Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯನಗರ : ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ತಂದೆ-ತಾಯಿ ಹಾಗೂ ಸಹೋದರಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮನೆಯ ಹಾಲ್ ನಲ್ಲಿ ಹೂತು ಹಾಕಿದ್ದ ಶವಗಳನ್ನು ಇದೀಗ ಹೊರತೆಗೆಲಾಗಿದೆ. ಮನೆಯ ಹಾಲ್ ನಲ್ಲಿಯೇ ಆರೋಪಿ ಅಕ್ಷಯ್ ತಂದೆ ತಾಯಿ ಹಾಗೂ ಸಹೋದರಿಯ ಶವಗಳನ್ನು ಹೂತು ಹಾಕಿದ್ದ. ಒಂದೇ ಗುಂಡಿಯಲ್ಲಿ ಮೂರು ಶವಗಳನ್ನು ಹೂತಿದ್ದ ಅಕ್ಷಯ್, ಬಳಿಕ ಪೊಲೀಸರಿಗೆ ನಾಪತ್ತೆಯಾಗಿರುವ ಕುರಿತು ಕೆಸ್ ದಾಖಲಿಸಿದ್ದಾನೆ. ಈ ವೇಳೆ ತಾನೇ ಕೊಲೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಸದ್ಯ ಮೂವರು ಶವಗಳನ್ನ ಕೊಟ್ಟೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಪ್ರಕರಣದ ಹಿನ್ನೆಲೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಜನವರಿ 27 ರಂದು ಭೀಕರ ಕುಟುಂಬ ಕೊಲೆ ನಡೆದಿದೆ. ಅರೋಪಿ ಅಕ್ಷಯ್ ಕುಮಾರ್ ತಮ್ಮ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿ ಮನೆಯಲ್ಲಿ ಹೂತಾಕಿದ್ದಾನೆ. ಸ್ಥಳಕ್ಕೆ ಶೀಘ್ರವೇ ಕೊಟ್ಟೂರು ಠಾಣೆಯ ಪೊಲೀಸರು ಭೇಟಿ ನೀಡಿ ಅರೋಪಿಯನ್ನು ಕರೆತರಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮನೆ ಪರಿಶೀಲನೆ ನಡೆಸಿ, ಸ್ಥಳವನ್ನು ಸೀಲ್…
ರಾಯಚೂರು / ಬೆಳಗಾವಿ : ರಾಜ್ಯದಲ್ಲಿ ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ವಿದ್ಯುತ್ ತಂತಿ ತಗುಲಿ ಓರ್ವ ವಿದ್ಯಾರ್ಥಿ ಹಾಗೂ ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಹಾಗೂ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ವಿದ್ಯಾರ್ಥಿನಿ ಸಾವು! ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕುರಕುಂದಿ ಗ್ರಾಮದಲ್ಲಿ ವಿದ್ಯುತ್ ತಗುಲಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಕುರಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ತನುಶ್ರೀ ಶ್ಯಾಮಣ್ಣ ಭಜಂತ್ರಿ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಬೆಳಿಗ್ಗೆ 11.30ಕ್ಕೆ ವಿರಾಮ ಸಮಯದಲ್ಲಿ ಕುಡಿಯಲು ನೀರು ತರಲು ತೆರಳಿದ್ದ ವೇಳೆ ವಿದ್ಯುತ್ ತಗುಲಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ತಕ್ಷಣವೇ ವಿದ್ಯಾರ್ಥಿನಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿದ ಬಳಿಕ ತುರುವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಸುಜಾತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಿಳೆ ಸಾವು!…
