Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹೊಳೆನರಸೀಪುರದ ಮಹಿಳೆಯ ಮೇಲೆ ಲೈಂಗಿಕ ದೌರ್ಜಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣಗೆ ಇದೀಗ ಬೆಂಗಳೂರಿನ 42ನೇ ACMM ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹೌದು ಹೊಳೆನರಸೀಪುರ ನರಸೀಪುರದ ತಮ್ಮ ನಿವಾಸದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ನಡೆದ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ಜಡ್ಜ್ ಜೆ.ಪ್ರೀತ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು ನೀಡಿ ತೀರ್ಪು ಹೊರಡಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಯಾಗಿರುವ ಮಾರಿ ಸಚಿವ ಹೆಚ್ಡಿ ರೇವಣ್ಣ ಅವರ ಜಾಮಿನ ಅರ್ಜಿ ವಿಚಾರಣೆಯನ್ನು ಕಳೆದೆರಡು ದಿನಗಳಿಂದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದಿತ್ತು. ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿಸಿ HD ರೇವಣ್ಣಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಶಾಸಕ ಎಚ್ ಡಿ ರೇವಣ್ಣ ಪರವಾಗಿ ಹಿರಿಯ ವಕೀಲರಾದ ಸಿ ವಿ ನಾಗೇಶ್…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಕೆಸ್ ನಲ್ಲಿ ನನ್ನ ಹಾಗೂ ಹೆಚ್ಡಿ ದೇವೇಗೌಡರನ್ನು ತಾಳೆ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಎಲ್ಲರೂ ಅಸಹ್ಯ ಪಡುವ ಪ್ರಕರಣವಾಗಿದೆ. ಇದು ಇದು ಎಲ್ಲರೂ ತಲೆತಗ್ಗಿಸುವಂತಹ ಪ್ರಕರಣ. ಈ ಕೇಸ್ ನಲ್ಲಿ ನನ್ನ ಹಾಗೂ ದೇವೇಗೌಡರನ್ನು ತಾಳೆ ಹಾಕಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ದಂಧೆ ಕುರಿತು ಕೇಳಲೇಬೇಡಿ. ಸಿ ಎಸ್ ಆರ್ ಫಂಡ್ ವರ್ಗಾವಣೆಗೆ ಸಿಂಬಲ್ ಆಗಿ ಇಟ್ಕೊಂಡ್ರು.ಈ ಸರ್ಕಾರ ಮಾಡಿದ್ದು ಬರೀ ಈ ರೀತಿಯ ಸಾಧನೆಗಳು.ಕಳೆದ ಬಾರಿಯೂ ನಗರ ಪ್ರದಕ್ಷಿಣೆ ಮಾಡಿದ್ರಿ, ಏನಾಯಿತು? ನಗರ ಪ್ರದಕ್ಷಿಣೆ ಮಾಡಿ ಏನು ಪರಿಹಾರ ನೀಡಿದೆ? ಡಿಸಿಎಂ ಡಿಕೆ ಬೆಂಗಳೂರು ಸಿಟಿ ರೌಂಡ್ಸ್ ಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು. ನಾಲ್ಕು…
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಕೆ ಆರ್ ನಗರ ಹೊಳೆನರಸೀಪುರದಲ್ಲಿ ಇದೀಗ ಪ್ರಜ್ವಲ್ ವಿರುದ್ಧ ಎಫ್ಐಆರ್ ದಾಖಲಾಗಿವೆ. ಈ ವರೆಗೆ ಎಸ್ಪಿಪಿ ಆಗಿ ಮೂವರನ್ನು ಸರ್ಕಾರ ನೇಮಿಸಿತ್ತು. ಇದೀಗ ಹೈಕೋರ್ಟ್ ನಲ್ಲಿ ವಾದಿಸಲೆಂದೆ ಪ್ರೊಫೆಸರ್ ರವಿವರ್ಮ ಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದೆ. ಪ್ರಜ್ವಲ್ ಹಾಗೂ ಎಚ್ ಡಿ ರೇವಣ್ಣ ಆರೋಪಿಯಾಗಿರುವಂತಹ ಪ್ರಕಾರಣಗಳಾಗಿವೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ 27ರಂದು ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದರು ಇದುವರೆಗೂ ಯಾವುದೇ ರೀತಿಯಾಗಿ ಸ್ಪಂದಿಸಿಲ್ಲ.