Subscribe to Updates
Get the latest creative news from FooBar about art, design and business.
Author: kannadanewsnow05
“ರಾಮ” ಎಂದರೆ ರಮಿಸುವುದು, ಹೃದಯದಲ್ಲಿ ವಾಸಿಸುವುದು ಎಂಬ ಅರ್ಥ. ಆದ್ದರಿಂದ ನಮ್ಮ ಹೃದಯಗಳಲ್ಲಿ ಪ್ರಕಾಶಿಸುತ್ತಿರುವ ಶ್ರೀರಾಮನನ್ನು ಅರಿತುಕೊಳ್ಳಬೇಕು. ಒಮ್ಮೆ ಪಾರ್ವತಿ ದೇವಿ ಪರಮಶಿವನನ್ನು “ಕೇನೋಪಾಯೇನ ಲಘುನಾ ವಿಷ್ಣೋರ್ ನಾಮ ಸಹಸ್ರಕಂ” ಎಂದು ಕೇಳಿ, ವಿಷ್ಣು ಸಹಸ್ರನಾಮಕ್ಕೆ ಸರಳವಾದ ಮಾರ್ಗವನ್ನು ತಿಳಿಸಬೇಕೆಂದು ಕೇಳುತ್ತಾಳೆ. ಅದಕ್ಕೆ ಪರಮೇಶ್ವರನು, “ಓ ಪಾರ್ವತಿ! ನಾನು ಸದಾ ಜಪಿಸುವುದು ಇದೇ” ಎಂದು ಈ ಕೆಳಗಿನ ಶ್ಲೋಕವನ್ನು ಹೇಳುತ್ತಾನೆ: ಶ್ಲೋಕ: ಶ್ರೀ ರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ | ಸಹಸ್ರನಾಮ ತತ್ತೂಲ್ಯಂ ರಾಮನಾಮ ವರಾನನೆ || ಈ ಶ್ಲೋಕವನ್ನು ಮೂರು ಬಾರಿ ಜಪಿಸಿದರೆ, ಒಂದು ವಿಷ್ಣು ಸಹಸ್ರನಾಮ ಪಾರಾಯಣದ ಫಲ ಮಾತ್ರವಲ್ಲ, ಭಕ್ತರಿಗೆ ಶಿವ ಸಹಸ್ರನಾಮದ ಫಲವೂ ದೊರೆಯುತ್ತದೆ. ದುಷ್ಟರ ಶಿಕ್ಷೆ ಮತ್ತು ಶಿಷ್ಟರ ರಕ್ಷಣೆಗಾಗಿ, ಚೈತ್ರ ಶುದ್ಧ ನವಮಿಯಂದು ಐದು ಗ್ರಹಗಳು ಉಚ್ಚ ಸ್ಥಿತಿಯಲ್ಲಿ ಇದ್ದ ಸಮಯದಲ್ಲಿ, ಪುನರ್ವಸು ನಕ್ಷತ್ರ ಮತ್ತು ಕರ್ಕಾಟಕ ಲಗ್ನದಲ್ಲಿ, ಪಗಲಿನಲ್ಲಿ ಸ್ವಯಂ ಶ್ರೀಹರಿಯೇ ಕೌಸಲ್ಯೆಯ ಪುತ್ರನಾಗಿ ಭೂಮಿಯಲ್ಲಿ ಅವತಾರ ಪಡೆದ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ಘಟನೆ ನಡೆದಿದ್ದು, ಜಿಲ್ಲೆಯ ಹೊಸನಗರ ತಾಲೂಕಿನ ಬರುವೆ ಗ್ರಾಮದ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ನೇಹಿತರೊಂದಿಗೆ ಈಜಲು ಹೋಗಿದ್ದಾಗ ಕಾಲುಜಾರಿ ಬಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದ. ಮೃತ ವಿದ್ಯಾರ್ಥಿಯನ್ನು ಮದೀನಾ ಕಾಲೋನಿಯ ನಿವಾಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಹಮ್ಮದ್ ತಮಿಮ್ (16) ಕೃಷಿ ಹೊಂಡದಲ್ಲಿ ಈಜು ಹೊಡೆಯಲು ಹೋಗಿ ನೀರು ಪಾಲಾಗಿರುವುದಾಗಿ ಎಂದು ತಿಳಿದುಬಂದಿದೆ. ಹೊಸನಗರ ತಾಲೂಕಿನ ಬರುವೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ ಎಂದೂ ಹೇಳಲಾಗುತ್ತಿದೆ. ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆಂದು ವೈದ್ಯರು ಧೃಡಪಡಿಸಿದ್ದಾರೆ. ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದು, ಮೂರು ಪಬ್ಲಿಕ್ ಪರೀಕ್ಷೆಗಳನ್ನು ಬರೆದಿದ್ದ.…
ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಪಕ್ಕದ ಆಂಧ್ರಪ್ರದೇಶದ ಗಡಿ ಭಾಗವಾದ ಕೊಸಗಿ ಮಂಡಲ ವ್ಯಾಪ್ತಿಯ ಕಂದಕೂರ ಗ್ರಾಮದಲ್ಲಿರುವ ರಾಜಲಾಬಂಡ ಅಣೆಕಟ್ಟಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈಜಾಡಲು ಹೋದ 20 ಜನರ ಪೈಕಿ 4 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತದುರ್ದೈವಿಗಳು ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದವರಾಗಿದ್ದು, ಗ್ರಾಮದ ಉಮಾವತಿ ಗೋವಿಂದ (35) ರತ್ನ ಮಹಾಂತೇಶ್ (28) ಮಹಾಂತೇಶ್ ಪೀತಾಂಬರ್ (24) ಸುಂಕೇಶ್ವರ ಗ್ರಾಮದ ಶಿವಾನಂದ ಹನುಮಂತರಾಯ (24) ಮೃತಪಟ್ಟಿದ್ದಾರೆ. ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಕೊಸಗಿಗೆ ಹೋಗಿದ್ದರು. ನದಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಕೆರೆಗಳನ್ನ ತುಂಬಲು ತುಂಗಭದ್ರ ನದಿಗೆ ಹೆಚ್ಚಿನ ನೀರು ಹರಿಯುತ್ತಿದೆ. ಈಜಾಡಲು ಇಳಿದಿದ್ದ ಇಪ್ಪತ್ತು ಜನರಲ್ಲಿ ನಾಲ್ವರು ಒಂದೇ ಕುಟುಂಬದವರು ಈ ದುರ್ಘಟನೆಯಲ್ಲಿ ಸಾವನಪ್ಪಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಕೊಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಐಪಿಎಲ್ 2026ರ ಸೀಸನ್ ಇಂದಿನಿಂದ (ಮಾರ್ಚ್ 28) ಆರಂಭವಾಗುತ್ತಿದ್ದು, ಬಿಸಿಸಿಐ (BCCI) ಫೀಲ್ಡಿಂಗ್ ಮತ್ತು ಕ್ಯಾಚ್ ಪಡೆಯುವ ನಿಯಮಗಳಲ್ಲಿ ಹೆಚ್ಚಿನ ಶಿಸ್ತು ತರಲು ‘ಬಾಡಿ ಕಂಟ್ರೋಲ್’ (Body Control) ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದೆ. ಕ್ರಿಕೆಟ್ನಲ್ಲಿ ಕ್ಯಾಚ್ ಹಿಡಿಯುವುದು ಕೇವಲ ಚೆಂಡನ್ನು ಕೈಯಲ್ಲಿ ಹಿಡಿಯುವುದಕ್ಕೆ ಸೀಮಿತವಾಗಿಲ್ಲ. ಇತ್ತೀಚಿನ ವರ್ಷಗಳಲ್ಲಿ ಬೌಂಡರಿ ಲೈನ್ ಹತ್ತಿರ ಕ್ಯಾಚ್ ಹಿಡಿಯುವಾಗ ಆಟಗಾರರು ಸಮತೋಲನ ಕಳೆದುಕೊಂಡು ಬೌಂಡರಿ ಲೈನ್ ಸ್ಪರ್ಶಿಸುವ ಅಥವಾ ಚೆಂಡು ಕೈಯಿಂದ ಜಾರುವ ಘಟನೆಗಳು ಹೆಚ್ಚಾಗುತ್ತಿವೆ. ಈ ಗೊಂದಲ ನಿವಾರಿಸಲು ಬಿಸಿಸಿಐ ಐಸಿಸಿ (ICC) ನಿಯಮ 33.3 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ಮುಖಾಮುಖಿಯಾಗುತ್ತಿದ್ದು, ಈ ಹೊಸ ನಿಯಮದ ಅಡಿ ಆಟಗಾರರ ಶಿಸ್ತು ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. 1. ನಿಯಮದ ಮುಖ್ಯ ಉದ್ದೇಶ: ಕ್ಯಾಚ್ ಹಿಡಿದ ಆಟಗಾರನು ಕೇವಲ ಚೆಂಡಿನ…
