Author: kannadanewsnow05

ಬೆಂಗಳೂರು : ಕಳೆದ ಜೂನ್ ನಾಲ್ಕರಂದು ತೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈಗ ಈ ಒಂದು ಪ್ರಕರಣದ ತನಿಖಾಧಿಕಾರಿ ಜಗದೀಶ್ ಅವರು ಅಧಿಕಾರಿಗಳ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಹೌದು ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದರು. ಇ ಹಿನ್ನೆಲೆ ಗಾಯಾಳುಗಳ ಹೇಳಿಕೆಗಳನ್ನು ಇದೀಗ ಜಿಲ್ಲಾಧಿಕಾರಿ ದಾಖಲಿಸಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಜಗದೀಶ್ ಅವರು ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಡಿಸಿ ನ್ಯಾಯಾಲಯ ಸಭಾಂಗಣದಲ್ಲಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಯಾವ ಸಮಯದಲ್ಲಿ ಘಟನೆ ಸಂಭವಿಸಿತು? ಯಾವ ಕಾರಣದಿಂದ ಕಾಲ್ತುಳಿತ ಉಂಟಾಯಿತು? ಘಟನೆ ದಿನವೇ ಗಾಯಾಳುಗಳು ಸಮಸ್ಯೆಯ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ಇಂದು ಅಧಿಕಾರಿಗಳ ಹೇಳಿಕೆಯನ್ನು ತನಿಖಾಧಿಕಾರಿ ಜಗದೀಶ್ ರವರು ಪಡೆದಿದ್ದಾರೆ. ಅಲ್ಲದೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಕೂಡ ತನಿಖೆಯನ್ನು ಚುರುಕುಗೊಳಿಸಿದೆ.

Read More

ತುಮಕೂರು : ಸಾಲಭಾದೇ ತಾಳಲಾರದೆ ವ್ಯಕ್ತಿಯೊಬ್ಬರು ಮರಕ್ಕೆ ನೇಣು ತೆಗೆದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಹಿರೇಹಳ್ಳಿ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹಿರೇಹಳ್ಳಿ ಗ್ರಾಮದ ರವೀಂದ್ರ (52) ಎಂದು ತಿಳಿದುಬಂದಿದೆ. ರವೀಂದ್ರ ಅವರು, ಯಲಹಂಕ ಬಳಿ ಹೆಂಡತಿ ಮಕ್ಕಳೊಂದಿಗೆ ವಾಸವಿದ್ದರು. ಕಳೆದ ನಾಲ್ಕೈದು ದಿನಗಳಿಂದ ಮನೆಬಿಟ್ಟು ನಾಪತ್ತೆಯಾಗಿದ್ದು, ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಲಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಹಿರೇಹಳ್ಳಿಯ ಜಮೀನೊಂದರ ಬಳಿ ಹುಣಸೇಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ರವೀಂದ್ರ ಅವರ ಶವ ಪತ್ತೆಯಾಗಿದೆ. ತನ್ನ ಹುಟ್ಟೂರಿನ ಮನೆ ಮುಂದೆ ಇದ್ದ ಹುಣಸೇಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಲಬಾಧೆಯೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ.

Read More

ಕಲಬುರ್ಗಿ : ನಿನ್ನೆ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ ಎಂದರೆ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಗುಜರಾತ್ನ ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಪೈಲಟ್, ಸಿಬ್ಬಂದಿಗಳು ಸೇರಿದಂತೆ ಒಟ್ಟು 242 ಪ್ರಯಾಣಿಕರು ಸಾವನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಕೇಂದ್ರ ಸರ್ಕಾರ ಈ ಘಟನೆ ಹೊಣೆ ಹೊರಬೇಕು ತಕ್ಷಣ ವಿಮಾನಯಾನ ಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ಘಟನೆ ಸಂಭಂದ ಕೂಡಲೇ ವಿಮಾನಯಾನ ಸಚಿವರು ರಾಜೀನಾಮೆ ಕೊಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು. ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಚಿನ್ನಸ್ವಾಮಿ ಕಾಲ್ತುಳೀತ ಘಟನೆ ಆದಾಗ ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ ಮತ್ತು ಪಹಲ್ಗಾಮ್ ಘಟನೆಯಲ್ಲಿ…

