Author: kannadanewsnow05

ಬೆಳಗಾವಿ : ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಗಳಲ್ಲಿ ಕೃಷ್ಣಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಸಾಕು ಪ್ರಾಣಿಗಳಿಗೂ ಗಳಲೆ ರೋಗ ಹರಡುತ್ತಿದೆ. ಸಾಕು ಪ್ರಾಣಿಗಳಿಗೆ ಹಿಮೋರೆಜಿಕ್ ಸೇಪ್ಟಿಸೀಮಿಯ ಸೋಂಕು ಹರಡುತ್ತಿದೆ. ಹೌದು ಇತ್ತೀಚಿಗೆ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವನಪ್ಪಿದ್ದವು ಬೆಳಗಾವಿ ತಾಲೂಕಿನ ಭೂತ ರಾಮನ ಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಸಾವನ್ನಪ್ಪಿದ್ದವೇ ಎಚ್.ಎಸ್ ಬ್ಯಾಕ್ಟೀರಿಯಾ ಸೋಂಕಿನಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಗಂಟು ರೋಗದಿಂದ ಈಗಾಗಲೇ ಏಳು ಜಾನುವಾರುಗಳು ಸಾವನ್ನಪ್ಪಿದ್ದು ಮೃತ ಜಾನುವಾರುಗಳಿಗೆ ಹಿಮೋರೆಜಿಕ್ ಸೇಪ್ಟಿಸೀಮಿಯ ಸೋಂಕು ತಗುಲಿರುವ ಹಿನ್ನೆಲೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Read More

ಬೆಂಗಳೂರು : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಖಡಕ್ ತೀರ್ಪು ನೀಡಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಜಾಗ ಸರ್ಕಾರಕ್ಕೆ ಸೇರಿದ್ದು. ಸರ್ಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರ್ಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ಹೈಕೋರ್ಟ್ ಹೇಳಿತು. ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರ್ಕಾರಿ ಶಾಲೆ ಕಾಂಪೌಂಡ್ ಗೋಡೆ ಹಾಗೂ ಗ್ರಾಮದ ರಸ್ತೆಯ ಸರ್ಕಾರಿ ಜಾಗದಲ್ಲಿ ಕಟ್ಟಲಾಗಿರುವ ಮಳಿಗೆಗಳ ತೆರವಿಗೆ ತಹಶೀಲ್ದಾರ್ ಜಾರಿಗೊಳಿಸಿರುವ ನೋಟಿಸ್ ಪ್ರಶ್ನಿಸಿ ಗ್ರಾಮದ ವಿರಾಟ್ ಹಿಂದೂ ಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಜಾಮೀಯಾ ಮಸ್ಜಿದ್ ಕಮಿಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ. ಅರ್ಜಿದಾರರು ಮಳಿಗೆಗಳನ್ನು ಕಟ್ಟಿರುವ ಜಾಗ ಸರ್ಕಾರಿ ಜಮೀನು ಎಂದು ಗೊತ್ತಾದಾಗ, ಸರ್ಕಾರಿ ಜಾಗದಲ್ಲಿ ಧಾರ್ಮಿಕ ಸಂಸ್ಥೆಗಳ ಕೆಲಸ ಏನಿದೆ?, ಮಳಿಗೆಗಳನ್ನು ಕಟ್ಟಿ ಅವುಗಳನ್ನು ಬಾಡಿಗೆಗೆ ಕೊಟ್ಟು…

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಸುಮಾರು 14 ಕೆಜಿ ಹೆಚ್ಚು ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ ಆರ್ ಐ ಅಧಿಕಾರಿಗಳು ಇದೀಗ ನಟಿ ರನ್ಯಾರಾವ್ ಸೇರಿದಂತೆ ನಾಲ್ವರ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದರು. ಹೌದು ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಕಂದಾಯ ಗುಪ್ತಚರ‌ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ನಟಿ ರನ್ಯಾರಾವ್‌ ಸೇರಿ ನಾಲ್ವರು ಆರೋಪಿಗಳ ವಿರುದ್ಧ ನಗರದ ವಿಶೇಷ ಆರ್ಥಿಕ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಬಂಧನಕೊಳ್ಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾರಾವ್‌ ಮತ್ತು ಆಕೆಯ ಸ್ನೇಹಿತ ತರುಣ್ ಕೊಂಡರಾಜು ಹಾಗೂ ಅವರಿಂದ ಚಿನ್ನ ಖರೀದಿಸಿದ್ದ ಸಕಾರಿಯಾ ಜೈನ್‌ ಮತ್ತು ಭರತ್‌ ಕುಮಾರ್‌ ಜೈನ್‌ ವಿರುದ್ಧ ಚಾರ್ಜ್​​ಶೀಟ್ ಸಲ್ಲಿಸಲಾಗಿದೆ. ಆರೋಪಪಟ್ಟಿಯು 2,200 ಪುಟಗಳನ್ನು ಹೊಂದಿದ್ದು, ಅದರಲ್ಲಿ 350 ಪುಟಗಳ ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಾಗಿದೆ. ಚಾರ್ಜ್ ಶೀಟ್ ನಲ್ಲಿ ಏನಿದೆ? 2025ರ ಮಾರ್ಚ್ 3ರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14…

Read More

ಶಿವಮೊಗ್ಗ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಎಣ್ಣೆ ಹೊಡೆಯುತ್ತಾ ಮದ್ಯದ ನಶೆಯಲ್ಲಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿರುವಾಗಲೇ ಶಿವಮೊಗ್ಗ ಜೈಲಿನಲ್ಲಿ ಬಾಳೆಗೊನೆ ಜೊತೆಗೆ ಗಾಂಜಾ ಮತ್ತು ಸಿಗರೇಟ್ ಗಳನ್ನು ಸಾಗಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಶಿವಮೊಗ್ಗದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಗುರುವಾರ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಜೈಲಿನ ಆವರಣದಲ್ಲಿ 293 ಗ್ರಾಂ ಒಣ ಗಾಂಜಾ ಹಾಗೂ 40 ಸಿಗರೇಟ್​​ಗಳು ಪತ್ತೆಯಾಗಿವೆ. ಬಾಳೆಗೊನೆ ಹಾಗೂ ಒಳ ಉಡುಪಿನಲ್ಲಿ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ನಿನ್ನೆ ಮಧ್ಯಾಹ್ನ ಆಟೋ ಚಾಲಕ ಕಾರಾಗೃಹದ ಮುಖ್ಯದ್ವಾರದ ಬಳಿ ಬಂದು, ಜೈಲಿನ ಕ್ಯಾಂಟೀನ್​​ನವರು ಆರ್ಡರ್ ಮಾಡಿದ್ದರು ಎಂದು ಹೇಳಿ ಮೂರು ಬಾಳೆಹಣ್ಣಿನ ಗೊನೆಗಳನ್ನು ಇಳಿಸಿ ವಾಪಸ್ ಹೋಗಿದ್ದ. ಈ ವೇಳೆ ಕಾರಾಗೃಹದ ಕಾವಲು ಉಸ್ತುವಾರಿಯಾದ ಕರ್ನಾಟಕ ರಾಜ್ಯ ಕೈಗಾರಿಕ ಭದ್ರತಾ ಪಡೆಯ ಇನ್ಸ್​ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಪ್ರೋಫೆಸನರಿ‌ ಪಿಎಸ್​​ಐ ಪ್ರಭು ಎಸ್. ಹಾಗೂ ಸಿಬ್ಬಂದಿಯಾದ…

Read More

ಉಡುಪಿ : ಈ ಸಾವು ಅನ್ನೋದು ಯಾವಾಗ ಹೇಗೆ ಬರುತ್ತೆ ಅಂತ ಹೇಳೋಕೆ ಆಗುವುದಿಲ್ಲ. ಇದೀಗ ಉಡುಪಿಯಲ್ಲಿ ಯಕ್ಷಗಾನ ಕಲಾವಿದರು ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ‘ಮಹಿಷಾಸುರ’ನ ವೇಷ ಕಳಚುತ್ತಿದ್ದಂತೆ ಹೃದಯಾಘಾತದಿಂದ ಯಕ್ಷಗಾನ ಕಲಾವಿದರು ಒಬ್ಬರು ಸಾವನಪ್ಪಿದ್ದಾರೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ. ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ ಪಾತ್ರ ನಿರ್ವಹಿಸಿದ್ದರು. ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಶೃಂಗೇರಿ ಸಮೀಪದ ನೆಮ್ಮಾರು ಗ್ರಾಮದ ಬುಕ್ಡಿಬೖಲಿನಲ್ಲಿ ಅಂತ್ಯಕ್ರಿಯೆ ಜರುಗಲಿದೆ. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದು, ತೀವ್ರ ಕುತೂಹಲ ಮೂಡಿಸಿತ್ತು. ಇದೀಗ ಸಿಎಂ ಮತ್ತು ಡಿಸಿಎಂ ಬಳಿಕ ಕಾಂಗ್ರೆಸ್ ನ ಕೆಲವು ಸಚಿವರು ಹಾಗೂ ಶಾಸಕರು ದಿಢೀರ್ ಎಂದು ದೆಹಲಿ ಪ್ರಯಾಣ ಬೆಳೆಸಿದ್ದಾರೆ. ಇವರ ಒಂದು ನಡೆ ರಾಜ್ಯ ಕಾಂಗ್ರೆಸ್ ನಲ್ಲಿ ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಹೌದು ರಾಜ್ಯ ಕಾಂಗ್ರೆಸ್ಸಿನ ಕೆಲವು ಸಚಿವರು ಹಾಗೂ ಶಾಸಕರು ದಿಢೀರ್ ಎಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ ಹಾಗು ಗುಬ್ಬಿ ಶ್ರೀನಿವಾಸ್ ದೆಹಲಿಗೆ ಪ್ರಯಾಣ ಬೆಳೆಸಿದ್ದು ಕೆ ಸಿ ವೇಣುಗೋಪಾಲ್ ಅವರ ಬೇಟೆಗೆ ನಾಳೆ ಸಮಯ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. ಹೈಕಮಾಂಡ್ ಬೇಟಿಗೆ ಸಚಿವರು ಮತ್ತು ಶಾಸಕರು ತೆರಳಿದ್ದಾರೆ.

