Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಮೃತ ಮಗುವಿನ ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ಗಲಾಟೆ ನಡೆದಿದ್ದು, ಆಸ್ಪತ್ರೆ ಪರಿಕಲ್ಪಗಳನ್ನು ಒಡೆದು ಹಾಕಿ ಸಂಬಂಧಿಕರು ಇದೀಗ ಆಕ್ರೋಶ ಹೊರಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. ಗೋಕಾಕ್ ಪಟ್ಟಣದ ಡಾ. ಮಹಾಂತೇಶ್ ಕಡಾಡಿ ಎಂಬುವವರಿಗೆ ಸೇರಿದ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕನ ಬ್ಯಾಳಿ ಕಾಟ ಬಳಿ ಇರುವ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಶಿವಾನಂದ ನಿಂಗಪ್ಪ ಬಡಬಡಿ ಎಂಬುವರ 7 ತಿಂಗಳ ಮಗು ಸಾವನ್ನಪ್ಪಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ತಡ ರಾತ್ರಿ ಮಗು ಸ್ಥಿತಿ ಗಂಭೀರವಾಗಿದೆ ಎಂದು ಸಿಬ್ಬಂದಿ ತಿಳಿಸಿದರು. ಬೆಳಿಗ್ಗೆ ಮಗುವನ್ನು l ಬೇರೆ ಆಸ್ಪತ್ರೆಗೆ ದಾಖಲಿಸಿ ಅಂದಿದ್ದರು. ಆದರೆ ಆಂಬುಲೆನ್ಸ್ ಬರುವಷ್ಟರಲ್ಲಿ ಆಸ್ಪತ್ರೆ ವೈದ್ಯರು ಮಗು ಮೃತಪಟ್ಟಿದ್ದೆ ಎಂದಿದ್ದಾರೆ. ಹೀಗಾಗಿ ಆಸ್ಪತ್ರೆಯ ಪರಿಕರ ಒಡೆದು ಹಾಕಿ, ಡಾ.ಮಹಾಂತೇಶ್ ಕಡಾಡಿ ವಿರುದ್ಧ ಆಕ್ರೋಶ…
ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಲುಗನ್ ಹಾಗೂ ಇತರೆ…
ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಏನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಅವರ ಪತ್ನಿಗೂ ಕೂಡ ಸೈಟ್ ಹಂಚಿಕೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಯಾಕಪ್ಪ ರಾಜೀನಾಮೆ ಕೊಡಬೇಕು?ಇದರಲ್ಲಿ ನನ್ನ ಪಾತ್ರ ಏನಿದೆ? ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮುಡಾ ಅಕ್ರಮದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಯಾಕೆ ಸಿಬಿಐ ತನಿಖೆಗೆ ಕೊಡಬೇಕು? ಬಿಜೆಪಿ ಸರ್ಕಾರದ ಅವಧಿಯಲ್ಲೆ ಸೈಟ್ ಹಂಚಿಕೆ ಮಾಡಿದ್ದು. ಈಗ ದುರುಪಯೋಗ ಆಗಿದೆ ಅಂತ ಆರೋಪ ಮಾಡಿದ್ದಾರೆ. ದುರುಪಯೋಗ ಆಗಿದೆಯಾ ಇಲ್ವಾ ಅಂತ ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಯಾರ ಅವಧಿಯಲ್ಲಿ ಸೈಟ್ ಹಂಚಿಕೆ ಆಯಿತು ಅವರನ್ನು ವರ್ಗಾವಣೆ ಮಾಡಲಾಗಿದೆ. ತನಿಖೆ ಮಾಡಲು ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿದ್ದೇವೆ. ನಾನು ಯಾಕಪ್ಪಾ ರಾಜೀನಾಮೆ ಕೊಡಬೇಕು? ನನ್ನ ಪಾತ್ರ ಏನಿದೆ? ಅಶೋಕ್ ರಾಜೀನಾಮೆ ಕೇಳುತ್ತಾನೆ ಅಂತ ಕೊಡಲು ಆಗುತ್ತಾ? ಅವರ ಕಾಲದಲ್ಲೇ ಅಕ್ರಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ಸೇರಿದಂತೆ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಇದೀಗ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದಿಗ 3 ಪ್ರಕರಣಗಳಲ್ಲಿ ಜಾಮೀನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲು ಸೆಷನ್ಸ್ ಕೋರ್ಟ್ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಇದೀಗ ಪ್ರಜ್ವಲ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಮಂಗಳೂರು : ಮಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಮಣ್ಣು ಕುಸಿತ ಉಂಟಾಗಿದೆ.ಈ ವೇಳೆ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿರುವ ಘಟನೆ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ. ಹೌದು ಮಣ್ಣು ಕುಸಿತ ಆಗಿ ಇಬ್ಬರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ. ಮಂಗಳೂರಿನ ನಗರದ ಬಲ್ಮಠದಲ್ಲಿ ನಡೆದ ಘಟನೆಯಾಗಿದೆ. ಖಾಸಗಿ ಕಟ್ಟಡ ನಿರ್ಮಾಣದ ಕಾಮಗಾರಿಯ ವೇಳೆ ಈ ಒಂದು ಘಟನೆ ನಡೆದಿದೆ. ಇಬ್ಬರು ಕಾರ್ಮಿಕರ ರಕ್ಷಣೆಗೆ ಇದೀಗ ಎಸ್ ಡಿ ಆರ್ ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಸುಮಾರು 20 ಅಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಮೈ ಮೇಲೆ ಮಣ್ಣು ಬಿದ್ದಿದೆ ಎಂದು ಹೇಳಲಾಗುತ್ತಿದೆ. ತಕ್ಷಣ ಘಟನ ಸ್ಥಳಕ್ಕೆ ಸಿಬ್ಬಂದಿ ಹಾಗೂ ಎಸ್ ಡಿ ಆರ್ ಎಫ್ ತಂಡ ಭೇಟಿ ನೀಡಿದ್ದು ರಕ್ಷಣಾ ಕಾರ್ಯಚರಣೆ ಒಂದು…
ವಿಜಯಪುರ : ನಿನ್ನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣ ನದಿಯ ತಟದಲ್ಲಿ 8 ಜನರು ಇಸ್ಪೀಟ್ ಆಡುತ್ತಿದ್ದರು. ಈ ವಿಚಾರ ತಿಳಿದು ಪೊಲೀಸರು ದಾಳಿ ಮಾಡಿದ್ದು, ತಪ್ಪಿಸಿಕೊಳ್ಳಲು ಎಂಟೂ ಜನರು ತೆಪ್ಪದಲ್ಲಿ ನದಿಯ ಮತ್ತೊಂದು ತಟಕ್ಕೆ ಹೋಗುತ್ತಿದ್ದ ವೇಳೆ ತೆಪ್ಪ ಮಗಚಿದೆ. ಐವರು ನೀರು ಪಾಲಾಗಿದ್ದು, ಮೂವರ ಮೃತ ದೇಹ ಸಿಕ್ಕಿದೆ.ಉಳಿದ ಇಬ್ಬರ ಮೃತದೆಹಕ್ಕಾಗಿ ಇದೀಗ ಶೋಧಕಾರ್ಯ ಮುಂದುವರೆದಿದೆ. ನೀರು ಪಾಲಾಗಿದ್ದ ಪುಂಡಲೀಕ ಯಂಕಂಚಿ, ತಯ್ಯಬ್ ಚೌಧರಿ (40), ಕೊಲ್ಹಾರ ಪಟ್ಟಣದ ನಿವಾಸಿ ದಶರಥ ಗೌಡರ್ (54) ಮೃತದೇಹ ಪತ್ತೆಯಾಗಿವೆ. ಆಂಬುಲೆನ್ಸ್ ಮೂಲಕ ಮರಣೋತ್ತರ ಪರೀಕ್ಷೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ಶವಗಳನ್ನು ರವಾನೆ ಮಾಡಲಾಗಿದೆ. ರಫೀಕ್ ಬಾಂಬೆ ಹಾಗೂ ಮೆಹಬೂಬ್ ವಾಲೀಕಾರಗಾಗಿ ಅಗ್ನಿಶಾಮಕ ದಳ, ಪೊಲೀಸರಿಂದ ಶೋಧಕಾರ್ಯ ನಡೆದಿದೆ. ಘಟನೆ ಹಿನ್ನೆಲೆ? ನಿನ್ನೆ ವಿಜಯಪುರ ಜಿಲ್ಲೆಯ ಕೋಲಾರ ಸಮೀಪ ಬಳುತಿ ಜಾಕ್ ವೆಲ್ ನಲ್ಲಿ ಕೃಷ್ಣಾ ನದಿ ತಟ್ಟದಲ್ಲಿ 8 ಜನರು ಇಸ್ಪೀಟ್ ಆಡಲು ಕುಳಿತಿದ್ದರು. ಇವಳೆ…
ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯ ಎಸ್ ಜಿ ಓ ಕಾಲೋನಿಯಲ್ಲಿ ಈ ಒಂದು ದುರ್ಘಟನೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಾಯಿ ಪಾರಮ್ಮ, ಮಗ ಪ್ರವೀಣ, ಸೊಸೆ ಭಾಗ್ಯ ಹಾಗೂ ಇಬ್ಬರು ವೃದ್ಧ ದಂಪತಿಗೆ ಗಂಭೀರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಗಾಯಾಳುಗಳಿಗೆ ದಾವಣಗೆರೆಯ ಜಿಲ್ಲಾ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ವೃದ್ಧ ದಂಪತಿ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿತ್ತು. ಈ ವೇಳೆ ನೋಡಲು ಹೋದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಘಟನೆ ಕುರಿತಂತೆ ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಪ್ರದೇಶ : ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ (ಜುಲೈ 2) ನಡೆದ ಧಾರ್ಮಿಕ ಸಭೆಯಲ್ಲಿ ದುರಂತ ಕಾಲ್ತುಳಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ 100 ಜನರು ಸಾವನ್ನಪ್ಪಿದ್ದಾರೆ. ಇತ್ತ ಆಸ್ಪತ್ರೆಯಲ್ಲಿ ಹೆಣದ ರಾಶಿ ನೋಡಿ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ. ಇಟಾಹ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನರೆ. ಮೃತ ಸಿಬ್ಬಂದಿಯನ್ನ ಅಲಿಗಢ ಜಿಲ್ಲೆಯ ಬನ್ನಾದೇವಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಎಂದು ಹೇಳಲಾಗುತ್ತಿದೆ. ಇಟಾ ಎಸ್ಎಸ್ಪಿ ರಾಜೇಶ್ ಕುಮಾರ್ ಸಿಂಗ್ ವಿವರಗಳನ್ನು ವಿವರಿಸಿ, “ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ಕಾಲ್ತುಳಿತ ಸಂಭವಿಸಿದೆ. ಇಟಾ ಆಸ್ಪತ್ರೆಯಲ್ಲಿ 23 ಮಹಿಳೆಯರು, ಮೂವರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದಂತೆ 27 ಶವಗಳನ್ನು ಸ್ವೀಕರಿಸಲಾಗಿದೆ. ಗಾಯಗೊಂಡವರು ಇನ್ನೂ ಆಸ್ಪತ್ರೆಗೆ ತಲುಪಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದರು. ದುರಂತಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ…