Read More

ಬೆಂಗಳೂರು : ಬೆಂಗಳೂರಲ್ಲಿ ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕ್ರಿಷ್ ಮಾಲಿ (23) ಎಂದು ತಿಳಿದುಬಂದಿದೆ. ಟಸ್ಕರ್ ಟೌನ್‌ನಲ್ಲಿರುವ ಹೋಟೆಲ್‌ನಲ್ಲಿ ಜೂನ್ 1ರಂದು ರೂಮ್ ಬುಕ್ ಮಾಡಿದ್ದ ಆರೋಪಿ, ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ. ಅಲ್ಲದೇ ಜೂನ್ 7ರಂದು ಹೋಟೆಲ್‌ನಿಂದ ಚೆಕ್ ಔಟ್ ಆಗುವಾಗ ನಕಲಿ ನೋಟುಗಳ ಮೂಲಕ ಬಿಲ್​ ಪಾವತಿಸಿದ್ದ. ಬ್ಯಾಗ್‌ನಲ್ಲಿ ಪ್ರಿಂಟರ್, ಸ್ಕ್ಯಾನರ್‌ಗಳನ್ನು ತಂದಿದ್ದ ಆರೋಪಿ ಹೋಟೆಲ್‌ನಲ್ಲಿ ಕುಳಿತೇ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿದ್ದ. ಬಳಿಕ ಜೂನ್ 7ರಂದು ಮಧ್ಯಾಹ್ನ ಹೋಟೆಲ್‌ನಿಂದ ಚೆಕ್ ಔಟ್ ಆಗುವಾಗ ನಕಲಿ ನೋಟುಗಳ ಮೂಲಕವೇ 3 ಸಾವಿರ ರೂ. ಬಿಲ್ ಪಾವತಿಸಿ ತೆರಳಿದ್ದ.ಅದೇ ದಿನ ಬೆಳಗ್ಗೆ ಹೋಟೆಲ್‌ನಿಂದ ಸಂಗ್ರಹಿಸಲಾದ ತ್ಯಾಜ್ಯದಲ್ಲಿ ಕೆಲ ನಕಲಿ ನೋಟುಗಳು ಪತ್ತೆಯಾಗಿರುವುದನ್ನು ಪೌರಕಾರ್ಮಿಕ ಸಿಬ್ಬಂದಿ ಹೋಟೆಲ್ ಮ್ಯಾನೇಜರ್ ಬಳಿ ಹೇಳಿದ್ದ.ಆರೋಪಿಯ ಚೆಕ್ ಔಟ್ ಆದ ಕೆಲ ಸಮಯದ ಬಳಿಕ…

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹೊರವಲಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ದುರಂತ ಎಂದರೆ ಗಾಯಗೊಂಡವರನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿ ಸೇರಿದಂತೆ ಒಟ್ಟು ಮೂವರು ಸಾವನ್ನಪ್ಪಿರುವ ಘಟನೆ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಗವಾಡ ಕಡೆಯಿಂದ ಅಥಣಿ ಕಡೆಗೆ ಕೆಂಪು ಇಟ್ಟಿಗೆ ತುಂಬಿಕೊಂಡು​ ಬರುತ್ತಿದ್ದ ಲಾರಿ ಹಾಗೂ ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ನಡುವೆ ಅಪಘಾತವಾಗಿದೆ. ಗಾಯಗೊಂಡ ಪಿಕಪ್​ ವಾಹನದ ಚಾಲಕ ಮತ್ತು ಕ್ಲೀನರ್ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಇದನ್ನು ಗಮನಿಸಿದ ಸ್ಕಾರ್ಪಿಯೋ ಚಾಲಕ ತನ್ನ ವಾಹನ ಸೈಡಿಗೆ ಹಾಕಿ, ಅವರನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಥಣಿ ಕಡೆಯಿಂದ…

