Author: kannadanewsnow05

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಹಲವು ದಿನಗಳಿಂದ ಭರ್ಜರಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದೀಗ ವಿಶ್ರಾಂತಿಗಾಗಿ ಅವರು ಊಟಿಗೆ ತೆರಳಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಭಾಷಣದಲ್ಲಿ ಹೇಳಿರುವ ಕೆಲವು ಅಂಶಗಳನ್ನು ಟ್ವೀಟ್ ಮುಖಾಂತರ ತಿಳಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ.ಈ ಸುಳ್ಳುಗಳ ಸರಮಾಲೆ ಇಲ್ಲಿಗೆ ನಿಲ್ಲಲಾರದು, ಮುಂದುವರಿಯಲಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವ ಪ್ರಧಾನಮಂತ್ರಿಯೂ ಇಷ್ಟೊಂದು ನಿರ್ಲಜ್ಜವಾಗಿ ಈ ರೀತಿ ಹಸಿಹಸಿ ಸುಳ್ಳುಗಳನ್ನು ಹೇಳಿರಲಾರರು. ಯಾರೂ ಕೂಡಾ ಪ್ರಧಾನಮಂತ್ರಿ ಕುರ್ಚಿಯ ಘನತೆಯನ್ನು ಈ ರೀತಿ ಮಣ್ಣು ಪಾಲು ಮಾಡಿರಲಾರರು.ಮತದಾನದ ದಿನ ದೇಶದ ಜನರಿಗೆ ಸತ್ಯ-ಸುಳ್ಳುಗಳನ್ನು ಅರಿತುಕೊಳ್ಳುವ ಸದ್ಬುದ್ದಿಯನ್ನು ದೇವರು ಕರುಣಿಸಲಿ ಎಂದು…

Read More

ಶಿವಮೊಗ್ಗ : ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ. ಮಾರಕಸ್ತ್ರಗಳಿಂದ ಕೊಚ್ಚಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಮಹಮ್ಮದ್ ಗೌಸ್ (30) ಶೋಯಬ್ (35) ಎನ್ನುವ ವ್ಯಕ್ತಿಗಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೋಟೆ ಠಾಣೆಯ ಪೊಲೀಸರು ಬೇಟೆ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಹಾಸನ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಇರುವ ಪೆನ್ ಡ್ರೈವ್ ಅನ್ನು ಹಂಚಿದ ಆರೋಪದ ಅಡಿಯಲ್ಲಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಇದೀಗ ಹಾಸನ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದಡಿ ವಕೀಲ ಪೂರ್ಣಚಂದ್ರ ಅವರು ಹಾಸನದ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಆರೋಪಿಗಳಾದ ಕಾರ್ತಿಕ್, ನವೀನ್, ಚೇತನ್, ಪುಟ್ಟರಾಜ್ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಈ ಜಾಮೀನು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಹಾಸನ ಜಿಲ್ಲಾ ಜಿಲ್ಲಾ 3 ನೇ ಅಧಿಕ ಸತ್ರ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿಬಂದಿದೆ.

Read More

ಬೆಂಗಳೂರು : ಪ್ರಜ್ವಲ್ ರೇವಣ್ಣ ಶ್ರೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ರೋಚಕ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಗಂಭೀರವಾದ ಆರೋಪ ಮಾಡಿದ್ದು ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಪತ್ನಿಯನ್ನು ಕೂಡ ಕಿಡ್ನ್ಯಾಪ್ ಮಾಡಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತಿಕ್ ಪತ್ನಿ ಮೇಲೆ ಹಲ್ಲೆ ನಡೆದಾಗ ನಮಗೆ ನ್ಯಾಯ ಸಿಗಲಿಲ್ಲ. ಈ ಹಿಂದೆ ಕಾರ್ತಿಕ್ ಗೌಡ ಪತ್ನಿಯನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಆಗ ನಾನೇ ಖುದ್ದು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದೆ ಎಂದು ತಿಳಿಸಿದರು. ಮೂರು ತಿಂಗಳ ಹಿಂದೆ ಪತ್ರ ಬರೆದಿದ್ದೆ ಆದರೂ ನ್ಯಾಯ ಸಿಗಲಿಲ್ಲ. ಕಾಂಗ್ರೆಸ್ ನಾಯಕರನ್ನೇ ಮಹಿಳಾ ಆಯೋಗದ ಅಧ್ಯಕ್ಷ ಮಾಡಿದ್ದಾರೆ.ಮಹಿಳಾ ಆಯೋಗದ ಅಧ್ಯಕ್ಷೆ ಪತ್ರವನ್ನು ಸಿಎಂ ಪುರಸ್ಕರಿಸುತ್ತಾರೆ ಎಂದು ಬೆಂಗಳೂರಿನಲ್ಲಿ ದೇವರಾಜೇಗೌಡ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬೆತ್ತಲೆ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು.ಅದು ಕೂಡ ರಾಜಕೀಯ ಷಡ್ಯಂತ್ರವಾಗಿತ್ತು. ಈಗಾಗಲೇ ನಾನು…

