Author: kannadanewsnow05

ಹಾಸನ : ಪತಿ ಪತ್ನಿಯ ಶೀಲ ಶಂಕಿಸುವುದು ಅಷ್ಟೆ ಅಲ್ಲದೇ, ಕೌಟುಂಬಿಕ ಕಲಹದಿಂದ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಗೃಹಿಣಿಯನ್ನು ಹರಿಣಾಕ್ಷಿ ಎಂದು ತಿಳಿದುಬಂದಿದೆ. ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಶೇಖರ್ ಎಂಬುವವರು ಕಳೆದ 16 ವರ್ಷಗಳ ಹಿಂದೆ ಸಕಲೇಶಪುರ ತಾಲೂಕಿನ ಮಾಗಲು ಗ್ರಾಮದ ಹರಿಣಾಕ್ಷಿಯವರನ್ನು ಮದುವೆಯಾಗಿದ್ದರು. ಈ ನಡುವೆ ಇಬ್ಬರ ಮಧ್ಯೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ಆಗುತ್ತಿತ್ತು ಈ ವೇಳೆ ಕುಟುಂಬಸ್ಥರ ಸಮ್ಮುಖದಲ್ಲಿ ರಾಜಿ ಸಂಧಾನ ಮಾಡುತ್ತಿದ್ದವು ಎಂದು ಮೃತಳ ತಂದೆ ತಿಳಿಸಿದ್ದಾರೆ. ಆದರೆ ಇತ್ತೀಚೆಗೆ ನನ್ನ ಮಗಳ ಮೇಲೆ ಅನೈತಿಕ ಸಂಬಂಧದ ಸಂಶಯ ಪಟ್ಟು ನಾನು ಬೇರೆ ವಿವಾಹವಾಗುತ್ತೇನೆ ನೀನು ಸಹ ಬೇರೆ ಆಗು ಎಂದು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತ ವಿಚ್ಛೇದನ ಕೊಡುವಂತೆ ಪೀಡಿಸುತ್ತಿದ್ದ. ಅಲ್ಲದೆ ಅವನು ಬೇರೆ ಮಹಿಳೆಯೊಂದಿಗೆ ಹಾರ್ಥಿಕ…

Read More

ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ತಿಳಿದುಬಂದಿದೆ. ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬ್ರಿಟಿಷ್ ಕಾಲದ ಪೊಲೀಸ್ ಸಿಬ್ಬಂದಿಗಳ ಟೋಪಿಗೆ ಬ್ರೇಕ್ ಬೀಳುವ ಸಾಧ್ಯತೆ ಇದ್ದು, ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್‌ ಹ್ಯಾಟ್‌ ಅನ್ನು ಬದಲಾವಣೆ ಮಾಡಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ನಾಳೆ ಬೆಳಿಗ್ಗೆ 11:30ಕ್ಕೆ ಸಭೆ ನಡೆಯಲಿದೆ. ಕೆಎಸ್ಆರ್‌ಪಿ ಎಡಿಜಿಪಿ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾನ್‌ಸ್ಟೆಬಲ್‌ಗಳು ಆರಂಭದಲ್ಲಿ ಟರ್ಬನ್‌ ಮಾದರಿಯ ಟೋಪಿ ಬಳಸುತ್ತಿದ್ದರು. ಪ್ರಸ್ತುತ ಬಳಸುತ್ತಿರುವ ಟೋಪಿಯನ್ನು ಆರ್.ಗುಂಡೂರಾವ್ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಆರಂಭಿಸಲಾಗಿತ್ತು. ಹಳೆ ಮಾದರಿಯ ಟೋಪಿ ಬಳಕೆಯಿಂದ ಕಾನ್‌ಸ್ಟೆಬಲ್‌ಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಪ್ರತಿಭಟನೆ, ರ್‍ಯಾಲಿ ವೇಳೆ ಈ ಟೋಪಿ ಧರಿಸಿ, ಕರ್ತವ್ಯ ನಿರ್ವಹಣೆ ಕಷ್ಟ. ಟೋಪಿ ಕೆಳಕ್ಕೆ ಬಿದ್ದರೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಆದ್ದರಿಂದ, ಹಳೆ ಮಾದರಿಯ ಟೋಪಿ ಬದಲಿಗೆ ಗಟ್ಟಿಯಾಗಿ ನಿಲ್ಲುವಂತಹ ಟೋಪಿ ನೀಡಿದರೆ ಉತ್ತಮ ಎಂದು ಕಾನ್‌ಸ್ಟೆಬಲ್‌ಗಳು ಕೋರಿದ್ದರು.

