Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನೆಲೆ ಅವರಿಗೆ ಸಾಕಷ್ಟು ನಿರಂತರ ಬೆದರಿಕೆ ಕರೆಗಳು ಬಂದವು ಇದೀಗ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಮಹಾರಾಷ್ಟ್ರದ ಲಾತೂರ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಹೌದು ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಅರೆಸ್ಟ್ ಆಗಿದ್ದಾನೆ. ಸೊಲ್ಲಾಪುರ ಮೂಲದ ದಿನೇಶ್ ನರಣಿ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಲಾತೂರ್ನಲ್ಲಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆದರಿಕೆ ಕರೆ ಬಳಿಕ ಸೋಲಾಪುರದಿಂದ ಲಾತುರ್ಗೆ ಆರೋಪಿ ಪರಾರಿಯಾಗಿದ್ದ. ಇದೀಗ ಲಾತೂರ್ ನಲ್ಲಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಕಲ್ಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಂದು ರಾತ್ರಿ ವೇಳೆ ಆರೋಪಿಯನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ಸದಾಶಿವನಗರ ಠಾಣೆಗೆ ಆರೋಪಿಯನ್ನು ಕರೆದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವ…

Read More

ಬೆಂಗಳೂರು : ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಿದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುತ್ತೇವೆ. FAO ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆ ಮಾಡುತ್ತೇವೆ ಎಂದು ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಗಾಳಿ, ನೀರು, ಮಣ್ಣು ಸೇವಿಸಿ ಬದುಕೋಕೆ ಆಗುತ್ತಾ? ಮನುಷ್ಯ ಬದುಕಲು ಆಹಾರ ಸೇವನೆ ಮುಖ್ಯ. ಕಾರ್ಪೊರೇಟ್ ಕಂಪನಿಗಳಿಂದ ಸಣ್ಣ ರೈತರಿಗೆ ಸಮಸ್ಯೆ ಆಗುತ್ತದೆ ಪ್ರಸಕ್ತ ದಿನಗಳಲ್ಲಿ ರೈತರ ರಕ್ಷಣೆ ಕೂಡ ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನೊಬ್ಬರ ಮನೆ ಮುಂದೆ ಆಹಾರಕ್ಕೆ ಕೈಚಾಚಬಾರದು ಎಂದು ಉಚಿತ ಅಕ್ಕಿ ವಿತರಿಸಲಾಗುತ್ತಿದೆ. ನಾವೆಲ್ಲ ಮುದ್ದೆ ತಿನ್ನುತ್ತಿದ್ವಿ. ನೆಂಟರು ಬಂದಾಗ ಮಾತ್ರ ಅನ್ನ ತಿಂತಾ ಇದ್ದೆವು. ಉತ್ತರ ಕರ್ನಾಟಕ ಭಾಗದಲ್ಲಿ ಜೋಳದ ರೊಟ್ಟಿ ಮತ್ತು ಚಪಾತಿ ತಿನ್ನುತ್ತಿದ್ದರು. ನಮ್ಮಜ್ಜಿ ಹೊಟ್ಟೆ ತುಂಬಾ ಹಿಟ್ಟು, ಬಾಯಿ ತುಂಬಾ ಅನ್ನ ತಿನ್ನುತ್ತಿದ್ದರು. ನಮ್ಮ ಅಮ್ಮನ ಬಳಿ ಬಂದು ತುತ್ತು…

Read More

ಬೆಂಗಳೂರು : 2017ರಲ್ಲಿ ವೈದ್ಯರ ಮೇಲೆ ಅನಂತ್ ಕುಮಾರ್ ಹೆಗಡೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಂತ್ ಕುಮಾರ್ ಹೆಗಡೆ ಪರ ವಕೀಲರು ಸತತವಾಗಿ ಗೈರು ಹಾಜರಿ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿದ ಅನಂತ್ ಕುಮಾರ್ ಹೆಗಡೆ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಗೊಳಿಸಿದೆ. ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಈ ಕುರಿತು ಆದೇಶ ಹೊರಡಿಸಿದ್ದು, ತಾಯಿಗೆ ವೈದ್ಯರು ಚಿಕಿತ್ಸೆ ನೀಡಿಲ್ಲವೆಂದು ವೈದ್ಯರ ಮೇಲೆ ಅನಂತ್ ಕುಮಾರ್ ಹೆಗಡೆ ಹಲ್ಲೆ ಮಾಡಿದ್ದರು. ಈ ಕುರಿತು 2017ರಲ್ಲಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ಸಹ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾ ಜ್ಞೆ ನೀಡಿತ್ತು. ಕೋರ್ಟ್ ಸೂಚಿಸಿದ್ದರು ಕೂಡ ಸರ್ಕಾರಿ ವಕೀಲರಿಗೆ ಅರ್ಜಿ ಪ್ರತಿ ನೀಡಿರಲಿಲ್ಲ. ಅಲ್ಲದೆ ಅನಂತ್ ಕುಮಾರ್ ಹೆಗಡೆ ಪರ ವಕೀಲರು ಕೋರ್ಟಿಗೆ ಸತತ ಗೈರು ಮತ್ತು ಅರ್ಜಿಯ ಪ್ರತಿ ಸಲ್ಲಿಸದ ಹಿನ್ನೆಲೆಯಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Read More

ಬೆಂಗಳೂರು : ಇನ್ನೊಬ್ಬರ ಮನೆ ಮುಂದೆ ಆಹಾರಕ್ಕೆ ಕೈಚಾಚಬಾರದು ಎಂದು ಉಚಿತ ಅಕ್ಕಿ ವಿತರಿಸಲಾಗುತ್ತಿದೆ ಎಂದು ವಿಶ್ವ ಆಹಾರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಂದು ವಿಧಾನಸೌಧದ ಬ್ಯಾಂಕ್ವೈಟ್ ಹಾಲ್ ನಲ್ಲಿ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವೆಲ್ಲ ಮುದ್ದೆ ತಿನ್ನುತ್ತಿದ್ವಿ. ನೆಂಟರು ಬಂದಾಗ ಮಾತ್ರ ಅನ್ನ ತಿಂತಾ ಇದ್ದೆವು. ಉತ್ತರ ಕರ್ನಾಟಕ ಭಾಗದಲ್ಲಿ ಜೋಳದ ರೊಟ್ಟಿ ಮತ್ತು ಚಪಾತಿ ತಿನ್ನುತ್ತಿದ್ದರು. ನಮ್ಮಜ್ಜಿ ಹೊಟ್ಟೆ ತುಂಬಾ ಹಿಟ್ಟು, ಬಾಯಿ ತುಂಬಾ ಅನ್ನ ತಿನ್ನುತ್ತಿದ್ದರು. ನಮ್ಮ ಅಮ್ಮನ ಬಳಿ ಬಂದು ತುತ್ತು ಅನ್ನಕ್ಕಾಗಿ ಕಾಯುತ್ತಿದ್ದರು. ಇದಕ್ಕಾಗಿ ನಾನು ಸಿಎಂ ಆದ ಮೇಲೆ 1 ರೂಪಾಯಿಗೆ ಅಕ್ಕಿ ಕೊಟ್ಟೆ. 2013ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಉಚಿತ ಅಕ್ಕಿ ಕೊಟ್ಟೆ. ಇವತ್ತು ಯಾರು ಅನ್ನ ಇಲ್ಲದೆ ಮಲಗಬಾರದು ಎನ್ನುವ ಉದ್ದೇಶದಿಂದ ಎಲ್ಲರಿಗೂ ಉಚಿತವಾಗಿ ಅಕ್ಕಿ ವಿತರಿಸಲಾಗುತ್ತಿದೆ ಎಂದು ವಿಶ್ವ ಆಹಾರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಮಂಡ್ಯ : ಸಮಿಶ್ರ ಸರ್ಕಾರ ಇದ್ದಾಗ ನನಗೆ ದೆಹಲಿ ಬಿಜೆಪಿ ನಾಯಕರಿಂದ ಕರೆ ಬಂದಿತ್ತು. ನೀವು ಜೈಲಿಗೆ ಹೋಗುತ್ತಿರೊ ಅಥವಾ ಡಿಸಿಎಂ ಆಗುತ್ತಿರೋ ಅಂದಾಗ ಪಕ್ಷ ನಿಷ್ಠೆ ಉಳ್ಳವನಾಗಿದ್ದರಿಂದ ನಾನು ಜೈಲಿಗೆ ಹೋದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ HD ಕುಮಾರಸ್ವಾಮಿ ನನಗೂ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಸ್ಪೋಟಕ್ಕೆ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯಿಂದ ಡಿಸಿಎಂ ಆಫರ್ ಇತ್ತು ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ನನಗೆ ಮುಖ್ಯಮಂತ್ರಿ ಸ್ಥಾನದ ಆಫರ್ ಇರಲಿಲ್ಲವೇ? ನಾನು ಹೋಗಿದ್ದರೆ ಈಗಲೂ ನಾನು ಮುಖ್ಯಮಂತ್ರಿ ಆಗಿಯೇ ಇರುತ್ತಿದ್ದೆ. ಸದ್ಯಕ್ಕೆ ಅದನ್ನು ಬಿಟ್ಟಾಕಿ ಎಂದು ಮಂಡ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು. ಇನ್ನು ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು RSS ಮತ್ತು ಭಾನು ಮುಷ್ತಾಕ್ ವಿಚಾರವಾಗಿ ಪ್ರಾಮುಖ್ಯತೆ ಕೊಡಲ್ಲ.…

