Author: kannadanewsnow05

ಶಿವಮೊಗ್ಗ : ಕ್ಯಾನ್ಸರ್ ತೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯ ಸೇರಿದಂತೆ ಅವರಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಶೀಘ್ರದಲ್ಲಿ ಕ್ಯಾನ್ಸರ್ ಪೀಡಿತ ವಸತಿ ಶಾಲೆ ಆರಂಭಿಸುವ ಯೋಜನೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಯಾನ್ಸರ್ ಪೀಡಿತ ವಸತಿ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತದೆ. ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲು ‌ಮಿನಿ ಬಸ್ ಹಾಗೂ ಕಾರಿನ ಸೌಲಭ್ಯ ಕಲ್ಪಿಸಲಾಗುತ್ತದೆ. ಆಟ,ಪಾಠಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಎಲ್ಲ ಮಕ್ಕಳಂತೆ ಅವರು ಗೌರವಯುತವಾಗಿ ಬದುಕಬೇಕು ಎಂಬುದು ನನ್ನ ಉದ್ದೇಶ ಎಂದರು. ಈಗಾಗಲೇ ಖಾಸಗಿ ಎನ್‌ಜಿಓ ಒಂದು ಜೊತೆ ಸಭೆ ನಡೆಸಿ ಯೋಜನೆ ರೂಪಿಸಿದ್ದೇನೆ. ಕಿದ್ವಾಯಿ ಆಸ್ಪತ್ರೆ ಸಮೀಪದಲ್ಲಿ ಖಾಸಗಿ ಕಟ್ಟಡವನ್ನು ನೋಡಲಾಗಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆದುಕೊಂಡು ಜುಲೈ ಅಂತ್ಯದೊಳಗೆ ಪ್ರಾರಂಭಿಸಲಾಗುವುದು. ಎನ್‌ಜಿಓ ಅವರ ಮಾಹಿತಿ ಪ್ರಕಾರ ಈಗಾಗಲೇ 1,500 ಸಾವಿರ ಮಕ್ಕಳನ್ನು ಗುರುತಿಸಿದ್ದಾರೆ. ಇದಕ್ಕೂ ಹೆಚ್ಚು…

Read More

ಮಂಗಳೂರು : ಕಳೆದ ತಿಂಗಳು ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನ ಬರ್ಬರ ಕೊಲೆಯಾಗಿತ್ತು. ಹೀಗೆ ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಇಬ್ಬರ ಕೊಲೆಯಾಗಿದೆ. ಇನ್ನು ಕರಾವಳಿ ಭಾಗದಲ್ಲಿ ಕೋಮು ಸಂಘರ್ಷ ತಡೆಗಟ್ಟಲು ನಿನ್ನೆ ತಾನೇ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಗೆ ಚಾಲನೆ ನೀಡಿದ್ದಾರೆ. ಇಷ್ಟೆಲ್ಲಾ ಆದರೂ ಕೂಡ ಇದೀಗ ಮಂಗಳೂರಿನಲ್ಲಿ ಮತ್ತೆ ಲಾಂಗು ಮಚ್ಚುಗಳು ಝಳಪಿಸಿದ್ದು, ಓರ್ವ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ನಡೆದಿದೆ. ಸಜೀಪಮುನ್ನೂರಿನ ಉಮರ್ ಫಾರೂಕ್ ಮೇಲೆ ದಾಳಿಗೆ ಯತ್ನಿಸಲಾಗಿದೆ. ಉಮರ್ ಫಾರೂಕ್ ಘಟನೆ ನಡೆದ ದಿನ ಮುಂಜಾನೆ ಮನೆಯಿಂದ ಜೀಪ್​ನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದರು. ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ ಬೈಕ್​ನಲ್ಲಿ…

Read More

ವಿಜಯನಗರ : ಜಮಿನಲ್ಲಿ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ ವಿರೋಧ ವ್ಯಕ್ತಪಡಿಸಿದ್ದು, ರೈತನ ವಿರೋಧದ ನಡುವೆಯೂ ಕೂಡ ಇಲಾಖೆಯ ಸಿಬ್ಬಂದಿ ಕಾಮಗಾರಿ ಆರಂಭಿಸಿದ್ದಾರೆ. ಹಾಗಾಗಿ ಸಿಬ್ಬಂದಿ ವರ್ತನೆಗೆ ಬೇಸತ್ತು ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮಾಜಿ ಹಳ್ಳಿ ತಂಡದಲ್ಲಿ ವಿಷ ಸೇವಿಸಿ ಗಜೇಂದ್ರ ನಾಯಕ (48) ಮಟ್ಟು ಪತ್ನಿ ವಿಜಯಲಕ್ಷ್ಮಿ ಬಾಯಿ (38) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ತಕ್ಷಣ ದಂಪತಿಗಳನ್ನು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರ ಜಮೀನಿನಲ್ಲಿ 220 ಕೆವಿ ವಿದ್ಯುತ್ ಲೈನ್ ಹಾದುಹೋಗಿದೆ. ನನಗೆ ಇರುವುದು ಒಂದೇ ಎಕರೆ ಜಮೀನು ಹೀಗಾಗಿ ಜಮೀನಿನಲ್ಲಿ ವಿದ್ಯುತ್ ಲೈನ್ ಹಾಕದಂತೆ ರೈತ ಸಿಬ್ಬಂದಿ ಬಳಿ ಮನವಿ ಮಾಡಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಸಿಬ್ಬಂದಿಗಳು ಕಾಮಗಾರಿ ಆರಂಭಿಸಿದ್ದಾರೆ. ವಿದ್ಯುತ್ ಇಲಾಖೆಯ ವರ್ತನೆಗೆ ಬೇಸತ್ತು ದಂಪತಿಗಳು ಇಬ್ಬರು ವಿಷ…

Read More

ನವದೆಹಲಿ : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸೆಸ್ ಚಾರ್ಜ್ ನಷ್ಟವಾಗಿದೆ. ಒಂದು ವರ್ಷಕ್ಕೆ ರೂ.8,084 ಕೋಟಿ ಸೆಸ್ ಚಾರ್ಜ್ ನಷ್ಟವಾಗಿದೆ ನ್ಯಾಯಯುತವಾಗಿ ಹಣ ಹಂಚಿ ಅಂತ ಹೇಳಿದ್ದೇವೆ. ರಾಜ್ಯಗಳು ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿ ಸಾಧ್ಯ ಆಗುತ್ತೆ ಅಲ್ವಾ? ಕೇರಳಕ್ಕೆ 3,800 ಕೋಟಿ ವಿಶೇಷ ಅನುದಾನ ಬಂದಿದೆ. ಕರ್ನಾಟಕಕ್ಕೆ ಯಾವುದೇ ರೀತಿಯಾದ ರೆವೆನ್ಯೂ ಡಿಪೆನ್ಸೀಸ್ ಹಣ ಬಂದಿಲ್ಲ. ನಮ್ಮ ರಾಜ್ಯಕ್ಕೆ 545 ಕೋಟಿ ವಿಶೇಷ ಅನುದಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೆಹಲಿಯಲ್ಲಿ ಇಂದು ನಡೆದ 16ನೇ ಹಣಕಾಸು ಆಯೋಗದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2011-2012ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದರೆ, 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟು ಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5 ರಷ್ಟಿದ್ದೇವೆ. 5 ವಷರ್ಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ.…

