Author: kannadanewsnow05

ಬೆಳಗಾವಿ : ಕಳೆದ ಏಪ್ರಿಲ್ 28ರಂದು ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜನೆ ಮಾಡಿತ್ತು. ಈ ಒಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಾಗ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಈ ವೇಳೆ ಎಸ್ ಪಿ ನಾರಾಯಣ ಭರಮನಿಯವರನ್ನು ವೇದಿಕೆಗೆ ಕರೆದು ಸಿಎಂ ಸಿದ್ದರಾಮಯ್ಯ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಈ ಒಂದು ಘಟನೆಯನ್ನು ಖಂಡಿಸಿ ಇದೀಗ ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಹೌದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಏ.28ರಂದು ನಗರದಲ್ಲಿ ಕಾಂಗ್ರೆಸ್‌ ಸಮಾವೇಶ ನಡೆದಿತ್ತು. ಭದ್ರತೆಗೆ ಧಾರವಾಡದ ಎಎಸ್ಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡುವಾಗ, ಬಿಜೆಪಿ ಕಾರ್ಯಕರ್ತೆಯರು ನುಗ್ಗಿ ಪ್ರತಿಭಟಿಸಿದರು. ಗದ್ದಲ ಎಬ್ಬಿಸಿದರು. ಇದರಿಂದ ಕೋಪಗೊಂಡ ಸಿ.ಎಂ ಸ್ಥಳದಲ್ಲಿದ್ದ ನಾರಾಯಣ…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಜಾತಿಗಣತಿ ಮರು ಸಮೀಕ್ಷೆ ವಿಚಾರವಾಗಿ ಬೆಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದ್ದು, ಹೈಕಮಾಂಡ್ ಮರುಪರಿಶೀಲನೆ ಮಾಡಬೇಕು ಎಂದು ಸೂಚಿಸಿದೆ. ಕೆಲ ಸಮುದಾಯಗಳು ನಮ್ಮ ಜನಸಂಖ್ಯೆ ದೊಡ್ಡದಿದೆ ಅಂದಿದ್ದಾರೆ ಅವರು ಜಾತಿಗ ನೀತಿ ಸರ್ವೆಗೆ ಆತಂಕ ವ್ಯಕ್ತಪಡಿಸಿಲ್ಲ. ಜಾತಿಗಣತಿ ಮರು ಸರ್ವೆ ಮಾಡಿ ವರದಿ ಜಾರಿಗೊಳಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಮರು ಸರ್ವೆ ಮಾಡಿ ವರದಿ ಜಾರಿಗೊಳಿಸುತ್ತೇವೆ. ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುವುದರಲ್ಲಿ ಏನು ತಪ್ಪಿದೆ? ಇನ್ನು ಕಾಲ್ತುಳಿತ ಕೇಸ್ ಡೈವರ್ಟ್ ಗೊಳಿಸಲು ಜಾತಿ ಗಣತಿ ಚರ್ಚೆ ಆರೋಪದ ಕುರಿತಾಗಿ ಮಾತನಾಡಿದ ಅವರು ಪಹಲ್ಗಾಂ ದಾಳಿ ಆದಾಗ ಜಾದಿಗಣತಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದರು. ದೇಶದಲ್ಲಿ ಜಾತಿಗಣತಿ ಮಾಡುತ್ತೇವೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ನಮ್ಮ ಪ್ರಣಾಳಿಕೆಯಲ್ಲಿಯೇ ಇದೆ ನಾವು ಮಾಡಿಯೇ ಮಾಡುತ್ತೇವೆ ಎಂದು ಸಚಿವ ಸಂತೋಷ್…

Read More

ರಾಯಚೂರು : ರಾಯಚೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಟ್ರ್ಯಾಕ್ಟರ್ ಚಾಲಕನೊಬ್ಬ ಟ್ರಾಕ್ಟರ್ ಓಡಿಸಿದ್ದಾನೆ. ಈ ವೇಳೆ ಟ್ರ್ಯಾಕ್ಟರ್ ಹಳ್ಳದ ಮಧ್ಯದಲ್ಲಿ ಸಿಲುಕಿಕೊಂಡಿದ್ದು ಟ್ಯಾಕ್ಟರ್ ನಲ್ಲಿದ್ದ 15 ಜನರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಹೌದು ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಟ್ರ್ಯಾಕ್ಟರ್ ಸಿಲುಕಿದ್ದು ಅದೃಷ್ಟವಶಾತ್ 15 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ತುಂಬಿ ಹರಿಯುತ್ತಿದ್ದ ಹಳ್ಳ ದಟ್ಟವಾಗ ಈ ಒಂದು ಘಟನೆ ನಡೆದಿದೆ. ಪ್ರಾಣಭೀತಿಯಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಮಹಿಳೆಯರು ಕಿರುಚಾಡಿದ್ದಾರೆ. ತಕ್ಷಣ ಅಲ್ಲಿಯೆ ಇದಂತಹ ಸ್ಥಳೀಯರು ಕಾಪಾಡಿದ್ದಾರೆ.