Read More

ರಾಯಚೂರು : ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ ಬೆಂಗಳೂರು ಮೂಲದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮೂಲದ ಮುತ್ತುರಾಜ್‌(24) ಮತ್ತು ಮದನ್‌ (20) ಎಂದು ತಿಳಿದುಬಂದಿದೆ. ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬೆಂಗಳೂರಿನಿಂದ 15 ಜನ ಸ್ನೇಹಿತರ ತಂಡ ಆಗಮಿಸಿತ್ತು. ಈ ವೇಳೆ ಮುತ್ತುರಾಜ್ ಮತ್ತು ಮದನ್ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ತಗ್ಗು ಪ್ರದೇಶದಲ್ಲಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಕುರಿತಂತೆ ಯರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಹೊನ್ನಾವರದಲ್ಲಿ ಹಸುವಿನ ತಲೆ ಕಡೆದು ಗೋಮಾಂಸ ಮಾರಾಟ ಮಾಡಿದ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಪಾಪಿಗಳು ಗಬ್ಬದ ಹಸುವನ್ನು ಭೀಕರವಾಗಿ ಹತ್ಯೆಗೈದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಬಿಸಾಡಿರುವ ದಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ಹೌದು ಇತ್ತೀಚೆಗೆ ಪಕ್ಕದ ಹೊನ್ನಾವರ ತಾಲೂಕಿನಲ್ಲಿ ಗಬ್ಬದ ಗೋವನ್ನು ಕದ್ದು ಹತ್ಯೆಗೈದು ಗೋಮಾಂಸವನ್ನು ಸಾಗಾಟ ಮಾಡಿದಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಭಟ್ಕಳದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್ ನೀರ್‌ಬಳಿಯಲ್ಲಿ ಗಬ್ಬದ ಹಸು ಕಡಿದ ದುರುಳರು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ. ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ ಚೀಲದಲ್ಲಿ ಸುತ್ತಿ ಬಿಸಾಡಿದ್ದಾರೆ. ಗುರುವಾರ ಬೀದಿ ನಾಯಿಯೊಂದು ಚೀಲವನ್ನು ಎಳೆಯುತ್ತಿರುವಾಗ ಸ್ಥಳೀಯರು ನೋಡಿ ಪರಿಶೀಲಿಸಿದ್ದಾರೆ.ಆಗ ಸತ್ತ ಕರು ಇರುವುದು ಪತ್ತೆಯಾಗಿದೆ. ಜೊತೆಗೆ ಹಸುವಿನ ಬಾಲ ಕೂಡ…

Read More

ಮಂಗಳೂರು : ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇದೀಗ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ನೆಲೆಯಲ್ಲಿ ನಗರದಲ್ಲಿ ಯಾವುದೇ ರೀತಿಯಾಗಿ ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆದಂತೆ ಸುಮಾರು 2000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಮಂಗಳೂರು ಎಸ್ಪಿ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಹೌದು ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಯಲಾಗುತ್ತಿದ್ದು ಕರ್ನಾಟಕ ಉಲಿಮಾ ಸಂಘಟನೆಯಿಂದ ಈ ಒಂದು ಪ್ರತಿಭಟನೆ ನಡೆಯುತ್ತಿದೆ ಮಂಗಳೂರಿನ ಗಾರ್ಡನ್ ಮೈದಾನದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಮಂಗಳೂರು ನಗರದಲ್ಲಿ ಐವರು ಎಸ್ ಪಿ ಗಳ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಐವರು ಎಸ್ಪಿ ಗಳು, ಐವರು ಹೆಚ್ಚುವರಿ ಎಸ್ಪಿ ಗಳು, 20 ಡಿವೈಎಸ್ಪಿ, 230 ಇನ್ಸ್ಪೆಕ್ಟರ್ ಗಳು ಸೇರಿದಂತೆ 2,000ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅರೆಸೇನಾಪಡೆ, 20 ಕೆಎಸ್‌ಆರ್‌ಪಿ ತುಕಡಿ, 20 ಶಸಸ್ತ್ರ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ ಎಂದು ಅನುಪಮ್ ಅಗರ್ವಾಲ್ ಮಾಹಿತಿ ನೀಡಿದರು. ಧರಣಿಯ ಸ್ಥಳ ಮಂಗಳೂರಿನ ಸೂಕ್ಷ್ಮ ಮತ್ತು…