Read More

ಅಹ್ಮದಾಬಾದ್ : ಇಂದು ಗುಜರಾತಿನ ಅಹಮದಾಬಾದ್ ನಲ್ಲಿ ಏರ್ಪೋರ್ಟ್ ಬಳಿಯೇ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಪತನಗೊಂಡ ವಿಮಾನ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಬಿದ್ದಿದೆ. ಈ ಒಂದು ಘಟನೆಯಲ್ಲಿ 20 ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಹೌದು ವಿಮಾನ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲಿಗೆ ನುಗ್ಗಿದೆ. ಹಾಸ್ಟೆಲಿಗೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದೆ. ಹಾಸ್ಟೆಲಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಮೆಡಿಕಲ್ ಕಾಲೇಜು ಮೇಲೆ ವಿಮಾನ ಬಿದ್ದಿದೆ ಬೆಂಕಿಯ ಕೆನ್ನಾಲಿಗೆ ಹಾಸ್ಟೆಲ್ ಹೊತ್ತಿ ಉರಿದಿದೆ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಊಟಕ್ಕೆಂದು ಬಂದಾಗ ಈ ಒಂದು ದುರಂತ ಸಂಭವಿಸಿದೆ. ಊಟ ಮಾಡುವಾಗಲೇ ವಿಮಾನ ಪತನಗೊಂಡಿದೆ. https://twitter.com/ANI/status/1933095730908106897?t=Xjm3tbd2WXq37g_i7YYwVw&s=19

Read More

ಅಹ್ಮದಾಬಾದ್ : ಇಂದು ಮಧ್ಯಾಹ್ನ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI171, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದ್ದು, ಬೃಹತ್ ರಕ್ಷಣಾ ಪ್ರಯತ್ನಗಳಿಗೆ ನಾಂದಿ ಹಾಡಿತು. ಬೋಯಿಂಗ್ 787 ಡ್ರೀಮ್‌ಲೈನರ್ (VT-ANB) ವಿಮಾನವು ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು ಎಂಬುದಾಗಿ ಡಿಜಿಸಿಎ ಮಾಹಿತಿ ಬಿಡುಗಡೆ ಮಾಡಿದೆ. ಇನ್ನು ವಿಮಾನ ಚಲಾಯಿಸುತಿದ್ದ ಪೈಲಟ್ ಸುಮಿತ್ ಸಭರ್ವಾಲ್ ಮಧ್ಯಾಹ್ನ 1:30 ಕ್ಕೆ ಏರ್ಪೋರ್ಟ್ ನಿಂದ ಟೀಕ್ ಆಫ್ ಆಗಿತ್ತು. ಅಪಾಯ ಅರಿತ ತಕ್ಷಣ ಎಟಿಸಿಗೆ ಪೈಲಟ್ ಸುಮಿತ್ ಕರೆ ಮಾಡಿದ್ದರು. ಸುಮಿತ್ ATC ಗೆ MAYDAY ಕೊನೆಯ ಕರೆ ಮಾಡಿದ್ದರು ಎನ್ನಲಾಗಿದೆ. MAYDAY ಅಂದರೆ ಕಟ್ಟಕಡೆಯ ಕರೆ ಎಂದರ್ಥ. ಜೀವಗಳಿಗೆ ಕಂಟಕ ಪಕ್ಕ ಎಂಬ ಸಂದೇಶವೇ ಇದರ ಅರ್ಥವಾಗಿದೆ. ವಿಮಾನ ಚಲಾಯಿಸುತ್ತಿದ್ದ ಪೈಲಟ್ ಸುಮಿತ್ ಸಭರ್ವಾಲ್ ಕೊನೆಯ ಕರೆ ಮಾಡಿದ್ದರು. 8,200…