Read More

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಛತ್ರಪತಿ ಸಂಭಾಜಿ ನಗರದಲ್ಲಿ ಭಾರೀ ಮಳೆ ಮತ್ತು ಗಾಳಿಯಿಂದಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಗಾರ್ಡನ್ ಬಳಿಯ ಪ್ರವೇಶ ದ್ವಾರ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಗೇಟ್ ಬಳಿ ನಿಂತಿದ್ದಾಗ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಕೆಳಗೆ ಸಿಲುಕಿಕೊಂಡಿದ್ದರಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಇನ್ನೂ ಗಾಯಗೊಂಡ ಇಬ್ಬರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತರ ಕುಟುಂಬಕ್ಕೆ ಪುರಸಭೆಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

Read More

ತೆಲಂಗಾಣ : ಖ್ಯಾತ ಗಾಯಕಿ ಮಂಗ್ಲಿ ಅವರ ಬರ್ತಡೆ ಪಾರ್ಟಿ ಮೇಲೆ ನಿನ್ನೆ ಪೊಲೀಸರು ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಮಾದಕ ದ್ರವ್ಯ ಮತ್ತು ಗಾಂಜಾ ಸೇವಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದರು. ಇದೀಗ ವಿಡಿಯೋ ಮೂಲಕ ಮಂಗ್ಲಿ ಸ್ಪಷ್ಟನೆ ನೀಡಿದ್ದು ಬರ್ತಡೆ ಪಾರ್ಟಿಯಲ್ಲಿ ಯಾವುದೇ ಮಾದಕ ದ್ರವ್ಯ ಬಳಸಿಲ್ಲ. ಸ್ಥಳೀಯ ಮದ್ಯ ಮಾತ್ರ ಹಂಚಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ. ಗಾಯಕಿ ಮಂಗ್ಲಿ ಬರ್ತಡೆ ಪಾರ್ಟಿಯಲ್ಲಿ ಗಾಂಜಾ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆವೆಲ್ಲ ಠಾಣೆಯ ಪೊಲೀಸರ ದಾಳಿಯ ಬಳಿಕ ಗಾಯಕಿ ಮಂಗ್ಲಿ ಸ್ಪಷ್ಟನೇ ನೀಡಿದ್ದಾರೆ. ನನ್ನ ಬರ್ತಡೇ ಪಾರ್ಟಿಯಲ್ಲಿ ನನ್ನ ಆತ್ಮೀಯ ಗೆಳೆಯ ಗೆಳತಿಯರು ನನ್ನ ತಂಡದ ಸದಸ್ಯರು ಹಾಗೂ ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದರು. ಮದ್ಯ, ಸೌಂಡ್ ಸಿಸ್ಟಮಗೆ ಅನುಮತಿ ಪಡೆಯುವ ಬಗ್ಗೆ ಗೊತ್ತಿರಲಿಲ್ಲ. ಯಾರಾದರೂ ಮಾರ್ಗದರ್ಶನ ನೀಡಿದ್ರೆ ನಾನು ಈ ತಪ್ಪು ಮಾಡುತ್ತಿರಲಿಲ್ಲ. ಪಾರ್ಟಿಯಲ್ಲಿ ಯಾವುದೇ ಡ್ರಗ್ಸ್ ಬಳಸಿಲ್ಲ ಸ್ಥಳೀಯ ಮದ್ಯ ಮಾತ್ರ ಹಂಚಲಾಗಿತ್ತು. ಪರೀಕ್ಷೆ ನಡೆಸಲಾಗಿದ್ದ ವ್ಯಕ್ತಿ…

