Author: kannadanewsnow05

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಪ್ರತಿಪಕ್ಷ ನಾಯಕರಾದ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ.. ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಅವರು ಲೇವಡಿ ಮಾಡಿದರು. ಇವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಶೋಕ್ ಅವರು; ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರನ್ನು…

Read More

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಅವರು ಮತನಾಡಿದರು.ಶಿಕ್ಷಕರು, ಪದವೀಧರರು ಮತ ಹಾಕುವ ಈ ಚುನಾವಣೆಯನ್ನು ಕಾಂಗ್ರೆಸ್ ಕಲುಷಿತಗೊಳಿಸುತ್ತಿದೆ. ಹಣ, ಗಿಫ್ಟ್, ಕೂಪನ್ ಹಂಚುವ ಕೆಲಸವನ್ನು ಯಥೇಚ್ಛವಾಗಿ ಮಾಡುತ್ತಿದೆ. ಈಗಾಗಲೇ ಅಧಿಕಾರಿಗಳು ಅನೇಕ ಕಡೆ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಂಚುತ್ತಿದ್ದ ಗಿಫ್ಟ್ ಬಾಕ್ಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಹಣದ ಆಮಿಷ ಒಡ್ಡಿ ಮತ ಪಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ವಿದ್ಯಾವಂತರಾದ ಪದವೀಧರರು ತಕ್ಕ ಪಾಠ ಕಲಿಸಬೇಕು. ಎರಡೂ ಪಕ್ಷಗಳ…

Read More

ಗದಗ : ಭಜನಾ ಮಂಡಳಿಯಿಂದ ಹೇಳದೆ ಕೇಳದೆ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿ ಒಬ್ಬ ಸಂಘದ ಪ್ರಮುಖನ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿರುವ ಘಟನೆ ಗದಗ ನಗರದ ಟಾಂಗಾಕೂಟ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಚಾಕುವಿನಿಂದ ಇರಿದು ಗೋವಿಂದರಾಜ ಶಿರಹಟ್ಟಿ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ವಿನಾಯಕ್ ಕಬಾಡಿ ಇಂದ ಹಲ್ಲೆ ನಡೆಸಲಾಗಿದೆ. ಇಸ್ಕಾನ್ ಕೀರ್ತನೆ ಸಂಘದಿಂದ ಗೋವಿಂದರಾಜ ವಿನಾಯಕ್ನನ್ನು ತೆಗೆದಿದ್ದ ಎನ್ನಲಾಗಿದೆ. ಇಸ್ಕಾನ್ ಕೀರ್ತನೆ ಸಂಘವನ್ನು ಗೋವಿಂದರಾಜ ಶಿರಹಟ್ಟಿ ನಡೆಸುತ್ತಿದ್ದ. ಕಳೆದ ಒಂದು ವರ್ಷದಿಂದ ಕೀರ್ತನ ಸಂಘದಿಂದ ದೂರ ಇಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿನಾಯಕ್, 2018 ರಿಂದ 2023ರ ವರೆಗೆ ಕೀರ್ತನ ಸಂಘದಿಂದ ದೂರವಿಟ್ಟಿದ್ದರು. ಕಾರಣ ತಿಳಿಸಿದೆ ಸಂಘದಿಂದ ತೆಗೆದಿದ್ದಕ್ಕೆ ವಿನಾಯಕ್ ಸಹಜವಾಗಿ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಒಂದು ವರ್ಷದಿಂದ ಗೋವಿಂದರಾದ ಜೊತೆಗೆ ವಿನಾಯಕ್ ಗಲಾಟೆ ಮಾಡುತ್ತಿದ್ದ. ಇಂದು ಅಂಗಡಿಯಲ್ಲಿ ಕೂತಿದ್ದಾಗ ಗೋವಿಂದರಾಜ ಶಿರಹಟ್ಟಿ ಮೇಲೆ ವಿನಾಯಕ್ ಹಲ್ಲೆ ನಡೆಸಿದ್ದಾನೆ.ಗದಗ ನಗರದ…

Read More

ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ. ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು‌. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತಾಡಿದ ಕುಮಾರಸ್ವಾಮಿ, ಬೆಂಗಳೂರಿಗೆ ಈ ಸರ್ಕಾರ ಕೊಟ್ಟ ಕೊಡುಗೆಯಾದರೂ ಏನು? ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲ. ಈ ಸರ್ಕಾರಕ್ಕೆ ಯೋಗ್ಯತೆ ಇಲ್ಲ. 5 ಕೆಜಿ ಅಕ್ಕಿ ಮೋದಿ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದರು. ಹೆಚ್ಚುವರಿ ಐದು ಕೆಜಿ ಹೆಚ್ಚು ಕೊಟ್ಟಿಲ್ಲ.ಈ ಕಡೆ ಹಣವು ಇಲ್ಲ ಕಳೆದ ಮೂರು ತಿಂಗಳಿನಿಂದ ಹೆಚ್ಚುವರಿ ಹಣ ನೀಡಿಲ್ಲ ಮಾ ತೆತ್ತಿದರೆ ಬ್ರಾಂಡ್ ಮಂಗಳೂರು ಎಂದು ಹೇಳುತ್ತಾರೆ.ಬ್ರಾಂಡ್ ಬೆಂಗಳೂರು ಅಲ್ಲ ಇದು ಲೂಟಿ ಬೆಂಗಳೂರು ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡೆಸಿದರು. ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ…