Read More

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಕೇಸ್ ಪತ್ತೆಯಾಗಿವೆ. ಅಲ್ಲದೇ ಸೋಂಕಿತರಾದಂತ 18 ಜನರು ಗುಣಮುಖರಾಗಿದ್ದಾರೆ ಹಿಂದೂರಾಜ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಈ ಕುರಿತು ಮಾಹಿತಿ ನೀಡಿದೆ. ಇನ್ನು ರಾಜ್ಯದಲ್ಲಿ ಕೊರೊನ ಸೋಂಕಿ ತರ ಸಂಖ್ಯೆ 1,705 ಕ್ಕೆ ಏರಿಕೆಯಾಗಿದ್ದು ಪ್ರಸ್ತುತ ರಾಜ್ಯದಲ್ಲಿ ಕೋರೋನ ಆಕ್ಟಿವ್ ಪ್ರಕರಣಗಳ ಸಂಖ್ಯೆ 527 ಇದೆ. ಕಳೆದ 24 ಗಂಟೆಯಲ್ಲಿ 496 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು 150 ಮಂದಿಗೆ ಕೊರೋನಾ ಸೋಂಕು ಪತ್ತೆಯಾದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 527ಕ್ಕೆ ಏರಿಕೆಯಾಗಿದೆ. ಇವರಲ್ಲಿ 520 ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 7 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ.

Read More

ಅಹಮದಾಬಾದ್ : ನಿನ್ನೆ ಗುಜರಾತಿನ ಅಹಮದಾಬಾದ್ ಏರ್ಪೋರ್ಟ್ ಬಳಿ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ವಿಮಾನದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. ಹೌದು ಅಹ್ಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ನಿನ್ನೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿತ್ತು. ಈ ಒಂದು ದುರಂತದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. ಇನ್ನು ಗಾಯಾಳು 24 ವೈದ್ಯಕೀಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಕೆಲವರ ಮೃತ ದೇಹಗಳು ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿದ್ದು, ಡಿಎನ್ಎ ವರದಿಯ ಬಳಿಕ 8 ಕುಟುಂಬಸ್ಥರಿಗೆ ಮೃತ ದೇಹಗಳನ್ನು ಹಸ್ತಾಂತರಿಸಲಾಗಿದೆ. ಅನೇಕ ಜನರ ಗುರುತುಪತೆಯಾಗದ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ನಂತರ ಕುಟುಂಬಸ್ಥರಿಗೆ ಮೃತ ದೇಹಗಳನ್ನು ಹಸ್ತಾಂತರಿಸಲು ನಿರ್ಧರಿಸಲಾಗಿದೆ.

Read More

ಬೆಂಗಳೂರು : ಓಲಾ, ಊಬರ್ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಹೈಕೋರ್ಟ್ ಶಾಕ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಿರಾಕರಿಸಿದೆ. ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜೂನ್ 24ಕ್ಕೆ ನಿಗದಿಪಡಿಸಿದೆ. ವಿಚಾರಣೆ ವೇಳೆ ಸರ್ಕಾರದ ಪರವಾಗಿ ಎಜಿ ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು. ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಮ್ಮ ರೂಪಿಸಲು ಸರ್ಕಾರ ಸಿದ್ಧವಿಲ್ಲ 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. ಕರ್ನಾಟಕದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗೆ ಪೆರ್ಮಿಟ್ ನೀಡಿಲ್ಲ 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ ಸುಪ್ರೀಂಕೋರ್ಟ್ ಕೂಡ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು. ಅಲ್ಲದೆ, ಬೈಕ್‌ ಟ್ಯಾಕ್ಸಿಗಳ ಸೇವೆ ಕಾರ್ಯಚರಣೆ ಮುಂದುವರೆಸುವ ಸಂಬಂಧ ಮದ್ಯಂತರ ಪರಿಹಾರ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರ ಬೈಕ್‌ ಟ್ಯಾಕ್ಸಿ ಸೇವೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಹಾಗೂ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಚಿಕ್ಕಜಾಲ ಠಾಣೆಯ ಪೊಲೀಸರು ಹಾಗೂ ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಹೌದು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ಸೆಸ್ ಎನ್ನುವವಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತಳ ಬಳಿ ಇಂದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪೊಲೀಸರು ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಕೋರ್ಟಿಗೆ ಶರಣಾಗಲು ಮತ್ತಷ್ಟು ಕಾಲಾವಕಾಶಕ್ಕೆ ಯತ್ನಿಸಿದರು. ಸುಪ್ರೀಂ ಕೋರ್ಟ್ ನಲ್ಲಿ ಶಾಸಕ ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಕಾಲಾವಕಾಶ ಕೋರಿದ್ದರು. ಆದರೆ ಅವರ ಯತ್ನ ವಿಫಲವಾಗಿದೆ. ಶಾಸಕ ಮತ್ತು ಕರ್ನಾಟಕ ನೀರು ಸರಬರಾಜು ಮಂಡಳಿ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಪೂರ್ವ ನಿಗದಿ ಕಾರ್ಯಕ್ರಮಗಳು ಇರುವುದರಿಂದ ಶರಣಾಗಲು ಕಾಲಾವಕಾಶ ಕೋರಿದ್ದರು. ಆದರೆ ಸುಪ್ರೀಂ ಕೋರ್ಟ್ ವಿನಯ್ ಕುಲಕರಣಿಗೆ ಕಾಲಾವಕಾಶ ನೀಡಲು ನಿರಾಕರಿಸಿದೆ. ಈ ಹಿನ್ನೆಲೆ ಇಂದು ಶಾಸಕವನ್ನೇ ಕುಲಕರ್ಣಿ ಅವರನ್ನು ಕೋರ್ಟ್ ಬಳಿ ಸಿಬಿಐ ವಶಕ್ಕೆ ಪಡೆದುಕೊಂಡಿತ್ತು. ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ರದ್ದು ಹಿನ್ನೆಲೆಯಲ್ಲಿ ಸಿಬಿಐ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದುಕೊಂಡು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಿದ್ದಾರೆ.