Read More

ಅಮೇರಿಕ : ಅಮೇರಿಕಾದ ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದಾರೆ ಎಂದುನ್ ತಿಳಿದುಬಂದಿದೆ. ಗುಂಡಿನ ದಾಳಿ ನಡೆಸಿರುವ 20 ವರ್ಷದ ವಿದ್ಯಾರ್ಥಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಫ್ಲೋರಿಡಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿ ಮಾಡಿದ ಯುವಕಾನನನ್ನು ಸ್ಥಳೀಯ ಶೆರಿಫ್ ಡೆಪ್ಯೂಟಿಯ ಮಗ ಎಂದು ತಿಳಿದುಬಂದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಒಂದು ಘಟನೆ ಅಮೆರಿಕದ ಕಾಲೇಜು ಕ್ಯಾಂಪಸ್ ಅನ್ನು ಬೆಚ್ಚಿಬೀಳಿಸಿದೆ. ಯುವಕನನ್ನು 20 ವರ್ಷದ ಫೀನಿಕ್ಸ್ ಇಕ್ನರ್ ಎಂದು ಗುರುತಿಸಲಾಗಿದ್ದು, ಆಪಾದಿತ ಬಂದೂಕುಧಾರಿ ವಿದ್ಯಾರ್ಥಿ ಬೆಳಿಗ್ಗೆ 11:50 ರ ಸುಮಾರಿಗೆ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು ಗುಡ್ನದ ಅಳಿಯಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು. ಮಾಹಿತಿ ನೀಡಿದ್ದಾರೆ. ತಕ್ಷಣ ಗುಂಡಿನ ದಾಳಿ ನಡೆಸಿದ ಯುವಕನನ್ನು ಪೊಲೀಸರು…

Read More

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ವಕ್ಫ್ ಕಾಯ್ದೆಯ ವಿರುದ್ಧದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಎನ್ಐಎ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಆದರೆ ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಇದೀಗ ಕೊಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ. ಹೌದು ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಳೆದ ಏಪ್ರಿಲ್ 11ರಂದು ಪಶ್ಚಿಮ ಬಂಗಾಳದ ಮುಶಿದಾಬಾದ್ ನಲ್ಲಿ ಗಲಭೆ ನಡೆದಿತ್ತು. ಈ ಒಂದು ಗಲಭೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ NIA ತನಿಖೆ ನಡೆಸುವಂತೆ ಬಿಜೆಪಿ ಅರ್ಜಿ ಸಲ್ಲಿಸಿತ್ತು. ಆದರೆ ಕೊಲ್ಕತ್ತಾ ಹೈಕೋರ್ಟ್ ಅರ್ಜಿ ತಿರಸ್ಕೃರಿಸಿದೆ. ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಕೋಲ್ಕತ್ತಾ ಹೈಕೋರ್ಟ್ ಇದೀಗ ತಿರಸ್ಕರಿಸಿದೆ. ಘಟನೆ ಹಿನ್ನೆಲೆ? ಏಪ್ರಿಲ್ 11 ಮತ್ತು 12 ರಂದು ಮುರ್ಶಿದಾಬಾದ್‌ನ ಸುತಿ, ಧುಲಿಯನ್ ಮತ್ತು ಜಂಗೀಪುರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ನೂರಾರು ಜನರು ನಿರಾಶ್ರಿತರಾಗಿದ್ದು, ಭಯಭೀತ ಗ್ರಾಮಸ್ಥರು ಊರು ತೊರೆದಿದ್ದರು.…