ವಿಜಯಪುರ : ಇಂದು ವಿಜಯಪುರ ಜಿಲ್ಲೆಯಲ್ಲಿ ಘನ ಘೋರವಾದಂತಹ ಘಟನೆ ನಡೆಯದಿದ್ದು ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಸುಮಾರು 4 ಜನರು ಜಲ ಸಮಾಧಿ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲಾರದ ಸಮೀಪ ಬಳುತಿ ಎಂಬಲ್ಲಿ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಕೋಲಾರ ಸಮೀಪ ಬಳುತಿ ಎಂಬಲ್ಲಿ ತೆಪ್ಪ ಮಗುಚಿ 4 ಜನರು ಜಲ ಸಮಾಧಿಯಾಗಿದ್ದಾರೆ. ಬಳುತಿ ಜಾಕ್ ವೆಲ್ ಬಳಿಯ ಕೃಷ್ಣಾ ನದಿಯಲ್ಲಿ ಈ ಒಂದು ಘಟನೆ ನಡೆದಿದೆ. ವಿಜಯಪುರದ ಕೋಲಾರ ತಾಲೂಕಿನ ಬೂಳುತಿ ಜಾಕ್ ವೆಲ್ ಬಳಿ ಈ ಒಂದು ಘಟನೆ ನಡೆದಿದೆ. ನದಿ ದಡದಲ್ಲಿ ಈ ಒಂದು ಗುಂಪು ಇಸ್ಪೀಟ್ ಆಡುತ್ತಿತ್ತು ಎನ್ನಲಾಗಿದೆ. ಪೊಲೀಸರು ಬರುತ್ತಿರುವ ಮಾಹಿತಿಯನ್ನು ಸ್ಥಳೀಯರು ನೀಡುತ್ತಿದ್ದಂತೆ ಹೆದರಿಕೊಂಡು ನದಿಯ ನಡುಗಡ್ಡೇಗೆ ತೆಪ್ಪದಲ್ಲಿ 6 ಜನರು ತೆರಳಿದ್ದಾರೆ. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ತೆಪ್ಪ ಮಗುಚಿದೆ. ತಕ್ಷಣ 6 ಜನರು ನೀರು ಪಾಲಾಗಿದ್ದಾರೆ.ಈ ವೇಳೆ ಇಬ್ಬರು ಈಜಿ ದಡ ಸೇರಿದ್ದಾರೆ. ಸದ್ಯ ಇಬ್ಬರ…
ಕಲಬುರ್ಗಿ : ನಿನ್ನೆ ಬೆಂಗಳೂರಿನ ಜ್ಞಾನಭಾರತಿ ಬಳಿ ಪಾಳು ಬಾವಿಯೊಂದರಲ್ಲಿ ಪೊಲೀಸ್ ಸಿಬ್ಬಂದಿ ಒಬ್ಬನ ಶವ ಪತ್ತೆಯಾಗಿತ್ತು ಇದೀಗ ಕಲಬುರ್ಗಿಯಲ್ಲಿ ಕೂಡ ಇಂತದೆ ಘಟನೆ ನಡೆದಿದ್ದು, ಕಲ್ಬುರ್ಗಿಯ ರೈಲ್ವೆ ನಿಲ್ದಾಣದ ಬಳಿ ಇನ್ಸ್ಪೆಕ್ಟರ್ ಒಬ್ಬರ ಶವ ಪತ್ತೆಯಾಗಿದೆ. ಹೌದು ಕಲ್ಬುರ್ಗಿಯ ರೈಲ್ವೆ ಹಳಿಯ ಮೇಲೆ ಇನ್ಸ್ಪೆಕ್ಟರ್ ಶವ ಪತ್ತೆಯಾಗಿದೆ. ರೈಲ್ವೆ ಹಳಿಯ ಮೇಲೆ ಇನ್ಸ್ಪೆಕ್ಟರ್ ಬಾಪೂಗೌಡ ಶವ ಪತ್ತೆಯಾಗಿದೆ. ವಯರ್ಲೆಸ್ ವಿಭಾಗದಲ್ಲಿ ಬಾಪೂಗೌಡ ಇನ್ಸ್ಪೆಕ್ಟರ್ ಆಗಿದ್ದ ಎನ್ನಲಾಗುತ್ತಿದೆ. ಕೆಲ ದಿನಗಳಿಂದ ಬಾಪೂಗೌಡ ಕ್ಯಾನ್ಸರನಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಇದರಿಂದ ಬಾಪೂಗೌಡ ಮಾನಸಿಕ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾದ ಶಂಕೆ ವ್ಯಕ್ತವಾಗಿದೆ. ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ರೇಲ್ವೆ ವಿಭಾಗದ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ












