Author: kannadanewsnow05

ಮೈಸೂರು : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ತಾನೇ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್, ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಂಡಿತು. ಅದಾದ ಬಳಿಕ ಬಿಜೆಪಿ ಸಹ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡು ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸಿತ್ತು. ಇದೀಗ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರನ್ನು ಬೆಂಬಲಿಸಿ, ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಹರೀಶ್ ಗೌಡ ಅವರು ಇಂದು ಮೈಸೂರುನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇಂದು ಕಾಂಗ್ರೆಸ್ ಶಾಸಕ ಕೆ ಹರೀಶ್ ಗೌಡ ನೇತೃತ್ವದಲ್ಲಿ ಧರ್ಮಸ್ಥಳ ಯಾತ್ರೆ ಆರಂಭವಾಗಲಿದೆ.ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಕೆ ಹರೀಶ್ ಗೌಡ ಬೆಳ್ಗೆ 8 ಗಂಟೆಗೆ ಮೈಸೂರಿನಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಗೌಡ ಪ್ರಯಾಣ ಬೆಳೆಸಲಿದ್ದಾರೆ. ಅವರ ಜೊತೆಗೆ ಮೈಸೂರಿನಿಂದ ಧರ್ಮಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಸಹ ತೆರಳಲಿದ್ದಾರೆ. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇಗುಲದಿಂದ ಕಾರ್ಯಕರ್ತರು ತೆರಳಲಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಬಸ್ ಹಾಗೂ 2000ಕ್ಕೂ ಹೆಚ್ಚು ಜನ…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಿಮ್ಸ್ ಅಂಗಡಿಯ ಮೇಲೆ ಪೊಲೀಸರು ರೇಡ್ ಮಾಡಿದ್ದು ಮುದ್ದುಮ್ ಕಾಲೋನಿ ನಿವಾಸಿ ಅಂಗಡಿ ಮಾಲೀಕ ಮಕ್ಬಾಲ್ ನನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 2.39 ಲಕ್ಷ ರೂಪಾಯಿ ಮೌಲ್ಯದ ಇ-ಸಿಗರೇಟ್ ಹಾಗೂ ನಿಕೋಟಿನ್ ಲಿಕ್ವಿಡ್ ರಿಫಿಲ್ ಗಳನ್ನು ಪೋಲಿಸಿರುವ ವಶಕ್ಕೆ ಪಡೆದುಕೊಂಡಿದ್ದಾರೆ. 54 ಇ ಸಿಗರೇಟ್ 154 ನಿಕೋಟಿನ ಲಿಕ್ವಿಡ್ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಅಂಗಡಿ ಮೇಲೆ ದಾಳಿ ನಡೆಸಿದ್ದಾರೆ ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿತ್ರದುರ್ಗ : ವಿದೇಶಿ ಕರೆನ್ಸಿ ಹಾಗು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಸದ್ಯ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ ಇಂದು ದಾಳಿಯನ್ನು ನಡೆಸಿದ್ದು, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಶಾಸಕ ಕೆ.ಸಿ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆರು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮನೆ ಮಾತ್ರವಲ್ಲದೇ ಶಾಸಕ ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿದ್ದಾರೆ. ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ…