Read More

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ನಿಷೇಧ ಹೇರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಕಾನೂನು ಇಲಾಖೆ ವಿಧೇಯಕ ಸಿದ್ದಪಡಿಸಿ ಡ್ರಾಫ್ಟ್ ಮಾಡಿದ್ದು, ಸರ್ಕಾರಿ ಕಟ್ಟಡ, ಆವರಣ, ಆಸ್ತಿಗಳಲ್ಲಿ ಚಟುವಟಿಕೆ ನಿಯಂತ್ರಣ ನಿಯಮ ಸಿದ್ಧವಾಗಿದೆ. ಯಾವುದೇ ಧಾರ್ಮಿಕ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂಬ ನಿಯಮ ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಜಿಲ್ಲಾ ವರಿಷ್ಠಾಧಿಕಾರಿಗೆ ಅನುಮತಿ ನೀಡುವ ಅಧಿಕಾರವಿದೆ. ನಿಯಮ ಮೀರಿ ಚಟುವಟಿಕೆ ನಡೆಸಿದರೆ 2 ವರ್ಷ ಜೈಲು ಮತ್ತು 50 ಸಾವಿರ ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ನಿಯಮ ಮೀರಿದರೆ 3 ವರ್ಷ ಜೈಲು ಶಿಕ್ಷೆ ರೂ. 1, ದಂಡ ವಿಧಿಸಲಾಗುತ್ತದೆ ಇದಕ್ಕೂ ಮೀರಿ ಮುಂದುವರಿದರೆ ನಿತ್ಯ…

Read More

ಚಿಕ್ಕಮಗಳೂರು : ಲಕ್ಕವಳ್ಳಿ ಬಳಿ ಭದ್ರಾ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ವಿಠ್ಠಲ್ (48) ಹಾಗೂ ಗಂಗಮ್ಮ (40) ಆತ್ಮಹತ್ಯೆಗೆ ಶರಣಾದ ದಂಪತಿಗಳು ಎಂದು ತಿಳಿದುಬಂದಿದೆ. ಮೃತ ದಂಪತಿಗಳು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗೌಳಿಗಾರ ಕ್ಯಾಂಪ್ ನಿವಾಸಿಗಳೆಂದು ತಿಳಿದುಬಂದಿದೆ. ಜಗದಾಂಬೆ ದೇವಸ್ಥಾನಕ್ಕೆ ವಿಠ್ಠಲ್ ಮತ್ತು ಗಂಗಮ್ಮ ಪೂಜೆಗೆ ಬಂದಿದ್ದರು. ಈ ವೇಳೆ ಭದ್ರಾ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಘಟನೆ ಕುರಿತಂತೆ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರಗಿ : ಆರ್ ಎಸ್ ಎಸ್ ಚಟುವಟಿಕೆಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲಿ ಪ್ರಿಯಾಂಕ ಖರ್ಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಇದನ್ನು ಖಂಡಿಸಿ ಕಲ್ಬುರ್ಗಿ ಜಿಲ್ಲೆಯ ಚಿತಾಪುರ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಹೌದು ಪುರ್ಯಾಕ್ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಿತಾಪುರ ಬಂದ್ ಗೆ ಕರೆ ನೀಡಿದ್ದು, ಪಟ್ಟಣದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಇಂದು ಇಡೀ ಚಿತ್ತಾಪುರ ಪಟ್ಟಣ ಸಂಪೂರ್ಣವಾಗಿ ಸ್ತಬ್ಧವಾಗಿತ್ತು.

