Author: kannadanewsnow05

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದವು. ಇದೆ ವೇಳೆ 7, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಹಾಗಾಗಿ ಕರ್ನಾಟಕ ಬಂದ್ ಸದ್ಯಕ್ಕೆ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್​ 22ಕ್ಕೆ ಕರ್ನಾಟಕ‌ ಬಂದ್​ಗೆ ಕರೆ ನೀಡಿದ್ದಾರೆ. ಬಂದ್​ಗೆ ಬೆಂಬಲ‌ ಕೊಡಲು ಕರವೇ ಅಧ್ಯಕ್ಷ ನಾರಾಯಣಗೌಡ ಬಣ ಸೇರಿದಂತೆ ಹಲವು ಕನ್ನಡ ಸಂಘಟನೆಗಳು ಹಿಂದೇಟು ಹಾಕಿವೆ.ಕೇವಲ ನೈತಿಕ ಬೆಂಬಲ ನೀಡುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ತಿಳಿಸಿವೆ. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಮಾತುಗಳು ಕೇಳಿಬಂದ ಹಿನ್ನೆಲೆ ಬಂದ್ ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ . ಸಭೆಯಲ್ಲಿ ಬಂದ್ ದಿನಾಂಕ ಬದಲಾಗುವ ಸಾಧ್ಯತೆ…

Read More

ಕೊಪ್ಪಳ : ಚಲಿಸುತ್ತಿದ್ದ KSRTC ಬಸ್ಸಿನ ಟೈಯರ್ ಏಕಾಏಕಿ ಸ್ಪೋಟಗೊಂಡಿದೆ. ಆದರೆ ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದೆ. ಈ ಘಟನೆಗೆ ಕೆಲವೇ ನಿಮಿಷ ಮುನ್ನ ಇದೇ ರಸ್ತೆಯಲ್ಲಿ ಸಚಿವ ಶಿವರಾಜ ತಂಗಡಗಿ ಹಾಗೂ ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ ತೆರಳಿದ್ದರು ಎನ್ನಲಾಗಿದೆ. ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್​​ ಕೊಪ್ಪಳದಿಂದ ಗಂಗಾವತಿಯತ್ತ ಸಂಚರಿಸುತ್ತಿದ್ದಾಗ ಮುಂದಿನ ಚಕ್ರ ಸ್ಫೋಟಗೊಂಡಿದೆ. ಚಾಲಕ ಮಂಜುನಾಥ ಗಾಣಿಗೇರ ತಕ್ಷಣ ಬಸ್ಸನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಪರಿಣಾಮ ಬಸ್​​ ಸುಮಾರು 100 ಮೀಟರ್‌ಗೂ ಹೆಚ್ಚು ತೆವಳಿಕೊಂಡು ಹೋಗಿ ನಿಂತಿದೆ. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ಜನರು ಯಾವುದಕ್ಕೂ ಹೆದರದೆ ಚಿಕನ್ ಖರೀದಿಗೆ ಮುಗಿಬಿದ್ದಿದ್ದು ಇನ್ನೂ ಚಿಕ್ಕಬಳ್ಳಾಪುರದಲ್ಲಿ ಚಿಕನ್ ಕಡೆ ಮುಖ ಮಾಡದ ಜನರು, ಮಟನ್ ಖರೀದಿಯಲ್ಲಿ ತೊಡಗಿದ್ದಾರೆ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ 20 ರೂಪಾಯಿ ಚಿಕನ್ ರೇಟ್ ಕಡಿಮೆಯಾಗಿದ್ದು, ಮಟನ್ ಗೆ ಫುಲ್ ಡಿಮ್ಯಾಂಡ್ ಆಗಿದ್ದು ಮಟನ್ ಗೆ ಕೆಜಿಗೆ ರೂ.50 ಏರಿಕೆಯಾಗಿದೆ. ಹೌದು ಹಕ್ಕಿಜ್ವರ ಭೀತಿ ಹಿನ್ನೆಲೆ ಚಿಕನ್ ಬದಲು ಮಟನ್ ಗೆ ಮೊರೆ ಹೋದ ಜನರು. ಮಾಂಸ ಪ್ರೀಯರಿಂದ ಚಿಕನ್ ಬದಲು ಇದೀಗ ಮಟನ್ ಖರೀದಿ ಭರಾಟೆ ಜೋರಾಗಿದೆ. ಚಿಕನ್ ಬಗ್ಗೆ ಕೇಳಿದರೆ ಬೆಚ್ಚಿ ಬೀಳುತ್ತಿದ್ದಾರೆ ಚಿಕ್ಕಬಳ್ಳಾಪುರ ಜನತೆ. ಚಿಕನ್ ರೇಟ್ 20 ರೂ. ಇಳಿಕೆಯಾಗಿದ್ದು, ಅದೇ ರೀತಿಯಾಗಿ ಮಟನ್ ಬಲೆ ರೂ.50 ಏರಿಕೆಯಾಗಿದೆ. ಪ್ರತಿ ಕೆಜಿ ಚಿಕನ್ ಗೆ 20 ರೂಪಾಯಿ ಆಗಿದ್ದು ಪ್ರತಿ ಕೆಜಿ ಮಟನ್ ಗೆ ರೂ. 50 ಏರಿಕೆಯಾಗಿದೆ. ನಾಟಿ ಕೋಳಿಗಳನಂತು ಯಾರು ಕೂಡ ಕೇಳುತ್ತಿಲ್ಲ ಚಿಕನ್…

