Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರೂ ಕೊಲೆ ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್ ನಡೆಸಿರುವ ಘಟನೆ ವರದಿಯಾಗಿದೆ. ಆರೋಪಿಗಳಾದ ಬಾಲರಾಜ್ ಹಾಗೂ ಮೊಹಮ್ಮದ್ ಶೇಕ್ ಕಾಲಿಗೆ ಗುಂಡೇಟು ತಗುಲಿದ್ದು, ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಇನ್ಸ್ಪೆಕ್ಟರ್ ಎಸ್ ಆರ್ ನಾಯಕ್ ಇಬ್ಬರ ಮೇಲೆ ಫೈರಿಂಗ್ ನಡೆಸಿದ್ದಾರೆ. ಮಲ್ಲಿಕ್ ಜಾನ್ ಕೊಲೆ ಪ್ರಕರಣದ ಆರೋಪಿಗಳಾದ ಬಾಲರಾಜ ಹಾಗೂ ಶೇಖ್ ಪೊಲೀಸರ ಮೇಲೆ ಹಲ್ಲೆ ಮಾಡಿ ಇಬ್ಬರು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇನ್ಸ್ಪೆಕ್ಟರ್ ಫೈರಿಂಗ್ ನಡೆಸಿದ್ದಾರೆ. ಶ್ಯಾಮ್ ಜಾಧವ್ ಗ್ಯಾಂಗ್ ನಲ್ಲಿ ಇಬ್ಬರು ಆರೋಪಿಗಳು ಗುರುತಿಸಿಕೊಂಡಿದ್ದಾರೆ ಘಟನೆಯಲ್ಲಿ ಪಿ ಐ ಎಸ್ ಆರ್ ನಾಯಕ್ ಸೇರಿದಂತೆ ಮೂವರು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಪಿಐ ಎಸ್.ಆರ್ ನಾಯಕ್, ಪಿಸಿಗಳಾದ ಅಹಮದ್ ನೀಲಗಾರ, ಚಲವಾದಿಗೆ ಗಾಯಗಳಾಗಿವೆ. ಗಾಯಗೊಂಡ ಪೊಲೀಸರು ಮತ್ತು ಆರೋಪಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ : ಸಂಪುಟ ಪುನಾರಚನೆ ಬಗ್ಗೆ ನೀವು ಹೈಕಮಾಂಡ್ ಜತೆ ಮಾತನಾಡುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಏನನ್ನೂ ಮಾತನಾಡುವುದಿಲ್ಲ. ನನ್ನನ್ನು ಅವರೇನಾದರೂ ಕೇಳಿದರೆ ನನಗೆ ಏನು ಬೇಕೋ ಅದನ್ನು ಹೇಳುತ್ತೇನೆ. ಹೈಕಮಾಂಡ್ ಅವರು ನನ್ನನ್ನು ಏನು ಕೇಳುತ್ತಾರೆ, ಏನು ಕೇಳುವುದಿಲ್ಲ ಎಂದು ನನಗೆ ಗೊತ್ತಿದೆ. ಅದರ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರನ್ನು ಮುಖ್ಯಮಂತ್ರಿ ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಯಾರನ್ನು ಭೇಟಿ ಮಾಡಿದ್ದಾರೋ, ಏನನ್ನು ಮಾತನಾಡಿದ್ದಾರೋ ನನಗೆ ತಿಳಿದಿಲ್ಲ. ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ. ಮುಖ್ಯಮಂತ್ರಿಯೊಬ್ಬರು ಭೇಟಿಗೆ ಬಂದಾಗ ಸಮಯ ನೀಡುವ ವಾಡಿಕೆ ಇದೆ ಎಂದರು. ಮುಖ್ಯಮಂತ್ರಿಯವರು ಪ್ರಧಾನಿ ಹಾಗೂ ಹೈಕಮಾಂಡ್ ಅನ್ನು ಭೇಟಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಭೇಟಿಯಾಗುವುದು ತಪ್ಪೇನ್ರೀ? ನೀವು ಬೇರೆ ಪಕ್ಷದವರ ಬಳಿ ಮಾತನಾಡಿದಂತೆ ಮಾತನಾಡುತ್ತಿದ್ದೀರಿ. ಅವರು ಎಲ್ಲರನ್ನೂ ಭೇಟಿ ಮಾಡುವ…
ಕಲಬುರ್ಗಿ : ದೇಶ ಹಾಗೂ ರಾಜ್ಯದಲ್ಲಿ ಭಾರಿ ಚರ್ಚಿತವಾಗಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ ಅರ್ಎಸ್ಎಸ್ ಪಥಸಂಚಲನವು ಹೈಕೋರ್ಟ್ ಅನುಮತಿ ಯೊಂದಿಗೆ ನ.16ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನಡೆಯಲಿದೆ. ಇದಕ್ಕಾಗಿ ತಾಲೂಕು ಆಡಳಿತ ಹಾಗೂ 1000 ಪೊಲೀಸರು ಭಾರೀ ಭದ್ರತೆ ಕಲ್ಪಿಸಲಿದ್ದಾರೆ. ಇದಕ್ಕಾಗಿ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ನಗರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಕಣಾವಲು ಆಯೋಜಿಸಲಾಗಿದೆ. ಹೆಚ್ಚು ಕಡಿಮೆ 1 ತಿಂಗಳ ವಾದ ಪ್ರತಿವಾದ, ಚರ್ಚೆ, ಶಾಂತಿ ಸಭೆ ನಡೆದು ಕೊನೆಗೂ ಹೈ ಕೋಲ್ಟ್ ನ.16ರಂದು ಪಥ ಸಂಚಲನಕ್ಕೆ 10 ಷರತ್ತುಗಳೊಂದಿಗೆ ಒಪ್ಪಿಗೆ ಸೂಚಿಸಿತ್ತು. ಅದರಂತೆ 50 ಬ್ಯಾಂಡ್ ಸೆಟ್ನವರು ಸೇರಿ ಸ್ಥಳೀಯ 350 ಗಣ ವೇಷಧಾರಿಗಳು ಪಥ ಸಂಚಲನ ನಡೆಸಲು ಒಪ್ಪಿಗೆ ನೀಡಲಾಗಿದೆ. ಭಾನುವಾರ ಮಧ್ಯಾಹ್ನ 3ರಿಂದ ಸಂಜೆ 5.30ರೊಳಗೆ ಪಥ ಸಂಚಲನ ನಡೆಸಲು ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಲಬುರಗಿ ಉಪ ಪೊಲಿಸ್ ಅಧೀಕ್ಷಕ ಮೇಹೇಶ ಮೇಘಣ್ಣವರ ಹಾಗೂ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಅವರ ನೇತೃತ್ವದಲ್ಲಿ…
ಪಂಜಾಬ್ : ಪಂಜಾಬ್ ನಲ್ಲಿ ಘೋರವಾದ ದುರಂತ ಸಂಭವಿಸಿದ್ದು ಫಿರೋಜ್ಪುರದಲ್ಲಿ ಇಬ್ಬರು ಆರೆಸ್ಸೆಸ್ ಕಾರ್ಯಕರ್ತರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಈ ಒಂದು ದುಷ್ಕೃತ್ಯ ಎಸಗಿದ್ದಾರೆ. ಮೂಲಗಳ ಪ್ರಕಾರ, ಪ್ರಮುಖ ಆರ್ಎಸ್ಎಸ್ ಕಾರ್ಯಕರ್ತ ಬಲದೇವ್ ರಾಜ್ ಅರೋರಾ ಅವರ ಪುತ್ರ ನವೀನ್ ಅರೋರಾ ಅವರು ಸಂಜೆ 6 ಗಂಟೆ ಸುಮಾರಿಗೆ ನಗರದಲ್ಲಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಹಲ್ಲೆಕೋರರು ಸ್ಥಳದಿಂದ ಪರಾರಿಯಾಗಿದ್ದು, ನವೀನ್ ತೀವ್ರವಾಗಿ ಗಾಯಗೊಂಡರು. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಸ್ವಲ್ಪ ಸಮಯದ ನಂತರ ಅವರು ಸಾವನ್ನಪ್ಪಿದರು. ಯಾರನ್ನೂ ಇನ್ನೂ ಬಂಧಿಸಲಾಗಿಲ್ಲ, ಮತ್ತು ಉದ್ದೇಶವು ಸ್ಪಷ್ಟವಾಗಿಲ್ಲ ಮತ್ತು ಇದು ಗುರಿಯಾಗಿಟ್ಟುಕೊಂಡ ಹತ್ಯೆಯನ್ನು ಸೂಚಿಸಬಹುದು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ದುಷ್ಕರ್ಮಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ತನಿಖೆ ನಡೆಯುತ್ತಿರುವುದರಿಂದ, ನಗರವು ಕಟ್ಟೆಚ್ಚರದಲ್ಲಿದೆ. ಏತನ್ಮಧ್ಯೆ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ದೆಹಲಿ, ಅ.15: “ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಶನಿವಾರ ರಾತ್ರಿ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು, ಸಚಿವ ಸಂಪುಟ ಪುನರ್ ರಚನೆಗೆ ಹಸಿರು ನಿಶಾನೆ ಸಿಕ್ಕಿದೆ ಎನ್ನುವ ಮಾಹಿತಿ ಬಗ್ಗೆ ಕೇಳಿದಾಗ, “ಅವರು ಯಾರನ್ನು ಭೇಟಿ ಮಾಡಿದ್ದಾರೋ, ಏನನ್ನು ಮಾತನಾಡಿದ್ದಾರೋ ನನಗೆ ತಿಳಿದಿಲ್ಲ. ಮುಖ್ಯಮಂತ್ರಿಯೊಬ್ಬರು ಭೇಟಿಗೆ ಬಂದಾಗ ಸಮಯ ನೀಡುವ ವಾಡಿಕೆ ಇದೆ” ಎಂದರು. ಪಕ್ಷದ ಶಿಸ್ತಿನ ಸಿಪಾಯಿ ನೀವು ಎಂದು ಮಾಧ್ಯಮದವರು ಹೇಳಿದಾಗ, “ಪಕ್ಷ ಹೇಗೆ ಹೇಳುತ್ತದೆಯೋ ಆ ರೀತಿ ಕೇಳಿಕೊಂಡು ಹೋಗಬೇಕು ನಾವೆಲ್ಲ. ಅಷ್ಟೇ ನಮ್ಮ ಕೆಲಸ” ಎಂದರು. ಮುಖ್ಯಮಂತ್ರಿಯವರು ಪ್ರಧಾನಿಯವರನ್ನು ಹಾಗೂ ಹೈಕಮಾಂಡ್ ಅನ್ನು ಭೇಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಭೇಟಿಯಾಗುವುದು ತಪ್ಪೇನ್ರೀ? ನೀವುಗಳು ಬೇರೆ ಪಕ್ಷದವರ ಬಳಿ ಮಾತನಾಡಿದಂತೆ ಮಾತನಾಡುತ್ತಿದ್ದೀರಿ. ಅವರು ಎಲ್ಲರನ್ನೂ ಭೇಟಿ ಮಾಡುವ ಹಕ್ಕು ಹೊಂದಿದ್ದಾರೆ. ಪ್ರಧಾನ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಸದ್ಯ ವಿಜಯಪುರ ಠಾಣೆ ಪೊಲೀಸ್ರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಪೊಲೀಸರು ಇಬ್ಬರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ. ಅತ್ಯಾಚಾರಕ್ಕೆ ಮಾಲೀಕನಿಗೆ ಬಾಡಿಗೆ ಮನೆ ಮಹಿಳೆ ಕೂಡ ಸಾತ್ ನೀಡಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾಗಿ ಚಂದ್ರಶೇಖರ್ ಮತ್ತು ಮಂಜೂರಾಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಲಕಿಯ ಪೋಷಕರು ಪಕ್ಕದ ಮನೆಯ ಮಹಿಳೆಯ ಬಳಿ ತಮ್ಮ ಮಗಳನ್ನ ಬಿಟ್ಟು ಹೋಗಿದ್ದರು. ಈ ವೇಳೆ ಮನೆ ಮಾಲೀಕನನ್ನ ಮನೆಗೆ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಕೋಲ್ಕತ್ತಾ : ಭಾರತ ಕ್ರಿಕೆಟ್ ತಂಡದ ನಾಯಕ ಶುಭಮನ್ ದಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಸದ್ಯ ಗಿಲ್ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಗಾಯಗೊಂಡಿದ್ದರು. ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಶುಭಮನ್ ಗಿಲ್ ಗಾಯಗೊಂಡಿದ್ದರು. ಕುತ್ತಿಗೆ ನೋವಿನಿಂದ ಬ್ಯಾಟಿಂಗ್ ಮಾಡದೆ ಅರ್ಧಕ್ಕೆ ತೆರಳಿದ್ದರು. ಇದೀಗ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಶುಭಮನ್ ಗಿಲ್ ಐಸಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನವೆಂಬರ್ 22 ರಿಂದ 26 ರವರೆಗೆ ಗುವಾಹಟಿಯ ಬರ್ಸಪಾರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತದ ನಾಯಕ ಶುಭಮನ್ ಗಿಲ್ ಆಡುವುದು ಅನುಮಾನವಾಗಿದೆ. ಎರಡನೇ ದಿನದಾಟದ ಬೆಳಗಿನ ಅವಧಿಯಲ್ಲಿ ಮೂರು ಎಸೆತಗಳಲ್ಲಿ 4 ರನ್ ಗಳಿಸಿ ಡಗೌಟ್ಗೆ ಮರಳಲು ನಿರ್ಧರಿಸಿದ ಗಿಲ್, ಶನಿವಾರ ತೀವ್ರ ಕುತ್ತಿಗೆ ನೋವನ್ನು ಅನುಭವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ನಿಗಾದಲ್ಲಿ ಇರಿಸಲಾಗಿತ್ತು ಮತ್ತು ರೆವ್ಸ್ಪೋರ್ಟ್ಸ್ ಪ್ರಕಾರ, ಗಿಲ್ ಅವರನ್ನು ರಾತ್ರಿಯಿಡೀ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು.ಲಭ್ಯವಿರುವ ಮಾಹಿತಿಯ…