Read More

ಚಾಮರಾಜನಗರ : ಸಿದ್ದರಾಮಯ್ಯ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿತು ಅಲ್ಲದೆ ಇದ್ದ ರಾಜ್ಯದಲ್ಲಿ ಸಚಿವ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇತ್ತು ಆದರೆ ಸಿಎಂ ಸಿದ್ದರಾಮಯ್ಯ ಇಂದು ಸದ್ಯಕ್ಕೆ ಸಚಿವ ಸಂಪುಟ ಪುನಾರಕ್ಷಣಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಇದು ವೇಳೆ ಶಾಸಕ ಕೆ ಎನ್ ರಾಜಣ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ ಅಂತ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ನಾನು ಮಂತ್ರಿ ಆಗುತ್ತೇನೋ ಇಲ್ಲವೋ ಅನ್ನೋದು ಗೊತ್ತಿಲ್ಲ. ಆದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಬೇಕು. ಜೆಡಿಎಸ್ ಗೆ ದೇವೇಗೌಡರು ಹಾಗೂ ಅವರ ಮಕ್ಕಳು ಹೇಗೆ ಮುಖ್ಯವೋ ಅದೇ ರೀತಿ ಬಿಜೆಪಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಗೆ ಮುಖ್ಯವೊ, ಹಾಗೆಯೇ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಹಾಗಾಗಿ ಈ ವೇಳೆ ಬದಲಾವಣೆ ಮಾತು ಏಕೆ? ಎಂದು ಶಾಸಕ ಕೆಎನ್ ರಾಜಣ್ಣ ಹೇಳಿಕೆ ನೀಡಿದರು.

Read More

ಚಿತ್ರದುರ್ಗ : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ ನ.26ಕ್ಕೆ ಆದೇಶ ಕಾಯ್ದಿರಿಸಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪ್ರಕರಣದ ವಾದ-ಪ್ರತಿವಾದವು ಪೂರ್ಣಗೊಂಡಿದೆ. ಇದೇ ನವೆಂಬರ್​ 26ರಂದು ಮಹತ್ವದ ತೀರ್ಪು ಪ್ರಕಟಿಸಲು ದಿನಾಂಕ ನಿಗದಿಪಡಿಸಿ ಇಲ್ಲಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಹೆಚ್ ಆರ್ ಜಗದೀಶ್ ಹೇಳಿದ್ದಾರೆ. ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸಂಬಂಧ ಸುದೀರ್ಘ ವಿಚಾರಣೆ ನಡೆದಿದೆ. ವಿಚಾರಣೆ ವೇಳೆ ಸಂತ್ರಸ್ತೆಯ ಪರ ಅಂತಿಮ ವಾದ ಮಂಡಿಸಲಾಗಿದ್ದು, ವಾದ ಆಲಿಸಿದ ನ್ಯಾಯಾಲಯ ನ.26ಕ್ಕೆ ಪ್ರಕರಣದ ತೀರ್ಪನ್ನು ಪ್ರಕಟಿಸುವುದಾಗಿ ತಿಳಿಸಿದೆ.