Read More

ಬೆಂಗಳೂರು : ಬೆಂಗಳೂರಲ್ಲಿ ಜನಸಂಖ್ಯೆ ಹೆಚ್ಚಾದಂತೆಲ್ಲ ಇದೀಗ ಸಂಚಾರ ದಟ್ಟಣೆ ಕೂಡ ಹೆಚ್ಚಾಗುತ್ತಿದೆ. ಕಂಪನಿಗಳಿಗೆ, ಸರ್ಕಾರಿ ಕಚೇರಿಗಳಿಗೆ ತೆರಳುವ ವೇಳೆ ಹಲವು ಬೈಕ್ ಸವಾರರು ಸಂಚಾರ ನಿಯಮ ಉಲ್ಲಂಘಿಸಿದ್ದಾರೆ. ಅದರಲ್ಲೂ ಇ ಕಾಮರ್ಸ್ ಬೈಕ್ ಸವಾರರಿಂದ ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಇದೀಗ ಪ್ರಕರಣ ದಾಖಲಾಗಿವೆ. ಹೌದು ಇ-ಕಾಮರ್ಸ್ ಬೈಕ್ ಸವಾರರಿಂದ ಸಂಚಾರ ನಿಯಮ ಉಲ್ಲಂಘನೆಯಾಗಿದ್ದು, ಫುಟ್ಪಾತ್ ನಲ್ಲಿ ಚಾಲನೆ 79 ಕೇಸ್, ನೋ ಎಂಟ್ರಿ 389 ಕೇಸ್, ಒನ್ ವೇ ಸಂಚಾರ 354 ಕೇಸ್, ನೋ ಪಾರ್ಕಿಂಗ್ 98 ಕೇಸ್, ಸಂಚಾರಕ್ಕೆ ಅಡಚಣೆ 148 ಕೇಸ್, ಹೆಲ್ಮೆಟ್ ರಹಿತ ಚಾಲನೆ ಮಾಡಿದ 582 ಜನರ ವಿರುದ್ಧ ಇದೀಗ ಕೇಸ್ ದಾಖಲಾಗಿದೆ. ಎಲೆಕ್ಟ್ರಿಕ್ ಬೈಕ್ ಗಳಿಂದಲೇ ಸಂಚಾರ ನಿಯಮ ಉಲ್ಲಂಘನೆ ಆಗಿದೆ ಎಂದು ತಿಳಿದುಬಂದಿದೆ.

Read More

ಕೊಪ್ಪಳ : ಸರ್ಕಾರದ ಖಜಾನೆ ತುಂಬಲು ರಾಜ್ಯದ ಜನತೆ ಸರ್ಕಾರಕ್ಕೆ ಸಹಕಾರ ನೀಡಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ಸಂಪತ್ತನ್ನು ವಾಮ ಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರತಿನಿತ್ಯವು ಗ್ಯಾರಂಟಿಗಳ ಭಜನೆ ಮಾಡುತ್ತಿದೆ. ಬೇರೆ ಏನನ್ನು ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಕೆಕೆಆರ್‌ಡಿಬಿಗೆ 5,000 ಕೋಟಿ ಕೊಡುತ್ತೇವೆ ಅಂತ ಹೇಳಿದ್ರು. ಇದುವರೆಗೂ ರಾಜ್ಯ ಸರ್ಕಾರ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ನಾಡಿನ ಜನ ಸರ್ಕಾರದ ಖಜಾನೆ ತುಂಬಿಸಲು ಸಹಕಾರ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಹಾಗಾದರೆ ಜನರ ತೆರಿಗೆ ಹಣ ಎಲ್ಲಿಗೆ ಹೋಗುತ್ತಿದೆ?ನಾಡಿನ ಸಂಪತ್ತು ವಾಮ ಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್…