Read More

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಹೃದಯಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಅದರಲ್ಲೂ ಯುವಜನತೆಯಲ್ಲಿ ಈ ಒಂದು ಹೃದಯಘಾತ ಹೆಚ್ಚಾಗಿ ಕಂಡುಬರುತ್ತಿದೆ. ಇದೀಗ ಇಂದು ರಾಜ್ಯದಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಹೌದು ರಾಜ್ಯದಲ್ಲಿ ಇಂದು ಒಂದೇ ದಿನ ಹೃದಯಘಾತಕ್ಕೆ ಮೂವರು ಬಳಿಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಮಧ್ಯ ವಯಸ್ಕರು ಇಂದು ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಗ್ಗೆ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮಗ್ಗೆ ಗ್ರಾಮದಿಂದ ಆಲೂರಿಗೆ ನೌಕರ ಬಿ ಆರ್ ನಾಗಪ್ಪ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ ನಲ್ಲಿ ಹೃದಯಾಘಾತದಿಂದ ನಾಗಪ್ಪ (55) ಮೃತಪಟ್ಟಿದ್ದಾರೆ. ಇನ್ನು ಮತ್ತೊಂದು ಪ್ರಕರಣದಲ್ಲಿ ಮಾಜಿ ನಗರಸಭೆ ಸದಸ್ಯ ನೀಲಕಂಠಪ್ಪ (58) ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಮನೆಯಲ್ಲಿ ಹೃದಯಘಾತದಿಂದ ನೀಲಕಂಠಪ್ಪ ಸಾವನ್ನಪ್ಪಿದ್ದಾರೆ ಹಾಸನ ನಗರದ ಅರಳೆಪೇಟೆ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಜಮೀನು ವಿಚಾರವಾಗಿ ಮಗನ ಮೇಲೆ ವ್ಯಕ್ತಿ ಒಬ್ಬ ಮಚ್ಚಿನಿಂದ ಭೀಕರವಾಗಿ…

Read More

ಗುಜರಾತ್ : ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ ಪತನವಾಗಿದೆ ಎಂದು ತಿಳಿದುಬಂದಿದೆ. ಹೌದು ಅಹಮದಾಬಾದ್ ನಿಂದ ಏರ್ ಇಂಡಿಯಾ ವಿಮಾನ ಲಂಡನ್ ಗೆ ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಗಾಯಾಳುಗಳನ್ನು ಅಹ್ಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ಪೋರ್ಟ್ ಬಳಿ ವಿಮಾನ ಹೊತ್ತಿ ಉರಿಯುತ್ತಿದೆ. ವಿಮಾನದಲ್ಲಿ 135 ಪ್ರಯಾಣಿಕರು ಇರುವ ಮಾಹಿತಿ ಇದೆ. ವಿಮಾನದಲ್ಲಿ ಸಿಬ್ಬಂದಿಗಳು ಸೇರಿದಂತೆ ಒಟ್ಟು 135 ಪ್ರಯಾಣಿಕರು ಇರುವ ಮಾಹಿತಿ ಇದೆ. ಗುಜರಾತ್ನ ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ಈ ಒಂದು ದುರಂತ ಸಂಭವಿಸಿದ್ದು, ಸಾವು ನೋವಿನ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಒಂದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆ ನಡೆಸಲು ಒಪ್ಪಿಗೆ ನೀಡಲಾಯಿತು. ಹೌದು ಜಾತಿಗಣತಿ ಮರು ಸಮೀಕ್ಷೆಗೆ ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಇದೀಗ ಒಪ್ಪಿಗೆ ನೀಡಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿದಾಗ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆ ನಡೆಸಿ ಎಂದು ಸೂಚನೆ ನೀಡಿತು ಈ ಹಿನ್ನೆಲೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ಯಾಬಿನೆಟ್ ನಲ್ಲಿ ಜಾತಿಗಣತಿ ಸಮೀಕ್ಷೆ ಕುರಿತು…

Read More