Read More

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಸ್ವಂತ ಚಿಕ್ಕಮ್ಮನ ಮೇಲೆ ಇಬ್ಬರು ಸಹೋದರರು ಸತತ ಏಳು ವರ್ಷಗಳ ಕಾಲ ಬೆದರಿಸಿ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನಲ್ಲಿ ನಡೆದಿದೆ. ಹೌದು ಸಹೋದರನ ಜೊತೆ ಸೇರಿ ಕಾನ್ಸ್ಟೇಬಲ್ ಒಬ್ಬ ಚಿಕ್ಕಮ್ಮನ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಯಾದಗಿರಿ ಸಂಚಾರಿ ಠಾಣೆ ಕಾನ್ಸ್ಟೇಬಲ್ ರಮೇಶ್ ಹಾಗೂ ಜೆಸ್ಕಾಂ ನೌಕರ ಲಕ್ಷ್ಮಣ ವಿರುದ್ಧ ಸಂತ್ರಸ್ತ ಮಹಿಳೆ ಠಾಣೆ ಮೆಟ್ಟಿಲೇರಿದ್ದಾರೆ. ಗುರುಮಿಟ್ಕಲ್ ಠಾಣ ಗ್ರಾಮದ ವ್ಯಾಪ್ತಿಯಲ್ಲಿ ಏಳು ವರ್ಷಗಳಿಂದ ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಎಸಗಿದ್ದಾರೆ ಅಲ್ಲದೆ ತನ್ನ ಪುತ್ರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Read More

ವಿಜಯಪುರ : ರಾಜ್ಯದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಾಲು ಸಾಲು ದುರಂತಗಳು ಸಂಭವಿಸಿವೆ ಮಂಡ್ಯ ಚಿಕ್ಕಬಳ್ಳಾಪುರ ರಾಯಚೂರು ಸೇರಿದಂತೆ ಹಲವೆಡೆ ಹೃದಯಾಘಾತದಿಂದ ಹಾಗು ಇತರೆ ದುರಂತಗಳಿಂದ ಹಲವರು ಸಾವನ್ನಪ್ಪಿದ್ದಾರೆ. ಇದೀಗ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಟಾಂಗಾ ಸ್ಟಾಂಡ್ ಬಳಿ ಈ ಒಂದು ಘಟನೆ ನಡೆದಿದೆ. ವಿಜಯಪುರದ ಡೋಬೆಲೆ ಗಲ್ಲಿ ನಿವಾಸಿ ಶುಭಂ ಸಂಕಳ (22) ಸಾವನ್ನಪ್ಪಿದ್ದಾನೆ. ನಗರದಲ್ಲಿ ಏಳನೇ ದಿನದ ನೂರಾರು ಗಣೇಶನ ಮೂರ್ತಿಗಳು ವಿಸರ್ಜನೆ ಮಾಡಲಾಗುತ್ತಿತ್ತು ಮೂರ್ತಿಗಳನ್ನು ಕೋಲಿನಿಂದ ವಿದ್ಯುತ್ ತಂತಿ ಮೇಲೆತ್ತಿದ್ದಾನೆ ಶುಭಂ. ಈ ವೇಳೆ ಕೋಲಿನಿಂದ ಮೇಲೆತ್ತಿದ್ದಾಗ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ. ಘಟನೆ ನಡೆದ ಹಿನ್ನೆಲೆ ಸ್ಥಳದಲ್ಲೇ ಡಿವೈಎಸ್ಪಿ ಬಸವರಾಜ್ ಯಲಿಗಾರ ಹಾಗೂ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.a

Read More

ಬೆಂಗಳೂರು : ಕಳೆದ ಬಿಗ್ ಬಾಸ್ ಸೀಸನ್ 11 ರಲ್ಲಿ ಇದೇ ನನ್ನ ಕೊನೆಯ ಬಿಗ್ ಬಾಸ್ ಎಂದು ನಟ ಕಿಚ್ಚ ಸುದೀಪ್ ಹೇಳಿ ಎಲ್ಲರಿಗೂ ಶಾಕ್ ನೀಡಿದ್ದರು. ಆದರೆ ಇದೀಗ ಬಿಗ್ ಬಾಸ್ ಸೀಸನ್ 12 ಸೆಪ್ಟೆಂಬರ್ 28 ರಿಂದ ಗ್ರಾಂಡ್ ಓಪನಿಂಗ್ ಆಗಲಿದ್ದು ಇದಕ್ಕೆ ಇದೀಗ ಮತ್ತೆ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ. ಹೌದು ಈಗಾಗಲೇ ಕನ್ನಡದಲ್ಲಿ 11 ಸೀಸನ್​​ಗಳು ಯಶಸ್ವಿಯಾಗಿ ಮುಗಿದಿವೆ. ಈಗ 12ನೇ ಸೀಸನ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೀಘ್ರದಲ್ಲೇ ಆರಂಭ ಆಗಲಿದೆ. ಕಿಚ್ಚ ಸುದೀಪ್ ಅವರು ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರ ಆಗಲಿದ್ದು, ಈಗ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಂದಿದೆ. ಕರ್ನಾಟಕದಲ್ಲಿ ಸಖತ್ ವೈವಿದ್ಯತೆ ಇದೆ. ಊಟ, ಉಡುಗೆ, ಅಭಿರುಚಿಯಲ್ಲೂ ತುಂಬ ವೈವಿದ್ಯತೆ ಇದೆ. ಕೆಲವರಿಗೆ ಸುದ್ದಿ ಇಷ್ಟ, ಇನ್ನು ಕೆಲವರಿಗೆ…

