Author: kannadanewsnow05

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲು ಪಾಲಾಗಿದ್ದು ಇಂದು ಅವರನ್ನು ನಟ ವಿನೋದ್ ಪ್ರಭಾಕರ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ದರ್ಶನ್ ಭೇಟಿಗೆ ಹೋದಾಗ ಸಾಕಷ್ಟು ಮಂಕಾಗಿದ್ದರು ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಅವರನ್ನು ಭೇಟಿ ಆದಾಗ ಏನ್ ಟೈಗರ್ ಅಂದ್ರು ನನ್ನ ಬಳಿ ಮಾತನಾಡಿದರು ಅಷ್ಟೇ. ಅವರ ಮುಖ ನೋಡಿ ಶೇಕ್ ಹ್ಯಾಂಡ್ ಮಾಡಿ ಬಂದೆ ಎಂದು ಭೇಟಿಯ ಬಳಿಕ ವಿನೋದ್ ಪ್ರಭಾಕರ್ ಅವರು ಹೇಳಿಕೆ ನೀಡಿದರು. ರೇಣುಕಾ ಸ್ವಾಮಿ ಕುಟುಂಬ ಕಣ್ಣೀರಿನಲ್ಲಿ ಕೈ ತೊಳಿತ ಇದೆ ಇತ್ತ ದರ್ಶನ ಕುಟುಂಬದವರು ಕೂಡ ನೋವಿನಲ್ಲಿ ಇದ್ದಾರೆ. ಯಾರಿಗೆ ಸಾಂತ್ವನ ಹೇಳ್ಬೇಕು ಅಂತ ತಿಳಿಯಲಿಲ್ಲ ದರ್ಶನ್ ಬೇಟಿಗೆ ಹೋದಾಗ ಸಾಕಷ್ಟು ಮಂಕಾಗಿದ್ದರು ಎಂದರು. ರೇಣುಕಾ ಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕು ಅವರ ಕುಟುಂಬಕ್ಕೆ, ಅವರ ತಂದೆಯಾಗಲಿ ತಾಯಿಯಾಗಲಿ ಅವರ ಹೆಂಡತಿ ಆಗಿರಬಹುದು, ಎಲ್ಲರಿಗೂ ಭಗವಂತ…

Read More

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಮಾಜಿ ಸಂಸದ ಡಿಕೆ ಸುರೇಶ್ ಈ ಬಾರಿ ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್ ವಿರುದ್ಧ ಭಾರಿ ಅಂತರದಿಂದ ಸೋಲು ಅನುಭವಿಸಿದ್ದಾರೆ ಇದೀಗ ಚನ್ನಪಟ್ಟಣ ಉಪಚುನಾವಣೆ ಕುರಿತು ಮಾತನಾಡಿದ್ದು ನಾನು ಈ ಚುನಾವಣೆಯಲ್ಲಿ ಕೇವಲ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜನ ಯಾರನ್ನು ಬಯಸುತ್ತಾರೆ ಅವರೇ ಅಭ್ಯರ್ಥಿ. ರಾಮನಗರ ನಮ್ಮ ಜಿಲ್ಲೆ ಪಕ್ಷದ ಅಧ್ಯಕ್ಷ ಡಿಸಿಎಂ ಆಗಿ ಡಿಕೆಗೆ ಜವಾಬ್ದಾರಿ ಇದೆ. ಉಪಚುನಾವಣೆ ಬರುವುದರಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಶಾಸಕರಿಲ್ಲ. ಹಾಗಾಗಿ ಕಾರ್ಯಕರ್ತರು ಸಾಕಷ್ಟು ಇದ್ದಾರೆ ಹಾಗಾಗಿ ಡಿಕೆ ಶಿವಕುಮಾರ್ ಚೆನ್ನಪಟ್ಟಣಕ್ಕೆ ಭೇಟಿ ಕೊಡುತ್ತಿದ್ದಾರೆ ಎಂದು ತಿಳಿಸಿದರು. ಜನ ಬಯಸಿದರೆ ನಾನೇ ಸ್ಪರ್ಧೆ ಮಾಡುತ್ತೇನೆ ಎಂಬ ಡಿಕೆ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಕ್ಷೇತ್ರದ ಜನ ಏನು ತೀರ್ಮಾನ ಮಾಡುತ್ತಾರೆ ಅದಕ್ಕೆ ತಲೆಬಾಗುತ್ತೇವೆ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ನನ್ನನ್ನು ಜನರು…