Read More

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಂಗಳೂರಲ್ಲಿ ಯುವತಿಯೊರ್ವಳಿಗೆ ಮದ್ಯ ಕುಡಿಸಿ ಆಟೋ ಚಾಲಕ ಹಾಗು ಆತನ ಇಬ್ಬರು ಸ್ನೇಹಿತರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ ನೇತ್ರಾವತಿ ನದಿ ಸಮೀಪದ ಬೊಳ್ಳ ಹೌಸ್‌ ಬಳಿ ಘಟನೆ ನಡೆದಿದ್ದು, ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ರಿಕ್ಷಾ ಚಾಲಕ ಹಾಗು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ.ಮುಲ್ಕಿ ನಿವಾಸಿ 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪ್ರಭುರಾಜ್ (38), ಕುಂಪಲ ನಿವಾಸಿ ಇಲೆಕ್ಟಿಷಿಯನ್ ಕಾರ್ಯನಿರ್ವಹಿಸುವ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮತ್ತೋರ್ವ ಗೆಳೆಯ ಮಣಿಯನ್ನು ಬಂಧಿಸಲಾಗಿದೆ. ಪ.ಬಂಗಾಳ ಮೂಲದ ಯುವತಿ ಉದ್ಯೋಗ ಅರಸಿ ಬಂದಿದ್ದಳು. ಕೇರಳದ ಉಪ್ಪಳ ಎಂಬಲ್ಲಿ ವಾಸವಾಗಿದ್ದಳು. ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದ ವೇಳೆ…

Read More

ನವದೆಹಲಿ : ಭಾರತದ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಸರ್ಕಾರ ಸಜ್ಜಾಗಿದೆ. ಮೇ 1ರಿಂದ ದೇಶಾದ್ಯಂತ ಫಾಸ್ಟ್​​ಟ್ಯಾಗ್​ ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ. ಈ ಹೊಸ ವ್ಯವಸ್ಥೆಯು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟ್​​ಲೈಟ್ ಸಿಸ್ಟಮ್ (GNSS) ತಂತ್ರಜ್ಞಾನ ಬಳಸಿಕೊಂಡು ವಾಹನಗಳ ಚಲನೆಯನ್ನು ಟ್ರ್ಯಾಕ್ ಮಾಡಿ, ಸಂಚರಿಸಿದ ದೂರದ ಆಧಾರದ ಮೇಲೆ ಟೋಲ್ ಶುಲ್ಕ ಲೆಕ್ಕಹಾಕಲಿದೆ. ಪ್ರಯಾಣಿಕರು ಸಂಚರಿಸಿದ ನಿಖರ ದೂರಕ್ಕೆ ತಕ್ಕಂತೆ ಟೋಲ್ ಶುಲ್ಕ ವಿಧಿಸಲಾಗುತ್ತದೆ. ಇದರಿಂದ ಸಣ್ಣ ಅಂತರದ ಪ್ರಯಾಣಿಕರಿಗೆ ಹಣ ಉಳಿತಾಯವಾಗಲಿದೆ. ಟೋಲ್ ಬೂತ್‌ಗಳನ್ನು ತೆಗೆದುಹಾಕುವುದರಿಂದ ಟ್ರಾಫಿಕ್ ಜಾಮ್‌ನ ಸಮಸ್ಯೆ ಕಡಿಮೆಯಾಗಿ, ವಾಹನ ಚಾಲಕರ ಮತ್ತು ಪ್ರಯಾಣಿಕರ ಸಮಯ ಉಳಿತಾಯವಾಗಲಿದೆ. ಆನ್‌ಬೋರ್ಡ್ ಯೂನಿಟ್ (OBU) ಮೂಲಕ ಟೋಲ್ ಶುಲ್ಕ ಸ್ವಯಂಚಾಲಿತವಾಗಿ ಲೆಕ್ಕಹಾಕಿ, ಚಾಲಕರ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತಗೊಳ್ಳಲಿದೆ. ಇದರಿಂದ ಕೈಯಿಂದ ಶುಲ್ಕ ಸಂಗ್ರಹದ ದೋಷಗಳು ಮತ್ತು ವಂಚನೆ ಸಾಧ್ಯತೆ ಕಡಿಮೆಯಾಗುತ್ತದೆ. ಟ್ರಾಫಿಕ್ ಜಾಮ್ ಕಡಿಮೆಯಾಗುವುದರಿಂದ ಇಂಧನ ಬಳಕೆ ಮತ್ತು ವಾಹನ…

Read More