ಬೆಂಗಳೂರು : 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಪಿ ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕೆಪಿ ಅಗ್ರಹಾರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಲಂಚ ಪಡೆದ ಪ್ರಕರಣದಲ್ಲಿ ಸಸ್ಪೆಂಡ್ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಇನ್ಸ್ಪೆಕ್ಟರ್ ನನ್ನು ಸಸ್ಪೆಂಡ್ ಮಾಡುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು. ಅಲ್ಲದೆ ವಿವಿಧ ಪ್ರಕರಣಗಳ ಸಂಬಂಧ ನೂರಕ್ಕೂ ಅಧಿಕ ಪೊಲೀಸ್ ಹೆಸರನ್ನು ಅಮಾನತು ಮಾಡಲಾಗಿದೆ. ಭ್ರಷ್ಟಾಚಾರದಲ್ಲಿ ಭಾಗಿಯಾಗದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಆದರೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಅವರಿಗೂ ಇರಬೇಕು ಪದೇ ಪದೇ ಎಂತಹ ಘಟನೆ ನಡೆದಾಗ ಇಲಾಖೆಗೆ ಮುಜುಗರ ಆಗುತ್ತದೆ. ಸರ್ಕಾರ ಹಾಗೂ ವೈಯಕ್ತಿಕವಾಗಿ ನಮಗೂ ಮುಜುಗರವಾಗುತ್ತದೆ. ಮತ್ತೆ ಇಂತಹ ಘಟನೆ ಆಗಬಾರದು…
ಶಿವಮೊಗ್ಗ : ಖಾತೆ ಮಾಡಿಕೊಡಲು 1 ಲಕ್ಷ ರೂ. ಹಣ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ(ವಿಎ) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ವಿಠ್ಠಲ್ ಕೋಲ್ಹಾರ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ ಎಂದು ತಿಳಿದುಬಂದಿದೆ. ತಮ್ಮ ತಂದೆಯ ವಿಲ್ ಪತ್ರದಂತೆ ಶಿಕಾರಿಪುರ ತಾಲೂಕಿನ ಚಿಕ್ಕಬಂಜೂರಿನಲ್ಲಿರುವ ಜಮೀನಿನ ಖಾತೆ ಮಾಡಿಕೊಡುವಂತೆ ಜಮೀನಿನ ಮಾಲೀಕರಾದ ಜಿಕ್ರಿಯಾ ಬೇಗ್ ಎಂಬುವರು ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಕೋಲ್ಹಾರ್ ಅವರನ್ನು ಸಂಪರ್ಕಿಸಿದ್ದರು.ವಿಠ್ಠಲ್ ಕೋಲ್ಹಾರ್ ಖಾತೆ ಬದಲಾವಣೆಗೆ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಈ ಸಲುವಾಗಿ ಜಿಕ್ರಿಯಾ ಬೇಗ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಕೊಟ್ಟಿದ್ದರು.ಖಾತೆ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆಯಲ್ಲಿ ಜಿಕ್ರಿಯಾ ಬೇಗ್ ಅವರು ಬಂಗಾರವನ್ನು ಅಡವಿಟ್ಟು 1 ಲಕ್ಷ ರೂ ಹಣವನ್ನು ಹೊಂದಿಸಿದ್ದರು.ಈ 1 ಲಕ್ಷ ರೂ ಹಣವನ್ನು ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಕೋಲ್ಹಾರ್ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡು…
ಬೀದರ್ : ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ಅನ್ವರ್ ಎಂಬ ಬಾಲಕನಿಗೆ ಹೈದರಾಬಾದ್ ಗೆ ಶಿಫ್ಟ್ ಮಾಡಿದ್ದು, ಮೊಳಗಿ ಮಾರಾಯ ದೇಗುಲಕ್ಕೆ ಹೋಗುವಾಗ ರಸ್ತೆಯಲ್ಲಿ ಒಂದು ಘಟನೆ ಸಂಭವಿಸಿದೆ. ಸ್ಥಳಕ್ಕೆ ಹುಮನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿನಲ್ಲಿ ಇದು ಎರಡನೇ ಬಾರಿ ಸ್ಪೋಟಗೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ಹಾಸನ : ಹಾಸನದಲ್ಲಿ ಯಶ್ ತಾಯಿ ಪುಷ್ಪಾವತಿ ಸೈಟ್ ವಿವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ವಿದ್ಯಾನಗರದಲ್ಲಿರುವ ಸೈಟ್ ಬಳಿ ವಾಗ್ವಾದ ನಡೆದಿದೆ. ದೇವರಾಜ್ ಮತ್ತು ನಟ ಯಶ್ ತಾಯಿ ಪುಷ್ಪ ಅವರ ನಡುವೆ ವಾಗ್ವಾದ ನಡೆದಿದ್ದು, ಆರು ವರ್ಷದ ಹಿಂದೆ ಸೈಟ್ ಖರೀದಿಸಿದ್ದಾಗಿ ಪುಷ್ಪ ಹೇಳಿದ್ದಾರೆ. ಈ ವೇಳೆ ದೇವರಾಜ ಸೈಟ್ನ ಮೂಲ ಮಾಲೀಕರು ನಮ್ಮ ಕಡೆಯವರು ಎಂದು ಲಕ್ಷ್ಮಮ್ಮ ಅವರ ಜಿಪಿಎ ಹೋಲ್ಡರ್ ದೇವರಾಜ್ ಹೇಳಿದರು. ಸೈಟ್ ಕ್ಲೀನ್ ಮಾಡಿಸಲು ಪುಷ್ಪ ಸ್ಥಳಕ್ಕೆ ಬಂದಿದ್ದಾರೆ, ಈ ವೇಳೆ ದೇವರಾಜ ಪುಷ್ಪ ಅವರ ನಡುವೆ ವಾಗ್ವಾದ ನಡೆದಿದೆ. ಆರು ವರ್ಷಗಳ ಹಿಂದೆ ನಾನು ದುಡ್ಡು ಕೊಟ್ಟು ಖರೀದಿಸಿದ್ದೇನೆ. ನಿಮ್ಮಪ್ಪಂದ ಎಲ್ಲಾ ನಂದು. ನಾನು ದುಡ್ಡು ಕೊಟ್ಟು ತಗೊಂಡಿದ್ದೇನೆ. ನಾನು ಎಲ್ಲಿ ಒತ್ತುವರಿ ಮಾಡಿಕೊಂಡಿದ್ದೇನೆ? ಎಂದರು. ಇನ್ನು ಜಿಪಿಎ ಹೋಲ್ಡರ್ ದೇವರಾಜ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಪುಷ್ಪ ಅವರು ನನಗೆ ನಿಂದನೆ ಮಾಡಿದ್ದಾರೆ ನಮಗೆ ಬೆದರಿಕೆ ಕೂಡ ಹಾಕುತ್ತಿದ್ದಾರೆ. ಕೋರ್ಟ್ ಆದೇಶದ ಬೋರ್ಡ್…
ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ನಿನ್ನೆ ರಾಯ್ ಅವರು ತಮ್ಮ ಕಚೇರಿಯಲ್ಲಿ 20 ನಿಮಿಷ ಚೇಂಬರ್ ಗೆ ಹೋಗಿ ಲಾಕ್ ಮಾಡಿ ಕೊಂಡಿದ್ದಾರೆ. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಗಿಲು ಒಡೆದು ನೋಡಿದಾಗ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಡಿಸೆಂಬರ್ ನಲ್ಲಿ ಕಂಪನಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಲು ನಿರ್ಧಾರ ಮಾಡಿದ್ದು, ಫೆಬ್ರವರಿ 4ರ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿಜೆ ರಾಯ್ ಅವರನ್ನು ಕರೆದಿದ್ದಾರೆ. ಈ ಹಿನ್ನೆಲೆ ಕಳೆದ ಮೂರು ದಿನಗಳ ಹಿಂದೆ ಸಿಜೆ ರಾಯ್ ದುಬೈ ನಿಂದ ಬೆಂಗಳೂರಿಗೆ ಬಂದಿದ್ದಾರೆ. ಅಧಿಕಾರಿಗಳು ಅವರ ಆಫೀಸಿಗೆ ಹೋಗಿ ಅವರ ಜೊತೆ ಚರ್ಚೆ ಮಾಡಿ ಸ್ಟೇಟ್ಮೆಂಟ್…
ಬೆಂಗಳೂರು : ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಾರೆ ಎಂದು ಹೆದರಿ ಗುಂಡು ಹಾರಿಸಿಕೊಂಡು ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿರುವ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದು ಇದೀಗ ಅವರು ಬರೆದಿರುವ ಡೈರಿಯಲ್ಲಿ ಹಲವು ಸ್ಪೋಟಕ ಅಂಶಗಳು ಬರೆಯಲಾಗಿದ್ದು ರಾಜ್ಯದ ಇಬ್ಬರು ಪ್ರಭಾವಿ ಶಾಸಕರ ಹೆಸರನ್ನು ತಮ್ಮ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ. ಹೌದು ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರಾಯ್ ಅವರಿಗೆ ಡೈರಿ ಬರೆಯುವ ಅಭ್ಯಾಸ ಇತ್ತು. ಡೈರಿಯಲ್ಲಿ ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಡೈರಿಯಲ್ಲಿ ಇಬ್ಬರು ಪ್ರಭಾವಿ ಶಾಸಕರ ಹೆಸರುಗಳನ್ನು ಉಲ್ಲೇಖ ಮಾಡಿದ್ದು, ಬೆಂಗಳೂರು ಮತ್ತು ಕೋಲಾರ ಜಿಲ್ಲೆಯ ಶಾಸಕರ ಹೆಸರುಗಳನ್ನು ಅವರು ಬರೆದಿದ್ದಾರೆ. ಇದರ ಜೊತೆ ಒಬ್ಬ ಸಂಸದರ ಹೆಸರನ್ನು ಕೂಡ ಬರೆದಿದ್ದಾರೆ. ಅಷ್ಟೇ ಅಲ್ಲದೆ ಮಾಜಿ ಸಂಸದರು ಚಿತ್ರದ ರಂಗದ ಗಣ್ಯರ ಹೆಸರು ಅನೇಕ ನಟಿಯರು ಮೋಡಲ್ ಗಳ ಹೆಸರು ಕೂಡ ಉಲ್ಲೇಖ ಮಾಡಿದ್ದಾರೆ. ವ್ಯವಹಾರಿಕವಾಗಿ ಒಂದಷ್ಟು…
ಬೆಂಗಳೂರು : ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಡಾ.ಸಿಜೆ ರಾಯ್ ನಿನ್ನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಇದೀಗ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಅಂತ್ಯವಾಗಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಅವರಿಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ. ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಡಾ.ಸಿ.ಜೆ. ರಾಯ್ ಅವರ ಅಂತ್ಯಸಂಸ್ಕಾರ ನಡೆಯಲಿದೆ. ವೈಟ್ ಗೋಲ್ಡ್ ಸಂಸ್ಥೆಯ ಮಾಲೀಕ, ಸಹೋದರ ಬಾಬು ಜೋಸೆಫ್ ಒಡೆತನದ ಕೋರಮಂಗಲದ ವೈಟ್ ಹೌಸ್ನಲ್ಲಿ ಮೃತ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆಯು ಇಂದು (ಜ.31) ಸಂಜೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ನೆರವೇರುವ ಸಾಧ್ಯತೆಯಿದ್ದು, ನಾಡಿನ ಪ್ರಮುಖ ಉದ್ಯಮಿಗಳು, ಸಿನಿಮಾ ತಾರೆಯರು ಮತ್ತು ರಾಜಕಾರಣಿಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿದ್ದ ಸಿಜೆ ರಾಯ್ ಅವರು ನಿನ್ನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಮರಣೋತ್ತರ ಪರೀಕ್ಷೆ ವೇಳೆ ವೈದ್ಯರು ಎದೆಯಲ್ಲಿದ್ದ ಒಂದು ಗುಂಡು ಹೊರತೆಗೆದಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ರಾಯ್ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು ಎದೆಗೆ ಹೊಕ್ಕಿದ್ದ ಒಂದು ಗುಂಡನ್ನು ವೈದ್ಯರು ಇದೀಗ ಹೊರಗಡೆ ತೆಗೆದಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಇದೀಗ ಅಂತ್ಯವಾಗಿದೆ. ಕೆಲವೇ ಕ್ಷಣಗಳಲ್ಲಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಇನ್ನು ಬಾಬು ಒಡೆತನದ ವೈಟ್ ಹೌಸ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಕೋರಮಂಗಲದಲ್ಲಿರುವ ವೈಟ್ ಹೌಸ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ಕಾಸಾಗ್ರಾಂಡ್ ನಲ್ಲಿ ಸಿಜೆ ರಾಯ್ ಅಂತ್ಯಕ್ರಿಯೆ ನೆರವೇರಲಿದೆ ಸಾಧ್ಯತೆ ಎನ್ನಲಾಗಿದೆ ಎಂದು ಸಂಜೆ ಅಥವಾ ನಾಳೆ ಸಿರಿಯರ ಅಂತ್ಯಕ್ರಿಯೆ ನೆರವೇರಲಿದೆ.