Read More

ದಾವಣಗೆರೆ : ಕಳೆದ ಎರಡು ದಿನಗಳ ಹಿಂದೆ ಚನ್ನಗಿರಿ ಠಾಣೆಯಲ್ಲಿ ಆದಿಲ್ ಎನ್ನುವ ವ್ಯಕ್ತಿಯ ಲಾಕಪ್ ಡೆತ್, ಹಾಗೂ ಠಾಣೆ ಬಳಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ದಾವಣಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಎಸ್ಪಿ ಉಮಾಪ್ರಶಾಂತ್, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ. ಶೀಘ್ರವಾಗಿ ಸಿಐಡಿ ಅಧಿಕಾರಿಗಳು ಪ್ರಕರಣವನ್ನು ತಮ್ಮ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ ಎಂದರು. ಕಾನೂನು ಪ್ರಕಾರ ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಮೂರು ದಿನದಲ್ಲಿ ಪೋಸ್ಟ್ ಮಾರ್ಟಂ ವರದಿ ಬರಲಿದ್ದು ಸತ್ಯ ಹೊರಬೀಳಲಿದೆ. ಪ್ರಕರಣದ ಬಗ್ಗೆ ಮಾಹಿತಿ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ ಮುನ್ನೊಳ್ಳಿ ಮಾಹಿತಿ ಪಡೆದುಕೊಂಡಿದ್ದಾರೆ. ಕಲ್ಲು ತೂರಾಟ ಪ್ರಕರಣದಲ್ಲಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದೇವೆ. ಬಂಧಿತರು…

Read More

ನವದೆಹಲಿ : ಇಂದು ರಾತ್ರಿ ರೆಮಲ್ ಚಂಡಮಾರುತ ನೆಲಕ್ಕೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದ ಕರಾವಳಿಗೆ ಈ ಒಂದು ಚಂಡಮಾರುತ ಅಪ್ಪಳಿಸಲಿದೆ. ಹಾಗಾಗಿ ಕೊಲ್ಕತ್ತಾ ಏರ್ಪೋರ್ಟ್ ನಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಹೌದು ಇಂದು ರಾತ್ರಿ ರೆಮಲ್ ಚಂಡಮಾರುತ ನೆಲಕ್ಕೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 9:00 ವರೆಗೆ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಲ್ಕತ್ತದಲ್ಲಿ ರೈಲು ಸೇವೆ ಸಹ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಮನೆಯ ಸದಸ್ಯರು ಎಷ್ಟಿದ್ದಾರೋ ಅಷ್ಟು ದುಡ್ಡನ್ನು ಪಡಿತರ ಅಕೌಂಟಿಗೆ ಹಾಕುತ್ತಿತ್ತು. ಇದೀಗ ಕಳೆದ ಮೂರು ತಿಂಗಳಿನಿಂದ ದುಡ್ಡು ಅಕೌಂಟಿಗೆ ಬಂದಿಲ್ಲ.ಈ ಕುರಿತಂತೆ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಹಾಗಾಗಿ ರಾಜ್ಯ ಬಿಜೆಪಿಯು ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದೆ.ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಬೇಕೋ ಬೇಡ್ವೋ ಎಂದು ಕಿವಿಯ ಮೇಲೆ ಹೂವಿಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು, ಈಗ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದೆ. ಸೋಲು ಖಚಿತ-ನಿಶ್ಚಿತ-ಖಂಡಿತವೆಂದ ತಕ್ಷಣ ಗ್ಯಾರಂಟಿಗಳಿಗೆ ಲಭಿಸಿದೆ ಸಂಚಕಾರ.10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು ಹೋದದ ಅಪರಾವತಾರ.ಸಿಎಂ ಸಿದ್ದರಾಮಯ್ಯ ಅವರೇ, 3 ತಿಂಗಳಿನಿಂದ ಅಕ್ಕಿ ದುಡ್ಡು ಬಂದಿಲ್ಲ, ದುಡ್ಡು ಕೊಡ್ತಿರೋ ಇಲ್ವೋ ಅನ್ನೊದನ್ನ ಹೇಳ್ಬಿಡಿ.…

