Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಸಿಲಿನ ಶಾಖದಿಂದ ಹಾಗೂ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣನ ಆಗಮನದಿಂದ ಜನರು ನಿರಾಳವಾಗಿದ್ದಾರೆ. ಕಳೆದ ಹಲವು ದಿನಗಳಿಂದ ಬೆಂಗಳೂರು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು ರೈತರಲ್ಲೂ ಕೂಡ ಸಂತಸ ಮೂಡಿಸಿದೆ ಇದೀಗ ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿ ರಾಜದ ಹಲವಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಸೋಮವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿದ್ದು, ತಂಪಾದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ಅದರಲ್ಲೂ ಮೇ 7 ಮತ್ತು 8ರಂದು ಮಳೆ ಪ್ರಮಾಣ ಹೆಚ್ಚಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆದರೂ, ಮುಂದಿನ ಮೂರು ದಿನಗಳ ಕಾಲ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಷಿಯಸ್ ಹಾಗೂ ಕನಿಷ್ಠ 24-25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು,…
ದಾವಣಗೆರೆ : ಮಹಿಳೆಯರ ಮೇಲೆ ಅತ್ಯಾಚಾರ ದೌರ್ಜನ್ಯ ನಡೆದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅತ್ಯಾಚಾರಿಗಳ ಪರ ನಿಲ್ಲುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಗಂಭೀರವಾದಂತಹ ಆರೋಪ ಮಾಡಿದರು. ನಿನ್ನೆ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿಯವರು ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಸಂಸದನ ಜೊತೆಗೆ ವೇದಿಕೆಯಲ್ಲಿ ಪ್ರಧಾನಿ ಮೋದಿ ಕಾಣಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಸಂಸದನ ಕುಕೃತ್ಯದ ವಿಚಾರ ಬಹಿರಂಗ ಆಗುತ್ತಿದ್ದಂತೆಯೇ ಆತ ವಿದೇಶಕ್ಕೆ ಓಡಿ ಹೋದರೂ ಪ್ರಧಾನಿ, ಗೃಹ ಮಂತ್ರಿಗೆ ಗೊತ್ತೇ ಆಗುವುದಿಲ್ಲ. ಪ್ರಧಾನಿ ಮೋದಿ, ಗೃಹ ಮಂತ್ರಿಗೆ ದೇಶದ ಪ್ರತಿಯೊಬ್ಬ ನಾಯಕರು, ಮುಖಂಡರ ಚಲನವಲನಗಳ ಇಂಚಿಂಚೂ ಮಾಹಿತಿ ಇರುತ್ತದೆ. ಅಂಥದ್ದರಲ್ಲಿ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಂಸದ ವಿದೇಶಕ್ಕೆ ಹೋದ ಬಗ್ಗೆ ಮಾಹಿತಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ವಿದೇಶದಿಂದ ಮಂಗಳೂರು ಏರ್ಪೋರ್ಟ್ಗೆ ಆಗಮಿಸುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಮಹಿಳೆ ಕಿಡ್ನಾಪ್ ಕೇಸ್ ಅಲ್ಲಿ ಹನಿನ್ನೆ ಅವರ ತಂದೆ ಹಾಗೂ ಜೆಡಿಎಸ್ ಶಾಸಕರಾದಂತಹ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಇದೀಗ ಲೈಂಗಿಕ ದೋರ್ಷಣೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಏರ್ಪೋರ್ಟ್ಗೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣಗೆ ಉದಾರಣೆಗೆ ಹಾಜರಾಗುವಂತೆ ಲುಕ್ ಔಟ್ ನೋಟಿಸ್ ನೀಡಿದ್ದು, ವಿದೇಶದಲ್ಲಿರುವ ಕಾರಣ ಪ್ರಜ್ವಲ್ ವಿಚಾರಣೆಗೆ ಹಾಜರಾಗುವುದಕ್ಕೆ ಸಾಧ್ಯವಾಗಿಲ್ಲ ಹಾಗಾಗಿ ನಿನ್ನೆ ಎಸ್ ಐ ಟಿ ಅಧಿಕಾರಿಗಳು ರೆಡ್ ಕಾರ್ನರ್ ನೋಟಿಸ್ ಜರಿ ಮಾಡಿತ್ತು ಹಾಗಾಗಿ ಇಂದು ಪ್ರಜ್ವಲ್ ರೇವಣ್ಣ ಅವರು ವಿದೇಶದಿಂದ ವಾಪಸ್ಸಾಗಿ ಮಂಗಳೂರಿನ ಏರ್ಪೋರ್ಟಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ದೇಶದಿಂದ ದೇಶಕ್ಕೆ ಸಂಚರಿಸುತ್ತಿದ್ದಾರೆ…
ಬೆಂಗಳೂರು : ಮಹಿಳೆಯನ್ನು ಆಭರಣ ಮಾಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ನಿನ್ನೆ SIT ಅಧಿಕಾರಿಗಳು ಬಂಧಿಸಿದ್ದಾರೆ. ಎಸ್ ಐ ಟಿ ಅಧಿಕಾರಿಗಳು ಇಂದು ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಂಗಳೂರಿನ ಕೋರಮಂಗಲದ ನ್ಯಾಯಾಧೀಶರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ನ್ಯಾಯಾಧಿಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ರೇವಣ್ಣ ಅವರನ್ನು SIT ಕಸ್ಟಡಿಗೆ ನೀಡುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದ್ದು, ಹಾಗಾಗಿ HD ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರುವುದು ಫಿಕ್ಸ್ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಪರ ವಕೀಲರು ನಾಳೆ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇರಲಿದ್ದು, ಇತ್ತ SIT ಕೂಡ ಆಕ್ಷೇಪಣೆ ಸಲ್ಲಿಸಿ ರೇವಣ್ಣ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಕೇಳಲಿದೆ ಎಂದು ತಿಳಿದುಬಂದಿದೆ. ಇಂದು ಬಹುತೇಕ ಶಾಸಕ ಎಚ್ ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರುವುದು ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಮಹಿಳೆ ಅಪಹರಣ ಪ್ರಕರಣಕ್ಕೆ…
ಬೆಂಗಳೂರು : ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ಅವರನ್ನು, ಎಸ್ಐಟಿ ಅಧಿಕಾರಿಗಳು ತಡರಾತ್ರಿ ಅವರಿಗೂ ವಿಚಾರಣೆ ನಡೆಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡು ಇಂದು ಮ್ಯಾಜಿಸ್ಟ್ರೇಟ್ ಎದುರು ಸೈಟ್ ಅಧಿಕಾರಿಗಳು ಎಸ್ ಡಿ ರೇವಣ್ಣ ಅವರನ್ನು ಹಾಜರುಪಡಿಸಲಿದೆ ಎಂದು ತಿಳಿದು ಬಂದಿದೆ. ಹೌದು ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣನನ್ನು SIT ಬಂಧಿಸಿದ್ದು,ತಡವರಾತ್ರಿಯವರೆಗೂ SIT ಅಧಿಕಾರಿಗಳು ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಚ್. ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕಾರ್ಲಟನ್ ಭವನದಲ್ಲಿರುವ SIT ಕಚೇರಿಯಲ್ಲಿ ರೇವಣ್ಣ ಅವರ ವಿಚಾರಣೆ ನಡೆದಿದೆ. ಇದೀಗ SITಮ್ಯಾಜಿಸ್ಟ್ರೆಟ್ ಎದುರು ಇಂದು ಹಾಜರುಪಡಿಸಲು ಎಲ್ಲ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡಿದೆ. ಸಂಜೆಯೊಳಗೆ ನ್ಯಾಯಾಧೀಶರ ಮುಂದೆ HD ರೇವಣ್ಣ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ : ಮಹಿಳೆಯ ಅಪಹರಣ ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾ ಆಗಿರುವುದರಿಂದ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ನಾನು ಕೂಡಾ ಪೊಲೀಸರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಒಂದು ಅಪಹರಣ ಪ್ರಕರಣದಲ್ಲಿ ರೇವಣ್ಣ ಜಾಮೀನು ಅರ್ಜಿ ಹಾಕಿದ್ದರು. ಆದರೆ, ಆ ಅರ್ಜಿ ವಜಾ ಆಗಿರಬೇಕು. ಆದ್ದರಿಂದ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿರಬೇಕು ಅನಿಸುತ್ತದೆ ಎಂದು ತಿಳಿಸಿದರು. ನಾವು ಯಾವುದಕ್ಕೂ ಭಾಗಿಯಾಗಲ್ಲ : ಡಿಸಿಎಂ ಡಿಕೆ ಇನ್ನು ಇದೆ ವಿಷಯವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಗದಗ್ ನಲ್ಲಿ ಪ್ರತಿಕ್ರಿಯೆ ನೀಡಿ ನ್ಯಾಯಾಲಯ ಉಂಟು ಕಾನೂನುಂಟು. ನಾವು ಯಾವುದಕ್ಕೂ ಭಾಗಿಯಾಗಲ್ಲ. ನಮಗೆ ಅವಶ್ಯಕತೆ ಇಲ್ಲ. ಕೋರ್ಟ್, ಕಾನೂನಲ್ಲಿ ಏನಾದ್ರೂ ರಕ್ಷಣೆ ಪಡೆದುಕೊಳ್ಳಲಿ. ನಾವು ವಿಚಾರಕ್ಕೆ ಹೋಗಲ್ಲ. ಕುಮಾರಣ್ಣ ಆರಂಭದಲ್ಲಿ ಏನೋ ಹೇಳಿದ್ದಾರೆ. ಅದಕ್ಕೆ ಬದ್ಧ ಎಂದು ಹೇಳಿದರು.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಸಂಕಷ್ಟದಲ್ಲಿದ್ದು ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು ಪೆನ್ ಡ್ರೈವ್ ಹಿನ್ನೆಲೆ ಏನೆಂದು ಬಿಚ್ಚಿಡಬೇಕಾ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಪೆನ್ಡ್ರೈವ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪದೇ ಪದೇ ನಿಲುವು ಬದಲಿಸುತ್ತಿರುವುದು ಯಾಕೆ? ಪೆನ್ಡ್ರೈವ್ ಹಿನ್ನೆಲೆ ಏನು ಎಂದು ನಾವು ಬಿಚ್ಚಿಡಬೇಕಾ? ಎಂದು ಉಪಮುಖ್ಯಮಂತ್ರಿ ಶಿವಕುಮಾರ್ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ ಅವರೇ ಮೇ 7 ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಏನು? ಇದರ ಹಿಂದೆ ಯಾರು ಯಾರು ಇದ್ದಾರೆ ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ಮದವರು…
ಬೆಂಗಳೂರು : ಇದೀಗ ರಾಜ್ಯ ಅಷ್ಟೇ ಅಲ್ಲದೆ ದೇಶದಾದ್ಯಂತ ಸಂಚಲನ ಸೃಷ್ಟಿಸಿದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಹನ್ನೆರಡು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ವಿಚಾರದಿಂದ ಜೆಡಿಎಸ್ನ 12 ಮಂದಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂಬ ವಿಚಾರವೆಲ್ಲಾ ಸುಳ್ಳು. ಊಹಾ ಪೋಹಗಳನ್ನು ಹರಡಲಾಗುತ್ತಿದೆ. ಜೆಡಿಎಸ್ನವರು ಬಿಜೆಪಿ ಜತೆ ಮೈತ್ರಿಯಾದರೂ ಮಾಡಿ ಕೊಳ್ಳಲಿ, ಪಕ್ಷವನ್ನು ವಿಲೀನವಾದರೂ ಮಾಡಿಕೊಳ್ಳಲಿ ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪ್ರಜ್ವಲ್ ಅವರ ವಿಚಾರದಿಂದ ಜೆಡಿಎಸ್ ಪಕ್ಷದ 12 ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ಚರ್ಚೆ ಬಗ್ಗೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಅದೆಲ್ಲವೂ ಸುಳ್ಳು, ನನ್ನ ಜತೆ ಯಾರೊಬ್ಬರೂ ಸಂಪರ್ಕದಲ್ಲಿಲ್ಲ. ನಾನು ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಎಂತಹವ ರಾದರೂ…
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕಾರಕ್ಕೆ ಸಂಬಂಧಿಸಿದಂತೆ HD ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು ಇದೀಗ, ತಂದೆ ಹಾಗೂ ಮಗನ ವಿರುದ್ಧ ಸುಮಾರು 700 ಗಣ್ಯರಿಂದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹೌದು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೇಶದ ಹಲವು ಮಹಿಳಾ ಸಂಘಟನೆಗಳು, ವಿವಿಧ ವೃತ್ತಿಯ ಮಹಿಳೆಯರು ಸೇರಿದಂತೆ 700 ಗಣ್ಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬಹುತ್ವ ಕರ್ನಾಟಕದ ನಿಶಾ ಅಬ್ದುಲ್ಲಾ, ಕರ್ನಾಟಕ ಜನ ಶಕ್ತಿಯ ಲಲಿತಾ, ಅಖಿಲ ಭಾರತ ಸ್ತ್ರೀವಾದಿ ಒಕ್ಕೂಟ, ವುಮೆನ್ ಫಾರ್ ಡೆಮಾಕ್ರಸಿ ಸಂಘಟನೆಯ ಪದಾಧಿಕಾರಿಗಳು ಸೇರಿ ವಿವಿಧ ವೃತ್ತಿಯಲ್ಲಿರುವ ಹಲವು ಮಹಿಳೆಯರು, ಗಣ್ಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.ಸುಮಾರು 2,976 ವಿಡಿ ಯೋಗಳಿವೆ ಎನ್ನಲಾಗುತ್ತಿದೆ ಇಷ್ಟಾದರೂ ಆಯೋಗ ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು : ವರ್ಷವಿಡೀ ಕೆಲಸ ಮಾಡುವ, ಅಸಂಘಟಿತ ವಲಯದ ಕಾರ್ಮಿಕರ ವ್ಯಾಪ್ತಿಯಲ್ಲಿನ ವಾಹನ ಚಾಲಕರ ಶ್ರಮಕ್ಕೆ ಗೌರವ ಸಲ್ಲಿಸಲು ಅಪಘಾತ ರಹಿತ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ ಪ್ರಶಸ್ತಿ ನೀಡುವುದರ ಜತೆಗೆ ‘ಚಾಲಕರ ದಿನ’ವನ್ನು ಆಚರಿಸಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದೆ. ಹೌದು ಚಲನಚಿತ್ರ ನಟ ಶಂಕರ್ ನಾಗ್ ಅವರ ಜನ್ಮದಿನದಂದು ಈ ಒಂದು ದಿನಾಚರಣೆಯ ಆಚರಿಸಬೇಕು ಎಂದು ಚಾಲಕರ ಒತ್ತಾಯವಾಗಿದ್ದು, ಈ ಕುರಿತಂತೆ ಸಾರಿಗೆ ಇಲಾಖೆಚರ್ಚಿಸಿ ನಿರ್ಧಾರ ಕೈಗೊಳ್ಳಲ್ಲಿದೆ ಎಂದು ಹೇಳಲಾಗುತ್ತಿದೆ. ಕಳೆದವರ್ಷವಿವಿಧಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಸಾರಿಗೆ ಒಕ್ಕೂಟದ ವಿವಿಧ ಸಂಘಟನೆಗಳು ಪ್ರತಿಭಟಿಸಿದ ಸಂದರ್ಭದಲ್ಲಿ ಚಾಲಕರ ಶ್ರಮವನ್ನು ಗುರುತಿಸಿ, ಗೌರವಿಸುವ ಸಲುವಾಗಿ ಚಾಲಕರ ದಿನವನ್ನು ಆಚರಿಸಬೇಕು ಎಂಬ ಬೇಡಿಕೆಯನ್ನೂ ಇಡಲಾಗಿತ್ತು. ಅದಕ್ಕೆ ಒಪ್ಪಿಗೆ ಸೂಚಿಸಿದ್ದ ಸರ್ಕಾರ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಚಾಲಕರ ದಿನವನ್ನು ಯಾವಾಗ? ಯಾವ ರೀತಿಯಲ್ಲಿ ಆಚರಿಸಬೇಕು ಎಂಬುದರ ಬಗ್ಗೆ ಇಲಾಖೆ ನಿರ್ಧರಿಸಲಿದೆ.…