Read More

ಬಳ್ಳಾರಿ : ರಾಜ್ಯದಲ್ಲಿ ಇದೀಗ ಹಕ್ಕಿಜ್ವರದಿಂದ ಜನರು ಭೀತಿಗೆ ಒಳಗಾಗಿದ್ದು ಇದೀಗ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುರೇಕುಪ್ಪದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮದ ಕೋಳಿ ಫಾರಂವೊಂದರಲ್ಲಿ ಒಂದೇ ವಾರದಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಹೌದು ಕಳೆದ ಒಂದು ವಾರದಲ್ಲಿ ಒಂದೇ ಕೋಳಿ ಫಾರಂನಲ್ಲಿ ಸುಮಾರು 8,000ಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದ್ದು ಹಕ್ಕಿಜ್ವರದಿಂದ ಸಾವನ್ನಪ್ಪಿರಬಹುದು ಎಂದು ಇದೀಗ ಶಂಕೆ ವ್ಯಕ್ತಪಡಿಸಲಾಗಿದೆ.ರವಿ ಎಂಬವರಿಗೆ ಸೇರಿದ ಫಾರಂನಲ್ಲಿ ಮೊದಲು 15 ಸಾವಿರ ಕೋಳಿಗಳಿದ್ದವು. ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇದೀಗ 7 ಸಾವಿರ ಕೋಳಿಗಳು ಮಾತ್ರ ಉಳಿದಿವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೋಳಿಗಳು ಸಾಯುವ ಸಾಧ್ಯತೆಗಳಿವೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ ಕೋಳಿಗಳ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಅದನ್ನು ಭೋಪಾಲ್‌ನಲ್ಲಿರುವ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗಗಳ ಸಂಸ್ಥೆಗೆ ರವಾನಿಸಿ ಪರೀಕ್ಷೆ ಮಾಡಿಸಲಾಗುತ್ತದೆ. ಮಂಗಳವಾರದ ವೇಳೆಗೆ ವರದಿ ಬರಬಹುದು.…

Read More

ಬೆಂಗಳೂರು : ನಿನ್ನೆ ನಡೆದ 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು, ಮೇಕೆದಾಟು ಪಾದಯಾತ್ರೆಯ ವೇಳೆ ಚಿತ್ರರಂಗದ ಯಾವ ಕಲಾವಿದರು, ನಿರ್ಮಾಪಕ, ನಿರ್ದೇಶಕರು ಬೆಂಬಲ ನೀಡಲಿಲ್ಲ. ನಿಮ್ಮ ಕಾರ್ಯಕ್ರಮಕ್ಕೆ ನೀವೇ ಬರೆದಿದ್ದರೆ ಹೇಗೆ? ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎಂಬುದು ನಮಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಆರ್ ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕಿಡಿ ಕಾರಿರುವ ಅಶೋಕ್ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ.ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು…