Read More

ಬೆಂಗಳೂರು : ಬೆಂಗಳೂರಲ್ಲಿ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಇದೀಗ ವರುಣ ತಂಪೆರೆದಿದ್ದಾನೆ. ಮೊನ್ನೆಯಷ್ಟೇ ಸಾಕಷ್ಟು ಮಳೆಯಾಗಿ ಅವಾಂತರ ಸೃಷ್ಟಿಯಾಗಿದ್ದು ಇದೀಗ ಬೆಂಗಳೂರಿನಲ್ಲಿ ಟೌನ್ ಹಾಲ್ ಬಳಿ ಭಾರಿ ಮಳೆಯಾಗಿದ್ದು ಸಂಜೆ ಆಫೀಸ್ ಮುಗಿಸಿಕೊಂಡು ಹೋಗುವಂತಹ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಹೌದು ಇಂದು ಬೆಂಗಳೂರಿನಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ಹೊರಟ ವಾಹನ ಸವಾರರು ರಸ್ತೆಯಲ್ಲಿ ಧಾರಾಕಾರ ಮಳೆಯಿಂದ ಪರದಾಟ ನಡೆಸಿದರು. ಕಾರ್ಪೊರೇಷನ್ ವಿಧಾನಸೌಧ ಸುತ್ತಲೂ ಧಾರಾಕಾರ ಮಳೆಯಾಗಿದೆ. ಭಾರಿ ಮಳೆಯಾಗಿದ್ದರಿಂದ ಕಾರ್ಪೊರೇಷನ್ ಸುತ್ತಮುತ್ತಲು ಸಂಚಾರ ದಟ್ಟಣೆ ಉಂಟಾಗಿದೆ. ಮಡಿವಾಳ ಅಡಗೋಡಿಯಲ್ಲಿ ತುಂತುರು ಮಳೆಯಾಗಿದೆ.11ನೇ ತಾರೀಖಿನವರೆಗೆ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆಯು ಇಂದು ಅಥವಾ ನಾಳೆ ಎಲ್ಲೋ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎಂ ಜಿ ರಸ್ತೆ ಗುಟ್ಟಹಳ್ಳಿ ಕೆ ಆರ್ ಸರ್ಕಲ್ ಯಲಹಂಕ ಪರೀಕ್ಷೆ ಮಂಡ್ ಟೌನ್ ಮಡಿವಾಳ ಸದಾಶಿವನಗರ್ ಹೆಬ್ಬಾಳ ಅರಮನೆ ಮೈದಾನ ಮಲ್ಲೇಶ್ವರಂ…

Read More

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷವನ್ನು ಮುಗಿಸಲು ಬಿಜೆಪಿ ಏನು ಬೇಕು ಅದನ್ನು ಮಾಡುತ್ತಿದೆ ಎಂದು ಗಂಭೀರವಾದ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ,ಸಂತ್ರಸ್ತೆಯರ ಮಾನಹರಣದ ಜೊತೆಗೆ ನ್ಯಾಯಾಹರಣ ಆಗುತ್ತಿದೆ. ಆರೋಪಿ ಹತ್ತಿರ ಕೆಲಸ ಮಾಡುತ್ತಿದ್ದವರು ವಿಡಿಯೋ ನೀಡಿದ್ದಾರೆ. ವಿಡಿಯೋ ತೆಗೆದುಕೊಂಡು ಹೋಗಿ ವಕೀಲರಿಗೆ ನೀಡಿದ್ದಾರೆ ಆ ವಕೀಲ ಕಾನೂನು ಬಗ್ಗೆ ಮಾತನಾಡುತ್ತಿದ್ದಾರೆ ಅವರು ಡಿಜಿ ಮತ್ತು ಐಜಿಪಿ ಹೈಕೋರ್ಟ್ ಸಿಜೆಗೆ ನೀಡಬಹುದಿತ್ತಲ್ಲ? ಎಂದರು. ಇಷ್ಟೊಂದು ದೊಡ್ಡ ಕ್ರೈಂ ಆದರೂ ಏಕೆ ಬ್ಲಾಕ್ ಮೇಲ್ ಮಾಡ್ಕೊಂಡು ಕುಳಿತಿದ್ದರು? ಈ ಕುರಿತಂತೆ ಮಾಜಿ ಸಿಎಂ ಎಲ್‌ಡಿ ಕುಮಾರಸ್ವಾಮಿ ಹಾಗೂ ಆ ವಕೀಲ ಏನು ಚರ್ಚಿಸಿದ್ದಾರೋ ಅದರ ಕುರಿತಂತೆ ಹಾಸನಾಂಬ ದೇವಸ್ಥಾನಕ್ಕೆ ಬಂದು ಪ್ರಮಾಣವನ್ನು ಮಾಡಲಿ. ಹೈಕೋರ್ಟ್ ಜಡ್ಜ್ ಗೆ ನೀಡಿದ್ದರೆ ವಿಡಿಯೋ ವೈರಲ್ ಆಗುತ್ತಿತ್ತ?…

