ್ಶನ್​​ಗೆ ಕೊಟ್ಟು ಬೆದರಿಸುವಂತೆ ಹೇಳಿದ್ದ ನಯನಾ ಮದುವೆ ನಿಲ್ಲಿಸುವಂತೆ ದುಂಬಾಲು ಬಿದ್ದಿದ್ದಳು. ನಯನಾಳ ಮಾತು ಕೇಳಿದ ದರ್ಶನ್ ತನ್ನ ಮೂವರು ಸ್ನೇಹಿತರ ಜೊತೆ ಕಾರಿನಲ್ಲಿ ಬಂದು ವರನನ್ನು ಅಡ್ಡಹಾಕಿ ಚಾಕು ಇರಿದಿದ್ದ. ಅದೃಷ್ಟವಶಾತ್ ತೋಳಿಗಷ್ಟೇ ಗಾಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದನು. ವರನಿಗೆ ಚಾಕು ಇರಿದ ಕೇಸ್ ಪತ್ತೆಗೆ ಚಾಮರಾಜನಗರ ಎಸ್ಪಿ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಹಾಡಹಗಲೇ ಸಿನಿಮೀಯ ರೀತಿಯಲ್ಲಿ 31 ಲಕ್ಷದ 38 ಸಾವಿರ ರೂ. ನಗದು ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ.  ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ  ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ 31 ಲಕ್ಷದ 38 ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದೆ. ಸಿನಿಮಾ ಸ್ಟೈಲ್ ನಲ್ಲಿ ದರೋಡೆರ ಹಾಡಹಗಲೇ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿದ ಖದೀಮರು, ಸಿನಿಮಾ ಸ್ಟೈಲ್ನಲ್ಲಿ ಲಾಂಗ್ ಮತ್ತು ಮಚ್ಚುಗಳನ್ನು ತೋರಿಸಿ ವ್ಯಕ್ತಿಯನ್ನು ಬೆದರಿಸಿ ಹಣವಿದ್ದ ಬ್ಯಾಗ್ ಹಾಗೂ ಅವರ ಬೈಕನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

Read More

ಬೆಂಗಳೂರು : ಕಾನ್ಫಿಡೆಂಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರಿಗೆ ಮಾನಸಿಕ ಒತ್ತಡ ಹಾಗೂ ಖಿನ್ನತೆ ಇತ್ತು ಎಂದು ಇದೀಗ ಬಯಲಾಗಿದೆ. ಅದು ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸಾವಿನ ಕುರಿತಂತೆ ಸಿನಿಮಾ ಮಾಡಲು ಕೂಡ ಸಿಜೆ ರಾಯ್ ನಿರ್ಧರಿಸಿದ್ದರು ಎಂದು ಇದೀಗ ಬಯಲಾಗಿದೆ. ಹೌದು, ಸಿಜೆ ರಾಯ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ಮನೋವೈದ್ಯರನ್ನು ಭೇಟಿಯಾಗಿದ್ದರು. ಜಯನಗರದ 8ನೇ ಬ್ಲಾಕ್ ನಲ್ಲಿರುವ ಮನೋವೈದ್ಯರನ್ನು ಸಿಜೆ ರಾಯ್ ಭೇಟಿ ಮಾಡಿದ್ದರು. ವೈದರಿಂದ ಕೌನ್ಸೆಲಿಂಗ್ ಸಹ ಪಡೆದಿದ್ದರು. ಸಾಕಷ್ಟು ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಒಳಪಟ್ಟಿದ್ದರು ಎಂದು ಇದೀಗ ತಿಳಿದು ಬಂದಿದೆ ಸಾಮಾಜಿಕ ಜಾಲತಾಣದಲ್ಲಿ ನೋವು ಸಹ ಹಂಚಿಕೊಂಡಿದ್ದರು. ಸಾವಿನ ಕುರಿತು ಸಿನಿಮಾ ನಿರ್ಮಾಣ ಮಾಡಬೇಕು ಇದೀಗ ಗೊತ್ತಾಗಿದೆ. ರಾಯ್ ಅವರಿಗೆ ಸಾಕಷ್ಟು ಒತ್ತಡ ಮಾನಸಿಕತೆ ಕಾಡುತ್ತಿತ್ತು. ಆದರೆ ಯಾವ ವಿಚಾರವಾಗಿ ಮಾನಸಿಕತೆಗೆ ಒಳಗಾಗಿದ್ದರು? ಯಾರಿಂದ ಒತ್ತಡ ಇತ್ತು ಯಾವ ವಿಚಾರವಾಗಿ ಅವರಿಗೆ ಒತ್ತಡ ಇತ್ತು? ಎನ್ನುವುದರ ಕುರಿತು ತಿಳಿದು…