BREAKING : ಮೈಸೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 25ಕೆಜಿಗೂ ಅಧಿಕ ಸಿಂಥೆಟಿಕ್ ಡ್ರಗ್ಸ್ ಜಪ್ತಿ, ಓರ್ವ ಅರೆಸ್ಟ್!
ಮೈಸೂರು : ಮೈಸೂರು ಜಿಲ್ಲೆಯಲ್ಲಿ 25 ಕೆಜಿಗು ಅಧಿಕ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದೆ. ದಾಸನಪುರ ರತ್ನಪುರಿ ಮಾರ್ಗ ಮಧ್ಯದ ತೋಟದಲ್ಲಿ 25 ಕೆಜಿಗೆ ಅಧಿಕ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದೆ. ಹುಣಸೂರು ತಾಲೂಕಿನ ದಾಸನಪುರ ಮತ್ತು ರತ್ನಪುರಿ ಮಾರ್ಗ ಮಧ್ಯೆ ಇರುವ ತೋಟದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಇರ್ಫಾನ್ ಎಂಬುವವರ ತೋಟದ ಮೇಲೆ ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ 25 ಕೆಜಿ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ತೋಟದ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ತೋಟದ ಮಾಲೀಕ ಇರ್ಫಾನನನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಕಾರ್ಯಾಚರಣೆ ವೇಳೆ ಕೆಲವು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿ ಆದವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಎರಡನೇ ಮದುವೆಯಾಗಿದ್ದ ಗ್ರಹಿಣಿ ಶೈಲಜಾ (36) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ 27ನೇ ಕ್ರಾಸ್ ನಲ್ಲಿ ಈ ಒಂದು ಘಟನೆ ನಡೆದಿದೆ ವೆಂಕಟೇಶ್ ಎಂಬ ಅವರನ್ನು ಶೈಲಜಾ ಎರಡನೇ ಮದುವೆಯಾಗಿದ್ದರು ವೆಂಕಟೇಶ ಮನೆಯವರು ಚಿತ್ರಹಿಂಸೆ ಕೊಟ್ಟ ಆರೋಪ ಕೇಳಿ ಬಂದಿದೆ. ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬರುತ್ತಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ಮೃತಳ ಕುಟುಂಬಸ್ಥರು ದೂರು ನೀಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅವಶ್ಯಕತೆ ಇಲ್ಲ ಅಂತ ಕನ್ನಡಪರ ಸಂಘಟನೆಗಳು ಹೇಳ್ತಿವೆ. ಸಿಎಂ ಕೂಡ ದ್ವಿಭಾಷಾ ಸೂತ್ರ ತಂದರೆ ಒಳ್ಳೆಯದು ಅಂತ ಹೇಳಿದ್ದಾರೆ. ದ್ವಿಭಾಷಾ ಸೂತ್ರ ಬಂದರೆ ಒಳ್ಳೆಯದು. ಈಗ ತ್ರಿಭಾಷಾ ಸೂತ್ರ ಇದೆ. ಇದು ಬದಲಾವಣೆ ಆಗಬೇಕಾದ್ರೆ ಚರ್ಚೆ ಆಗಬೇಕು. ಶಿಕ್ಷಕರ ಜೊತೆಯೂ ಮಾತಾಡ್ತೀವಿ, ಸಿಎಂ ಜೊತೆ ನಾವು ಮಾತಾಡಬೇಕು. ಎಲ್ಲಾ ಆಯಾಮಗಳಲ್ಲಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಹಾಗಾಗಿ ಯಾರೂ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕೋದು ಬೇಡ. ಸಿಎಂ ಜೊತೆ ಮಾತಾಡಿ ಇಂದೇ ಈ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಹೇಳಿದ್ದಾರೆ. ಈ ಹಿಂದೆಯೂ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನ ಮಾತ್ರ ಒಳಗೊಂಡ ‘ದ್ವಿಭಾಷಾ ನೀತಿ’ಯನ್ನು ಜಾರಿಗೆ ತರಲು…
ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ಶಿವಮೊಗ್ಗ ಜೈಲಿಗೆ ಕೈದಿಗಳಿಗೆ ಡ್ರಗ್ಸ್ ಸಿಗರೇಟ್ ಇತರೆ ಮಾದಕ ವಸ್ತುಗಳನ್ನು ಪೂರೈಕೆ ಮಾಡಿದ ಪ್ರಕರಣ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಧಾರವಾಡದಲ್ಲಿ ಜೈಲಿನ ವಾರ್ಡರ್ ಗಳೇ ಕೈದಿಗಳಿಗೆ ಗುಟ್ಕಾ ಸಿಗರೇಟ್ ಪೂರೈಕೆ ಮಾಡುತ್ತಿದ್ದು ಈ ಹಿನ್ನೆಲೆ ಮೂವರ ವಿರುದ್ಧ ಪೊಲೀಸರು ಇದೀಗ FIR ದಾಖಲಿಸಿದ್ದಾರೆ. ಹೌದು ಧಾರವಾಡದ ಕೇಂದ್ರ ಕಾರಾಗೃಹ ಅಂದ್ರೆ ಕೈದಿಗಳಿಗೆ ಭಯವೇ ಇಲ್ಲದಂತಾಗಿದೆ. ಹಣ ಕೊಟ್ಟರೆ ಕಾರಾಗೃಹದಲ್ಲಿ ಎಲ್ಲವೂ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿತ್ತು. ಇದು ಸತ್ಯ ಎಂಬಂತೆ ಕಾರಾಗೃಹದಲ್ಲಿ ಘಟನೆಯೊಂದು ನಡೆದಿದೆ. ಕೈದಿಗಳಿಗೆ ವಾರ್ಡರ್ಗಳೇ ನಿಷೇಧಿತ ತಂಬಾಕು ಉತ್ಪನ್ನಗಳನ್ನ ಪೂರೈಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೇಲಿಯೇ ಎದ್ದು ಹೊಲ ಮೇಯಿತು ಎಂಬಂತೆ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿನ ಇಬ್ಬರು ವಾರ್ಡರ್ಗಳು ಕೈದಿಗಳಿಗೆ ಸಿಗರೇಟು, ಗುಟ್ಕಾ ಶೀಟ್ಗಳನ್ನ ಪೂರೈಕೆ ಮಾಡುತ್ತಿದ್ದರು. ಕೊನೆಗೆ ಇಬ್ಬರನ್ನೂ ರೆಡ್ಹ್ಯಾಂಡಾಗಿ ಹಿಡಿದಿರುವ ಧಾರವಾಡ ಉಪನಗರ ಠಾಣೆ ಪೊಲೀಸರು, ಕಾರಾಗೃಹದ ಇಬ್ಬರು ವಾರ್ಡರ್ ಹಾಗೂ…
ಅಲಹಾಬಾದ್ : ಮದುವೆಯಾದ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಶನ್ನಲ್ಲಿ ಇರುವುದನ್ನು ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ. ಇಬ್ಬರೂ ಸ್ವಯಂ ಇಚ್ಛೆಯಿಂದ ಸಂಬಂಧದಲ್ಲಿ ಇದ್ದರೆ, ಅದು ಅವರ ವೈಯಕ್ತಿಕ ಆಯ್ಕೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಪ್ರಕರಣದಲ್ಲಿ, ವಿವಾಹಿತ ಪುರುಷ ಮತ್ತು ಮಹಿಳೆ ಒಟ್ಟಿಗೆ ಲಿವ್-ಇನ್ ರಿಲೇಶನ್ನಲ್ಲಿ ವಾಸಿಸುತ್ತಿದ್ದರು. ಇವರಿಗೆ ಕುಟುಂಬದಿಂದ ಮತ್ತು ಸಮಾಜದಿಂದ ಬೆದರಿಕೆ ಎದುರಾಗುತ್ತಿದ್ದ ಹಿನ್ನೆಲೆ, ತಮ್ಮ ಜೀವಕ್ಕೆ ರಕ್ಷಣೆ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದ್ದು— “ಮದುವೆಯಾದ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಶನ್ನಲ್ಲಿ ಇರುವುದನ್ನು ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ. ಇಬ್ಬರೂ ಸ್ವಯಂ ಇಚ್ಛೆಯಿಂದ ಸಂಬಂಧದಲ್ಲಿ ಇದ್ದರೆ, ಅದು ಅವರ ವೈಯಕ್ತಿಕ ಆಯ್ಕೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಕೋರ್ಟ್ ಮತ್ತೊಂದು ಮುಖ್ಯ ವಿಚಾರವನ್ನು ಕೂಡ ಒತ್ತಿ ಹೇಳಿದೆ. ಇಂತಹ ಸಂಬಂಧಗಳು ಸಮಾಜದ ದೃಷ್ಟಿಯಲ್ಲಿ ಒಪ್ಪಿಗೆಯನ್ನು ಪಡೆಯದೇ ಇರಬಹುದು, ಆದರೆ ಕಾನೂನಿನ ದೃಷ್ಟಿಯಲ್ಲಿ ಇದನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ವೈಯಕ್ತಿಕ ಸ್ವಾತಂತ್ರ್ಯ ಮತ್ತು…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು 1,210 ಆರಕ್ಷಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮೇಲುಕೋಟೆ ವೈರಾಮುಡಿ ಬ್ರಹ್ಮೋತ್ಸವದ ಸಂಬಂಧ ಕುರಿತು ಪತ್ರಿಕಾಗೋಷ್ಠಿ ನಡಸಿ ಮಾತನಾಡಿದ ಅವರು ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಾಲಯದಲ್ಲಿ 2026 ನೇ ಸಾಲಿನ ವೈರಮುಡಿ ಬ್ರಹ್ಮೋತ್ಸವ ಮಾರ್ಚ್ 23 ರಿಂದ ಪ್ರಾರಂಭವಾಗಿ ಏಪ್ರಿಲ್ 04 ವರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಮಾರ್ಚ್ 28 ರಂದು ಶ್ರೀ ವೈರಮುಡಿ ಕಿರೀಟಧಾರಣೆ ಉತ್ಸವ ನೆಡೆಯಲಿದ್ದು ಶ್ರೀವೈರಮುಡಿ ಬ್ರಹೋತ್ಸವ ಸಂಬಂಧ ದೇವಾಲಯ ಮತ್ತು ಇತರೆ ಇಲಾಖೆಗಳಿಂದ ಶ್ರೀಕ್ಷೇತ್ರದಲ್ಲಿ ಕೈಗೊಳ್ಳಬೇಕಾಗಿರುವ ಪೂರ್ವಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮಗಳ ಸಿದ್ದತಾ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಶ್ರೀವೈರಮುಡಿ ಬ್ರಹೋತ್ಸವ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷದಷ್ಟು ಭಕ್ತಾದಿಗಳು ಮತ್ತು ಸಾರ್ವಜನಿಕರು…