Read More

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶೀಲಾ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಿದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆ ಮರೆತಿದ್ದೇವೆ ಅನಿಸುತ್ತದೆ. ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಿದು ಎಂದು ಕೆಪಿಸಿಸಿ ಕಚೇರಿಯಲ್ಲಿ ಸಚಿವ ಕೃಷ್ಣಭೈರೇಗೌಡ ಹೇಳಿಕೆ ನೀಡಿದರು. ಇಷ್ಟೊಂದು ಹಿಂದೂ ಮಹಿಳೆಯರ ಮಾಂಗಲ್ಯದೋಚಿರುವ ಇದಕ್ಕಿಂತ ಇನ್ನೊಂದು ದೊಡ್ಡ ಪ್ರಕರಣ ತೋರಿಸಿ ನೋಡೋಣ? ಎಂದರು. ಮಾನಹರಣ, ಶೀಲಹರಣ, ಮಾಡಿರುವ ಹಗರಣ ಇದು ಯಾರ ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲೇಬೇಕು.ಮಾನಹರಣ ಮಾಡಿದ್ದು ಅಪರಾಧವಲ್ಲ ಎಂಬ ಚರ್ಚೆ ಆಗುತ್ತಿದೆ. ಮಾಂಗಲ್ಯದೋಚಿದ್ದು ಯಾರೆಂದು ಚರ್ಚೆ ಆಗಬೇಕಲ್ಲವಾ? ಚರ್ಚೆ ದಿಕ್ಕು ನೋಡಿದರೆ ಪ್ರಕರಣ ಮುಖ್ಯ ಹಾಕುವ ಷಡ್ಯಂತರ ನಡೆಯುತ್ತಿದೆ ಎಂದು ತಿಳಿಸಿದರು.

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎಚ್‌ಡಿ ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಆರೋಪ ಮಾಡಿದ್ದರು ಇದರ ಹಿಂದೆ ಡಿಕೆ ಶಿವ ಅವರು ಕೈವಾಡ ಇದೆ ಎಂದು ತಿಳಿಸಿದರು ಇದೀಗ ಟ್ವೀಟ್ ನಲ್ಲಿ ಡಿಕೆ ಶಿವಕುಮಾರ್ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದು,ಪ್ರಜ್ವಲ್ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿನೆ ಎಂದು ತಿಳಿಸಿದ್ದಾರೆ. ಟ್ವೀಟ್ ನಲ್ಲಿ ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಈ ಕೇಸಿನ ಹಿಂದೆ ಇರುವುದು ಬ್ಲಾಕ್‌ ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌…

Read More

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಸ್ಲಿಮರಂತೆ ಬಿಂಬಿಸಿ ಸಮುದಾಯಗಳಿಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡ, ಬಿ ವೈ ವಿಜಯೇಂದ್ರ ಹಾಗೂ ಅಮಿತ್ ಮಾಳವಿಯಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇದೀಗ ಟ್ವೀಟ್ ನಲ್ಲಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಕುರಿತಂತೆ ಈ ರೀತಿ ಪೋಸ್ಟ್ ಮಾಡಿದ ಆರೋಪದ ಹಿನ್ನೆಲೆ ಕೆಪಿಸಿಸಿ ಕಾನೂನು ಘಟಕದ ರಮೇಶ್ ಬಾಬು ದೂರು ಸಲ್ಲಿಸಿದ್ದರು. ಹೀಗಾಗಿ ಇದೀಗ ಬಿವೈ ವಿಜಯೇಂದ್ರಗೆ ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡ, ಅಮಿತ್ ಮಾಳವಿಯ ಹಾಗೂ ವಿಜಯೇಂದ್ರ ವಿರುದ್ಧ FIR ದಾಖಲಾಗಿತ್ತು.ಟ್ವಿಟರ್ ನಲ್ಲಿ ಸಮುದಾಯಗಳಿಗೆ ಸಂಬಂಧಿಸಿದ ಪೋಸ್ಟ್ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಡಿಯೋ ಪೋಸ್ಟ್ ಮಾಡಿತ್ತು.…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದಾರೆ, ಅವರು ಬರುವವರೆಗೂ ತನಿಖೆಯನ್ನು ತೋರಿತಾ ಗತಿಯಲ್ಲಿ ಮಾಡುವುದು ಕಷ್ಟ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ ಐ ಟಿ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.ಪ್ರಜ್ವಲ್ ಅವರನ್ನು ಕರೆತರಲು ಎಸ್ಐಟಿ ತಂಡ ಸಿಬಿಐ ನೆರವು ಕೋರಿದೆ. ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವಂತೆ ಎಸ್ಐಟಿ ಸಿಬಿಐಗೆ ಮನವಿ ಮಾಡಿದೆ. ಪ್ರಜ್ವಲ್ ವಾಪಸ್ ಬರೊವರೆಗೂ ತ್ವರಿತಗತಿ ವಿಚಾರಣೆ ಕಷ್ಟ ಎಂದು ತಿಳಿಸಿದರು. ಇನ್ನು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಿ ಪರಮೇಶ್ವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ HD ರೇವಣ್ಣ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ…

Read More