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನಡೆದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೋರ್ಟಿಗೆ ಟಾರ್ಸಿಟ್ ಹಾಗೂ ಸುಳ್ಳು ಸಾಕ್ಷಿ ವರದಿ ಸಲ್ಲಿಸಲಾಯಿತು ತನಿಕ ಅಧಿಕಾರಿ ಜಿತೇಂದ್ರ ಕುಮಾರ್ ನೇತೃತ್ವದಲ್ಲಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಲಾಯಿತು. ಹೌದು ಬೆಳ್ತಂಗಡಿ ಕೋರ್ಟಿಗೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಮತ್ತು ಸುಳ್ಳು ಸಾಕ್ಷಿ ವರದಿಯನ್ನು ಸಲ್ಲಿಸಿದೆ. ಸುಮಾರು 3923 ಪುಟಗಳ ವರದಿಯನ್ನು ಅಧಿಕಾರಿಗಳು ಸಲ್ಲಿ ಸಿದರು. ಸೆಕ್ಷನ್ 25 ರ ಅಡಿಯಲ್ಲಿ ಸುಳ್ಳು ಸಾಕ್ಷಿ ವರದಿ ಸಲ್ಲಿಸಿತು. , ಬೆಳ್ತಂಗಡಿಯ ಹೆಚ್ಚುವರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಷಡ್ಯಂತರದಲ್ಲಿ ಬುರುಡೆ ಚಿನ್ನಯ್ಯ ಸೇರಿದಂತೆ ಆರು ಮಂದಿ ಭಾಗಿಯಾಗಿದ್ದಾರೆ ಎಂದು ಎಸ್ಐಟಿ ಚಾರ್ಜ್ ಶೀಟ್ನಲ್ಲಿ ಉಲ್ಲೇಖ ಮಾಡಿದೆ. ಚೆನ್ನಯ್ಯ, ಮಹೇಶ್ ತಿಮ್ಮರೋಡಿ, ಗಿರೀಶ್ ಮಟಣ್ಣನವರ್, ಜಯಂತ್ ಟಿ, ವಿಠ್ಠಲ್ ಗೌಡ ಹಾಗೂ ಸುಜಾತಾ ಭಟ್ ಈ ರೀತಿ ಷಡ್ಯಂತರ ರೂಪಿಸಿದ್ದರು ಎಂದು ಅಧಿಕಾರಿಗಳು ಉಲ್ಲೇಖಿಸಿದ್ದು, 7 ಫೈಲ್ಗಳಲ್ಲಿ ಎಸ್ಐಟಿ ಅಧಿಕಾರಿಗಳು ವರದಿ ತಯಾರು…

Read More

ಚಾಮರಾಜನಗರ : ಜೆಡಿಎಸ್ ಪಕ್ಷದಲ್ಲಿ ಇದ್ದಿದ್ರೆ ನಾನು ಸಿಎಂ ಆಗುತ್ತಿರಲಿಲ್ಲ. ದೇವೇಗೌಡ ಮತ್ತು ಅವರ ಮಕ್ಕಳು ಸಿಎಂ ಆಗಲು ಬಿಡುತ್ತಿರಲಿಲ್ಲ ಈಗ ಜಿ ಟಿ ದೇವೇಗೌಡ ಜೆಡಿಎಸ್ ನಲ್ಲೇ ಇದ್ದರೂ ಕೂಡ ನಮ್ಮ ಪರವಾಗಿ ಇದ್ದಾರೆ. ನಮ್ಮ ಸರ್ಕಾರ ಎರಡೂವರೆ ವರ್ಷ ಆಗಿದೆ ಕರ್ನಾಟಕದ ಜನರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ ನಾನು ಯಾವುದೇ ಜಾತಿ ಅಥವಾ ಮತ ಪಂಥದ ಪರವಾಗಿ ಇಲ್ಲ. ಎಲ್ಲರ ಪರವಾಗಿ ಕೆಲಸ ಮಾಡಿದ್ದೇನೆ ಮುಂದೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರದ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 72ನೇ ಸಹಕಾರ ಸಪ್ತಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ಸಿಗೆ ಬಂದ ಮೇಲೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಜೆಡಿಎಸ್ ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಆಗುತ್ತಿರಲಿಲ್ಲ 2006 ವರೆಗೂ ಜಿ ಟಿ ದೇವೇಗೌಡ ಹಾಗೂ ನಾನು ಒಟ್ಟಿಗೆ ಇದ್ದೆವು ಆಗ ಜೆಡಿಎಸ್ ಪಕ್ಷದಿಂದ ನನ್ನನ್ನು ತೆಗೆದು ಹಾಕಿದರು. ಆದರೆ ಜಿಟಿ ದೇವೇಗೌಡ ಜೆಡಿಎಸ್…

Read More