Read More

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆಗೆ ಐದು ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಪ್ರಾಧಿಕಾರ ಹಾಗೂ ಐದು ನಗರ ಪಾಲಿಕೆಗಳಿಗೆ ಆಯುಕ್ತರು, ವಿಶೇಷ ಆಯಕ್ತರುಗಳನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಆ ಮೂಲಕ ಬಿಬಿಎಂಪಿ ಇತಿಹಾಸ ಪುಟ ಸೇರಿತು. ಇಂದಿನಿಂದ ಐದು ನಗರ ಪಾಲಿಕೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿದ್ದು, ಬುಧವಾರದಿಂದ ಆಯಾ ನಗರ ಪಾಲಿಕೆಗಳು ತೆರಿಗೆ ಸಂಗ್ರಹ ಮಾಡಲಿದೆ. ಇತ್ತ ಜಿಬಿಎ ಕೇಂದ್ರ ಕಚೇರಿಯಲ್ಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂಬ ನಾಮಫಲಕ ತೆಗೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಫಲಕವನ್ನು ಅಳವಡಿಸಲಾಗಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ವಿಮ ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಪ್ರತಿ ನಗರ ಪಾಲಿಕೆಗಳು ತಲಾ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ಹೊಂದಿರಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 198 ವಾರ್ಡುಗಳನ್ನೇ ಐದು ನಗರ ಪಾಲಿಕೆಗಳಿಗೆ ವಿಂಗಡನೆ ಮಾಡಲಾಗಿದೆ. ಪಾಲಿಕೆ ವಾರ್ಡುಗಳ ವಿಂಗಡನೆ ಹೇಗಿದೆ? ಬೆಂಗಳೂರು ಕೇಂದ್ರ ನಗರ ಪಾಲಿಕೆ…

Read More

ಬೆಂಗಳೂರು : ರಾಜ್ಯದಲ್ಲಿ ಅಬಕಾರಿ ಇಲಾಖೆ ಆದಾಯ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚು ಗಳಿಕೆಯಾಗಿದೆ. ಹೀಗಾಗಿ ಪ್ರೀಮಿಯಂ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ನಡೆಸಲಾಗಿದ್ದು, ಈ ಕುರಿತು ಚರ್ಚೆ ನಡೆಸಿ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಪ್ರಸಕ್ತ ಆರ್ಥಿಕ ವರ್ಷದ ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಗಳಿಕೆಯಾಗಿದೆ. ಈ ಅವಧಿಯಲ್ಲಿ 16,290 ಕೋಟಿ ರು. ಆದಾಯದ ನಿರೀಕ್ಷೆಯಿತ್ತು. ಆದರೆ, 16,358 ಕೋಟಿ ರು. ಆದಾಯ ಬಂದಿದ್ದು, 68.78 ಕೋಟಿ ರು. ಹೆಚ್ಚಿನ ಆದಾಯ ಬಂದಿದೆ ಎಂದು ಹೇಳಿದರು. ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡ ಲಾಗುತ್ತಿದೆ. 5 ವರ್ಷಕ್ಕೊಮ್ಮೆ ಆನ್‌ಲೈನ್ ಮೂಲಕ ಪರವಾನಗಿ ನವೀಕರಣಕ್ಕೆ ಅವಕಾಶ 7…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರದಲ್ಲಿ ಹಾಸನ, ತುಮಕೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 75 ಮತ್ತು 48ರ ಟೋಲ್ ದರಗಳು ಏರಿಕೆಯಾಗಿವೆ. ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ 5 ರಿಂದ 10 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನ ಸವಾರರಿಗೆ ದಂಡದ ಮೊತ್ತವೂ ಹೆಚ್ಚಾಗಿದೆ. ಇದರಿಂದ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ರಾಜ್ಯದ ವಿವಿಧ ಟೋಲ್‌ಗಳು ಏಪ್ರಿಲ್‌ನಲ್ಲಿ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್‌ ನೀಡಿದ್ದರು, ಈಗ ಬೆಂಗಳೂರಿನಿಂದ ಹಾಸನ, ಮಂಗಳೂರು, ಧರ್ಮಸ್ಥಳ, ತುಮಕೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹೋಗುವ ವಾಹನ ಸವಾರರಿಗೆ ಸೆಪ್ಟೆಂಬರ್ 1 ರಿಂದ ಟೋಲ್‌ ಶುಲ್ಕದ ಹೆಚ್ಚಳ ಸಂಕಷ್ಟದ ಮೇಲೆ ಬರೆ ಎಳೆದಂತಾಗಿದೆ. ಫಾಸ್ಟ್‌ಟ್ಯಾಗ್‌ ಹೊಂದಿರುವ ಲಘುವಾಹನಗಳ ಏಕಮುಖ ಪ್ರಮಾಣ 55ರಿಂದ 60ಕ್ಕೆ ಏರಿಕೆಯಾದರೆ, ವಾಣಿಜ್ಯ ಮತ್ತು ಸರಕು ವಾಹನಗಳ ಏಕಮುಖ ಸಂಚಾರಕ್ಕೆ 200ರಿಂದ 205 ಏರಿಕೆ ಆಗಿದೆ,ಇದೇ ಟೋಲ್‌ಗಳಲ್ಲಿ ದ್ವಿಮುಖ ಸಂಚಾರಕ್ಕೆ ಹಿಂದಿನದರದ ಮೇಲೆ 10ರೂ ಸಹ ಏರಿಕೆಯಾಗಿದೆ. ಫಾಸ್ಟ್‌ಟ್ಯಾಗ್‌…

Read More

ಉಡುಪಿ : ರಾಜ್ಯದಲ್ಲಿ ಮತ್ತೊಂದು ಘೋರವಾದ ದುರಂತ ಒಂದು ನಡೆದಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ತಾನು ಹೆತ್ತ ಮಗುವನ್ನೇ ತಾಯಿಯೊಬ್ಬಳು ನೇಣು ಬಿಗಿದು ಕೊಂದ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಹೇರಂಜೆ ಕ್ರಾಸ್ ಬಳಿ 1 ವರ್ಷ 6 ತಿಂಗಳ ಮಗುವನ್ನು ನೇಣಿಗೆ ಹಾಕಿದ ಸುಷ್ಮಿತಾ (23) ಆತ್ಮಹತ್ಯೆ ಮಾಡಿಕೊಂಡ ತಾಯಿ ಎಂದು ತಿಳಿದು ಬಂದಿದೆ.ನನ್ನ ಸಾವಿಗೆ ನಾನೇ ಕಾರಣ ಎಂಬುದಾಗಿ ಮರಣ ಪತ್ರ ಬರೆದಿಟ್ಟು ಸುಷ್ಮಿತಾ ತನ್ನ ಮಗು ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಕೂಡ ತಮ್ಮ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಹೆಚ್ಚುವರಿ ಮಾಹಿತಿ ಕಲೆ ಹಾಕಿದರು.

Read More