Read More

ಬೆಂಗಳೂರು : ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭದ ವೇಳೆ ಕಾಲ್ತುಳಿತದಿಂದ 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಹೌದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಸುಮೊಟೊ ಕೇಸ್ ದಾಖಲಾಗಿದ್ದು, ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡು ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ ಸಿಐಡಿ ಗೆ ಮಾಹಿತಿ ನೀಡುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ ಬರೆದಿದೆ. ಆರ್‌ಸಿಬಿ ಸಂಬ್ರಮಚರಣೆಯ ವೇಳೆ 11 ಅಭಿಮಾನಿಗಳ ಸಾವಾಗಿದೆ. ಕಾಲ್ತುಳಿತದ ಸಮಯದಲ್ಲಿ ಮಕ್ಕಳಿಗೂ ಹಾನಿಯಾಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಎಷ್ಟು ಮಕ್ಕಳಿಗೆ ತೊಂದರೆಯಾಗಿದೆ ಎಂಬ ಬಗ್ಗೆ ಮಾಹಿತಿ ಕೇಳಿ ಪತ್ರ ಬರೆದಿದೆ. ಸಿಐಡಿ ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಇದುವರೆಗೂ ಕೊರೊನಾ ಇಂದ 11 ಜನರು ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಆದರೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಮೃತಪಟ್ಟ 11 ಜನರು ಕೋವಿಡ್ ಇಂದ ಸತ್ತಿಲ್ಲ ಎಂದು ಇದೀಗ ಸ್ಪಷ್ಟನೆ ನೀಡಿದ್ದಾರೆ. ಇದೀಗ ರಾಜ ಆರೋಗ್ಯ ಇಲಾಖೆ ಕೂಡ ಕೋಮಾರ್ಬಿಟಿಸ್ ನಿಂದ ಮೃತಪಟ್ಟರೆ ಕೋವಿಡ್ ಎಂದು ಪರಿಗಣಿಸುವುದಿಲ್ಲ ಎಂದು ಆರೋಗ್ಯ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಹೌದು ಕೋಮಾರ್ಬಿಟಿಸ್ ನಿಂದ ಮೃತಪಟ್ಟರೆ ಕೋವಿಡ್ ಎಂದು ಪರಿಗಣಿಸಬೇಡಿ. ಕೋವಿಡ್ ಸಾವೆಂದು ಪರಿಗಣಿಸದಿರಲು ರಾಜ್ಯ ಆರೋಗ್ಯ ಇಲಾಖೆ ಇದೀಗ ತೀರ್ಮಾನಿಸಿದೆ. ಇ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇಷ್ಟು ದಿನ ಕೋಮಾರ್ಬಿಟಿಸ್ ಸಾವು ಕೋವಿಡ್ ಎಂದು ವರದಿ ಬಂದಿದೆ. ಆದರೆ ಇನ್ಮುಂದೆ ಕೋಮಾರ್ಬಿಟೀಸ್ ರೋಗಿಗೆ ಕೋವಿಡ್ ಬಂದರೆ ಪರಿಗಣನೆ ಆಗಲ್ಲ. ಕೋಮಾರ್ಬಿಟಿಸ್ ಇಲ್ಲದ ವ್ಯಕ್ತಿಗೆ ಕೋವಿಡ್ ಬಂದರೆ ಮಾತ್ರ ಪರಿಗಣನೆ, ಕೋವಿಡ್ ಬಂದು ಮೃತಪಟ್ಟರೆ ಮಾತ್ರ ಬುಲೆಟಿನಲ್ಲಿ ವರದಿ ಸಲ್ಲಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ…

Read More

ಉತ್ತರಕನ್ನಡ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕನ್ ಅಂಗಡಿಗೆ ಚರಂಡಿ ನೀರು ನುಗ್ಗೆ ಸುಮಾರು 50ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಬರಿ ಅವಾಂತರ ಸೃಷ್ಟಿಯಾಗಿದ್ದು, ಕಾರವಾರದಲ್ಲಿ ರಾತ್ರಿ ಇಡೀ ಸುರಿದ ಮಳೆಯಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.ಚಿಕನ್ ಅಂಗಡಿಗೆ ಚರಂಡಿ ನೀರು ನುಗ್ಗಿದ ಪರಿಣಾಮ 50ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಅನುಮಾನ ದೇವಸ್ಥಾನದ ಬಳಿಯ ಚಿಕ್ಕನಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಾಗಲಕೋಟೆಯಲ್ಲಿ ಪೆಟ್ರೋಲ್ ಬಂಕ್ ಜಲಾವೃತ! ಭಾರಿ ಮಳೆಗೆ ಪೆಟ್ರೋಲ್ ಬಂಕ್ ಸಹ ಜಲಾವೃತವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ಭಾರಿ ಮಳೆಯಿಂದಾಗಿ ಸಂಪೂರ್ಣವಾಗಿ ಕೆರೆಯಂತಾಗಿದೆ. ಯಾವುದೇ ವಾಹನಗಳು ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸೇತುವೆ ಮೇಲೆ ಭಾರಿ ಪ್ರಮಾಣದಲ್ಲಿ…

Read More

ಚಿಕ್ಕಬಳ್ಳಾಪುರ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಗನ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಲಾಗಿತ್ತು. ಈ ವಿಚಾರ ತಿಳಿದು ಅಲ್ಲಿಗೆ ಒಳಗಾದ ಯುವಕನ ತಾಯಿಯೊಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೋರೆನಹಳ್ಳಿ ಎಂಬಲ್ಲಿ ನಡೆದಿದೆ. ಹೌದು ಜಮೀನು ವಿವಾದ ಸಂಬಂಧ ಯುವಕನ ಮೇಲೆ ಹಲ್ಲೆನಡೆಸಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೋರಿನಹಳ್ಳಿ ನಡೆದಿತ್ತು, ಕೊಲೆ ಆರೋಪಿ ಶಿವಣ್ಣ ಅಲಿಯಾಸ್ ಶಿವಶಂಕರ ರೆಡ್ಡಿ ಅರೆಸ್ಟ್ ಆಗಿದ್ದಾನೆ. ಪೇರೆಸಂದ್ರ ಠಾಣೆಯ ಪೊಲೀಸರಿಂದ ಆರೋಪಿ ಶಿವಣ್ಣ ಬಂಧನವಾಗಿದೆ. ಜಮೀನು ವಿವಾದ ಸಂಬಂಧ ಯುವಕ ನವೀನ್ ಎನ್ನುವವನ ಮೇಲೆ ಮಚ್ಚಿನಿಂದ ಆರೋಪಿ ಶಿವಣ್ಣ ಅಲಿಯಾಸ್ ಶಿವಶಂಕರ ದಾಳಿ ನಡೆಸಿದ್ದ. ಮಗನ ಮೇಲಿನ ದಾಳಿ ವಿಚಾರ ಕೇಳಿ ನವೀನ್ ತಾಯಿ ಯಶೋದಮ್ಮ ಮೃತಪಟ್ಟಿದ್ದರು. ಸದ್ಯ ಆರೋಪಿ ಶಿವಣ್ಣನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ವಿಧಾನ ಪರಿಷತ್ ಗೆ ನೇಮಕ ಮಾಡದಂತೆ ತಮ್ಮ ವಿರುದ್ಧದ ಆರೋಪಗಳ ಸಂಬಂಧ ದಿನೇಶ್ ಅಮೀನ್ ಮಟ್ಟು ಅವರು ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ಜಿ ಎಮ್ ಗಾಡ್ಕರ್ ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದು, ಜಿಎಂ ಗಾಡ್ಕರ್ ವಿರುದ್ಧ ಕೇಸ್ ದಾಖಲಿಸಲು ಆದೇಶ ನೀಡುವಂತೆ ದಿನೇಶ್ ಅಮೀನ್ ಮಟ್ಟು ರಾಜ್ಯಪಾಲರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರದಲ್ಲಿ ನನಗೆ ಅಪರಿಚಿತನಾದ ಜಿ.ಎಂ.ಗಾಡ್ಕರ್ ಎಂಬ ವ್ಯಕ್ತಿ ನನ್ನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ತಮಗೆ ನೀಡಿರುವ ದೂರು ಕೆಲವು ಪತ್ರಿಕೆಗಳು, ಚಾನೆಲ್ ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟಿಕರಣ ಎಂದು ಉಲ್ಲೆಖಿಸಿದ್ದಾರೆ. ಮೊದಲನೆಯದಾಗಿ, ನಾನು ತುಮಕೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಳ್ಳು ದಾಖಲೆಗಳನ್ನು ಸಲ್ಲಿಸಿ ನಿವೇಶನ ಪಡೆದಿದ್ದೇನೆ ಎನ್ನುವ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದ್ದು ಮತ್ತು ನಿರಾಧಾರವಾದುದು. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಾನು ಯಾವುದೇ ನಿದೇಶನ ಪಡೆದಿಲ್ಲ. ಕೇಂದ್ರ ಸರ್ಕಾರದ ಯೋಜನೆಯಾದ ಐಡಿಎಸ್…

Read More