Read More

ಬೆಂಗಳೂರು : ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಈ ಒಂದು ಭೀಕರ ಅಗ್ನಿವಗಳ ಸಂಭವಿಸಿತ್ತು. ಮೃತರನ್ನು ಸಿದ್ದರಾಜು (55) ಪತ್ನಿ ಚಂದ್ರಮ್ಮ (50) ಹಾಗೂ ಪುತ್ರ ಪ್ರಶಾಂತ್ (22) ಮೃತರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ನಿವಾಸಿಗಳು ಆಗಿದ್ದು, ಅಮರನಾರಾಯಣ ಬ್ಲಾಕ್ ನಲ್ಲಿ ಈ ಒಂದು ದುರಂತ ಸಂಭವಿಸಿತ್ತು. ಘಟನೆಯ ಹಿನ್ನೆಲೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದ ಅಮರ ನಾರಾಯಣ ಬ್ಲಾಕ್ ನ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿತ್ತು. ಈ ಘಟನೆಯಲ್ಲಿ ಕುಟುಂಬದ ಸದಸ್ಯರು ತೀವ್ರವಾಗಿ ಸುಟ್ಟಗಾಯಗಳಿಗೆ ಒಳಗಾಗಿದ್ದರು.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಂದು ಚಿಕಿತ್ಸೆಗೆ ಸ್ಪಂದಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

Read More

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿ.ಜೆ.ರಾಯ್ ಅವರ ಪಾರ್ಥಿವ ಶರೀರವನ್ನು ಬೌರಿಂಗ್ ಆಸ್ಪತ್ರೆಯಿಂದ ಪತ್ನಿ ಹಾಗೂ ಮಕ್ಕಳಿಗೆ ಹಸ್ತಾಂತರ ಮಾಡಲಾಗಿದ್ದು, ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಇಂದು ಕ್ರಿಶ್ಚಿಯನ್ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಆಸ್ಪತ್ರೆ ಬಳಿ ರಾಯ್ ಪತ್ನಿ‌ ಮತ್ತು ಮಕ್ಕಳ ಆಕ್ರಂದನ‌ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್​ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರು‌ ಜನವರಿ 30ರಂದು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಶೋಕನಗರ ಠಾಣಾ ವ್ಯಾಪ್ತಿಯ ಲ್ಯಾಂಗ್ ಫೋರ್ಡ್ ಟೌನ್‌ನಲ್ಲಿರುವ ತಮ್ಮದೇ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿ.ಜೆ.ರಾಯ್, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದರು. ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿತ್ತು. ‘SIT’ ಇಂದ ತನಿಖೆ ಈಗಾಗಲೇ, ಸಿ.ಜೆ.ರಾಯ್…

Read More

ರಾಯಚೂರು : ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದರೆ ಎರಡು ತಿಂಗಳಿನ ಒಳಗಾಗಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುತ್ತೇವೆ. ಈಗಾಗಲೇ ಸರ್ವೆ ಆಗಿದೆ ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡುತ್ತೇವೆ. ಚರ್ಚೆ ಮಾಡಿ ಎಲ್ಲದರ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಾನು ಯಾವತ್ತೂ ಕೂಡ ಅಧಿಕಾರದ ಹಿಂದೆ ಬಿದ್ದವನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಹೇಳಿಕೆ ನೀಡಿದರು. ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ತಿಂಥಣಿ ಕಾಗಿನೆಲೆ ಪೀಠದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More