Read More

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ನಿನ್ನೆ ಒಂದೇ ದಿನದಲ್ಲಿ ಸುಮಾರು 7 ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಬಾರ್, ಕಿರಾಣಿ ಅಂಗಡಿ, ಮೆಡಿಕಲ್ ಶಾಪ್ ನಲ್ಲಿ ಕಳ್ಳತನ ನಡೆದಿದೆ. ಸುಮಾರು 7 ಕಡೆ ಕಳ್ಳತನ ನಡೆದಿದೆ ಅಂಗಡಿಗಳ ಶೆಟರ್ ಮುರಿದು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ದೋಚಿದ್ದಾರೆ. ಸುರಪುರ ಪಟ್ಟಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಲೇ ಇವೆ.ಕುಂಬಾರಪೇಟೆ, ಹಸನಾಪುರ ಗಾಂಧಿವೃತ್ತ ಸೇರಿದಂತೆ ಹಲವಡೆ ಕಳ್ಳತನ ನಡೆದಿದೆ. ಕಳೆದ ಮೂರು ತಿಂಗಳ ಹಿಂದೆ ದೇವಾಪುರ ಗ್ರಾಮದಲ್ಲೂ ಮನೆ ಕಳ್ಳನ ನಡೆದಿತ್ತು.ಅಲ್ಲದೇ ಎರಡು ತಿಂಗಳ ಹಿಂದೆ ಸುರಪುರದ ಗಾಂಧಿ ವ್ರತದಲ್ಲಿ ಮತ್ತೊಮ್ಮೆ ಕಳ್ಳತನ ಆಗಿತ್ತು. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: “ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಹೇಳಿದರು.ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ನನಗೆ ಸಿನಿಮಾರಂಗದವರ ಮೇಲೆ ಕೋಪ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ, ನಟರ ಮೇಲೆ ಸಿಟ್ಟಿದೆ. ನಾವು ಕಷ್ಟ ಕಾಲದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ದೊರಕಿಸಲು “ನಮ್ಮ ನೀರು, ನಮ್ಮ ಹಕ್ಕು ಎಂದು ಮೇಕೆದಾಟು ಪಾದಯಾತ್ರೆ ಮಾಡಿದೆವು. ಕೋವಿಡ್ ಸಮಯದಲ್ಲಿ ನಾನು, ಸಿದ್ದರಾಮಯ್ಯ ಅವರು ಸುಮಾರು 150 ಕಿ.ಮೀ ಪಾದಯಾತ್ರೆ ಮಾಡಿದೆವು. ನಾವು ನಮ್ಮ ಸ್ವಂತಕ್ಕಾಗಿ ಈ ಹೋರಾಟ ಮಾಡಲಿಲ್ಲ. ರಾಜ್ಯದ ಹಿತಕ್ಕಾಗಿ ನಡೆದೆವು. ಆದರೆ ಖುದ್ದು ಆಹ್ವಾನ ಕೊಟ್ಟರೂ ಒಂದಿಬ್ಬರನ್ನು ಹೊರತುಪಡಿಸಿ ಚಿತ್ರರಂಗದವರು ತಿರುಗಿ ನೋಡಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.…

Read More

ರಾಯಚೂರು : ಕಳೆದ ಕೆಲವು ದಿನಗಳ ಹಿಂದೆ ಆಂಧ್ರಪ್ರದೇಶ ತೆಲಂಗಾಣದಲ್ಲಿ ಹಕ್ಕಿಜ್ವರದಿಂದ ಅನೇಕ ಪಕ್ಷಿಗಳು ಸಾವನ್ನಪ್ಪುತ್ತಿದ್ದು ಇದೀಗ ಈ ಒಂದು ಹಕ್ಕಿಜ್ವರ ರಾಜ್ಯಕ್ಕೂ ಕಾಲಿಟ್ಟಿದ್ದು, ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ವಿವಿಧ ಪ್ರಭೇದದ ಪಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಯೋಗಾಲಯ ವರದಿಯಲ್ಲಿ ನೆಗೆಟಿವ್ ಅಂಶ ಎಂದು ವರದಿ ಬಂದಿದೆ. ಹೌದು ಮಾನ್ವಿಯಲ್ಲಿ ಹಕ್ಕಿಗಳ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಯೋಗಾಲಯದ ವರದಿಯಲ್ಲಿ ಹಕ್ಕಿಜ್ವರ ಅಂಶ ನೆಗೆಟಿವ್ ಎಂದು ತಿಳಿದು ಬಂದಿದೆ. ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವಡೆ ಹಕ್ಕಿಗಳ ನಿಗೂಢ ಸಾವಾಗಿದೆ. ಬೆಳ್ಳಕ್ಕಿ ಸೇರಿದಂತೆ ವಿವಿಧ ಪ್ರಭೇದ 30ಕ್ಕೂ ಹೆಚ್ಚು ಪಕ್ಷಿಗಳು ಸಾವನ್ನಪ್ಪಿದ್ದವು. ಪಕ್ಷಿಯ ಕಳೆಬರ ಪ್ರಯೋಗಾಲಕ್ಕೆ ಕಳುಹಿಸಿದ ಪಶು ವೈದ್ಯಾಧಿಕಾರಿಗಳು ಪ್ರಯೋಗಾಲದ ವರದಿಯಲ್ಲಿ ನೆಗೆಟಿವ್ ಅಂಶ ಎಂಬುವುದು ಉಲ್ಲೇಖವಾಗಿದೆ ನ್ಯೂಕ್ಯಾಟಲ್ ಡಿಸೀಸ್ ವೈರಸ್, ಎವಿಎನ್ ಇನ್ಫಾವೆಂಜಾ ಟೆಸ್ಟ್ ನಡೆಸಲಾಗಿದ್ದು, RTPCR ಹಾಗು LEF ನಡೆದ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಬೆಂಗಳೂರಿನ ಪ್ರಯೋಗಾಲಯದಲ್ಲಿ ವರದಿಯಲ್ಲಿ ಈ ಕುರಿತು ಉಲ್ಲೇಖಿಸಲಾಗಿದೆ.…

Read More