ಹಾಗಾಗಿ ಎಸ್ಐಟಿ ಬಂಧನದ ವಾರೆಂಟ್ ಜಾರಿ ಮಾಡಿದೆ.ಹಾಗಾಗಿ ಸದ್ಯದಲ್ಲೇ ಪ್ರಜ್ವಲ್ ರೇವಣ್ಣ ಭಾರತಕ್ಕೆ ಮರಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು, ಕೊಲೆ, ದರೋಡೆ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚು ತಲೆ ಇವೆ. ಇದೀಗ ಕಾಮುಕನೊಬ್ಬ 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಸಿಲಿಕಾನ್ ಸಿಟಿಯಲ್ಲಿ ಕಾಮುಕನೋರ್ವ ಅಟ್ಟಹಾಸ ಮೆರೆದಿದ್ದಾನೆ. ಏನೂ ಅರಿಯದ 10 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮೀಷವೊಡ್ಡಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತ ಈ ಪೈಶಾಚಿಕ ಕೃತ್ಯ ಎಸಗಿದ್ದು ಹೆಬ್ಬಾಳ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ. ಬಂಧಿತ ಆರೋಪಿ ರಾಜೇಶ್ ಮೂಲತಹ ಬಿಹಾರದವನು ಬೆಂಗಳೂರಿನ ನಾಗೇನಹಳ್ಳಿ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ಮಾಡುತ್ತಿದ್ದನು. ನೇಪಾಳ ಮೂಲದ ಬಾಲಕಿಯ ಪೋಷಕರು ನಾಗೇನಹಳ್ಳಿ ಅಪಾರ್ಟ್ಮೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಶನಿವಾರ ರಾತ್ರಿ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆರೋಪಿ ರಾಜೇಶ್ ಕರೆದುಕೊಂಡು ಹೋಗಿ…
ರಾಮನಗರ : ಇಂದು ರವಿವಾರ ಹಿನ್ನೆಲೆ ಸ್ನೇಹಿತರ ಜೊತೆಗೆ ಕಾಲ ಕಳೆಯಲು ಹಲವರು ಪಿಕ್ ನಿಕ್ ಎಂದು ಹೊರಗಡೆ ಹೋಗುತ್ತಾರೆ. ಅದೇ ರೀತಿಯಾಗಿ ರಾಮನಗರ ಜಿಲ್ಲೆಯಲ್ಲಿ ರೆಸಾರ್ಟ್ ಒಂದಕ್ಕೆ ಸ್ನೇಹಿತರ ಜೊತೆಗೆ ತೆರಳಿದ್ದ ಮಹಿಳೆಯೊಬ್ಬರು ಜಿಪ್ ಲೈನ್ ಆಟ ಆಡುವಾಗ ತುಂಡಾಗಿ ನೆಲಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ ನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ ಅತ್ತಿಬೆಲೆ ಮೂಲ ರಂಜನಿ (35) ಎನ್ನುವ ಮಹಿಳೆ ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ.ಸ್ನೇಹಿತರ ಜೊತೆಗೆ ಜಂಗಲ್ ಟ್ರಯಲ್ಸ್ ರೆಸಾರ್ಟಿಗೆ ರಂಜನಿ ಬಂದಿದ್ದರು ಎನ್ನಲಾಗಿದೀ. ಈ ವೇಳೆ ಅಲ್ಲಿನ ಹಲವು ಚಟುವಟಿಕೆಗಳಲ್ಲಿ ಭಾಗಿಯಾದಾಗ ಜಿಪ್ ಲೈನ್ ತುಂಡಾಗಿ ಬಿದ್ದಿದ್ದರಿಂದ ನೆಲಕ್ಕೆ ಬಿದ್ದು ರಂಜನಿ ಇದೀಗ ಸಾವನ್ನಪ್ಪಿದ್ದಾರೆ.ರಜನಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ರೆಸಾರ್ಟ್ ಮ್ಯಾನೇಜರ್ ಪುಟ್ಟಮಾದುವನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯದಾದ್ಯಂತ ಇಂದು ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿ ಸಿದ್ದು ಧಾರಾಕಾರ ಮಳೆಯಿಂದ ಕೆಲವು ಕಡೆ ಅವಾಂತರ ಸೃಷ್ಟಿಯಾಗಿರುವ ಘಟನೆಗಳು ವರದಿಯಾಗಿವೆ. ಬೆಂಗಳೂರು, ಚಿಕ್ಕಮಂಗಳೂರು, ಹಾಸನ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಪಿಣ್ಯ, ದಾಸರಹಳ್ಳಿ ಸೇರಿದಂತೆ ಸುತ್ತಮುತ್ತಲು ಧಾರಾಕಾರ ಮಳೆ ಆಗುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಮಳೆ ನೀರು ನಿಂತಿದ್ದರಿಂದ ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಕೂಡ ವರುಣ ಆರ್ಭಟಿಸುತ್ತಿದ್ದಾನೆ. ಇತ್ತ ಹಾಸನ ಜಿಲ್ಲೆಯ ಹಲವಡೆ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಚನ್ನರಾಯಪಟ್ಟಣದ ಬಾಗೂರು ರಸ್ತೆ, ಸಂಪೂರ್ಣವಾಗಿ ಜಲಾವೃತಗೊಂಡಿದೆ.ರಸ್ತೆಯಲ್ಲಿ ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ವಾಹನಗಳು ಸಿಲುಕಿವೆ. ಹಿಂದೂ ರುದ್ರ ಭೂಮಿಯ ಸಿಬ್ಬಂದಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.ಮಳೆ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿದೆ. ಅಲ್ಲದೆ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಕೂಡ ಮಳೆ ಮುಂದುವರೆದಿದೆ. ಬಯಲುಸೀಮೆ ಅಜ್ಜಂಪುರ…
ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಕಾನೂನು ಹಾಗೂ ಸೂರ್ಯವಯಸ್ತೆಯ ವಿಭಾಗದ ಎಡಿಜಿಪಿ ಆಗಿರುವಂತಹ ಆರ್ ಹಿತೇಂದ್ರ ಅವರು ಮೃತ ಅಂಜಲಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೆ ವೇಳೆ ಆರ್ ಹಿತೇಂದ್ರ ಅವರೊಂದಿಗೆ ಮಾತನಾಡಿದ ಅಂಜಲಿ ಪೋಷಕರು, ನಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಅವರ ಕಾಲಿಗೆ ಬಿದ್ದ ಘಟನೆ ನಡೆಯಿತು. ಇವಳೆ ಅಂಜಲಿಯ ಅಜ್ಜಿ ಮಾತನಾಡಿ, ಆರೋಪಿ ವಿಶ್ವನನ್ನು ಗಲ್ಲಿಗೇರಿಸಿ ಇಲ್ಲವೇ ಎನ್ ಕೌಂಟರ್ ಮಾಡಿ, ನಮಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿ ಕೊಡಿ ಎಂದು ಮನವಿ ಮಾಡಿದರು. ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ ಎಡಿಜಿಪಿ ಆರ್ಯ ಕೇಂದ್ರ ಅವರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಕ್ರಮ ಚಟುವಟಿಕೆ ಹಾಗೂ ಅಪರಾಧ ಕೃತ್ಯಗಳ ಕುರಿತಂತೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು. ಅದರಲ್ಲೂ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ್ ಕೊರೆಯ ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣಗಳು ಹೆಚ್ಚು ತಲೆ ಇವೆ ಸಂಚಾರಿ ಪೊಲೀಸರು ಎಷ್ಟೇ ಕಠಿಣ ಕ್ರಮ ತೆಗೆದುಕೊಂಡರು ಕೂಡ ಇಂತಹ ಅಪಘಾತಗಳು ತಡೆಯಲು ಸಾಧ್ಯವಾಗುತ್ತಿಲ್ಲ. ಇದೀಗ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಕುಡುಕನೊಬ್ಬ ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್ ಸವಾರರನ್ನು ಬಲಿ ತೆಗೆದುಕೊಂಡಿದ್ದಾನೆ. ಹೌದು ಮಲ್ಲೇಶ್ವರಂ ಸಂಚಾರಿ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ನಗರದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಸುಬ್ರಮಣ್ಯನಗರದ ವಿನಯ್ (32) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಹರಿನಾಥ್ ಎನ್ನುವ ವ್ಯಕ್ತಿ ಕಂಠಪೂರ್ತಿ ಕುಡಿದು ಈ ಒಂದು ಅಪಘಾತಕ್ಕೆ ಕಾರಣನಗಿದ್ದಾನೆ ಎಂದು ತಿಳಿದುಬಂದಿದೆ. ಸುಬ್ರಹ್ಮಣ್ಯ ಮುಖ್ಯ ರಸ್ತೆಯಲ್ಲಿ ವಿನಯ್ ಬೈಕಿಗೆ ಹಿಂದಿನಿಂದ ಬಂದು ಹರಿನಾಥ ವೇಗವಾಗಿ ಡಿಕ್ಕಿ ಹೊಡೆದು ಸುಮಾರು ಅಂತರಗಳವರೆಗೂ ಕಳೆದುಕೊಂಡು ಹೋಗಿದ್ದಾನೆ. ಇವಳೆ ಫುಟ್ಪಾತ್ ನಲ್ಲಿರುವ ಗೋಡೆಗೆ ಅಪ್ಪಳಿಸಿದಾಗ ರಕ್ತದ ಮಡುವಿನಲ್ಲಿ ವಿನಯ್ ಬಿದ್ದಿದ್ದಾನೆ. ಇವಳೆ ತಕ್ಷಣ ವಿನೆನನ್ನು ಸ್ಥಳ ಆಸ್ಪತ್ರೆಗೆ ದಾಖಲಿಸುತ್ತಾದರೂ ಕೂಡ ಚಿಕಿತ್ಸೆ ಫಲಿಸದೇ ವಿನಯ್ ಸಾವನಪ್ಪಿದ್ದಾನೆ.ಘಟನೆ ಕುರಿತಂತೆ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ…
ವಿಜಯಪುರ : ಕ್ಯಾಂಟರ್ ವಾಹನ ಒಂದು ತಡೆದು ದುಷ್ಕರ್ಮಿಗಳು ಅದರಲ್ಲಿದ್ದವರಿಗೆ ಖಾರದಪುಡಿ 32 ಲಕ್ಷ ಹಣವನ್ನು ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಹೊರಭಾಗದ ಕೋಲಾರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ. ಹೌದು ತಡರಾತ್ರಿ ಕೋಲಾರ ಪಟ್ಟಣದಲ್ಲಿ ಕ್ಯಾಂಟರ್ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ವಾಹನದಲ್ಲಿರುವ ಅವರ ಮೇಲೆ ಖಾರದ ಪುಡಿಯನ್ನು ಎರಚಿ ಅದರಲ್ಲಿದ್ದ 32 ಲಕ್ಷ ನಗದು ಹಣವನ್ನು ದರೋಡೆ ಮಾಡಿದ್ದಾರೆ. ಘಟನೆಯಲ್ಲಿ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲು ಕೊಡಚಿ ಹಲ್ಲೆಗೆ ಒಳಗಾಗಿದ್ದು, ಕೊಲ್ಹಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರೋಡೆ ಆಗಿರುವ ಹಣ ಕಲಬುರಗಿ ಜಿಲ್ಲೆ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬುವವರಿಗೆ ಸೇರಿದೆ ಎಂದು ಹೇಳಲಾಗುತ್ತಿದೆ.ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿರುವ ಕಾರ್ಖಾನೆಗೆ ಹತ್ತಿ ಮಾರಾಟ ಮಾಡಿದ್ದು, ಅದರಿಂದ ಬಂದಿದ್ದ ₹32 ಲಕ್ಷ ಹಣವನ್ನು ವಾಪಸ್ ಜೇವರ್ಗಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ…
ದಕ್ಷಿಣಕನ್ನಡ : ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ IPC ಸೆಕ್ಷನ್ 353, 504 ಅಡಿ ಇದೀಗ ಮೊಕದ್ದಮೆ ದಾಖಲಾಗಿದೆ ಎಂದು ತಿಳಿದು ಬಂದಿದೆ. ತಮ್ಮ ಬೆಂಬಲಿಗರ ಪರ ಪೊಲೀಸ್ ಠಾಣೆ ಎದುರು ಧರಣಿ ಮಾಡಿದ್ದರು ಎನ್ನಲಾಗಿದೆ. ಪೊಲೀಸ್ ಠಾಣೆ ನಿಮ್ಮಪ್ಪಂದ ಅಂತ ಹರೀಶ್ ಪೂಂಜ ಧಮ್ಕಿ ಹಾಕಿದ್ದರು.ಬೆಳ್ತಂಗಡಿ ಠಾಣೆ ಪಿಎಸ್ಐ ಮುರುಳಿಧರ್ ಗೆ ಶಾಸಕ ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಶಾಸಕ ಹರೀಶ್ ಪೂಂಜ ಆಪ್ತರು ಅಕ್ರಮವಾಗಿ ಕಲ್ಲು ಗಣಿಗಾರಿಕೆ…