Read More

ಬೆಂಗಳೂರು : ಮದುವೆಯಾಗಿದ್ದರು ಸಹ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಅಲ್ಲದೇ, ಭರತನಾಟ್ಯ ಕಲಾವಿದೆಯಾಗಿರುವ ಪತ್ನಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ ವ್ಯಕ್ತಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ಇಂದು ನಿರಾಕರಿಸಿತು. ಅರ್ಜಿದಾರ ಪತಿಯು ಪತ್ನಿಯ ಕೈಯನ್ನು ತಿರುಗಿಸಿ, ಗಾಯವಾಗುವಂತೆ ಮಾಡಿ ಆಸ್ಪತ್ರೆಗೆ ಸೇರುವಂತಾಗಿದೆ ಎಂಬ ಅಂಶ ವೈದ್ಯರ ವರದಿಯಿಂದ ಗೊತ್ತಾಗಿದೆ. ದೂರಿನಲ್ಲಿ ದಂಪತಿ ಮದುವೆಯಾದ ಒಂದ ವರ್ಷದಲ್ಲಿ ಏನೆಲ್ಲಾ ನಡೆದಿದೆ ಎಂಬ ಅಂಶಗಳನ್ನು ವಿವರಿಸಲಾಗಿದೆ. ಈ ಎಲ್ಲ ಪತ್ನಿಯ ಮೇಲೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದು ಗೊತ್ತಾಗಲಿದೆ. ಹೀಗಾಗಿ ಪ್ರಕರಣದ ಪೂರ್ಣ ಪ್ರಮಾಣದ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸುತ್ತಿರುವುದಾಗಿ ಪೀಠ ಹೇಳಿದೆ. ಇದೇ ವೇಳೆ, ಭರತನಾಟ್ಯ ಮುಂದುವರಿಸದಂತೆ ಸೂಚನೆ ನೀಡಿದ್ದ ಆರೋಪ ಎದುರಿಸುತ್ತಿದ್ದ ಅತ್ತೆ ಮತ್ತು ಮಾವನ ವಿರುದ್ದ ಪ್ರಕರಣ ರದ್ದುಪಡಿಸಿ ನ್ಯಾಯಪೀಠ ಆದೇಶಿಸಿದೆ. ತಮ್ಮ ವಿರುದ್ಧ ಪತ್ನಿ ದಾಖಲಿಸಿರುವ ಪ್ರಕರಣ ರದ್ದು ಕೋರಿ…

Read More