Read More

ಬೆಂಗಳೂರು : ಇಂದು ಬೆಂಗಳೂರು ಮೈಸೂರು ಸೇರಿದಂತೆ ಸುಮಾರು 11 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಪ್ರತಿಷ್ಠಿತ ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಬೆಂಗಳೂರು ಹಾಗೂ ಮೈಸೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪ್ರತಿಷ್ಠಿತ ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಯು ಬಿ ಸಿಟಿಯ ಕಿಂಗ್ ಫಿಷರ್ ಟವರ್, ಮಲ್ಲೇಶ್ವರಂ, ಬಸವೇಶ್ವರ ನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳಲ್ಲಿ ಸೇರಿದಂತೆ 11 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಡ್ಯ : ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ ಕಾಂಗ್ರೆಸ್ ಸರ್ಕಾರ ಮಧ್ಯದ ದರ ಏರಿಕೆ ಮಾಡಿದ್ದಾಯ್ತು ನೋಂದಣಿ ಮತ್ತು ಮಧುರಂಕ ಶುಲ್ಕ ಹೆಚ್ಚಳ ಮಾಡಿದ್ದಾಯಿತು ಐದು ಗ್ಯಾರಂಟಿ ಯೋಜನೆಗಾಗಿ ತೈಲದ ಹೆಚ್ಚಳ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲಬೆಲೆ ಏರಿಕೆಯಿಂದ ಟ್ರಾನ್ಸ್ಪೋರ್ಟ್ ಗೆ ಹೊಡೆದ ಬೀಳುತ್ತದೆ. ಬಡವರು ರೈತರಿಗೆ ತೊಂದರೆಯಾಗುತ್ತದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟು ಹಣದೊಚ್ಚಿದ್ದಾರೋ? ಎಷ್ಟು ದಿನ ಈ ಆಟ ಆಡುತ್ತಾರೋ ಈ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದರು. ಮೋದಿ ಎರಡು ಇಲಾಖೆ ಕೊಟ್ಟಿದ್ದಾರೆ. ಹಾಗಾಗಿ ನನಗೆ ದೊಡ್ಡ ಸವಾಲು ಇದೆ. ಎರಡು ಇಲಾಖೆ ಅಧಿಕಾರಿಗಳ ರಿವ್ಯೂ ಮೀಟಿಂಗ್ ಮಾಡಿದ್ದೇನೆ. ಪ್ರಥಮ ಸಹಿ ರಾಜ್ಯದ ಉದ್ಯೋಗದ ಸಹಿ. ಮುಂದಿನ 50 ವರ್ಷಗಳ ಕಾಲ ಅದಿರು ಉತ್ಪಾದನೆ ನಡೆಯುತ್ತದೆ…

Read More

ದಾವಣಗೆರೆ : ಅವರೆಲ್ಲರೂ ಗೋವಾಕೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಕಂಟೈನರ್ ಲಾರಿಗೆ ವೇಗವಾಗಿ ಬಂದಂತಹ ಕಾರೊಂದು ಅಪ್ಪಳಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ. ಘಟನೆಯಲ್ಲಿ ಪ್ರಜ್ವಲ್ ರೆಡ್ಡಿ, ಮಕ್ಕಳಾದ ಹರ್ಷಿತಾ, ನೋಹನ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ವಿಜಯ್ ರೆಡ್ಡಿ ಎನ್ನುವವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಬೆಂಗಳೂರು ಕಡೆಯಿಂದ ದಾವಣಗೆರೆ ಕಡೆಗೆ ಕಂಟೈನರ್ ಲಾರಿ ಬರುತ್ತಿತ್ತು. ಇತ್ತ ಬೆಂಗಳೂರಿಂದ ಗೋವಕ್ಕೆಂದು ಫಾರ್ಚುನರ್​ ಕಾರೊಂದು ಹೋಗುತ್ತಿತ್ತು. ಈ ವೇಳೆ ಲಾರಿಯ ಟೈರ್​ ಬರ್ಸ್ಟ್​ ಆಗಿ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಎಂಟು ಜನರಲ್ಲಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಶಿಲ್ಪಾ, ಸ್ವರ್ಣ ಜಾರ್ಜ್, ಮಧುಮಿತ, ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಬೆಂಗಳೂರಿನ ತಾಣಸಂದ್ರ ನಿವಾಸಿಗಳು…

Read More

ಬೆಂಗಳೂರು : ಪೆಟ್ರೋಲ್ ಡೀಸೆಲ್ ಏರಿಕೆಯಾಗುತ್ತಿದ್ದಂತೆ ಬಿಜೆಪಿ 17 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದೆ. ಇದರ ಮಧ್ಯ, ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪೆಟ್ರೋಲ್, ಡೀಸೆಲ್ ದರ ಕಡಿಮೆಯಿದೆ. ಅಲ್ಲದೆ ‘ಗ್ಯಾರಂಟಿ’ ಯೋಜನೆಗಳಿಗೆ ಹಣ ಬೇಡವೇ? ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು. ಇಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿದ ಅವರು, ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ದರ ಇದೆ. ಇತರ ರಾಜ್ಯಗಳಿಗಿಂತ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆಆದಾಯ ಕಡಿಮೆಯಾಗುತ್ತಿದೆ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ. ಹೀಗಾಗಿ ಅನವಶ್ಯಕವಾಗಿ ಹೆಚ್ಚಿಗೆ ಬೆಲೆ ಏರಿಕೆ ಮಾಡಲಾಗಿದೆ ಎಂದರು. ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಕೊಡುತ್ತಿದ್ದೇವೆ. ನಾವು ಫೈನಾನ್ಶಿಯಲ್ ಮೊಬಲೈಸೇಷನ್ ಮಾಡಲೇಬೇಕು. ಹಾಗಾಗಿ ಇತರ ರಾಜ್ಯಗಳ ಬೆಲೆ ತುಲನೆ ಮಾಡಿ ಏರಿಕೆ ಮಾಡಲಾಗಿದೆ.ನಾವು ತೈಲ ಬೆಲೆ ಏರಿಕೆ…

Read More

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದ್ದಂತೆ, ಬಿಜೆಪಿಯು ಜೂನ್ 17ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸದಸ್ಯೆ ಮಾಡಿಕೊಂಡಿದೆ ಇನ್ನೊಂದೆಡೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಾಗ್ದಾಳಿ ನಡೆಸಿದ್ದು, ತನ್ನ ಗ್ಯಾರಂಟಿ/ವಾರಂಟಿಗಳೆಲ್ಲ ಕೆಲಸ ಮಾಡದೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಸರ್ಕಾರ ಈಗ ಜನಸಾಮಾನ್ಯರ ಮೇಲೆ ಬರೆ ಹಾಕುವ ಕೆಲಸ ಮಾಡಿದೆ. ಪೆಟ್ರೋಲ್ ಹೆಚ್ಚಳದಿಂದ ಬರಿ ಜನಸಾಮಾನ್ಯನಿಗೆ ತೊಂದರೆ ಆಗುವುದಿಲ್ಲ, ಇದರಿಂದ ಹಣದುಬ್ಬರ, ಗ್ರಾಹಕ ಬೆಲೆ ಸೂಚ್ಯಂಕ (ಕನ್ಸೂಮರ್ ಪ್ರೈಸ್ ಇಂಡೆಕ್ಸ್) ಕೂಡ ಹೆಚ್ಚಾಗುತ್ತದೆ ಎಂಬ ಸಾಮಾನ್ಯ ಆರ್ಥಿಕ ಜ್ಞಾನವಿಲ್ಲರಿವುದು ನಿಜಕ್ಕೂ ಆಶ್ಚರ್ಯಕರ. ಇಷ್ಟೇ ಅಲ್ಲದೆ ಸಾರಿಗೆ ಇಲಾಖೆಯ ವೆಚ್ಚ ಸೇರಿದಂತೆ, ಉತ್ಪಾದನಾ ವೆಚ್ಚ ಕೂಡ ಹೆಚ್ಚಾಗುತ್ತದೆ ಮತ್ತು ಗ್ರಾಹಕರ ಖರೀದಿ ಸಾಮರ್ಥ್ಯ ಕಡಿಮೆಯಾಗುತ್ತದೆ, ಇದರಿಂದ ಜನರಿಗೆ/ಸರ್ಕಾರಕ್ಕೆ ತೊಂದರೆಯಾಗುತ್ತದೆ ಎಂಬ ಅಂಶ ಅತಿ ಹೆಚ್ಚು ಬಜೆಟ್ ಮಂಡಿಸಿರುವ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ…