Read More

ರಾಜಸ್ತಾನ : ರಾಜಸ್ಥಾನದ ಅಜ್ಮೀರ್ ನ ರೆಸ್ಟೋರೆಂಟ್ ಒಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರಾಜಸ್ಥಾನದ ಅಜ್ಮೀರ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ಇಂದು ಭಾರೀ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ನಲ್ಲಿ ಇರಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ರೆಸ್ಟೊರೆಂಟ್‌ಗೆ ಬೆಂಕಿ ಹೊತ್ತಿಕೊಂಡಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ರೈಲು ನಿಲ್ದಾಣದ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ ಹೊಟೇಲ್‌ಗೆ ಬೆಂಕಿ ತಗುಲಿರುವ ಬಗ್ಗೆ ಮಾಹಿತಿ ಪಡೆದ ಮೂರ್ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟರು.ಪ್ರಕರಣದ ಕುರಿತು ಮಾಹಿತಿ ನೀಡಿರುವ ಕ್ಲಾಕ್ ಟವರ್ ಪೊಲೀಸ್ ಠಾಣಾಧಿಕಾರಿ ದಿನೇಶ್ ಕುಮಾರ್, ಅಜ್ಮೀರ್‌ನ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಅಡುಗೆ ಮಾಡುವಾಗ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ವಾಸ್ತವವಾಗಿ, ಅಜ್ಮೀರ್‌ನ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ನಿರ್ಮಿಸಲಾದ ರೆಸ್ಟೋರೆಂಟ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ತೀವ್ರವಾಗಿತ್ತು ಎಂದರೆ ರೆಸ್ಟೋರೆಂಟ್‌ನಲ್ಲಿ ಸ್ಫೋಟ ಸಂಭವಿಸಿದೆ. ಬೆಂಕಿ ಅವಘಡದಿಂದ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ವಾಹನವು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು…

Read More

ರಾಮನಗರ : ಕೆಲಸದ ನಿಮಿತ್ಯ ಬೈಕ್ ಮೇಲೆ ತೆರಳುತ್ತಿದ್ದ ಬೆಳೆ ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಒಬ್ಬ ಮಹಿಳೆ ಸ್ಥಳದಲ್ಲಿ ಸಾವನ್ನುಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅವರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಬಸ್ ಡಿಕ್ಕಿ ಹೊಡೆದು ಓರ್ವ ಸವಾರ ಹಾಗೂ ಮಹಿಳೆ ಸಾವನ್ನಪ್ಪಿದ್ದರೆ. ಅವರೆಹಳ್ಳಿ ಕೆರೆ ಏರಿ ಬಳಿ ಈ ಅಪಘಾತ ಸಂಭವಿಸಿದೆ.ರಾಮನಗರ ಕನಕಪುರ ರಸ್ತೆ ಅವರೇಹಳ್ಳಿ ಕೆರೆ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಕನಕಪುರದಿಂದ ರಾಮನಗರ ಕಡೆ ಬೈಕ್ ತೆರಳುತ್ತಿತ್ತು. ಈ ವೇಳೆ ಬೈಕ್ ಸವಾರ ಹಾಗೂ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರು ಮಾಗಡಿ ತಾಲೂಕಿನ ಹೊನ್ನಾಪುರ ಪಾಳ್ಯದವರು ಎಂದು ಹೇಳಲಾಗುತ್ತಿದೆ. ರಾಮನಗರ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗೂಡ್ಸ್ ವಾಹನದ ಚಾಲಕ ಸಾವು ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದು ಗೂಡ್ಸ್ ವಾಹನದ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಸ್ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಚಾಲಕ…

Read More

ಉಡುಪಿ : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿಲ್ಲವೆಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ನಿನ್ನೆ ಪಕ್ಷದಿಂದ ಉಚ್ಚಾಟಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿರುವವರು ನನಗೆ ಮೋದಿ ಹಾಗೂ ರಾಜ್ಯದ ನಾಯಕರಿಗೆ ಬೈದಿಲ್ಲ ಬಿಜೆಪಿ ಪಕ್ಷದ ವ್ಯವಸ್ಥೆ ಕುರಿತು ಅಸಮಾಧಾನವಿದೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೋದಿಗೆ ಬೈದಿಲ್ಲ ರಾಜ್ಯದ ನಾಯಕರಿಗೆ ಬೈದಿಲ್ಲ, ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ನಾಯಕರನ್ನು ಟೀಕಿಸಿದ ಜಗದೀಶ್ ಶೆಟ್ಟರ್ ಮತ್ತೆ ಬಂದರು.ಪಕ್ಷಕ್ಕೆ ವಾಪಸ್ ಆಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಹೇಳಿದರು. ಇದು ಶಾಶ್ವತವಾದ ವಜಾ ಅಲ್ಲ ಎಂದು ರಘುಪತಿ ಭಟ್ ತಿಳಿಸಿದರೂ. ಪರಿಷತ್ ಚುನಾವಣೆಯಲ್ಲಿ ಗೆದ್ದ ಮೇಲೆ ವಜಾ ರದ್ದಾಗುತ್ತದೆ.ಬಿಜೆಪಿ ಕಾರ್ಯಕರ್ತ ನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದಾರೆ.

Read More