ಮೈಸೂರು : ಮೈಸೂರು ನಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಉಪನ್ಯಾಸಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಉಪನ್ಯಾಸಕನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಹೆಚ್ಚು ಅಂಕ ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಹೊರಗಡೆ ಪಬ್ ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕಿರುಕುಳ ನೀಡಿದ್ದಾರೆ. ಈ ಸಂಬಂಧ ಮಹಿಳಾ ಉಪನ್ಯಾಸಕರಿಗೆ ವಿದ್ಯಾರ್ಥಿನಿ ದೂರು ನೀಡಿದ್ದರು. ದೂರು ನೀಡಿದ್ದಕ್ಕೆ ಉಪನ್ಯಾಸಕ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನಾನು ಹೇಳಿದಂತೆ ಕೇಳದಿದ್ದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಉಪನ್ಯಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. ಮೈಸೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯ ದೂರು ಆಧರಿಸಿ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 8(2)351 ,(2)75 ,(2)126 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು : ಸದ್ಯ ರಾಜ್ಯದ ಮೇಲೆ ಬಿಹಾರ್ ಚುನಾವಣಾ ಫಲಿತಾಂಶ ಪರಿಣಾಮ ಬೀರಿದ್ದು ನವೆಂಬರ್ ನಲ್ಲಿ ಕ್ರಾಂತಿ ಆಗುತ್ತೆ ನಾಯಕತ್ವ ಬದಲಾವಣೆ ಆಗುತ್ತೆ ಎಂದು ಈ ಮೊದಲು ಬಾರಿ ಚರ್ಚೆ ನಡೆಯುತ್ತಿತ್ತು. ಆದರೆ ಯಾವಾಗ ಬಿಹಾರ ಫಲಿತಾಂಶದಲ್ಲಿ ಕಾಂಗ್ರೆಸ್ ಪೂರ್ತಿಯಾಗಿ ನೆಲಕಚ್ಚಿತೊ, ಇದೀಗ ಈ ಒಂದು ಬೆಳವಣಿಗೆಗೆ ಬ್ರೇಕ್ ಹಾಕಲಾಗಿದೆ. ಸದ್ಯಕ್ಕೆ ನವೆಂಬರ್ ನಲ್ಲಿ ಯಾವುದೇ ಕ್ರಾಂತಿ ಆಗಲ್ಲ, ನಾಯಕತ್ವ ಬದಲಾವಣೆಯೂ ಇಲ್ಲ ಅಂತ ಹೇಳಲಾಗುತ್ತಿದೆ. ಆದರೆ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದೆಲ್ಲದರ ಮಧ್ಯ ಖ್ಯಾತ ಜ್ಯೋತಿಷಿ ಒಬ್ಬರು ಸ್ಫೋಟಕವಾದ ಭವಿಷ್ಯವನ್ನು ನುಡಿದಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲ್ಲ ಕರ್ನಾಟಕ ಎರಡು ಭಾಗ ಆಗುತ್ತೆ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿನಿ ಅವರು ಈ ಭವಿಷ್ಯವಾಣಿ ನುಡಿದಿದ್ದಾರೆ. ಕರ್ನಾಟಕ ಕಾಂಗ್ರೆಸ್ನ ಕೆಟ್ಟ ಆಡಳಿತದಿಂದಾಗಿ ಕರ್ನಾಟಕ ಎರಡು…
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು, ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ. ಹೌದು ಎಸ್ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ವಿರುದ್ಧ ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ದೂರು ನೀಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ವೆ ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಲಾಗಿದೆ. ಅಲ್ಲದೆ ಕಾನೂನು ಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಕಾನೂನು ಸಲಹೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಬೆದರಿಕೆ ಹಾಕಿರುವುದಾಗಿ ರಾಜ್ಯಪಾಲ…