Read More

ಕೊಪ್ಪಳ : ಲೈನ್ ಮ್ಯಾನ್ ನಿರ್ಲಕ್ಷತನದಿಂದ ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಹರಿದು ಕೂಲಿ ಕಾರ್ಮಿಕನೊಬ್ಬ ವಿದ್ಯುತ್ ಕಂಬದ ಮೇಲೇನೆ ಪ್ರಾಣ ಬಿಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸೂರು ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಕೂಲಿ ಕಾರ್ಮಿಕನನ್ನು ಬಸವರಾಜ್ ಭಂಡಾರಿ (55) ಎಂದು ಹೇಳಲಾಗುತ್ತಿದೆ. ಮೃತನು ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಎಲ್‌ಸಿ ಪಡೆದು ಕೆಲಸ ವಿದ್ಯುತ್ ಕಂಬವೇರಿ ರಿಪೇರಿ ಮಾಡುತ್ತಿದ್ದಾಗ ನಡೆದ ದುರ್ಘಟನೆ ವಿದ್ಯುತ್ ಹರಿದ ಪರಿಣಾಮ ಕಂಬದ ಮೇಲೆ ಪ್ರಾಣಬಿಟ್ಟಿದ್ದಾನೆ. ಘಟನೆಗೆ ಲೈನ್ ಮ್ಯಾನ್ ಆಗಿರುವ ಶೇಕ್ ಹಸನ್ ನಿರ್ಲಕ್ಷತನವೇ ಕಾರಣ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ. ತಾನು ಮಾಡಬೇಕಿದ್ದ ಕೆಲಸವನ್ನು ಕೂಲಿ ಕಾರ್ಮಿಕನಾಗಿದ್ದ ಬಸವರಾಜ್ ಭಂಡಾರಿಯನ್ನು ಕಂಬ ಹತ್ತಿಸಿದ್ದ ಲೈನ್‌ಮ್ಯಾನ್. ವಿದ್ಯುತ್ ರಿಪೇರಿ ಮಾಡುವಾಗ ಯಾವುದೇ ಸುರಕ್ಷಿತ ಸಲಕರಣ ಇಲ್ಲದೆ ಕಂಬವೇರಿದ್ದ. ಹಾಗಾಗಿ ಆತನ ಸವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಕುರಿತಂತೆ ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌ ಅವರನ್ನು ಕರ್ನಾಟಕ ರಾಜ್ಯ ಅರಣ್ಯ ವನ್ಯಜೀವಿ ರಾಯಭಾರಿ ಹುದ್ದೆಯಿಂದ ವಜಾ ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಮಾತನಾಡಿದ್ದು, ನಮ್ಮ ಇಲಾಖೆಯಲ್ಲಿ ಯಾರು ರಾಯಭಾರಿಗಳಿಲ್ಲ ಎಂದು ತಿಳಿಸಿದರು. ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ ಬಳಿಕ ನಮ್ಮ ರಾಜ್ಯದ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ವಿಚಾರವಾಗಿ ಮಾತನಾಡಿದ ಅವರು, ಆಂಧ್ರಪ್ರದೇಶದವರು ನಮ್ಮ ರಾಜ್ಯದ ಆನೆಗಳನ್ನು ಕೇಳಿದ್ದಾರೆ ಅಷ್ಟೇ. ಆದರೆ ಯಾವುದೇ ಕಾರಣಕ್ಕೂ ದಸರಾ ಆನೆಗಳನ್ನು ಕಳುಹಿಸಿಕೊಡಲು ಆಗಲ್ಲ.ದಸರಾ ಆನೆಗಳು ನಮ್ಮ ಅಸ್ಮಿತೆ. ಇತರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇನ್ನೂ ರಾಜ್ಯದಲ್ಲಿ ಇತ್ತೀಚಿಗೆ ವಿದ್ಯುತ್ ಸ್ಪರ್ಶಸಿ ಆನೆಗಳ ದುರಂತ ಸಾವು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾಯುತ್ತಿರುವುದು ದುಃಖದ ಸಂಗತಿ. ಆನೆಗಳ ಸಾವಿನ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ…

Read More

ಉತ್ತರಾಖಂಡ : ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 26 ಜನರಿದ್ದ ಟೆಂಪೋ ಟ್ರಾವೆಲರ್ ಒಂದು ಅಲಕನಂದ ನದಿಗೆ ಉರುಳಿ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 14 ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಉತ್ತರಖಾಂಡಿನ ರುದ್ರಪ್ರಯಾಗದ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಅಲಕನಂದ ನದಿಗೆ ಟಿಟಿ ಉರುಳಿ ಬಿದ್ದು 14 ಪ್ರಯಾಣಿಕರ ಸಾವನ್ನಾಪ್ಪಿದ್ದರೆ. ಉತ್ತರಖಾಂಡಿನ ರುದ್ರ ಪ್ರಯಾಗದಲ್ಲಿ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ. ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ 14 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಟೆಂಪೋ ಟ್ರಾವೆಲರ್ ನಲ್ಲಿ 26ಪ್ರಯಾಣಿಕರು ಎಂದು ತಿಳಿದುಬಂದಿದೆ.

Read More