Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕೇಬಲ್ಗಳು ಸುಟ್ಟು ಬೂದಿಯಾಗಿದೆ. ಬಾಶೆಟ್ಟಿಹಳ್ಳಿಯ ಬ್ಯಾಂಕ್ ಸರ್ಕಲ್ ಬಳಿಯ ರೈಲ್ವೆ ಮೇಲ್ಸೇತುವೆ ಬಳಿ ಘಟನೆ ನಡೆದಿದೆ. ಅಡ್ವಾನ್ಸ್ ಟೆಕ್ನಾಲಜೀಸ್ ಯುನಿಟ್ 2 ಕಂಪನಿಯಲ್ಲಿ ಘಟನೆ ನಡೆದಿದ್ದು, ಮೊದಲಿಗೆ ಕಂಪನಿಯಲ್ಲಿರುವ ಮರದ ತುಂಡುಗಳಿಗೆ ಹೊತ್ತಿಕೊಂಡ ಬೆಂಕಿ ಇಡೀ ಕಂಪನಿಗೆ ಆವರಿಸಿದೆ. ನಂತರ ಕೇಬಲ್ಗಳಿಗೂ ವ್ಯಾಪಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸಿದೆ.
ಯಾದಗಿರಿ : ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಮುಖ್ಯ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ ಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ವಿಶೇಷ ಸತ್ರ ನ್ಯಾಯಾಲಯದಿಂದ ಈ ಒಂದು ಆದೇಶ ಬಂದಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ದಾಖಲಾಗಿತ್ತು. ಇದೀಗ ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಅವರು, ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ ಗೊಳಿಸಿದ್ದಾರೆ.
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಚಲಿಸುತ್ತಿದ್ದ ಕಾರಿನ ಮೇಲೆ ಕಂಟೇನರ್ ಪಲ್ಟಿಯಾಗಿ 5 ವರ್ಷದ ಮಗು ಸಾವನ್ನಪ್ಪಿದೆ. ಬಿಣಗಿ ಗ್ರಾಮದ ಬಳಿ ಘಟ್ಟದಲ್ಲಿ ಐದು ವರ್ಷದ ಮಗು ಸ್ಥಳದಲ್ಲಿ ಸಾವನಪ್ಪಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೈದ್ಯ ದಂಪತಿ ಮತ್ತು ಮತ್ತೊಂದು ಮಗುವಿಗೆ ಗಂಭೀರವಾದ ಗಾಯಗಳಾಗಿದ್ದು, ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರವಾರದಿಂದ ಅಂಕೋಲ ಕಡೆಗೆ ಕಾರು ಹಾಗೂ ಕಂಟೇನರ್ ತೆರಳುತ್ತಿತ್ತು ಮಾತನಾಡಲು ಸಾಧ್ಯವಾಗದಷ್ಟು ಕಂಟೇನರ್ ಚಾಲಕ ಮಧ್ಯ ಸೇವಿಸಿದ್ದ ಎಂದು ತಿಳಿದುಬಂದಿದೆ. ಪ್ರವಾಸಕ್ಕೆ ಎಂದು ಮಹಾರಾಷ್ಟ್ರ ಮೋಡದ ಕುಟುಂಬ ಕಿಯಾ ಕಾರಿನಲ್ಲಿ ಬಂದಿತ್ತು.
ಹಾವೇರಿ : ಇಸ್ರೇಲ್ ಮತ್ತು ಇರಾನ್ ಯುದ್ಧ ಇದೀಗ ಭಾರತದ ಮೇಲು ಭಾರಿ ಪರಿಣಾಮ ಬಿರಿದ್ದು ಈಗಾಗಲೇ ಅಡುಗೆ ಅನಿಲ ದಿನಬಳಕೆ ವಸ್ತುಗಳು ಹಾಗೂ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದ್ದು, ಅದರ ಬೆನ್ನಲ್ಲಿ ಬ್ಯಾಡಗಿ ಮೆಣಸಿನಕಾಯಿ ಸಾಗಿಸುವ ಕಾಂಟೇನರ್ ದರದಲ್ಲಿ ಭಾರಿ ಏರಿಕೆಯಾಗಿದೆ. ಹೌದು ಬೇರೆ ಬೇರೆ ದೇಶಗಳಿಗೆ ಬ್ಯಾಡಿಗೆ ಮೆಣಸಿನಕಾಯಿ ರಫ್ತಿನ ಬಾಡಿಗೆ ದರ ಹೆಚ್ಚಳವಾಗಿದೆ. ಮಸಾಲೆ ಪದಾರ್ಥಗಳು, ಸೌಂದರ್ಯವರ್ಧಕ ತಯಾರಿಕೆಗೆ ಬಳಕೆ ಮಾಡಲಾಗುತ್ತಿದ್ದು, ಮಲೇಶಿಯಾ, ಸಿಂಗಾಪುರ, ಇಂಡೋನೇಷಿಯಾ, ಬಾಲಿ, ಥೈಲ್ಯಾಂಡ್, ಇಸ್ರೇಲ್, ಇರಾನ್ ಹಾಗು ಅಮೆರಿಕಕ್ಕೆ ಬ್ಯಾಡಗಿ ಮೆಣಸಿನಕಾಯಿ ರಫ್ತು ಆಗುತ್ತಿತ್ತು. ಬ್ಯಾಡಗಿ ಮೆಣಸಿನಕಾಯಿ ರಫ್ತು ಮಾಡುವ ಕಂಟೇನರ್ ಬಾಡಿಗೆದಾರ ಏರಿಕೆ ಆಗಿದೆ. ಈ ಮೊದಲು ಕಂಟೇನರ್ ಬಾಡಿಗೆದರ 1800 US ಡಾಲರ್ ಇತ್ತು. ಯುದ್ಧ ಆರಂಭವಾದ ನಂತರ ಬಾಡಿಗೆದಾರ 3500 US ಡಾಲರ್ ದಾಟಿದೆ. ಮೆಣಸಿನಕಾಯಿ ಮಾರಾಟಕ್ಕೆ ಬಳ್ಳಾರಿ ಆಂಧ್ರದಿಂದ ಜನ ಬ್ಯಾಡಗಿಗೆ ಬರುತ್ತಿದ್ದರು . ಯುದ್ಧ ಮುಂದುವರಿದರೆ ಬ್ಯಾಡಗಿ ಮೆಣಸಿನಕಾಯಿ ದರ ಕುಸಿವ ಸಾಧ್ಯತೆ ಇದೆ.…
ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿಗಳು ಸಾವನ್ನಪ್ಪಿರುವ ಘಟನೆ ಯಲಘಟ್ಟ ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದ ದ್ಯಾವಪ್ಪ ಸೂಗೂರು (35) ಹಾಗೂ ಶಿವಮ್ಮ (33) ಸಾವನ್ನಪ್ಪಿದ್ದಾರೆ. ಕೆಲವು ದಿನಗಳಿಂದ ಸ್ವಂತ ಮನೆ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದರು. ಮನೆ ಗೋಡೆ ಪ್ಲಾಸ್ಟರ್ ಮಾಡುತ್ತಿದ್ದ ವೇಳೆ ಮೆಟ್ಟಿಲು ಕುಸಿದು ಬಿದ್ದಿದೆ. ಅವಶೇಷಗಳ ಅಡಿ ಸಿಲುಕಿ ದಂಪತಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಹಟ್ಟಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಧಾರವಾಡ : ಹುಬ್ಬಳ್ಳಿ -ಧಾರವಾಡದ ಪೊಲೀಸ್ ಠಾಣೆಯ ವ್ಯಾಪ್ತಿಯ ಒಂದು ವಿಚಾರಣೆಗೆ ಹೆದರಿ ರೈತನೊಬ್ಬ ತನ್ನ ಹೊಲದಲ್ಲಿಯೇ ನೇಣು ಬಿಗಿದುಕೊಂಡಿರುವ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಉಮಚಗಿ ಗ್ರಾಮದ ನಿವಾಸಿ ನಿಂಗಪ್ಪ ಕೋಟೆಪ್ಪ ಅಂಗಡಿ (48) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಇತ್ತೀಚೆಗೆ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ನಿಂಗಪ್ಪನ ಮೇಲೆ ಗ್ರಾಮೀಣ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಅದರನ್ವಯ ನಿಂಗಪ್ಪನಿಗೆ ವಿಚಾರಣೆಗೆ ಬರುವಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇಸ್ಪೆಕ್ಟರ್ ಮುರುಘಶ ಚನ್ನಣ್ಣವರ ಅವರು ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ದೂರವಾಣಿ ಕರೆ ಮಾಡಿದ್ದರು. ಪೊಲೀಸರ ವಿಚಾರಣೆಗೆ ಗಾಬರಿಗೊಂಡು ಹಾಗೂ ಮನನೊಂದು ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
BREAKING : ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರ ಲಂಚ : ತುಮಕೂರು ಜಿಲ್ಲಾಸ್ಪತ್ರೆ ವೈದ್ಯೆ, ಸಿಬ್ಬಂದಿ ಲೋಕಾಯುಕ್ತ ಬಲೆಗೆ
ತುಮಕೂರು : ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಡಾ. ಸವಿತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 6,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಡಾಕ್ಟರ್ ಸವಿತಾ ಕಣ್ಣಿನ ವೈದ್ಯರಾಗಿದ್ದಾರೆ. ಉಪ್ಪಾರಹಳ್ಳಿ ಅವಿನಾಶ್ ತಾಯಿ ಕಣ್ಣಿಗೆ ಲೆನ್ಸ್ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಿಬ್ಬಂದಿ ಮನೋಜ್ ಮೂಲಕ 6 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದು, ರೆಡ್ ಹ್ಯಾಂಡ್ ಆಗಿ ಜಿಲ್ಲಾಸ್ಪತ್ರೆಗೆ ಸಿಬ್ಬಂದಿ ಮನೋಜ್ ಕೂಡ ಸಿಕ್ಕಿಬಿದ್ದಿದ್ದಾನೆ. ನಂತರ ವೈದ್ಯೆ ಸವಿತಾರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿ ವೈ ಎಸ್ ಪಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ನವದೆಹಲಿ : ಹಣವಿದ್ದರೆ ಮಾತ್ರ ಈ ಲೋಕದಲ್ಲಿ ಬೆಲೆ ಎಂಬ ಕಟು ಸತ್ಯವನ್ನು ಸಾರುವ ಈ ಮಾತುಗಳು ನಿಜಕ್ಕೂ ಎದೆಗೆ ತಟ್ಟುವಂತಿವೆ. ಹಣ, ಹೆಸರು, ಮತ್ತು ಪ್ರಸಿದ್ಧಿಯ ಉತ್ತುಂಗದಲ್ಲಿದ್ದಾಗ ಸುತ್ತಲೂ ಸಾವಿರಾರು ಜನರ ಕೋಟೆ ಇರುತ್ತದೆ. ಆದರೆ ಒಂದೇ ಒಂದು ಸಣ್ಣ ತಪ್ಪು ಅಥವಾ ಆರ್ಥಿಕ ಹಿನ್ನಡೆ ಉಂಟಾದಾಗ, ನಮ್ಮವರು ಎಂದು ನಂಬಿದವರೇ ದೂರ ಸರಿಯುವ ದುರಂತ ಸಮಾಜದ ಕರಾಳ ಮುಖವನ್ನು ಅನಾವರಣಗೊಳಿಸುತ್ತದೆ. ಹೌದು ನಾವು ಈಗ ಹೇಳುತ್ತಿರುವುದು ಅನುರಾಗ್ ದೋಬಲ್ (ಬಾಬು ಭಯ್ಯ) ಎಂಬ ಏಷ್ಯಾದ ನಂಬರ್ 1 ಮೋಟೋ ವ್ಲೋಗರ್ ಬಗ್ಗೆ. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಮಾಧ್ಯಮ ಮತ್ತು ಬ್ಲಾಗ್ಗಳಿಂದ ದೂರ ಉಳಿದಿದ್ದಾರೆ. ತಮಗೆ ಕಳೆದ ಒಂದು ವರ್ಷದಿಂದ ತೀವ್ರ ಮಾನಸಿಕ ಕಿರುಕುಳ, ವೈಯಕ್ತಿಕ ಮತ್ತು ಆರ್ಥಿಕ ನಷ್ಟವಾಗಿದೆ ಎಂದು ಅವರು ಇತ್ತೀಚಿನ ವರದಿಗಳಲ್ಲಿ ತಿಳಿಸಿದ್ದಾರೆ. ವೈವಾಹಿಕ ಜೀವನದಲ್ಲಿ ಬಿರುಕು: ಇತ್ತೀಚಿನ ವರದಿಗಳ ಪ್ರಕಾರ, ಅವರ ಪತ್ನಿ ರಿತಿಕಾ ಚೌಹಾಣ್ ಅವರಿಂದ ಬೇರೆಯಾಗಿದ್ದಾರೆ. ತಮ್ಮ ಕೊನೆಯ ಸಂದೇಶ…
ಬೆಂಗಳೂರು : ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ತಿಳಿದುಬಂದಿದೆ. ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆಗಿ ಕೆಲಸ ಮಾಡುತ್ತಿದ್ದರು.ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ, ನನಗೆ ಜೀವನ ಸಾಕಾಗಿದೆ ಸಾಯುತ್ತೀನಿ ಎಂದು ಹೇಳಿ, ಫೆ.17ರಂದು ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು.ಜನರು ಟಿನ್, ಬಕೆಟ್, ಬಾಟಲಿ ಮತ್ತು ಡ್ರಮ್ಗಳನ್ನು ಬಳಸಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸರಿಸುಮಾರು 21,000 ಲೀಟರ್ ತುಪ್ಪದಲ್ಲಿ ಕೇವಲ 500 ಲೀಟರ್ ಮಾತ್ರ ಉಳಿದಿತ್ತು. ಪೊಲೀಸರು ಬರುವ ಮೊದಲೇ ಹೆಚ್ಚಿನ ಪ್ರಮಾಣದ ತುಪ್ಪವನ್ನು ತೆಗೆದುಕೊಂಡು ಹೋಗಲಾಗಿತ್ತು.ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ.