Read More

ಕೊಪ್ಪಳ : ರಾತ್ರೋರಾತ್ರಿ ದಲಿತರ ಮನೆಗೆ ಸವರ್ಣೀಯರು ಬೆಂಕಿ ಹಚ್ಚಿದ್ದಾರೆ. ಕಿಡಿಗೇಡಿಗಳ ಬೆಂಕಿ ಕೆನ್ನಾಲಿಗೆಗೆ ಇಡೀ ಮನೆ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದಲಿತ ಸಮುದಾಯದ ಮೌನೇಶ ಕೊಡಗುಂಟಿ ಮನೆಗೆ ಸವರ್ಣೀಯರು ಬೆಂಕಿ ಇಟ್ಟಿದ್ದಾರೆ. ಸದ್ಯಕ್ಕೆ ಕೋನ ಸಾಗರಕ್ಕೆ ಕೊಪ್ಪಳ ಎಸ್ಪಿ ರಾಮ್ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಈ ಒಂದು ಘಟನೆ ನಡೆದಿದ್ದು 2 ರಿಂದ 3ಗಂಟೆ ಸುಮಾರಿಗೆ ಸವರ್ಣಿಯರು ಬಂದು ಬೆಂಕಿ ಹಚ್ಚಿದ್ದಾರೆ ಎಂದು ಮೌನೇಶ್ ಆರೋಪಿಸಿದ್ದಾರೆ. ಹಳೆಯ ದ್ವೇಷಕ್ಕೆ ಈ ಒಂದು ಘಟನೆ ನಡೆದಿದ್ದು ದಲಿತರು ಮತ್ತು ಸವರ್ಣೀಯರ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಹಾಗಾಗಿ ಹಳೆ ದ್ವೇಷ ಇಟ್ಟುಕೊಂಡು ಸವರ್ಣಿಯರು ಮನೆಗೆ ಬೆಂಕಿ ಇಟ್ಟಿದ್ದಾರೆ ಎಂದು ಮೌನೇಶ್ ಆರೋಪಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಿಎಂ ಸಿದ್ಧರಾಮಯ್ಯಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದರು. ಸಿಎಂ ಗೆ ಪತ್ರ ಬರೆದ ಬೆನ್ನಲ್ಲೆ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿವೆ. ಈ ವಿಚಾರವಾಗಿ ಹೆಚ್ ವಿಶ್ವನಾಥ್ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ನಿಮ್ಮಪ್ಪನಂತೆ ಕೆಲಸ ಮಾಡಲು ಜನ ನಿನ್ನನ್ನು ಗೆಲ್ಲಿಸಿದ್ದಾರೆ. ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆ ಬರುತ್ತಿರುವುದು ಶುದ್ಧ ಸುಳ್ಳು ಎಂದು ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಿಮ್ಮಪ್ಪನಂತೆ ಒಳ್ಳೆಯ ಕೆಲಸ ಮಾಡು ಎಂದು ಜನ ನಿನ್ನನ್ನು ಗೆಲ್ಲಿಸಿದ್ದಾರೆ. ಆದರೆ ನೀನು ಕೆಲಸಕ್ಕೆ ಬಾರದ ವಿಚಾರಗಳನ್ನು ಮಾತನಾಡಿಕೊಂಡು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳಲು ಹೊರಟಿದ್ದೀಯ. ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಯಾರು ಬೆದರಿಕೆ ಹಾಕುತ್ತಾರೆ? ಇದು ಬರಿ ಸುಳ್ಳಿನಿಂದ ಕೂಡಿದೆ. ನಾನು ಸಹ ಸಿದ್ದರಾಮಯ್ಯ ವಿರುದ್ಧ ಎಷ್ಟೋ ಬಾರಿ ಟೀಕೆ ಮಾಡಿದ್ದೇನೆ. ಆದರೆ ಇದುವರೆಗೂ ನನಗೆ ಕರೆ ಮಾಡಿ ಯಾರು ಬೆದರಿಕೆ…

Read More